Homeಕರ್ನಾಟಕಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಹಿಜಾಬ್ ವಿವಾದ: ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ- ಸಿದ್ದರಾಮಯ್ಯ

ಬಿಜೆಪಿಯವರು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ-ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಹುನ್ನಾರ. ಅವರಿಗೆ ಸಂವಿಧಾನ ನೀಡಿರುವ ಶಿಕ್ಷಣದ ಹಕ್ಕು, ಧಾರ್ಮಿಕ ಹಕ್ಕನ್ನು ಕಸಿಯುವ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವತಂ ಕಾಲೇಜು ಪ್ರಾಂಶುಪಾಲರೇ ಗೇಟ್ ಮುಚ್ಚಿ ಪ್ರವೇಶ ನಿರಾಕರಿಸಿದ್ದಾರೆ.

ಇನ್ನು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಬರುವುದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ವಿವಾದ ಮಾಡಿದ್ದಾರೆ. ಹಿಜಾಬ್ ಮತ್ತು ಕೇಸರಿ ಶಾಲು ಹಾಕಿಕೊಮಡು ಬಂದಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಎಲ್ಲಾ ಕಾಲೇಜುಗಳಿಗೂ ಹಬ್ಬುವ ಹಂತದಲ್ಲಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಸಮವಸ್ತ್ರ ಕಡ್ಡಾಯ ಮಾಡಿ ಎಂದು ಸರ್ಕಾರ ಎಲ್ಲೂ ಹೇಳಿಲ್ಲ. ಪಿಯುಸಿ ಹಂತದಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಈಗ ಕುಂದಾಪುರ ಕಾಲೇಜ್‌ನಲ್ಲಿ ಪ್ರಿನ್ಸಿಪಾಲ್‌ ಗೇಟ್ ಹಾಕಿ 29 ಮುಸ್ಲಿಂ ಹೆಣ್ಣು ಮಕ್ಕಳನ್ನು ಕ್ಲಾಸ್‌ಗೆ ಬರಬಾರದು ಎಂದು ತಡೆದಿದ್ದಾರೆ. ಇದು ಮೂಲಭೂತ ಹಕ್ಕಿನ ಉಲ್ಲಂಘನೆ. ಅದು ಸರ್ಕಾರಿ ಕಾಳೇಜಿನಲ್ಲಿ ಹೀಗೆ ಮಾಡಿದ್ದಾರೆ. ಬಿಜೆಪಿಯವರು ಇದೊಂದು ವಿವಾದ ಮಾಡಲು ಮಕ್ಕಳಿಗೆ ಕೇಸರಿ ಶಾಲು ಹಾಕಿಸುತ್ತಾರೆ. ಇಷ್ಟು ದಿನ ಇರದ ಕೇಸರಿ ಶಾಲು ಈಗ ಬಂದಿದೆ. ಶಿಕ್ಷಣ ಮೂಲಭೂತ ಹಕ್ಕು. ಈ ಸ್ಕಾರ್ಫ್ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದನ್ನು ಈಗ ಇದ್ದಕ್ಕಿಂದಂತೆ ತಡೆಯುವ ಪ್ರಯತ್ನ ಯಾಕೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ಫೆ. 8 ರಂದು ವಿಚಾರನೆ ನಡೆಯಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

“ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು ಶಿಕ್ಷಣ. ವೈಯಕ್ತಿಕವಾಗಿ ಹೇಳುವುದಾದರೆ, ಇದು ಹೆಣ್ಣುಮಕ್ಕಳ ಮೂಲಭೂತ ಶಿಕ್ಷಣದ ಹಕ್ಕನ್ನು ಕಸಿಯುವುದು. ಆ ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ಸಿಗದಂತೆ ನೋಡಿಕೊಳ್ಳುವುದು, ಅವರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುಟಿಲ ಪ್ರಯತ್ನ ಇದು. ಶಿಕ್ಷಣ, ಧಾರ್ಮಿಕ ಆಚರಣೆ ಪ್ರತಿಯೊಬ್ಬರ ಮೂಲಭೂತ ಹಕ್ಕು. ತಲೆಗೆ ಸ್ಕಾರ್ಫ್ ಹಾಕಿಕೊಳ್ಳೂವುದು ಧಾರ್ಮಿಕ ಆಚರಣೆಯ ಒಂದು ಭಾಗ. ಈಗ ಅದನ್ನು ವಿವಾದ ಏಕೆ ಮಾಡುತ್ತಿದ್ದಾರೆ. ಇದು ತುಂಬ ಕೆಟ್ಟದು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದುವರೆದು, “ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಸುತ್ತೋಲೆಗಳನ್ನು ನೋಡಿದೆ ಅದರಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ. ಒಬ್ಬ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟಿನ ಮುಂದೆ ನಿಂತು ವಿದ್ಯಾರ್ಥಿಗಳನ್ನು ಕಾಳೇಜಿನ ಒಳಗೆ ಬಿಡದಿರುವುದು ಅಮಾನವೀಯವಲ್ಲವೇ..? ಇದು ಆ ಹೆಣ್ಣು ಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿಸುವ ಪ್ರಯತ್ನವಲ್ಲವೇ..? ಆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಸಮವಸ್ತ್ರ ಕಡ್ಡಾಯ ಮಾಡಬೇಕು ಅಂತ ಹೇಳೊಕೆ ಅವರ್‍ಯಾರು..? ಆತ ಹೇಳಿದ ತಕ್ಷಣ ಜನರ ದುಡ್ಡಲ್ಲಿ ಸಂಬಳ ತೆಗೆದುಕೊಳ್ಳುವ ಈ ಸರ್ಕಾರಿ ಪ್ರಾಂಶುಪಾಲರು ಗೇಟ್ ಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೋಡಿ ಈಗ ಕೇಸರಿ ಶಾಲು ಹಾಕುವುದರ ಉದ್ದೇಶವೇನು..? ಈ ಮೊದಲಿನಿಂದಲೂ ಹಾಕಿದ್ರಾ..? ಶಾಲು ಹಾಕಿಕೊಳ್ಳಬೇಕು ಎಂದುಬುದು ನಿನ್ನೆ ಮೊನ್ನೆ ಜ್ಞಾನೋದಯವಾಗಿದ್ಯಾ..? ಈ ಹೆಣ್ಣು ಮಕ್ಕಳು ಯಾವಾಗಿನಿಂದ ಸ್ಕಾರ್ಪ ಹಾಕಿಕೊಂಡು ಬರುತ್ತಿದ್ದರು ಹೇಳಿ. ಸುಮ್ಮನೆ ಶಿಕ್ಷಣದ ವಿಷಯದಲ್ಲಿ ಧರ್ಮ ಸೇರಿಸಲು ಹೋಗಬೇಡಿ” ಎಂದಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಈ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದೆ ಎಂದಿರುವ ಸಿದ್ದರಾಮಯ್ಯ, ’ಗೃಹ ಸಚಿವ ಅರಗ ಜ್ಞಾನೆಂದ್ರ ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಅದೆಲ್ಲಾ ಆಗುವುದಿಲ್ಲ. ಹೈಕೋರ್ಟ್ ಏನು ಹೇಳುತ್ತದೆ ನೋಡೊಣ. ಆದರೆ, ವೈಯಕ್ತಿಕವಾಗಿ ಒಬ್ಬ ವಕೀಲ, ವಿರೋಧ ಪಕ್ಷದ ನಾಯಕನಾಗಿ ಹೇಳುವುದೆನೆಂದರೆ ಇದು ಸಂವಿಧಾನ ವಿರೋಧಿ” ಎಂದು ಹೇಳಿದ್ದಾರೆ.

ಇನ್ನು, ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಎರಡನೇ ದಿನವೂ ಮುಂದುವರೆದಿದೆ. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಗೇಟ್ ಹೊರಗೆ ನಿಲ್ಲಿಸಲಾಗಿದೆ. ಅವರಿಗೆ ಬೆಂಬಲ ನೀಡಲು ಮುಸ್ಲಿಂ ವಿದ್ಯಾರ್ಥಿಗಳು ಸಹ ಕಾಲೇಜು ಗೇಟ್‌ನ ಹೊರಗೆ ಕುಳಿತಿದ್ದಾರೆ.


ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...