Homeಮುಖಪುಟಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ಅವರವರಿಗೆ ಅವರದೇ ಆದ ಧರ್ಮವಿದೆ. ಎಲ್ಲಾ ಧರ್ಮಗಳಲ್ಲೂ ಒಳ್ಳೆಯವರಿದ್ದಾರೆ, ಕೆಟ್ಟವರಿದ್ದಾರೆ. ಎಲ್ಲದರಲ್ಲೂ ಕೊರತೆಯಿದೆ, ಒಳ್ಳೆಯ ವಿಚಾರಗಳಿವೆ. ಅವರವರ ಧರ್ಮ ಪಾಲಿಸುವುದು ಅವರದೇ ಇಚ್ಚೆ.

- Advertisement -
- Advertisement -

ಹಿಂದೆ ಒಂದು ಕಾಲವಿತ್ತು. ಬ್ರಿಟಿಷರ ವಿರುದ್ಧ ನಿಂತು ನಮ್ಮವರು, ಸುಧೀರ್ಘ ಹೋರಾಟದ ನಂತರ ಸ್ವಾಂತಂತ್ರ್ಯ ದೊರಕಿಸುವಲ್ಲಿ ಯಶಸ್ವಿಯಾದರು. ಅಂದಿನ ಹೋರಾಟ, ಪ್ರತಿಭಟನೆ ಅತೀ ಅಗತ್ಯದ್ದಾಗಿತ್ತು. ಸ್ವತಂತ್ರ ಭಾರತದ ನಂತರದ ಗುರಿ, ದೇಶದ ಅಭಿವೃದ್ಧಿ. ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿಯೋರ್ವನ ಏಳಿಗೆ, ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮಹಾನ್ ವ್ಯಕ್ತಿಯಾದ ಅಂಬೇಡ್ಕರ್ ಸಂವಿಧಾನ ರೂಪಿಸಿದರು. ಈ ಇತಿಹಾಸ ಬಹಳಷ್ಟು ಸರಳ ಮತ್ತು ಪ್ರತಿಯೋರ್ವನಿಗೂ ತಿಳಿದಿರುವ ವಿಚಾರ. ಆದರೆ ಇಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಾದದ್ದು ‘ದೇಶದ ಏಳಿಗೆ’ಯ ಕುರಿತಾಗಿ.

ಒಂದು ದೇಶವನ್ನು ನಾವು ಅಭಿವೃದ್ಧಿ ಹೊಂದಿದೆ ಅಥವಾ ಅಭಿವೃದ್ಧಿ ಹೊಂದುತ್ತಿದೆ ಎಂದು ಕರೆಯಬೇಕಾದರೆ,

·       ರಾಷ್ಟ್ರೀಯ ಉತ್ಪನ್ನ (GDP), ರಾಷ್ಟ್ರೀಯ ಆದಾಯ (GNI)

·       ದೇಶದ ಕೈಗಾರೀಕರಣದ ಹಂತ

·       ಜನರ ಜೀವನ ಮಟ್ಟ

·       ಬಳಸುತ್ತಿರುವ ತಂತ್ರಜ್ಞಾನದ ಗುಣಮಟ್ಟ

ಇವೇ ಮೊದಲಾದ ಅಂಶಗಳು ಮುಖ್ಯವಾಗಿ ಅಳತೆಗೋಲಾಗುತ್ತವೆ. ಇವುಗಳ ಆಧಾರದ ಮೇಲೆ ದೇಶದ ಏಳಿಗೆ ನಿಂತಿದೆ. ಇಂದು ಸುಮಾರು 22 ಶೇಕಡಾ ಭಾರತೀಯರು ಬಡತನದಲ್ಲಿದ್ದರೆ, ನಿರುದ್ಯೋಗ ಗೆರೆ 7ಶೇಕಡದಷ್ಟಿದೆ. ವಿಶ್ವದೆಲ್ಲೆಡೆ ವ್ಯಾಪಿಸಿದ ಕೊರೊನಾ ಭಾರತಕ್ಕೂ ತಗುಲಿ ಬಹಳಷ್ಟು ಬಳಲಿದೆ. ಕೊರೊನಾ ಸೇರಿದಂತೆ ಇನ್ನಿತರ ಕಾರಣಗಳಿಂದ ದೇಶದ ಸಾವಿಸಸಂಖ್ಯೆ 7.5 ಶೇಕಡಾವಾರು ಏರಿದೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ನಾವಿಂದು ಕೋಮುಗಲಭೆಯಲ್ಲಿ ವಿಜ್ರಂಭಿಸುತ್ತಿದ್ದೇವೆ.

ಹಿಜಾಬ್ ಕುರಿತಾಗಿ ಇಂದು ದೇಶದಲ್ಲಿ ಸಾಕಷ್ಟುಗಲಭೆಗಳು, ವಿವಾದಗಳು, ಚರ್ಚೆಗಳು ಭುಗಿಲೆದ್ದಿದೆ. ಮುಸ್ಲೀಂ ಹೆಣ್ಣು ಮಕ್ಕಳ ವಸ್ತ್ರಸಂಹಿತೆಯ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿದ್ದೇವೆ. ಇದಕ್ಕೆ ಹೆಣ್ಣು ಮಕ್ಕಳ ಶಿಕ್ಷಣ ಬಲಿಯಾಗುತ್ತಿರುವುದು ವಿಷಾದನೀಯ. ಈ ಸಂಘರ್ಷಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯುತ್ತಿರುವ ಪಕ್ಷಗಳ ನಡೆ ಬೇಸರದ ಸಂಗತಿ. ಹಿಂದಿನಿಂದಲೂ ಶಾಲಾ-ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬಂದು ಶಿಕ್ಷಣ ಪಡೆಯುತ್ತಿದ್ದ ಅದೆಷ್ಟೋ ಮುಸ್ಲೀಂ ವಿದ್ಯಾರ್ಥಿನಿಯರಿದ್ದರು. ಆಗ ನಮಗೆ ಇದೊಂದು ವಿಷಯವೇ ಆಗಿರಲಿಲ್ಲ. ನಮ್ಮ ಶಿಕ್ಷಣಕ್ಕೆ ತೊಂದರೆ ಆಗಿರಲಿಲ್ಲ. ನಮಗವರು ಬೇರೆ ಎಂದೆಣಿಸಿರಲಿಲ್ಲ. ಜೊತೆಯಾಗಿ ಕುಳಿತುಕೊಳ್ಳುವುದಕ್ಕೂ, ಮಾತನಾಡುವುದಕ್ಕೂ, ಗೆಳೆತನಕ್ಕೂ ಕಷ್ಟವಾಗಿರಲಿಲ್ಲ. ಇಂದೇಕೆ ಏಕಾಏಕಿ ಈ ಮನಸ್ಥಿತಿಗೆ ನಾವು ಬಂದಿದ್ದೇವೆ? ಮುಸ್ಲೀಂ ಹೆಣ್ಣು ಮಗಳೊಬ್ಬಳು ನಮ್ಮ ಒತ್ತಾಯದ ಮೇರೆಗೆ ಹಿಜಾಬ್ ಧರಿಸದೇ ಬಂದಳೆಂದರೆ ನಮ್ಮ ಶಿಕ್ಷಣ ಪ್ರಗತಿ ಸಾಧಿಸುತ್ತದೆಯೆ? ಇದರಿಂದ ನಮಗೇನು ದೊರಕುತ್ತದೆ?

ಏಕೆ ನಮಗೆ ಅನ್ಯಕೋಮಿನ ಪ್ರತಿಯೊಂದು ಆಚಾರ, ವಿಚಾರಗಳು ಪ್ರಚೋದನಕಾರಿಯಾಗಿ ಕಾಣುತ್ತಿದೆ? ಮಾನವ ಸಂಘಜೀವಿ ಸರಿ. ಆದರೆ ನಾವು ಆರಿಸಿಕೊಂಡ ಸಂಘ, ನಾವು ಮಾಡಿಕೊಂಡಿರುವ ಒಡನಾಟಗಳು ಏನನ್ನು ಕಲಿಸುತ್ತಿವೆ? ಯಾವುದರತ್ತ ಮುಖಮಾಡಿದೆ? ಅದರ ಮುಖ್ಯಗುರಿ ಏನು? ದೇಶದ ಏಳಿಗೆ ಅದರಿಂದ ಹೇಗೆ ಸಾಧ್ಯ?ನಾವು ಮಾಡುತ್ತಿರುವ ಇವೆಲ್ಲಾ ಗಲಭೆಗಳು ದೇಶಪ್ರೇಮ ಎಂದೆನ್ನಿಸಿರಬಹುದು. ಆದರೆ ‘ವಿವಿಧತೆಯಲ್ಲಿನ ಏಕತೆ’, ‘ನಾವೆಲ್ಲರೂ ಒಂದೇ’ ಎನ್ನುವ ಸಂವಿಧಾನದ ಧ್ಯೇಯ ಇಂದು ಪಠ್ಯಗಳಲ್ಲಷ್ಟೇ ಉಳಿತ್ತಿದೆಯೇ ವಿನಃ ನಮ್ಮ ಮನದೊಳಗೆ ಇಳಿಯುತ್ತಿಲ್ಲ. ನಾವು ಅಂದುಕೊಂಡಿರುವ ಈ ದೇಶಪ್ರೇಮ ಒಂದುಗೂಡಿಸುವ ಬದಲು, ದೇಶವನ್ನು ಒಡೆಯುತ್ತಿದೆ.

ಇಂದು ನಾವು ಅನ್ಯಕೋಮಿನ ಪ್ರತಿಯೋರ್ವನನ್ನು ಅನುಮಾನಿಸುತ್ತೇವೆ, ಕಾರಣವಿಲ್ಲದೆ ದ್ವೇಷಿಸುತ್ತೇವೆ. ಕಾಳಜಿ, ಪ್ರೀತಿ, ನಂಬಿಕೆಗಳು ಮೂಡುವುದಿಲ್ಲ. ಈ ವಿಷಯಕ್ಕೆ ಕೆಲವು ಮಾಧ್ಯಮ ಮತ್ತು ರಾಜಕಾರಣಿಗಳು ಇನ್ನಿಲ್ಲದಂತೆ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮ ಬಿತ್ತರಿಸುವ ಸುದ್ದಿಗಳು ಎಷ್ಟು ಸರಿ ಎಂದು ಅವಲೋಕಿಸುವ ಬದಲಿಗೆ ದ್ವೇಷ ಕಾರುವ ವಿಷಯಗಳನ್ನು ಆನಂದಿಸುತ್ತೇವೆ. ನಾವೇ ಆಯ್ಕೆ ಮಾಡಿದ ನಾಯಕರುಗಳು ವೇದಿಕೆಗಳಲ್ಲಿ ಉದ್ರೇಕದಿಂದ ಮಾತುನಾಡುತ್ತಿದ್ದರೆ ಚಪ್ಪಾಳೆ ತಟ್ಟುತ್ತೇವೆ, ಬೆಂಬಲಿಸುತ್ತೇವೆ. ಇದರಿಂದ ದೇಶದ ಪ್ರಗತಿ ಸಾಧ್ಯವೇ ಎಂದು ಯೋಚಿಸುವುದಿಲ್ಲ. ನಮ್ಮ ನಾಯಕರುಗಳ ಕೆಲಸ ನಮ್ಮನ್ನು ಉದ್ರೇಕಿಸಿ, ಗಲಭೆ ಸೃಷ್ಟಿಸುವುದೇ? ಎಂದು ನಮಗೆ ಹೊಳೆಯುವುದೇ ಇಲ್ಲ. ಮಾಧ್ಯಮ ಪ್ರತಿನಿಧಿಯೋರ್ವ ಚರ್ಚಿಸುತ್ತಾ ಮತ್ತೊಬ್ಬನ ಮಾತೇ ಕೇಳಿಸದಷ್ಟು ಬೊಬ್ಬೆ ಹಾಕುವಾಗ ನಮಗೇ ಗೆಲುವು ಸಿಕ್ಕಿದಷ್ಟು ಖುಷಿಯಾಗುತ್ತದೆ. ಹಾಗಾದರೆ ದೇಶ ಒಡೆಯುವುದರಲ್ಲಿ ನಮಗೆ ವಿಕೃತ ಆನಂದ ಸಿಗುತ್ತಿದೆ ಎಂದಲ್ಲವೇ ಇದರರ್ಥ. ನಮ್ಮ ಮನಸ್ಥಿತಿ ಎಲ್ಲಿಗೆ ತಲುಪಿದೆ ಹಾಗಾದರೆ?

ಎಲ್ಲಾ ಧರ್ಮಗಳಲ್ಲೂ ಒಳ್ಳೆಯವರಿದ್ದಾರೆ, ಕೆಟ್ಟವರಿದ್ದಾರೆ. ಅವರವರಿಗೆ ಅವರದೇ ಆದ ಧರ್ಮವಿದೆ. ಎಲ್ಲದರಲ್ಲೂ ಕೊರತೆಯಿದೆ, ಒಳ್ಳೆಯ ವಿಚಾರಗಳಿವೆ. ಅವರವರ ಧರ್ಮ ಪಾಲಿಸುವುದು ಅವರದೇ ಇಚ್ಚೆ. ಈ ವಿಷಯಗಳು ದೇಶದ ಬೆಳವಣಿಗೆಗೆ ಮಾರಕವಾಗದಿರಲಿ. ಪ್ರಜೆಯಾಗಿ ನಾವು ನಾಳೆ ಎಂತಹ ಭಾರತವನ್ನು ಕಟ್ಟಲು ಹೊರಟಿದ್ದೇವೆ ಎನ್ನುವುದನ್ನು ಬೇರೆಯವರೊಂದಿಗೆ ಚರ್ಚಿಸುವ ಮೊದಲು, ವಾದಕ್ಕಿಳಿಯುವ ಮೊದಲು ನಮ್ಮೊಳಗೆ ಉತ್ತರ ಕಂಡುಕೊಳ್ಳಬೇಕಿರುವುದು ಈಗಿನ ತುರ್ತು. ನಮ್ಮ ದೇಶ ಪ್ರಗತಿ ಹೊಂದುವುದು ಹಲವಾರು ಸದ್ಯದ ತೊಂದರೆಗಳಿಗೆ ಪರಿಹಾರ ಕಂಡುಹಿಡಿದಾಗ ಮಾತ್ರ. ನಿರುದ್ಯೋಗ ,ಬಡತನ ಮುಂತಾದ ಅತೀ ದೊಡ್ಡ ಸಮಸ್ಯೆಗಳಿಗೆ ಎಲ್ಲರೂ ಒಂದಾಗಿದ್ದಾರೆ ಮಾತ್ರವೇ ಮುಕ್ತಾಯ ದೊರಕುತ್ತದೆ. ಯೋಚಿಸಿ ಮುನ್ನಡೆಯಬೇಕಾದದ್ದು ಪ್ರತಿಯೋರ್ವನ ಕರ್ತವ್ಯವಾಗಿರಲಿ ಎಂಬುದಷ್ಟೇ ಆಶಯ.

  • ಆದಿತ್ಯ ಪ್ರಸಾದ್ ಪಾಂಡೇಲು

ಪ್ರಸ್ತುತ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಆದಿತ್ಯ ಪ್ರಸಾದ್‌ರವರಿಗೆ ಸಾಹಿತ್ಯ ಹಾಗು ರಂಗಭೂಮಿ ಆಸಕ್ತಿಯ ಕ್ಷೇತ್ರಗಳು. ಸಣ್ಣ ವಯಸ್ಸಿನಿಂದ ಬರಹಗಾರನಾಗಬೇಕೆಂಬ ತುಡಿತಕ್ಕೆ ದಿಕ್ಕು ತೋರಿದ್ದು ರಂಗಭೂಮಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...