Homeಕರ್ನಾಟಕಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ., ಬಿ.ಟಿ.ವಿ., ಈ.ಟಿ.ವಿ. ಭಾರತ್‌ ಪ್ರತಿನಿಧಿಗಳಿಗೆ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ತರಾಟೆಗೆ ತೆಗೆದುಕೊಂಡಿದೆ.

- Advertisement -
- Advertisement -

ಹಿಜಾಬ್‌- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವರದಿ ಮಾಡುತ್ತಿರುವ ಹಲವು ದೃಶ್ಯ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ. ಈ ಕುರಿತು ಟೀಕೆಗಳು ವ್ಯಕ್ತವಾಗುತ್ತಿವೆ.

ಶಿವಮೊಗ್ಗದಲ್ಲಿ ವರದಿಗಾರರೊಬ್ಬರು ಮಗುವೊಂದನ್ನು ಓಡಿಸಿಕೊಂಡು ಹೋಗಿ ಫೋಟೋ ತೆಗೆದದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೆಲವು ಮಾಧ್ಯಮಗಳ ಪತ್ರಕರ್ತರಿಗೆ ಸೂಚನೆ ನೀಡಿತ್ತು. ಸಮಿತಿಯ ಮುಂದೆ ಹಾಜರಾದ ಪತ್ರಕರ್ತರು ತಪ್ಪೊಪ್ಪಿಗೆ ಮುಚ್ಚಳಿಕೆ ಬರೆದಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ.

ಬಾಲನ್ಯಾಯ ಕಾಯ್ದೆ (ಮಕ್ಕಳ ರಕ್ಷಣೆ ಹಾಗೂ ಪೋಷಣೆ) 2015ರ ಸೆಕ್ಷನ್‌ 29ರ ಅಡಿಯಲ್ಲಿ ರಚಿತವಾಗಿರುವ ಸಮಿತಿಯು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಆಯ್ದ ಮಾಧ್ಯಮಗಳ ಪತ್ರಕರ್ತರಿಗೆ ಬುದ್ಧಿ ಹೇಳಿದೆ.

ದಿನಾಂಕ 17.02.2022ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಸಂಬಂಧಪಟ್ಟ ಕೆಲವು ಮಾಧ್ಯಮ ಪ್ರತಿನಿಧಿಗಳು ಹಾಜರಾಗಲು ಕ್ರಮವಹಿಸುವಂತೆ ಸೂಚಿಸಿತ್ತು.

ಇದನ್ನೂ ಓದಿರಿ: ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ದೃಶ್ಯಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು ಹಾಗೂ ಕ್ಯಾಮೆರಾಮನ್‌ಗಳು ಸಮಿತಿಯ ಮುಂದೆ ಹಾಜರಾಗುವಂತೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿತ್ತು.

ರಾಜ್ಯಾದ್ಯಂತ ಸುದ್ದಿಯಾಗಿರುವ, ವಿದ್ಯಾರ್ಥಿ ಸಮುದಾಯದಲ್ಲಿ ಗೊಂದಲಕ್ಕೆಡೆ ಮಾಡಿಕೊಟ್ಟ ‘ಹಿಜಾಬ್‌’ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಮಾಧ್ಯಮದವರು ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುತ್ತಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯವನ್ನು ಗಮನಿಸಲಾಗಿದೆ. ಮಕ್ಕಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿದ ದೃಶ್ಯವನ್ನು ಗಮನಿಸಿದ್ದು ಇದು ಬಾಲ ನ್ಯಾಯ ಕಾಯ್ದೆ 2015ರ ಸೆಕ್ಷನ್‌ 75ರ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಕೆಲವು ಟಿ.ವಿ.ಚಾನೆಲ್‌ಗಳು ಶಿವಮೊಗ್ಗ ಶಾಲೆಗಳಿಂದ ನೇರ ಪ್ರಸಾರ ಮಾಡಿವೆ ಎಂದು ಸಮಿತಿ ತಿಳಿಸಿತ್ತು.

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ. ಮತ್ತು ಬಿ.ಟಿ.ವಿ. ಚಾನೆಲ್‌ಗಳಲ್ಲಿ ದೃಶ್ಯಗಳು ಬಿತ್ತರಗೊಂಡಿವೆ. ಈ ವಿಷಯ ತುರ್ತು ಇದ್ದು, ಸದರಿ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು, ಕ್ಯಾಮೆರಾಮನ್‌ಗಳ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳು ಲಭ್ಯವಿಲ್ಲದ ಕಾರಣ ವೈಯಕ್ತಿಕವಾಗಿ ಪತ್ರ ವ್ಯವಹರಿಸಲು ಸಮಯ ಕಡಿಮೆ ಇರುವುದರಿಂದ ಸಂಬಂಧಪಟ್ಟ ಮಾಧ್ಯಮದವರು ತುರ್ತಾಗಿ ದಿನಾಂಕ 18.02.2022ರಂದು ಬೆಳಿಗ್ಗೆ 11 ಗಂಟೆಗೆ ಸಮಿತಿ ಎದುರು ಹಾಜರಾಗುವಂತೆ ನಿರ್ದೇಶನ ನೀಡಬೇಕು ಎಂದು ವಾರ್ತಾ ಇಲಾಖೆಗೆ ಸಮಿತಿ ಪತ್ರ ಬರೆದಿತ್ತು.

ಸಮಿತಿಯ ಸೂಚನೆಯ ಮೇರೆಗೆ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರು ಸಂಬಂಧಪಟ್ಟ ಮಾಧ್ಯಮಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದರು. ಸಭೆ ಹಾಜರಾದ ಪತ್ರಕರ್ತರು ಮತ್ತೆ ಕಾನೂನು ಉಲ್ಲಂಘಿಸದಂತೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ಸಭೆಗೆ ಹಾಜರಾಗಿದ್ದ, ಹೆಸರು ಹೇಳಲಿಚ್ಛಿಸದ ಪತ್ರಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಿ.ಎಂ.ರೇಖಾ, “ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ಮತ್ತೆ ಮಾಡದಂತೆ ಮಾಧ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಹೊಸದಾಗಿ ಪತ್ರಿಕೋದ್ಯಮಕ್ಕೆ ಬಂದವರಿರುತ್ತಾರೆ. ಅವರಿಗೆ ಮಕ್ಕಳ ಹಕ್ಕುಗಳ ಕುರಿತು ಅರಿವಿರುವುದಿಲ್ಲ. ಕೆಲವರು ಹೊಸ ಕಾಯ್ದೆಗಳ ಕುರಿತು ಅಪ್‌ಡೇಟ್ ಆಗಿರುವುದಿಲ್ಲ. ಮುಂದೆ ತೊಂದರೆಯಾಗಬಾರದು. ಅರಿವು ಮೂಡಿಸುವ ಕಾರಣಕ್ಕೆ ಅವರನ್ನು ಕರೆಸಲಾಗಿತ್ತು” ಎಂದು ತಿಳಿಸಿದರು.

“ಕಾನೂನು ಉಲ್ಲಂಘಿಸಿದ ಬಳಿಕ, ನಾಳೆ ನ್ಯಾಯಾಲಯದ ಎದುರು ನಮಗೆ ಕಾನೂನು ಗೊತ್ತಿರಲಿಲ್ಲ ಎಂದು ವಾದಿಸಲು ಸಾಧ್ಯವಿಲ್ಲ” ಎಂದ ಅವರು, “ನೋಟಿಸ್‌ ನೀಡಲಾಗಿದ್ದ ಎಲ್ಲ ಮಾಧ್ಯಮದವರು ಹಾಗೂ ಇತರ ಸ್ಥಳೀಯ ಮಾಧ್ಯಮಗಳ ಪ್ರತಿನಿಧಿಗಳು ಹಾಜರಾಗಿದ್ದರು” ಎಂದು ಮಾಹಿತಿ ನೀಡಿದರು.

“ಹಿಜಾಬ್‌ ಬೇಕೋ, ಶಿಕ್ಷಣ ಬೇಕೋ ಎಂದು ಮಕ್ಕಳಲ್ಲಿ ಪ್ರಶ್ನಿಸುವುದು ಸರಿಯಲ್ಲ ಎಂದು ಮಾಧ್ಯಮದವರಿಗೆ ಮನವರಿಕೆ ಮಾಡಿದ್ದೇವೆ. ಕೋವಿಡ್‌ನಿಂದಾಗಿ ಎರಡು ವರ್ಷಗಳಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಏನೇನೋ ಕಾರಣಗಳನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿಸಿದರೆ ಅವರು ಮುಖ್ಯವಾಹಿನಿಗೆ ಬರುವುದೇ ಕಷ್ಟವಾಗುತ್ತದೆ. ದೇಶದ ಭವಿಷ್ಯವೇ ಮಕ್ಕಳು. ಹೀಗಾಗಿ ನಾವು ಮಕ್ಕಳ ವಿಚಾರವಾಗಿ ಗಂಭೀರವಾಗಿ ಯೋಚಿಸಬೇಕು” ಎಂದು ಅವರು ಮನವಿ ಮಾಡಿದರು.

“ನಿಷೇದಾಜ್ಞೆ ಜಾರಿ ಮಾಡಿದರೂ ಶಾಲಾ ಕಾಲೇಜುಗಳ ಬಳಿ ಮಾಧ್ಯಮದವರು ಹೋಗಿದ್ದಾರೆ. ಈ ಕುರಿತೂ ಮನವರಿಕೆ ಮಾಡಿದ್ದೇವೆ. ವಿಶ್ವ ಮಕ್ಕಳ ಒಡಂಬಡಿಕೆಯಿಂದ ಹಿಡಿದು ಇತ್ತೀಚಿನ ಕಾನೂನಿನವರೆಗೂ ತಿಳಿಸಿದ್ದೇವೆ. ನಿಮಗೆ ಬಿಡುವಾದಾಗ ಎರಡು ಗಂಟೆ ಸಮಯವನ್ನು ನಮಗೆ ನೀಡಿ. ನಾವು ಬಂದು ನಿಮಗೆ ಮಕ್ಕಳ ಹಕ್ಕುಗಳ ಕುರಿತು ಮಾರ್ಗದರ್ಶನ ಮಾಡುತ್ತೇವೆ ಎಂದು ಮಾಧ್ಯಮದವರಿಗೆ ತಿಳಿಸಿದ್ದೇವೆ. ಅರಿವಿನ ಕೊರತೆಯಿಂದ ಹೀಗಾಗುತ್ತದೆ. ನಾಳೆ ನೀವು ಕಷ್ಟಕ್ಕೆ ಸಿಲುಕಿಕೊಂಡು ಒದ್ದಾಡಬೇಡಿ ಎಂದೂ ಎಚ್ಚರಿಕೆಯನ್ನು ಕೊಟ್ಟಿದ್ದೇವೆ” ಎಂದು ಅವರು ವಿವರಿಸಿದರು.

“ಮತ್ತೆ ಇದೇ ತಪ್ಪು ಪುನಾರಾವರ್ತನೆಯಾದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇವೆ” ಎಂದು ರೇಖಾ ಅವರು ಮಾತು ಮುಗಿಸಿದರು.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...