Homeಮುಖಪುಟಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

ಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಸಮಯ: ಮಧ್ಯಾಹ್ನ 12 ಗಂಟೆ, ಶುಕ್ರವಾರ: ಗುರುವಾರ ಮೌಖಿಕ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ಪ್ರಕಟಿಸಿದೆ.

“ಎಲ್ಲಾ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ. ಅವರವರ ಧರ್ಮಾನುಸಾರ ಕೇಸರಿ ಶಾಲನ್ನಾಗಲೀ, ಹಿಜಾಬ್ ಅನ್ನಾಗಲೀ, ಧಾರ್ಮಿಕ ಬಾವುಟಗಳನ್ನಾಗಲೀ ತರಗತಿಯೊಳಗೆ ತರಬಾರದು. ಮುಂದಿನ ಆದೇಶದವರೆಗೂ ಇವುಗಳನ್ನು ತರದಂತೆ ನಿರ್ಬಂಧಿಸುತ್ತಿದ್ದೇವೆ” ಎಂದು ಹೈಕೋರ್ಟ್ ತಿಳಿಸಿದೆ.

“ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ಕಡಿವಾಣವಿರದ ಪ್ರತಿಭಟನೆಗಳಿಂದ ಶಾಲೆ ಕಾಲೇಜುಗಳು ಬಂದ್ ಆಗಬಾರದು” ಎಂದು ಹೇಳಿದೆ.

“ಶಿಕ್ಷಣ ಸಂಸ್ಥೆಗಳು ಅನಿರ್ದಿಷ್ಟ ಕಾಲ ಬಂದ್ ಆಗುವುದು ಸಂತಸದ ಸಂಗತಿಯಲ್ಲ. ಈ ಪ್ರಕರಣದ ವಿಚಾರಣೆಯನ್ನು ತುರ್ತು ಆಧಾರದ ಮೇಲೆ ನಡೆಸಲಾಗುತ್ತಿದೆ. ಶೈಕ್ಷಣಿಕ ವರ್ಷವನ್ನು ವಿಳಂಬಿಸುವುದರಿಂದ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾಗುತ್ತದೆ. ಉನ್ನತ ಶಿಕ್ಷಣದ ಪ್ರವೇಶಕ್ಕೆ ಸಮಯ ಈಗಾಗಲೇ ನಿಗದಿಯಾಗಿರುತ್ತದೆ. ನಿಗದಿತ ಸಮಯದೊಳಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು ಕಡ್ಡಾಯವಾಗುತ್ತದೆ” ಎಂದು ಹೈಕೋರ್ಟ್ ತಿಳಿಸಿದೆ.


ಸಮಯ: ಬೆಳಿಗ್ಗೆ 11 ಗಂಟೆ, 12 ನಿಮಿಷ, ಶುಕ್ರವಾರ: ಹಿಜಾಬ್ ಅರ್ಜಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ವಿರುದ್ಧ ಸಲ್ಲಿಕೆಯಾಗಿದ್ದ ವಿಶೇಷ ರಜೆ ಅರ್ಜಿಯ ವಿಚಾರಣೆಗೆ ತುರ್ತು ಪಟ್ಟಿಯನ್ನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಈ ವಿಷಯವನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳಲಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಈ ವಿಷಯವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್ ಅವರಿಗೆ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರು, “ಈ ವಿಷಯವನ್ನು ದೊಡ್ಡ ಮಟ್ಟದಲ್ಲಿ ಹರಡಲು ಬಯಸುವುದಿಲ್ಲ” ಎಂದಿದ್ದಾರೆ.

“ನಾನು ಏನನ್ನೂ ವ್ಯಕ್ತಪಡಿಸಲು ಬಯಸುವುದಿಲ್ಲ. ಈ ವಿಷಯಗಳನ್ನು ದೊಡ್ಡ ಮಟ್ಟಕ್ಕೆ ಹರಡಬೇಡಿ. ಈ ವಿಷಯಗಳನ್ನು ದೆಹಲಿಗೆ ತರುವುದು ಸರಿಯೇ, ರಾಷ್ಟ್ರೀಯ ಮಟ್ಟದ ಸಮಸ್ಯೆಯೇ, ಎಲ್ಲದಕ್ಕೂ ನೀವು ಯೋಚಿಸಬೇಕು” ಎಂದು ತಿಳಿಸಿದ್ದಾರೆ.

ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ವಿಚಾರಣೆಗಳು ಹಾಗೂ ಹಿಜಾಬ್ ಸಮಸ್ಯೆಯನ್ನು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ನ ನಿರ್ದೇಶನಕ್ಕೆ ತಡೆಯಾಜ್ಞೆ ನೀಡಬೇಕು ಎಂದು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯಲ್ಲಿ ಕೋರಲಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದೆ ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲು ಹೈಕೋರ್ಟ್ ಪ್ರಯತ್ನಿಸಿದೆ ಎಂದು ಮೇಲ್ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಧರಿಸುವ ಧಾರ್ಮಿಕ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಶಾಲಾ-ಕಾಲೇಜುಗಳನ್ನು ಮತ್ತೆ ತೆರೆಯಬಹುದು. ಆದರೆ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ವಿಚಾರಣೆ ಮುಗಿಯುವವರೆಗೂ ಧರಿಸುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಸೂಚನೆಯು ಭಾರತೀಯ ಸಂವಿಧಾನದ 14, 15, 19, 21 ಮತ್ತು 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜೆ ಅರ್ಜಿಯಲ್ಲಿ ತಿಳಿಸಲಾಗಿದೆ.

ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರಗಳನ್ನು ಧರಿಸುವುದನ್ನು ಮೌಖಿಕವಾಗಿ ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್‌ನ ಸೂಚನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.

“ಮಧ್ಯಂತರ ಆದೇಶವು ವ್ಯಕ್ತಿಗಳ, ವಿಶೇಷವಾಗಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಆತ್ಮಸಾಕ್ಷಿಯ ಆಯ್ಕೆಯನ್ನು ಪ್ರಶ್ನಿಸಿದೆ” ಎಂದು ವಿದ್ಯಾರ್ಥಿಯೊಬ್ಬರು ವಿಶೇಷ ರಜೆ ಅರ್ಜಿಯನ್ನು ಸಲ್ಲಿಸಿದ್ದರು.

ಹೈಕೋರ್ಟ್ ಆದೇಶದ ಪ್ರತಿಯನ್ನು ಇನ್ನೂ ಬಿಡುಗಡೆ ಮಾಡದ ಕಾರಣ ಅರ್ಜಿದಾರರು, ಕರ್ನಾಟಕ ಹೈಕೋರ್ಟ್ ಪ್ರೊಸೀಡಿಂಗ್ಸ್ ಲೈವ್ ಲಾನಲ್ಲಿ ಆಗಿರುವ ಲೈವ್ ಟ್ವೀಟ್‌ಗಳ ಪಠ್ಯವನ್ನು ಸಲ್ಲಿಸಲಾಗಿದೆ.


ಸಮಯ: ಬೆಳಿಗ್ಗೆ 11.08. ಶುಕ್ರವಾರ

ವೈಯಕ್ತಿಕ ವಿವರ ಸೋರಿಕೆ: ದೂರು ದಾಖಲು

ಹಿಜಾಬ್‌ ಹಕ್ಕಿಗಾಗಿ ಪ್ರತಿಭಟಿಸಿದ ವಿದ್ಯಾರ್ಥಿನಿಯ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ ವಿದ್ಯಾರ್ಥಿನಿಯರ ಪೋಷಕರು ದೂರು ದಾಖಲಿಸಿದ್ದಾರೆ.

ಉಡುಪಿಯ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರಿಗೆ ದೂರು ಸಲ್ಲಿಸಿರುವ ಪೋಷಕರು, ಮೊಬೈಲ್ ಸಂಖ್ಯೆ ಸೇರಿದಂತೆ ಬಾಲಕಿಯರ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದ್ದಾರೆ. ಈ ವಿವರಗಳನ್ನು ಬಳಸಿಕೊಂಡು ದುಷ್ಕರ್ಮಿಗಳು ಬಾಲಕಿಯರಿಗೆ ಬೆದರಿಕೆ ಹಾಕಬಹುದು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಲಕಿಯರ ಪೋಷಕರು ತಮಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ವಿಷ್ಣುವರ್ಧನ್ ಹೇಳಿದ್ದಾರೆ. ಸೂಕ್ತ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕೇಳಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

(ವಿವಾದಕ್ಕೆ ಸಂಬಂಧಿಸಿದ ವಿವರಗಳನ್ನು ಅಪ್‌ಡೇಟ್‌ ಮಾಡಲಾಗುತ್ತಿದೆ. ಆಗಾಗ್ಗೆ ರೀಫ್ರೆಶ್‌ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...