Homeಮುಖಪುಟಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

ಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಸಮಯ: ಮಧ್ಯಾಹ್ನ 12 ಗಂಟೆ, ಶುಕ್ರವಾರ: ಗುರುವಾರ ಮೌಖಿಕ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ಪ್ರಕಟಿಸಿದೆ.

“ಎಲ್ಲಾ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ. ಅವರವರ ಧರ್ಮಾನುಸಾರ ಕೇಸರಿ ಶಾಲನ್ನಾಗಲೀ, ಹಿಜಾಬ್ ಅನ್ನಾಗಲೀ, ಧಾರ್ಮಿಕ ಬಾವುಟಗಳನ್ನಾಗಲೀ ತರಗತಿಯೊಳಗೆ ತರಬಾರದು. ಮುಂದಿನ ಆದೇಶದವರೆಗೂ ಇವುಗಳನ್ನು ತರದಂತೆ ನಿರ್ಬಂಧಿಸುತ್ತಿದ್ದೇವೆ” ಎಂದು ಹೈಕೋರ್ಟ್ ತಿಳಿಸಿದೆ.

“ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ಕಡಿವಾಣವಿರದ ಪ್ರತಿಭಟನೆಗಳಿಂದ ಶಾಲೆ ಕಾಲೇಜುಗಳು ಬಂದ್ ಆಗಬಾರದು” ಎಂದು ಹೇಳಿದೆ.

“ಶಿಕ್ಷಣ ಸಂಸ್ಥೆಗಳು ಅನಿರ್ದಿಷ್ಟ ಕಾಲ ಬಂದ್ ಆಗುವುದು ಸಂತಸದ ಸಂಗತಿಯಲ್ಲ. ಈ ಪ್ರಕರಣದ ವಿಚಾರಣೆಯನ್ನು ತುರ್ತು ಆಧಾರದ ಮೇಲೆ ನಡೆಸಲಾಗುತ್ತಿದೆ. ಶೈಕ್ಷಣಿಕ ವರ್ಷವನ್ನು ವಿಳಂಬಿಸುವುದರಿಂದ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾಗುತ್ತದೆ. ಉನ್ನತ ಶಿಕ್ಷಣದ ಪ್ರವೇಶಕ್ಕೆ ಸಮಯ ಈಗಾಗಲೇ ನಿಗದಿಯಾಗಿರುತ್ತದೆ. ನಿಗದಿತ ಸಮಯದೊಳಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು ಕಡ್ಡಾಯವಾಗುತ್ತದೆ” ಎಂದು ಹೈಕೋರ್ಟ್ ತಿಳಿಸಿದೆ.


ಸಮಯ: ಬೆಳಿಗ್ಗೆ 11 ಗಂಟೆ, 12 ನಿಮಿಷ, ಶುಕ್ರವಾರ: ಹಿಜಾಬ್ ಅರ್ಜಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ವಿರುದ್ಧ ಸಲ್ಲಿಕೆಯಾಗಿದ್ದ ವಿಶೇಷ ರಜೆ ಅರ್ಜಿಯ ವಿಚಾರಣೆಗೆ ತುರ್ತು ಪಟ್ಟಿಯನ್ನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಈ ವಿಷಯವನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳಲಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಈ ವಿಷಯವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್ ಅವರಿಗೆ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರು, “ಈ ವಿಷಯವನ್ನು ದೊಡ್ಡ ಮಟ್ಟದಲ್ಲಿ ಹರಡಲು ಬಯಸುವುದಿಲ್ಲ” ಎಂದಿದ್ದಾರೆ.

“ನಾನು ಏನನ್ನೂ ವ್ಯಕ್ತಪಡಿಸಲು ಬಯಸುವುದಿಲ್ಲ. ಈ ವಿಷಯಗಳನ್ನು ದೊಡ್ಡ ಮಟ್ಟಕ್ಕೆ ಹರಡಬೇಡಿ. ಈ ವಿಷಯಗಳನ್ನು ದೆಹಲಿಗೆ ತರುವುದು ಸರಿಯೇ, ರಾಷ್ಟ್ರೀಯ ಮಟ್ಟದ ಸಮಸ್ಯೆಯೇ, ಎಲ್ಲದಕ್ಕೂ ನೀವು ಯೋಚಿಸಬೇಕು” ಎಂದು ತಿಳಿಸಿದ್ದಾರೆ.

ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ವಿಚಾರಣೆಗಳು ಹಾಗೂ ಹಿಜಾಬ್ ಸಮಸ್ಯೆಯನ್ನು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ನ ನಿರ್ದೇಶನಕ್ಕೆ ತಡೆಯಾಜ್ಞೆ ನೀಡಬೇಕು ಎಂದು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯಲ್ಲಿ ಕೋರಲಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದೆ ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲು ಹೈಕೋರ್ಟ್ ಪ್ರಯತ್ನಿಸಿದೆ ಎಂದು ಮೇಲ್ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಧರಿಸುವ ಧಾರ್ಮಿಕ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಶಾಲಾ-ಕಾಲೇಜುಗಳನ್ನು ಮತ್ತೆ ತೆರೆಯಬಹುದು. ಆದರೆ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ವಿಚಾರಣೆ ಮುಗಿಯುವವರೆಗೂ ಧರಿಸುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಸೂಚನೆಯು ಭಾರತೀಯ ಸಂವಿಧಾನದ 14, 15, 19, 21 ಮತ್ತು 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜೆ ಅರ್ಜಿಯಲ್ಲಿ ತಿಳಿಸಲಾಗಿದೆ.

ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರಗಳನ್ನು ಧರಿಸುವುದನ್ನು ಮೌಖಿಕವಾಗಿ ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್‌ನ ಸೂಚನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.

“ಮಧ್ಯಂತರ ಆದೇಶವು ವ್ಯಕ್ತಿಗಳ, ವಿಶೇಷವಾಗಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಆತ್ಮಸಾಕ್ಷಿಯ ಆಯ್ಕೆಯನ್ನು ಪ್ರಶ್ನಿಸಿದೆ” ಎಂದು ವಿದ್ಯಾರ್ಥಿಯೊಬ್ಬರು ವಿಶೇಷ ರಜೆ ಅರ್ಜಿಯನ್ನು ಸಲ್ಲಿಸಿದ್ದರು.

ಹೈಕೋರ್ಟ್ ಆದೇಶದ ಪ್ರತಿಯನ್ನು ಇನ್ನೂ ಬಿಡುಗಡೆ ಮಾಡದ ಕಾರಣ ಅರ್ಜಿದಾರರು, ಕರ್ನಾಟಕ ಹೈಕೋರ್ಟ್ ಪ್ರೊಸೀಡಿಂಗ್ಸ್ ಲೈವ್ ಲಾನಲ್ಲಿ ಆಗಿರುವ ಲೈವ್ ಟ್ವೀಟ್‌ಗಳ ಪಠ್ಯವನ್ನು ಸಲ್ಲಿಸಲಾಗಿದೆ.


ಸಮಯ: ಬೆಳಿಗ್ಗೆ 11.08. ಶುಕ್ರವಾರ

ವೈಯಕ್ತಿಕ ವಿವರ ಸೋರಿಕೆ: ದೂರು ದಾಖಲು

ಹಿಜಾಬ್‌ ಹಕ್ಕಿಗಾಗಿ ಪ್ರತಿಭಟಿಸಿದ ವಿದ್ಯಾರ್ಥಿನಿಯ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ ವಿದ್ಯಾರ್ಥಿನಿಯರ ಪೋಷಕರು ದೂರು ದಾಖಲಿಸಿದ್ದಾರೆ.

ಉಡುಪಿಯ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರಿಗೆ ದೂರು ಸಲ್ಲಿಸಿರುವ ಪೋಷಕರು, ಮೊಬೈಲ್ ಸಂಖ್ಯೆ ಸೇರಿದಂತೆ ಬಾಲಕಿಯರ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದ್ದಾರೆ. ಈ ವಿವರಗಳನ್ನು ಬಳಸಿಕೊಂಡು ದುಷ್ಕರ್ಮಿಗಳು ಬಾಲಕಿಯರಿಗೆ ಬೆದರಿಕೆ ಹಾಕಬಹುದು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಲಕಿಯರ ಪೋಷಕರು ತಮಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ವಿಷ್ಣುವರ್ಧನ್ ಹೇಳಿದ್ದಾರೆ. ಸೂಕ್ತ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕೇಳಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

(ವಿವಾದಕ್ಕೆ ಸಂಬಂಧಿಸಿದ ವಿವರಗಳನ್ನು ಅಪ್‌ಡೇಟ್‌ ಮಾಡಲಾಗುತ್ತಿದೆ. ಆಗಾಗ್ಗೆ ರೀಫ್ರೆಶ್‌ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...