Homeಮುಖಪುಟಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

ಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಸಮಯ: ಮಧ್ಯಾಹ್ನ 12 ಗಂಟೆ, ಶುಕ್ರವಾರ: ಗುರುವಾರ ಮೌಖಿಕ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ಪ್ರಕಟಿಸಿದೆ.

“ಎಲ್ಲಾ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ. ಅವರವರ ಧರ್ಮಾನುಸಾರ ಕೇಸರಿ ಶಾಲನ್ನಾಗಲೀ, ಹಿಜಾಬ್ ಅನ್ನಾಗಲೀ, ಧಾರ್ಮಿಕ ಬಾವುಟಗಳನ್ನಾಗಲೀ ತರಗತಿಯೊಳಗೆ ತರಬಾರದು. ಮುಂದಿನ ಆದೇಶದವರೆಗೂ ಇವುಗಳನ್ನು ತರದಂತೆ ನಿರ್ಬಂಧಿಸುತ್ತಿದ್ದೇವೆ” ಎಂದು ಹೈಕೋರ್ಟ್ ತಿಳಿಸಿದೆ.

“ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ಕಡಿವಾಣವಿರದ ಪ್ರತಿಭಟನೆಗಳಿಂದ ಶಾಲೆ ಕಾಲೇಜುಗಳು ಬಂದ್ ಆಗಬಾರದು” ಎಂದು ಹೇಳಿದೆ.

“ಶಿಕ್ಷಣ ಸಂಸ್ಥೆಗಳು ಅನಿರ್ದಿಷ್ಟ ಕಾಲ ಬಂದ್ ಆಗುವುದು ಸಂತಸದ ಸಂಗತಿಯಲ್ಲ. ಈ ಪ್ರಕರಣದ ವಿಚಾರಣೆಯನ್ನು ತುರ್ತು ಆಧಾರದ ಮೇಲೆ ನಡೆಸಲಾಗುತ್ತಿದೆ. ಶೈಕ್ಷಣಿಕ ವರ್ಷವನ್ನು ವಿಳಂಬಿಸುವುದರಿಂದ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾಗುತ್ತದೆ. ಉನ್ನತ ಶಿಕ್ಷಣದ ಪ್ರವೇಶಕ್ಕೆ ಸಮಯ ಈಗಾಗಲೇ ನಿಗದಿಯಾಗಿರುತ್ತದೆ. ನಿಗದಿತ ಸಮಯದೊಳಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು ಕಡ್ಡಾಯವಾಗುತ್ತದೆ” ಎಂದು ಹೈಕೋರ್ಟ್ ತಿಳಿಸಿದೆ.


ಸಮಯ: ಬೆಳಿಗ್ಗೆ 11 ಗಂಟೆ, 12 ನಿಮಿಷ, ಶುಕ್ರವಾರ: ಹಿಜಾಬ್ ಅರ್ಜಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ವಿರುದ್ಧ ಸಲ್ಲಿಕೆಯಾಗಿದ್ದ ವಿಶೇಷ ರಜೆ ಅರ್ಜಿಯ ವಿಚಾರಣೆಗೆ ತುರ್ತು ಪಟ್ಟಿಯನ್ನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಈ ವಿಷಯವನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳಲಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಈ ವಿಷಯವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್ ಅವರಿಗೆ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರು, “ಈ ವಿಷಯವನ್ನು ದೊಡ್ಡ ಮಟ್ಟದಲ್ಲಿ ಹರಡಲು ಬಯಸುವುದಿಲ್ಲ” ಎಂದಿದ್ದಾರೆ.

“ನಾನು ಏನನ್ನೂ ವ್ಯಕ್ತಪಡಿಸಲು ಬಯಸುವುದಿಲ್ಲ. ಈ ವಿಷಯಗಳನ್ನು ದೊಡ್ಡ ಮಟ್ಟಕ್ಕೆ ಹರಡಬೇಡಿ. ಈ ವಿಷಯಗಳನ್ನು ದೆಹಲಿಗೆ ತರುವುದು ಸರಿಯೇ, ರಾಷ್ಟ್ರೀಯ ಮಟ್ಟದ ಸಮಸ್ಯೆಯೇ, ಎಲ್ಲದಕ್ಕೂ ನೀವು ಯೋಚಿಸಬೇಕು” ಎಂದು ತಿಳಿಸಿದ್ದಾರೆ.

ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ವಿಚಾರಣೆಗಳು ಹಾಗೂ ಹಿಜಾಬ್ ಸಮಸ್ಯೆಯನ್ನು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ನ ನಿರ್ದೇಶನಕ್ಕೆ ತಡೆಯಾಜ್ಞೆ ನೀಡಬೇಕು ಎಂದು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯಲ್ಲಿ ಕೋರಲಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದೆ ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲು ಹೈಕೋರ್ಟ್ ಪ್ರಯತ್ನಿಸಿದೆ ಎಂದು ಮೇಲ್ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಧರಿಸುವ ಧಾರ್ಮಿಕ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಶಾಲಾ-ಕಾಲೇಜುಗಳನ್ನು ಮತ್ತೆ ತೆರೆಯಬಹುದು. ಆದರೆ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ವಿಚಾರಣೆ ಮುಗಿಯುವವರೆಗೂ ಧರಿಸುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಸೂಚನೆಯು ಭಾರತೀಯ ಸಂವಿಧಾನದ 14, 15, 19, 21 ಮತ್ತು 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜೆ ಅರ್ಜಿಯಲ್ಲಿ ತಿಳಿಸಲಾಗಿದೆ.

ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರಗಳನ್ನು ಧರಿಸುವುದನ್ನು ಮೌಖಿಕವಾಗಿ ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್‌ನ ಸೂಚನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.

“ಮಧ್ಯಂತರ ಆದೇಶವು ವ್ಯಕ್ತಿಗಳ, ವಿಶೇಷವಾಗಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಆತ್ಮಸಾಕ್ಷಿಯ ಆಯ್ಕೆಯನ್ನು ಪ್ರಶ್ನಿಸಿದೆ” ಎಂದು ವಿದ್ಯಾರ್ಥಿಯೊಬ್ಬರು ವಿಶೇಷ ರಜೆ ಅರ್ಜಿಯನ್ನು ಸಲ್ಲಿಸಿದ್ದರು.

ಹೈಕೋರ್ಟ್ ಆದೇಶದ ಪ್ರತಿಯನ್ನು ಇನ್ನೂ ಬಿಡುಗಡೆ ಮಾಡದ ಕಾರಣ ಅರ್ಜಿದಾರರು, ಕರ್ನಾಟಕ ಹೈಕೋರ್ಟ್ ಪ್ರೊಸೀಡಿಂಗ್ಸ್ ಲೈವ್ ಲಾನಲ್ಲಿ ಆಗಿರುವ ಲೈವ್ ಟ್ವೀಟ್‌ಗಳ ಪಠ್ಯವನ್ನು ಸಲ್ಲಿಸಲಾಗಿದೆ.


ಸಮಯ: ಬೆಳಿಗ್ಗೆ 11.08. ಶುಕ್ರವಾರ

ವೈಯಕ್ತಿಕ ವಿವರ ಸೋರಿಕೆ: ದೂರು ದಾಖಲು

ಹಿಜಾಬ್‌ ಹಕ್ಕಿಗಾಗಿ ಪ್ರತಿಭಟಿಸಿದ ವಿದ್ಯಾರ್ಥಿನಿಯ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ ವಿದ್ಯಾರ್ಥಿನಿಯರ ಪೋಷಕರು ದೂರು ದಾಖಲಿಸಿದ್ದಾರೆ.

ಉಡುಪಿಯ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರಿಗೆ ದೂರು ಸಲ್ಲಿಸಿರುವ ಪೋಷಕರು, ಮೊಬೈಲ್ ಸಂಖ್ಯೆ ಸೇರಿದಂತೆ ಬಾಲಕಿಯರ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದ್ದಾರೆ. ಈ ವಿವರಗಳನ್ನು ಬಳಸಿಕೊಂಡು ದುಷ್ಕರ್ಮಿಗಳು ಬಾಲಕಿಯರಿಗೆ ಬೆದರಿಕೆ ಹಾಕಬಹುದು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಲಕಿಯರ ಪೋಷಕರು ತಮಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ವಿಷ್ಣುವರ್ಧನ್ ಹೇಳಿದ್ದಾರೆ. ಸೂಕ್ತ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕೇಳಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

(ವಿವಾದಕ್ಕೆ ಸಂಬಂಧಿಸಿದ ವಿವರಗಳನ್ನು ಅಪ್‌ಡೇಟ್‌ ಮಾಡಲಾಗುತ್ತಿದೆ. ಆಗಾಗ್ಗೆ ರೀಫ್ರೆಶ್‌ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...