HomeUncategorizedHijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ...

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್

ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ನಡೆದ ವಾದಗಳಸಂಕ್ಷಿಪ್ತ ವಿವರಣೆ

- Advertisement -
- Advertisement -

ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ನಾಲ್ಕು ಅರ್ಜಿಗಳ ವಿಚಾರಣೆಯನ್ನು ಕೋರ್ಟ್‌ ನಡೆಸುತ್ತಿದೆ.

ಹಿಜಾಬ್ ಧರಿಸಿದ ಏಕೈಕ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡುತ್ತಿವೆ ಎಂದು ಅರ್ಜಿದಾರ ವಿದ್ಯಾರ್ಥಿಗಳು ವಾದಿಸಿದ್ದಾರೆ.

ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, “ಎಲ್ಲಾ ಭಾವನೆಗಳನ್ನು ಬದಿಗಿರಿಸಿ. ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಸಂವಿಧಾನ ನನಗೆ ಭಗವತ್‌ ಗೀತೆಗಿಂತ ಮೇಲೆ. ನಾನು ಸಂವಿಧಾನಕ್ಕೆ ನೀಡಿರುವ ಪ್ರಮಾಣ ವಚನಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಫಾರೂಕ್ ಸಲ್ಲಿಸಿರುವ ಅರ್ಜಿಯಲ್ಲಿ ಸಂವಿಧಾನದ 14 ಮತ್ತು 25ನೇ ವಿಧಿಯಡಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿರುವ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸುತ್ತಿದ್ದು, ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸುತ್ತಿದ್ದಾರೆ.

ಸರ್ಕಾರದ ಪರವಾರಿ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, “ಶೈಕ್ಷಣಿಕ ಸಂಸ್ಥೆಯಲ್ಲಿ ಹಿಜಾಬ್‌ ಧರಿಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿದೆಯೇ ಎಂದು ಪರಿಶೀಲಿಸಿ. ಸಕಾರವು ಕಾಲೇಜು ಅಭಿವೃದ್ದಿ ಮಂಡಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಈಗ ಎರಡು ತಿಂಗಳವರೆಗೆ ಯಥಾಸ್ಥಿತಿ ಕಾಪಾಡಿ ಎಂದು ವಕೀಲ ದೇವದತ್‌ ಅವರು ಹೇಳಿದ್ದು, “ಹಿಜಾಬ್‌ ಧರಿಸುವುದು ಇದು ಇಸ್ಲಾಮ್‌ ಧರ್ಮದ ಸಂಪ್ರದಾಯ. ನಮ್ಮ ಮೊದಲ ಕೋರಿಕೆ, ಶಿರವಸ್ತ್ರ ಅಥವಾ ಹಿಜಾಬ್‌ ಧರಿಸುವುದು. ಪವಿತ್ರ ಕುರಾನ್‌ ಪ್ರಕಾರ ಇದು ಇಸ್ಲಾಂ ಧರ್ಮದ ಅಗತ್ಯ ಭಾಗವಾಗಿದೆ” ಎಂದು ಹೇಳಿದ್ದಾರೆ.

“ಎರಡನೆ ಮನವಿ, ಇಷ್ಟವಿರುವ ಬಟ್ಟೆ ಧರಿಸುವುದು ಸಂವಿಧಾನದ 19(ಎ) ಅಡಿ ನೀಡಿರುವುದಾಗಿದ್ದು 19(6) ಅಡಿ ಮಾತ್ರವೇ ಅದನ್ನು ನಿರ್ಬಂಧಿಸಬಹುದು. ಅಭಿವ್ಯಕ್ತಿಯ ಸ್ವಾತಂತ್ರ್ಯವು ಏನನ್ನು ಧರಿಸಬಹುದು ಎನ್ನುವುದನ್ನು ಒಳಗೊಳ್ಳುತ್ತದೆ. ಪುಟ್ಟಸ್ವಾಮಿ ಪ್ರಕರಣದಲ್ಲಿ ಖಾಸಗಿ ಹಕ್ಕನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದ್ದು. ವಸ್ತ್ರಧರಿಸುವ ಹಕ್ಕು ಇದರಡಿಯೇ ಬರುತ್ತದೆ” ಎಂದು ವಾದಿಸಿದ್ದಾರೆ.

ಈ ಮಧ್ಯೆ ಅರ್ಜಿದಾರರ ಪರವಾಗಿರುವ ವಕೀಲ ತಾಹಿರ್‌ ಅವರು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಓದಿದ್ದಾರೆ. ಇದೇ ವೇಳೆ ನ್ಯಾಯಾಲಯವು ನ್ಯಾಯಮೂರ್ತಿಗಳಿಗೆ ನೀಡಲಾದ ಗ್ರಂಥಾಲಯದಿಂದ ತಂದ ಕುರಾನ್‌ನ ಪ್ರತಿಯು ಅಧಿಕೃತ ಪ್ರತಿಯೇ ಎಂದು ಖಚಿತಪಡಿಸಿಕೊಳ್ಳಲು ಮುಂದಾಯಿತು.

“ಸರ್ಕಾರದ ಆದೇಶವು ಕರ್ನಾಟಕ ಶಿಕ್ಷಣ ನಿಯಮಾವಳಿಗಳ ವ್ಯಾಪ್ತಿಯ ಅಚೆಗಿದೆ. ಹಾಗಾಗಿ ಅದು ಇಂತಹ ಆದೇಶ ಹೊರಡಿಸುವ ವ್ಯಾಪ್ತಿಯನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಈ ಹಿಂದಿನ ಅದೇಶವೊಂದನ್ನು ನ್ಯಾಯಾಲಯದ ಮುಂದಿರಿಸಿದ ಅವರು, “ಸರ್ಕಾರವು ಯಾವುದು ಧರ್ಮದ ಅಗತ್ಯ ಅಚಾರ, ಯಾವುದಲ್ಲ ಎನ್ನುವುದನ್ನು ಹೇಳಲಾಗದು. ಅದು ನ್ಯಾಯಾಂಗದ ಪರಿಮಿತಿಗೆ ಬರುವಂಥದ್ದು. ಈ ಹಿಂದಿನ ಆದೇಶದಂತೆ, ಇಲ್ಲಿ ಪರೀಕ್ಷೆ ಎಂದರೆ, ಅಂತಹ ಆಚರಣೆಯನ್ನು ಧರ್ಮದಿಂದ ಹೊರಗಿಟ್ಟರೆ ಆಗ ಅಂತಹ ಧರ್ಮದ ಮೂಲರಚನೆಯಲ್ಲಿ ವ್ಯತ್ಯಾಸವಾಗುತ್ತದೆಯೇ ಎನ್ನುವುದು. ಧಾರ್ಮಿಕ ಆಚರಣೆಗಳನ್ನು ಧಾರ್ಮಿಕ ಅಧಿಕಾರದಿಂದ ಹೊರತಾದ ಜಾತ್ಯತೀತ ತತ್ವಗಳಿಂದ ಪರೀಕ್ಷಿಸಲಾಗದು. ಹಾಗಾಗಿ, ಧರ್ಮಕ್ಕೆ ಏನು ಅಗತ್ಯ ಏನಲ್ಲ ಎನ್ನುವುದನ್ನು ನಮ್ಮ ಜಾತ್ಯತೀತ ಆಲೋಚನೆಗಳು ನಿರ್ಧರಿಸಲಾಗದು” ಎಂದು ಹೇಳಿದ್ದಾರೆ.

“ಋತುಮತಿಯಾದ ನಂತರ ಹೆಣ್ಣು ತನ್ನ ಮುಖ ಹಾಗೂ ಕೈಗಳನ್ನು ಅಪರಿಚಿತರಿಗೆ ತೋರಿಸುವುದು ಸರಿಯಲ್ಲ” ಎಂದು ಕೇರಳ ಹೈಕೋರ್ಟ್‌ ತೀರ್ಪಿನಲ್ಲಿರುವ ಹದೀಸ್‌ ಒಂದನ್ನು ದೇವದತ್‌ ಕಾಮತ್ ಉಲ್ಲೇಖಿಸಿದ್ದಾರೆ.

‘‘ಕರ್ನಾಟಕ ಸರ್ಕಾರದ ಆದೇಶವು ಕೇರಳ ಹೈಕೋರ್ಟ್‌ನ ತೀರ್ಪಿನಲ್ಲಿ ಹೇಳಿರುವಂತೆ ಧರ್ಮಕ್ಕೆ ಯಾವುದು ಅಗತ್ಯವಲ್ಲ ಎನ್ನುವ ಅಂಶದಿಂದ ಕೂಡಿದ್ದು ಹಿಜಾಬ್‌ ಅಗತ್ಯವಲ್ಲ ಎನ್ನುತ್ತದೆ. ಆದರೆ, ಈ ತೀರ್ಪು ಇದಕ್ಕೆ ಅನ್ವಯವಾಗದು. ಏಕೆ ಅನ್ವಯವಾಗುವುದಿಲ್ಲ ಎಂದರೆ ಅದು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಬಗ್ಗೆ ಅಗಿರಲಿಲ್ಲ. ಬದಲಿಗೆ ಖಾಸಗಿ ಕ್ರಿಶ್ಚಿಯನ್‌ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ್ದಾಗಿತ್ತು” ಎಂದು ವಾದಿಸಿದ್ದಾರೆ.

ಈ ವೇಳೆ ವಕೀಲ ಕಾಳೀಶ್ವರಮ್‌ ರಾಜ್‌ ಅವರಿಂದ ಮಧ್ಯಪ್ರವೇಶ ಕೋರಿ ಮನವಿ ಮಾಡಿದ್ದಾರೆ. ತಾವು ಅಗತ್ಯವಿರುವ ಧಾರ್ಮಿಕ ಆಚರಣೆಗಳ ಬಗ್ಗೆ ಬರೆದಿರುವುದಾಗಿ ಮಾಹಿತಿ ನೀಡಿದ್ದು. ತನ್ನ ವಾದಕ್ಕೆ ಹದಿನೈದು ನಿಮಿಷ ಅವಕಾಶ ಕಲ್ಪಿಸಲು ಕೋರಿಕೆ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿರುವುದರಿಂದ ತಾನು ವಿಚಾರಣೆಯನ್ನು ಆಲಿಸುತ್ತಿರುವುದಾಗಿ ಕಾಳೀಶ್ವರಮ್‌ ರಾಜ್ ಹೇಳಿದ್ದಾರೆ. ಅವರ ವಾದ ಮಂಡಲಿಸಲು ನ್ಯಾಯಮೂರ್ತಿ ದೀಕ್ಷಿತ್ ಅವರು ಅನುಮತಿ ನೀಡಿದ್ದು, ವಿಚಾರಣೆಯನ್ನು ಮೂರು ಗಂಟೆಗೆ ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...