HomeUncategorizedHijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ...

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್

ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ನಡೆದ ವಾದಗಳಸಂಕ್ಷಿಪ್ತ ವಿವರಣೆ

- Advertisement -
- Advertisement -

ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ನಾಲ್ಕು ಅರ್ಜಿಗಳ ವಿಚಾರಣೆಯನ್ನು ಕೋರ್ಟ್‌ ನಡೆಸುತ್ತಿದೆ.

ಹಿಜಾಬ್ ಧರಿಸಿದ ಏಕೈಕ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡುತ್ತಿವೆ ಎಂದು ಅರ್ಜಿದಾರ ವಿದ್ಯಾರ್ಥಿಗಳು ವಾದಿಸಿದ್ದಾರೆ.

ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, “ಎಲ್ಲಾ ಭಾವನೆಗಳನ್ನು ಬದಿಗಿರಿಸಿ. ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಸಂವಿಧಾನ ನನಗೆ ಭಗವತ್‌ ಗೀತೆಗಿಂತ ಮೇಲೆ. ನಾನು ಸಂವಿಧಾನಕ್ಕೆ ನೀಡಿರುವ ಪ್ರಮಾಣ ವಚನಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಫಾರೂಕ್ ಸಲ್ಲಿಸಿರುವ ಅರ್ಜಿಯಲ್ಲಿ ಸಂವಿಧಾನದ 14 ಮತ್ತು 25ನೇ ವಿಧಿಯಡಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿರುವ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸುತ್ತಿದ್ದು, ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸುತ್ತಿದ್ದಾರೆ.

ಸರ್ಕಾರದ ಪರವಾರಿ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, “ಶೈಕ್ಷಣಿಕ ಸಂಸ್ಥೆಯಲ್ಲಿ ಹಿಜಾಬ್‌ ಧರಿಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿದೆಯೇ ಎಂದು ಪರಿಶೀಲಿಸಿ. ಸಕಾರವು ಕಾಲೇಜು ಅಭಿವೃದ್ದಿ ಮಂಡಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಈಗ ಎರಡು ತಿಂಗಳವರೆಗೆ ಯಥಾಸ್ಥಿತಿ ಕಾಪಾಡಿ ಎಂದು ವಕೀಲ ದೇವದತ್‌ ಅವರು ಹೇಳಿದ್ದು, “ಹಿಜಾಬ್‌ ಧರಿಸುವುದು ಇದು ಇಸ್ಲಾಮ್‌ ಧರ್ಮದ ಸಂಪ್ರದಾಯ. ನಮ್ಮ ಮೊದಲ ಕೋರಿಕೆ, ಶಿರವಸ್ತ್ರ ಅಥವಾ ಹಿಜಾಬ್‌ ಧರಿಸುವುದು. ಪವಿತ್ರ ಕುರಾನ್‌ ಪ್ರಕಾರ ಇದು ಇಸ್ಲಾಂ ಧರ್ಮದ ಅಗತ್ಯ ಭಾಗವಾಗಿದೆ” ಎಂದು ಹೇಳಿದ್ದಾರೆ.

“ಎರಡನೆ ಮನವಿ, ಇಷ್ಟವಿರುವ ಬಟ್ಟೆ ಧರಿಸುವುದು ಸಂವಿಧಾನದ 19(ಎ) ಅಡಿ ನೀಡಿರುವುದಾಗಿದ್ದು 19(6) ಅಡಿ ಮಾತ್ರವೇ ಅದನ್ನು ನಿರ್ಬಂಧಿಸಬಹುದು. ಅಭಿವ್ಯಕ್ತಿಯ ಸ್ವಾತಂತ್ರ್ಯವು ಏನನ್ನು ಧರಿಸಬಹುದು ಎನ್ನುವುದನ್ನು ಒಳಗೊಳ್ಳುತ್ತದೆ. ಪುಟ್ಟಸ್ವಾಮಿ ಪ್ರಕರಣದಲ್ಲಿ ಖಾಸಗಿ ಹಕ್ಕನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದ್ದು. ವಸ್ತ್ರಧರಿಸುವ ಹಕ್ಕು ಇದರಡಿಯೇ ಬರುತ್ತದೆ” ಎಂದು ವಾದಿಸಿದ್ದಾರೆ.

ಈ ಮಧ್ಯೆ ಅರ್ಜಿದಾರರ ಪರವಾಗಿರುವ ವಕೀಲ ತಾಹಿರ್‌ ಅವರು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಓದಿದ್ದಾರೆ. ಇದೇ ವೇಳೆ ನ್ಯಾಯಾಲಯವು ನ್ಯಾಯಮೂರ್ತಿಗಳಿಗೆ ನೀಡಲಾದ ಗ್ರಂಥಾಲಯದಿಂದ ತಂದ ಕುರಾನ್‌ನ ಪ್ರತಿಯು ಅಧಿಕೃತ ಪ್ರತಿಯೇ ಎಂದು ಖಚಿತಪಡಿಸಿಕೊಳ್ಳಲು ಮುಂದಾಯಿತು.

“ಸರ್ಕಾರದ ಆದೇಶವು ಕರ್ನಾಟಕ ಶಿಕ್ಷಣ ನಿಯಮಾವಳಿಗಳ ವ್ಯಾಪ್ತಿಯ ಅಚೆಗಿದೆ. ಹಾಗಾಗಿ ಅದು ಇಂತಹ ಆದೇಶ ಹೊರಡಿಸುವ ವ್ಯಾಪ್ತಿಯನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಈ ಹಿಂದಿನ ಅದೇಶವೊಂದನ್ನು ನ್ಯಾಯಾಲಯದ ಮುಂದಿರಿಸಿದ ಅವರು, “ಸರ್ಕಾರವು ಯಾವುದು ಧರ್ಮದ ಅಗತ್ಯ ಅಚಾರ, ಯಾವುದಲ್ಲ ಎನ್ನುವುದನ್ನು ಹೇಳಲಾಗದು. ಅದು ನ್ಯಾಯಾಂಗದ ಪರಿಮಿತಿಗೆ ಬರುವಂಥದ್ದು. ಈ ಹಿಂದಿನ ಆದೇಶದಂತೆ, ಇಲ್ಲಿ ಪರೀಕ್ಷೆ ಎಂದರೆ, ಅಂತಹ ಆಚರಣೆಯನ್ನು ಧರ್ಮದಿಂದ ಹೊರಗಿಟ್ಟರೆ ಆಗ ಅಂತಹ ಧರ್ಮದ ಮೂಲರಚನೆಯಲ್ಲಿ ವ್ಯತ್ಯಾಸವಾಗುತ್ತದೆಯೇ ಎನ್ನುವುದು. ಧಾರ್ಮಿಕ ಆಚರಣೆಗಳನ್ನು ಧಾರ್ಮಿಕ ಅಧಿಕಾರದಿಂದ ಹೊರತಾದ ಜಾತ್ಯತೀತ ತತ್ವಗಳಿಂದ ಪರೀಕ್ಷಿಸಲಾಗದು. ಹಾಗಾಗಿ, ಧರ್ಮಕ್ಕೆ ಏನು ಅಗತ್ಯ ಏನಲ್ಲ ಎನ್ನುವುದನ್ನು ನಮ್ಮ ಜಾತ್ಯತೀತ ಆಲೋಚನೆಗಳು ನಿರ್ಧರಿಸಲಾಗದು” ಎಂದು ಹೇಳಿದ್ದಾರೆ.

“ಋತುಮತಿಯಾದ ನಂತರ ಹೆಣ್ಣು ತನ್ನ ಮುಖ ಹಾಗೂ ಕೈಗಳನ್ನು ಅಪರಿಚಿತರಿಗೆ ತೋರಿಸುವುದು ಸರಿಯಲ್ಲ” ಎಂದು ಕೇರಳ ಹೈಕೋರ್ಟ್‌ ತೀರ್ಪಿನಲ್ಲಿರುವ ಹದೀಸ್‌ ಒಂದನ್ನು ದೇವದತ್‌ ಕಾಮತ್ ಉಲ್ಲೇಖಿಸಿದ್ದಾರೆ.

‘‘ಕರ್ನಾಟಕ ಸರ್ಕಾರದ ಆದೇಶವು ಕೇರಳ ಹೈಕೋರ್ಟ್‌ನ ತೀರ್ಪಿನಲ್ಲಿ ಹೇಳಿರುವಂತೆ ಧರ್ಮಕ್ಕೆ ಯಾವುದು ಅಗತ್ಯವಲ್ಲ ಎನ್ನುವ ಅಂಶದಿಂದ ಕೂಡಿದ್ದು ಹಿಜಾಬ್‌ ಅಗತ್ಯವಲ್ಲ ಎನ್ನುತ್ತದೆ. ಆದರೆ, ಈ ತೀರ್ಪು ಇದಕ್ಕೆ ಅನ್ವಯವಾಗದು. ಏಕೆ ಅನ್ವಯವಾಗುವುದಿಲ್ಲ ಎಂದರೆ ಅದು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಬಗ್ಗೆ ಅಗಿರಲಿಲ್ಲ. ಬದಲಿಗೆ ಖಾಸಗಿ ಕ್ರಿಶ್ಚಿಯನ್‌ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ್ದಾಗಿತ್ತು” ಎಂದು ವಾದಿಸಿದ್ದಾರೆ.

ಈ ವೇಳೆ ವಕೀಲ ಕಾಳೀಶ್ವರಮ್‌ ರಾಜ್‌ ಅವರಿಂದ ಮಧ್ಯಪ್ರವೇಶ ಕೋರಿ ಮನವಿ ಮಾಡಿದ್ದಾರೆ. ತಾವು ಅಗತ್ಯವಿರುವ ಧಾರ್ಮಿಕ ಆಚರಣೆಗಳ ಬಗ್ಗೆ ಬರೆದಿರುವುದಾಗಿ ಮಾಹಿತಿ ನೀಡಿದ್ದು. ತನ್ನ ವಾದಕ್ಕೆ ಹದಿನೈದು ನಿಮಿಷ ಅವಕಾಶ ಕಲ್ಪಿಸಲು ಕೋರಿಕೆ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿರುವುದರಿಂದ ತಾನು ವಿಚಾರಣೆಯನ್ನು ಆಲಿಸುತ್ತಿರುವುದಾಗಿ ಕಾಳೀಶ್ವರಮ್‌ ರಾಜ್ ಹೇಳಿದ್ದಾರೆ. ಅವರ ವಾದ ಮಂಡಲಿಸಲು ನ್ಯಾಯಮೂರ್ತಿ ದೀಕ್ಷಿತ್ ಅವರು ಅನುಮತಿ ನೀಡಿದ್ದು, ವಿಚಾರಣೆಯನ್ನು ಮೂರು ಗಂಟೆಗೆ ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...