HomeUncategorizedHijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ...

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್

ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ನಡೆದ ವಾದಗಳಸಂಕ್ಷಿಪ್ತ ವಿವರಣೆ

- Advertisement -
- Advertisement -

ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ನಾಲ್ಕು ಅರ್ಜಿಗಳ ವಿಚಾರಣೆಯನ್ನು ಕೋರ್ಟ್‌ ನಡೆಸುತ್ತಿದೆ.

ಹಿಜಾಬ್ ಧರಿಸಿದ ಏಕೈಕ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡುತ್ತಿವೆ ಎಂದು ಅರ್ಜಿದಾರ ವಿದ್ಯಾರ್ಥಿಗಳು ವಾದಿಸಿದ್ದಾರೆ.

ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, “ಎಲ್ಲಾ ಭಾವನೆಗಳನ್ನು ಬದಿಗಿರಿಸಿ. ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಸಂವಿಧಾನ ನನಗೆ ಭಗವತ್‌ ಗೀತೆಗಿಂತ ಮೇಲೆ. ನಾನು ಸಂವಿಧಾನಕ್ಕೆ ನೀಡಿರುವ ಪ್ರಮಾಣ ವಚನಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಫಾರೂಕ್ ಸಲ್ಲಿಸಿರುವ ಅರ್ಜಿಯಲ್ಲಿ ಸಂವಿಧಾನದ 14 ಮತ್ತು 25ನೇ ವಿಧಿಯಡಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿರುವ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸುತ್ತಿದ್ದು, ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸುತ್ತಿದ್ದಾರೆ.

ಸರ್ಕಾರದ ಪರವಾರಿ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, “ಶೈಕ್ಷಣಿಕ ಸಂಸ್ಥೆಯಲ್ಲಿ ಹಿಜಾಬ್‌ ಧರಿಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿದೆಯೇ ಎಂದು ಪರಿಶೀಲಿಸಿ. ಸಕಾರವು ಕಾಲೇಜು ಅಭಿವೃದ್ದಿ ಮಂಡಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಈಗ ಎರಡು ತಿಂಗಳವರೆಗೆ ಯಥಾಸ್ಥಿತಿ ಕಾಪಾಡಿ ಎಂದು ವಕೀಲ ದೇವದತ್‌ ಅವರು ಹೇಳಿದ್ದು, “ಹಿಜಾಬ್‌ ಧರಿಸುವುದು ಇದು ಇಸ್ಲಾಮ್‌ ಧರ್ಮದ ಸಂಪ್ರದಾಯ. ನಮ್ಮ ಮೊದಲ ಕೋರಿಕೆ, ಶಿರವಸ್ತ್ರ ಅಥವಾ ಹಿಜಾಬ್‌ ಧರಿಸುವುದು. ಪವಿತ್ರ ಕುರಾನ್‌ ಪ್ರಕಾರ ಇದು ಇಸ್ಲಾಂ ಧರ್ಮದ ಅಗತ್ಯ ಭಾಗವಾಗಿದೆ” ಎಂದು ಹೇಳಿದ್ದಾರೆ.

“ಎರಡನೆ ಮನವಿ, ಇಷ್ಟವಿರುವ ಬಟ್ಟೆ ಧರಿಸುವುದು ಸಂವಿಧಾನದ 19(ಎ) ಅಡಿ ನೀಡಿರುವುದಾಗಿದ್ದು 19(6) ಅಡಿ ಮಾತ್ರವೇ ಅದನ್ನು ನಿರ್ಬಂಧಿಸಬಹುದು. ಅಭಿವ್ಯಕ್ತಿಯ ಸ್ವಾತಂತ್ರ್ಯವು ಏನನ್ನು ಧರಿಸಬಹುದು ಎನ್ನುವುದನ್ನು ಒಳಗೊಳ್ಳುತ್ತದೆ. ಪುಟ್ಟಸ್ವಾಮಿ ಪ್ರಕರಣದಲ್ಲಿ ಖಾಸಗಿ ಹಕ್ಕನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದ್ದು. ವಸ್ತ್ರಧರಿಸುವ ಹಕ್ಕು ಇದರಡಿಯೇ ಬರುತ್ತದೆ” ಎಂದು ವಾದಿಸಿದ್ದಾರೆ.

ಈ ಮಧ್ಯೆ ಅರ್ಜಿದಾರರ ಪರವಾಗಿರುವ ವಕೀಲ ತಾಹಿರ್‌ ಅವರು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಓದಿದ್ದಾರೆ. ಇದೇ ವೇಳೆ ನ್ಯಾಯಾಲಯವು ನ್ಯಾಯಮೂರ್ತಿಗಳಿಗೆ ನೀಡಲಾದ ಗ್ರಂಥಾಲಯದಿಂದ ತಂದ ಕುರಾನ್‌ನ ಪ್ರತಿಯು ಅಧಿಕೃತ ಪ್ರತಿಯೇ ಎಂದು ಖಚಿತಪಡಿಸಿಕೊಳ್ಳಲು ಮುಂದಾಯಿತು.

“ಸರ್ಕಾರದ ಆದೇಶವು ಕರ್ನಾಟಕ ಶಿಕ್ಷಣ ನಿಯಮಾವಳಿಗಳ ವ್ಯಾಪ್ತಿಯ ಅಚೆಗಿದೆ. ಹಾಗಾಗಿ ಅದು ಇಂತಹ ಆದೇಶ ಹೊರಡಿಸುವ ವ್ಯಾಪ್ತಿಯನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಈ ಹಿಂದಿನ ಅದೇಶವೊಂದನ್ನು ನ್ಯಾಯಾಲಯದ ಮುಂದಿರಿಸಿದ ಅವರು, “ಸರ್ಕಾರವು ಯಾವುದು ಧರ್ಮದ ಅಗತ್ಯ ಅಚಾರ, ಯಾವುದಲ್ಲ ಎನ್ನುವುದನ್ನು ಹೇಳಲಾಗದು. ಅದು ನ್ಯಾಯಾಂಗದ ಪರಿಮಿತಿಗೆ ಬರುವಂಥದ್ದು. ಈ ಹಿಂದಿನ ಆದೇಶದಂತೆ, ಇಲ್ಲಿ ಪರೀಕ್ಷೆ ಎಂದರೆ, ಅಂತಹ ಆಚರಣೆಯನ್ನು ಧರ್ಮದಿಂದ ಹೊರಗಿಟ್ಟರೆ ಆಗ ಅಂತಹ ಧರ್ಮದ ಮೂಲರಚನೆಯಲ್ಲಿ ವ್ಯತ್ಯಾಸವಾಗುತ್ತದೆಯೇ ಎನ್ನುವುದು. ಧಾರ್ಮಿಕ ಆಚರಣೆಗಳನ್ನು ಧಾರ್ಮಿಕ ಅಧಿಕಾರದಿಂದ ಹೊರತಾದ ಜಾತ್ಯತೀತ ತತ್ವಗಳಿಂದ ಪರೀಕ್ಷಿಸಲಾಗದು. ಹಾಗಾಗಿ, ಧರ್ಮಕ್ಕೆ ಏನು ಅಗತ್ಯ ಏನಲ್ಲ ಎನ್ನುವುದನ್ನು ನಮ್ಮ ಜಾತ್ಯತೀತ ಆಲೋಚನೆಗಳು ನಿರ್ಧರಿಸಲಾಗದು” ಎಂದು ಹೇಳಿದ್ದಾರೆ.

“ಋತುಮತಿಯಾದ ನಂತರ ಹೆಣ್ಣು ತನ್ನ ಮುಖ ಹಾಗೂ ಕೈಗಳನ್ನು ಅಪರಿಚಿತರಿಗೆ ತೋರಿಸುವುದು ಸರಿಯಲ್ಲ” ಎಂದು ಕೇರಳ ಹೈಕೋರ್ಟ್‌ ತೀರ್ಪಿನಲ್ಲಿರುವ ಹದೀಸ್‌ ಒಂದನ್ನು ದೇವದತ್‌ ಕಾಮತ್ ಉಲ್ಲೇಖಿಸಿದ್ದಾರೆ.

‘‘ಕರ್ನಾಟಕ ಸರ್ಕಾರದ ಆದೇಶವು ಕೇರಳ ಹೈಕೋರ್ಟ್‌ನ ತೀರ್ಪಿನಲ್ಲಿ ಹೇಳಿರುವಂತೆ ಧರ್ಮಕ್ಕೆ ಯಾವುದು ಅಗತ್ಯವಲ್ಲ ಎನ್ನುವ ಅಂಶದಿಂದ ಕೂಡಿದ್ದು ಹಿಜಾಬ್‌ ಅಗತ್ಯವಲ್ಲ ಎನ್ನುತ್ತದೆ. ಆದರೆ, ಈ ತೀರ್ಪು ಇದಕ್ಕೆ ಅನ್ವಯವಾಗದು. ಏಕೆ ಅನ್ವಯವಾಗುವುದಿಲ್ಲ ಎಂದರೆ ಅದು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಬಗ್ಗೆ ಅಗಿರಲಿಲ್ಲ. ಬದಲಿಗೆ ಖಾಸಗಿ ಕ್ರಿಶ್ಚಿಯನ್‌ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ್ದಾಗಿತ್ತು” ಎಂದು ವಾದಿಸಿದ್ದಾರೆ.

ಈ ವೇಳೆ ವಕೀಲ ಕಾಳೀಶ್ವರಮ್‌ ರಾಜ್‌ ಅವರಿಂದ ಮಧ್ಯಪ್ರವೇಶ ಕೋರಿ ಮನವಿ ಮಾಡಿದ್ದಾರೆ. ತಾವು ಅಗತ್ಯವಿರುವ ಧಾರ್ಮಿಕ ಆಚರಣೆಗಳ ಬಗ್ಗೆ ಬರೆದಿರುವುದಾಗಿ ಮಾಹಿತಿ ನೀಡಿದ್ದು. ತನ್ನ ವಾದಕ್ಕೆ ಹದಿನೈದು ನಿಮಿಷ ಅವಕಾಶ ಕಲ್ಪಿಸಲು ಕೋರಿಕೆ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿರುವುದರಿಂದ ತಾನು ವಿಚಾರಣೆಯನ್ನು ಆಲಿಸುತ್ತಿರುವುದಾಗಿ ಕಾಳೀಶ್ವರಮ್‌ ರಾಜ್ ಹೇಳಿದ್ದಾರೆ. ಅವರ ವಾದ ಮಂಡಲಿಸಲು ನ್ಯಾಯಮೂರ್ತಿ ದೀಕ್ಷಿತ್ ಅವರು ಅನುಮತಿ ನೀಡಿದ್ದು, ವಿಚಾರಣೆಯನ್ನು ಮೂರು ಗಂಟೆಗೆ ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...