HomeUncategorizedHijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ...

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್

ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ನಡೆದ ವಾದಗಳಸಂಕ್ಷಿಪ್ತ ವಿವರಣೆ

- Advertisement -
- Advertisement -

ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ನಾಲ್ಕು ಅರ್ಜಿಗಳ ವಿಚಾರಣೆಯನ್ನು ಕೋರ್ಟ್‌ ನಡೆಸುತ್ತಿದೆ.

ಹಿಜಾಬ್ ಧರಿಸಿದ ಏಕೈಕ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡುತ್ತಿವೆ ಎಂದು ಅರ್ಜಿದಾರ ವಿದ್ಯಾರ್ಥಿಗಳು ವಾದಿಸಿದ್ದಾರೆ.

ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, “ಎಲ್ಲಾ ಭಾವನೆಗಳನ್ನು ಬದಿಗಿರಿಸಿ. ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಸಂವಿಧಾನ ನನಗೆ ಭಗವತ್‌ ಗೀತೆಗಿಂತ ಮೇಲೆ. ನಾನು ಸಂವಿಧಾನಕ್ಕೆ ನೀಡಿರುವ ಪ್ರಮಾಣ ವಚನಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಫಾರೂಕ್ ಸಲ್ಲಿಸಿರುವ ಅರ್ಜಿಯಲ್ಲಿ ಸಂವಿಧಾನದ 14 ಮತ್ತು 25ನೇ ವಿಧಿಯಡಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿರುವ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸುತ್ತಿದ್ದು, ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸುತ್ತಿದ್ದಾರೆ.

ಸರ್ಕಾರದ ಪರವಾರಿ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, “ಶೈಕ್ಷಣಿಕ ಸಂಸ್ಥೆಯಲ್ಲಿ ಹಿಜಾಬ್‌ ಧರಿಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿದೆಯೇ ಎಂದು ಪರಿಶೀಲಿಸಿ. ಸಕಾರವು ಕಾಲೇಜು ಅಭಿವೃದ್ದಿ ಮಂಡಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಈಗ ಎರಡು ತಿಂಗಳವರೆಗೆ ಯಥಾಸ್ಥಿತಿ ಕಾಪಾಡಿ ಎಂದು ವಕೀಲ ದೇವದತ್‌ ಅವರು ಹೇಳಿದ್ದು, “ಹಿಜಾಬ್‌ ಧರಿಸುವುದು ಇದು ಇಸ್ಲಾಮ್‌ ಧರ್ಮದ ಸಂಪ್ರದಾಯ. ನಮ್ಮ ಮೊದಲ ಕೋರಿಕೆ, ಶಿರವಸ್ತ್ರ ಅಥವಾ ಹಿಜಾಬ್‌ ಧರಿಸುವುದು. ಪವಿತ್ರ ಕುರಾನ್‌ ಪ್ರಕಾರ ಇದು ಇಸ್ಲಾಂ ಧರ್ಮದ ಅಗತ್ಯ ಭಾಗವಾಗಿದೆ” ಎಂದು ಹೇಳಿದ್ದಾರೆ.

“ಎರಡನೆ ಮನವಿ, ಇಷ್ಟವಿರುವ ಬಟ್ಟೆ ಧರಿಸುವುದು ಸಂವಿಧಾನದ 19(ಎ) ಅಡಿ ನೀಡಿರುವುದಾಗಿದ್ದು 19(6) ಅಡಿ ಮಾತ್ರವೇ ಅದನ್ನು ನಿರ್ಬಂಧಿಸಬಹುದು. ಅಭಿವ್ಯಕ್ತಿಯ ಸ್ವಾತಂತ್ರ್ಯವು ಏನನ್ನು ಧರಿಸಬಹುದು ಎನ್ನುವುದನ್ನು ಒಳಗೊಳ್ಳುತ್ತದೆ. ಪುಟ್ಟಸ್ವಾಮಿ ಪ್ರಕರಣದಲ್ಲಿ ಖಾಸಗಿ ಹಕ್ಕನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದ್ದು. ವಸ್ತ್ರಧರಿಸುವ ಹಕ್ಕು ಇದರಡಿಯೇ ಬರುತ್ತದೆ” ಎಂದು ವಾದಿಸಿದ್ದಾರೆ.

ಈ ಮಧ್ಯೆ ಅರ್ಜಿದಾರರ ಪರವಾಗಿರುವ ವಕೀಲ ತಾಹಿರ್‌ ಅವರು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಓದಿದ್ದಾರೆ. ಇದೇ ವೇಳೆ ನ್ಯಾಯಾಲಯವು ನ್ಯಾಯಮೂರ್ತಿಗಳಿಗೆ ನೀಡಲಾದ ಗ್ರಂಥಾಲಯದಿಂದ ತಂದ ಕುರಾನ್‌ನ ಪ್ರತಿಯು ಅಧಿಕೃತ ಪ್ರತಿಯೇ ಎಂದು ಖಚಿತಪಡಿಸಿಕೊಳ್ಳಲು ಮುಂದಾಯಿತು.

“ಸರ್ಕಾರದ ಆದೇಶವು ಕರ್ನಾಟಕ ಶಿಕ್ಷಣ ನಿಯಮಾವಳಿಗಳ ವ್ಯಾಪ್ತಿಯ ಅಚೆಗಿದೆ. ಹಾಗಾಗಿ ಅದು ಇಂತಹ ಆದೇಶ ಹೊರಡಿಸುವ ವ್ಯಾಪ್ತಿಯನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಈ ಹಿಂದಿನ ಅದೇಶವೊಂದನ್ನು ನ್ಯಾಯಾಲಯದ ಮುಂದಿರಿಸಿದ ಅವರು, “ಸರ್ಕಾರವು ಯಾವುದು ಧರ್ಮದ ಅಗತ್ಯ ಅಚಾರ, ಯಾವುದಲ್ಲ ಎನ್ನುವುದನ್ನು ಹೇಳಲಾಗದು. ಅದು ನ್ಯಾಯಾಂಗದ ಪರಿಮಿತಿಗೆ ಬರುವಂಥದ್ದು. ಈ ಹಿಂದಿನ ಆದೇಶದಂತೆ, ಇಲ್ಲಿ ಪರೀಕ್ಷೆ ಎಂದರೆ, ಅಂತಹ ಆಚರಣೆಯನ್ನು ಧರ್ಮದಿಂದ ಹೊರಗಿಟ್ಟರೆ ಆಗ ಅಂತಹ ಧರ್ಮದ ಮೂಲರಚನೆಯಲ್ಲಿ ವ್ಯತ್ಯಾಸವಾಗುತ್ತದೆಯೇ ಎನ್ನುವುದು. ಧಾರ್ಮಿಕ ಆಚರಣೆಗಳನ್ನು ಧಾರ್ಮಿಕ ಅಧಿಕಾರದಿಂದ ಹೊರತಾದ ಜಾತ್ಯತೀತ ತತ್ವಗಳಿಂದ ಪರೀಕ್ಷಿಸಲಾಗದು. ಹಾಗಾಗಿ, ಧರ್ಮಕ್ಕೆ ಏನು ಅಗತ್ಯ ಏನಲ್ಲ ಎನ್ನುವುದನ್ನು ನಮ್ಮ ಜಾತ್ಯತೀತ ಆಲೋಚನೆಗಳು ನಿರ್ಧರಿಸಲಾಗದು” ಎಂದು ಹೇಳಿದ್ದಾರೆ.

“ಋತುಮತಿಯಾದ ನಂತರ ಹೆಣ್ಣು ತನ್ನ ಮುಖ ಹಾಗೂ ಕೈಗಳನ್ನು ಅಪರಿಚಿತರಿಗೆ ತೋರಿಸುವುದು ಸರಿಯಲ್ಲ” ಎಂದು ಕೇರಳ ಹೈಕೋರ್ಟ್‌ ತೀರ್ಪಿನಲ್ಲಿರುವ ಹದೀಸ್‌ ಒಂದನ್ನು ದೇವದತ್‌ ಕಾಮತ್ ಉಲ್ಲೇಖಿಸಿದ್ದಾರೆ.

‘‘ಕರ್ನಾಟಕ ಸರ್ಕಾರದ ಆದೇಶವು ಕೇರಳ ಹೈಕೋರ್ಟ್‌ನ ತೀರ್ಪಿನಲ್ಲಿ ಹೇಳಿರುವಂತೆ ಧರ್ಮಕ್ಕೆ ಯಾವುದು ಅಗತ್ಯವಲ್ಲ ಎನ್ನುವ ಅಂಶದಿಂದ ಕೂಡಿದ್ದು ಹಿಜಾಬ್‌ ಅಗತ್ಯವಲ್ಲ ಎನ್ನುತ್ತದೆ. ಆದರೆ, ಈ ತೀರ್ಪು ಇದಕ್ಕೆ ಅನ್ವಯವಾಗದು. ಏಕೆ ಅನ್ವಯವಾಗುವುದಿಲ್ಲ ಎಂದರೆ ಅದು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಬಗ್ಗೆ ಅಗಿರಲಿಲ್ಲ. ಬದಲಿಗೆ ಖಾಸಗಿ ಕ್ರಿಶ್ಚಿಯನ್‌ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ್ದಾಗಿತ್ತು” ಎಂದು ವಾದಿಸಿದ್ದಾರೆ.

ಈ ವೇಳೆ ವಕೀಲ ಕಾಳೀಶ್ವರಮ್‌ ರಾಜ್‌ ಅವರಿಂದ ಮಧ್ಯಪ್ರವೇಶ ಕೋರಿ ಮನವಿ ಮಾಡಿದ್ದಾರೆ. ತಾವು ಅಗತ್ಯವಿರುವ ಧಾರ್ಮಿಕ ಆಚರಣೆಗಳ ಬಗ್ಗೆ ಬರೆದಿರುವುದಾಗಿ ಮಾಹಿತಿ ನೀಡಿದ್ದು. ತನ್ನ ವಾದಕ್ಕೆ ಹದಿನೈದು ನಿಮಿಷ ಅವಕಾಶ ಕಲ್ಪಿಸಲು ಕೋರಿಕೆ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿರುವುದರಿಂದ ತಾನು ವಿಚಾರಣೆಯನ್ನು ಆಲಿಸುತ್ತಿರುವುದಾಗಿ ಕಾಳೀಶ್ವರಮ್‌ ರಾಜ್ ಹೇಳಿದ್ದಾರೆ. ಅವರ ವಾದ ಮಂಡಲಿಸಲು ನ್ಯಾಯಮೂರ್ತಿ ದೀಕ್ಷಿತ್ ಅವರು ಅನುಮತಿ ನೀಡಿದ್ದು, ವಿಚಾರಣೆಯನ್ನು ಮೂರು ಗಂಟೆಗೆ ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...