HomeUncategorizedHijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ...

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್

ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ನಡೆದ ವಾದಗಳಸಂಕ್ಷಿಪ್ತ ವಿವರಣೆ

- Advertisement -
- Advertisement -

ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ನಾಲ್ಕು ಅರ್ಜಿಗಳ ವಿಚಾರಣೆಯನ್ನು ಕೋರ್ಟ್‌ ನಡೆಸುತ್ತಿದೆ.

ಹಿಜಾಬ್ ಧರಿಸಿದ ಏಕೈಕ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡುತ್ತಿವೆ ಎಂದು ಅರ್ಜಿದಾರ ವಿದ್ಯಾರ್ಥಿಗಳು ವಾದಿಸಿದ್ದಾರೆ.

ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, “ಎಲ್ಲಾ ಭಾವನೆಗಳನ್ನು ಬದಿಗಿರಿಸಿ. ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಸಂವಿಧಾನ ನನಗೆ ಭಗವತ್‌ ಗೀತೆಗಿಂತ ಮೇಲೆ. ನಾನು ಸಂವಿಧಾನಕ್ಕೆ ನೀಡಿರುವ ಪ್ರಮಾಣ ವಚನಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಫಾರೂಕ್ ಸಲ್ಲಿಸಿರುವ ಅರ್ಜಿಯಲ್ಲಿ ಸಂವಿಧಾನದ 14 ಮತ್ತು 25ನೇ ವಿಧಿಯಡಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿರುವ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸುತ್ತಿದ್ದು, ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸುತ್ತಿದ್ದಾರೆ.

ಸರ್ಕಾರದ ಪರವಾರಿ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, “ಶೈಕ್ಷಣಿಕ ಸಂಸ್ಥೆಯಲ್ಲಿ ಹಿಜಾಬ್‌ ಧರಿಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿದೆಯೇ ಎಂದು ಪರಿಶೀಲಿಸಿ. ಸಕಾರವು ಕಾಲೇಜು ಅಭಿವೃದ್ದಿ ಮಂಡಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಈಗ ಎರಡು ತಿಂಗಳವರೆಗೆ ಯಥಾಸ್ಥಿತಿ ಕಾಪಾಡಿ ಎಂದು ವಕೀಲ ದೇವದತ್‌ ಅವರು ಹೇಳಿದ್ದು, “ಹಿಜಾಬ್‌ ಧರಿಸುವುದು ಇದು ಇಸ್ಲಾಮ್‌ ಧರ್ಮದ ಸಂಪ್ರದಾಯ. ನಮ್ಮ ಮೊದಲ ಕೋರಿಕೆ, ಶಿರವಸ್ತ್ರ ಅಥವಾ ಹಿಜಾಬ್‌ ಧರಿಸುವುದು. ಪವಿತ್ರ ಕುರಾನ್‌ ಪ್ರಕಾರ ಇದು ಇಸ್ಲಾಂ ಧರ್ಮದ ಅಗತ್ಯ ಭಾಗವಾಗಿದೆ” ಎಂದು ಹೇಳಿದ್ದಾರೆ.

“ಎರಡನೆ ಮನವಿ, ಇಷ್ಟವಿರುವ ಬಟ್ಟೆ ಧರಿಸುವುದು ಸಂವಿಧಾನದ 19(ಎ) ಅಡಿ ನೀಡಿರುವುದಾಗಿದ್ದು 19(6) ಅಡಿ ಮಾತ್ರವೇ ಅದನ್ನು ನಿರ್ಬಂಧಿಸಬಹುದು. ಅಭಿವ್ಯಕ್ತಿಯ ಸ್ವಾತಂತ್ರ್ಯವು ಏನನ್ನು ಧರಿಸಬಹುದು ಎನ್ನುವುದನ್ನು ಒಳಗೊಳ್ಳುತ್ತದೆ. ಪುಟ್ಟಸ್ವಾಮಿ ಪ್ರಕರಣದಲ್ಲಿ ಖಾಸಗಿ ಹಕ್ಕನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದ್ದು. ವಸ್ತ್ರಧರಿಸುವ ಹಕ್ಕು ಇದರಡಿಯೇ ಬರುತ್ತದೆ” ಎಂದು ವಾದಿಸಿದ್ದಾರೆ.

ಈ ಮಧ್ಯೆ ಅರ್ಜಿದಾರರ ಪರವಾಗಿರುವ ವಕೀಲ ತಾಹಿರ್‌ ಅವರು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಓದಿದ್ದಾರೆ. ಇದೇ ವೇಳೆ ನ್ಯಾಯಾಲಯವು ನ್ಯಾಯಮೂರ್ತಿಗಳಿಗೆ ನೀಡಲಾದ ಗ್ರಂಥಾಲಯದಿಂದ ತಂದ ಕುರಾನ್‌ನ ಪ್ರತಿಯು ಅಧಿಕೃತ ಪ್ರತಿಯೇ ಎಂದು ಖಚಿತಪಡಿಸಿಕೊಳ್ಳಲು ಮುಂದಾಯಿತು.

“ಸರ್ಕಾರದ ಆದೇಶವು ಕರ್ನಾಟಕ ಶಿಕ್ಷಣ ನಿಯಮಾವಳಿಗಳ ವ್ಯಾಪ್ತಿಯ ಅಚೆಗಿದೆ. ಹಾಗಾಗಿ ಅದು ಇಂತಹ ಆದೇಶ ಹೊರಡಿಸುವ ವ್ಯಾಪ್ತಿಯನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಈ ಹಿಂದಿನ ಅದೇಶವೊಂದನ್ನು ನ್ಯಾಯಾಲಯದ ಮುಂದಿರಿಸಿದ ಅವರು, “ಸರ್ಕಾರವು ಯಾವುದು ಧರ್ಮದ ಅಗತ್ಯ ಅಚಾರ, ಯಾವುದಲ್ಲ ಎನ್ನುವುದನ್ನು ಹೇಳಲಾಗದು. ಅದು ನ್ಯಾಯಾಂಗದ ಪರಿಮಿತಿಗೆ ಬರುವಂಥದ್ದು. ಈ ಹಿಂದಿನ ಆದೇಶದಂತೆ, ಇಲ್ಲಿ ಪರೀಕ್ಷೆ ಎಂದರೆ, ಅಂತಹ ಆಚರಣೆಯನ್ನು ಧರ್ಮದಿಂದ ಹೊರಗಿಟ್ಟರೆ ಆಗ ಅಂತಹ ಧರ್ಮದ ಮೂಲರಚನೆಯಲ್ಲಿ ವ್ಯತ್ಯಾಸವಾಗುತ್ತದೆಯೇ ಎನ್ನುವುದು. ಧಾರ್ಮಿಕ ಆಚರಣೆಗಳನ್ನು ಧಾರ್ಮಿಕ ಅಧಿಕಾರದಿಂದ ಹೊರತಾದ ಜಾತ್ಯತೀತ ತತ್ವಗಳಿಂದ ಪರೀಕ್ಷಿಸಲಾಗದು. ಹಾಗಾಗಿ, ಧರ್ಮಕ್ಕೆ ಏನು ಅಗತ್ಯ ಏನಲ್ಲ ಎನ್ನುವುದನ್ನು ನಮ್ಮ ಜಾತ್ಯತೀತ ಆಲೋಚನೆಗಳು ನಿರ್ಧರಿಸಲಾಗದು” ಎಂದು ಹೇಳಿದ್ದಾರೆ.

“ಋತುಮತಿಯಾದ ನಂತರ ಹೆಣ್ಣು ತನ್ನ ಮುಖ ಹಾಗೂ ಕೈಗಳನ್ನು ಅಪರಿಚಿತರಿಗೆ ತೋರಿಸುವುದು ಸರಿಯಲ್ಲ” ಎಂದು ಕೇರಳ ಹೈಕೋರ್ಟ್‌ ತೀರ್ಪಿನಲ್ಲಿರುವ ಹದೀಸ್‌ ಒಂದನ್ನು ದೇವದತ್‌ ಕಾಮತ್ ಉಲ್ಲೇಖಿಸಿದ್ದಾರೆ.

‘‘ಕರ್ನಾಟಕ ಸರ್ಕಾರದ ಆದೇಶವು ಕೇರಳ ಹೈಕೋರ್ಟ್‌ನ ತೀರ್ಪಿನಲ್ಲಿ ಹೇಳಿರುವಂತೆ ಧರ್ಮಕ್ಕೆ ಯಾವುದು ಅಗತ್ಯವಲ್ಲ ಎನ್ನುವ ಅಂಶದಿಂದ ಕೂಡಿದ್ದು ಹಿಜಾಬ್‌ ಅಗತ್ಯವಲ್ಲ ಎನ್ನುತ್ತದೆ. ಆದರೆ, ಈ ತೀರ್ಪು ಇದಕ್ಕೆ ಅನ್ವಯವಾಗದು. ಏಕೆ ಅನ್ವಯವಾಗುವುದಿಲ್ಲ ಎಂದರೆ ಅದು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಬಗ್ಗೆ ಅಗಿರಲಿಲ್ಲ. ಬದಲಿಗೆ ಖಾಸಗಿ ಕ್ರಿಶ್ಚಿಯನ್‌ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ್ದಾಗಿತ್ತು” ಎಂದು ವಾದಿಸಿದ್ದಾರೆ.

ಈ ವೇಳೆ ವಕೀಲ ಕಾಳೀಶ್ವರಮ್‌ ರಾಜ್‌ ಅವರಿಂದ ಮಧ್ಯಪ್ರವೇಶ ಕೋರಿ ಮನವಿ ಮಾಡಿದ್ದಾರೆ. ತಾವು ಅಗತ್ಯವಿರುವ ಧಾರ್ಮಿಕ ಆಚರಣೆಗಳ ಬಗ್ಗೆ ಬರೆದಿರುವುದಾಗಿ ಮಾಹಿತಿ ನೀಡಿದ್ದು. ತನ್ನ ವಾದಕ್ಕೆ ಹದಿನೈದು ನಿಮಿಷ ಅವಕಾಶ ಕಲ್ಪಿಸಲು ಕೋರಿಕೆ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿರುವುದರಿಂದ ತಾನು ವಿಚಾರಣೆಯನ್ನು ಆಲಿಸುತ್ತಿರುವುದಾಗಿ ಕಾಳೀಶ್ವರಮ್‌ ರಾಜ್ ಹೇಳಿದ್ದಾರೆ. ಅವರ ವಾದ ಮಂಡಲಿಸಲು ನ್ಯಾಯಮೂರ್ತಿ ದೀಕ್ಷಿತ್ ಅವರು ಅನುಮತಿ ನೀಡಿದ್ದು, ವಿಚಾರಣೆಯನ್ನು ಮೂರು ಗಂಟೆಗೆ ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...