HomeUncategorizedHijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ...

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್

ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ನಡೆದ ವಾದಗಳಸಂಕ್ಷಿಪ್ತ ವಿವರಣೆ

- Advertisement -
- Advertisement -

ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ನಾಲ್ಕು ಅರ್ಜಿಗಳ ವಿಚಾರಣೆಯನ್ನು ಕೋರ್ಟ್‌ ನಡೆಸುತ್ತಿದೆ.

ಹಿಜಾಬ್ ಧರಿಸಿದ ಏಕೈಕ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡುತ್ತಿವೆ ಎಂದು ಅರ್ಜಿದಾರ ವಿದ್ಯಾರ್ಥಿಗಳು ವಾದಿಸಿದ್ದಾರೆ.

ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು, “ಎಲ್ಲಾ ಭಾವನೆಗಳನ್ನು ಬದಿಗಿರಿಸಿ. ಸಂವಿಧಾನ ಏನು ಹೇಳುತ್ತದೋ ಅದರಂತೆ ನಡೆಯುತ್ತೇವೆ. ಸಂವಿಧಾನ ನನಗೆ ಭಗವತ್‌ ಗೀತೆಗಿಂತ ಮೇಲೆ. ನಾನು ಸಂವಿಧಾನಕ್ಕೆ ನೀಡಿರುವ ಪ್ರಮಾಣ ವಚನಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಫಾರೂಕ್ ಸಲ್ಲಿಸಿರುವ ಅರ್ಜಿಯಲ್ಲಿ ಸಂವಿಧಾನದ 14 ಮತ್ತು 25ನೇ ವಿಧಿಯಡಿ ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿರುವ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸುತ್ತಿದ್ದು, ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸುತ್ತಿದ್ದಾರೆ.

ಸರ್ಕಾರದ ಪರವಾರಿ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, “ಶೈಕ್ಷಣಿಕ ಸಂಸ್ಥೆಯಲ್ಲಿ ಹಿಜಾಬ್‌ ಧರಿಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿದೆಯೇ ಎಂದು ಪರಿಶೀಲಿಸಿ. ಸಕಾರವು ಕಾಲೇಜು ಅಭಿವೃದ್ದಿ ಮಂಡಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದ್ದೇವೆ” ಎಂದು ಹೇಳಿದ್ದಾರೆ.

ಈಗ ಎರಡು ತಿಂಗಳವರೆಗೆ ಯಥಾಸ್ಥಿತಿ ಕಾಪಾಡಿ ಎಂದು ವಕೀಲ ದೇವದತ್‌ ಅವರು ಹೇಳಿದ್ದು, “ಹಿಜಾಬ್‌ ಧರಿಸುವುದು ಇದು ಇಸ್ಲಾಮ್‌ ಧರ್ಮದ ಸಂಪ್ರದಾಯ. ನಮ್ಮ ಮೊದಲ ಕೋರಿಕೆ, ಶಿರವಸ್ತ್ರ ಅಥವಾ ಹಿಜಾಬ್‌ ಧರಿಸುವುದು. ಪವಿತ್ರ ಕುರಾನ್‌ ಪ್ರಕಾರ ಇದು ಇಸ್ಲಾಂ ಧರ್ಮದ ಅಗತ್ಯ ಭಾಗವಾಗಿದೆ” ಎಂದು ಹೇಳಿದ್ದಾರೆ.

“ಎರಡನೆ ಮನವಿ, ಇಷ್ಟವಿರುವ ಬಟ್ಟೆ ಧರಿಸುವುದು ಸಂವಿಧಾನದ 19(ಎ) ಅಡಿ ನೀಡಿರುವುದಾಗಿದ್ದು 19(6) ಅಡಿ ಮಾತ್ರವೇ ಅದನ್ನು ನಿರ್ಬಂಧಿಸಬಹುದು. ಅಭಿವ್ಯಕ್ತಿಯ ಸ್ವಾತಂತ್ರ್ಯವು ಏನನ್ನು ಧರಿಸಬಹುದು ಎನ್ನುವುದನ್ನು ಒಳಗೊಳ್ಳುತ್ತದೆ. ಪುಟ್ಟಸ್ವಾಮಿ ಪ್ರಕರಣದಲ್ಲಿ ಖಾಸಗಿ ಹಕ್ಕನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದ್ದು. ವಸ್ತ್ರಧರಿಸುವ ಹಕ್ಕು ಇದರಡಿಯೇ ಬರುತ್ತದೆ” ಎಂದು ವಾದಿಸಿದ್ದಾರೆ.

ಈ ಮಧ್ಯೆ ಅರ್ಜಿದಾರರ ಪರವಾಗಿರುವ ವಕೀಲ ತಾಹಿರ್‌ ಅವರು ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಓದಿದ್ದಾರೆ. ಇದೇ ವೇಳೆ ನ್ಯಾಯಾಲಯವು ನ್ಯಾಯಮೂರ್ತಿಗಳಿಗೆ ನೀಡಲಾದ ಗ್ರಂಥಾಲಯದಿಂದ ತಂದ ಕುರಾನ್‌ನ ಪ್ರತಿಯು ಅಧಿಕೃತ ಪ್ರತಿಯೇ ಎಂದು ಖಚಿತಪಡಿಸಿಕೊಳ್ಳಲು ಮುಂದಾಯಿತು.

“ಸರ್ಕಾರದ ಆದೇಶವು ಕರ್ನಾಟಕ ಶಿಕ್ಷಣ ನಿಯಮಾವಳಿಗಳ ವ್ಯಾಪ್ತಿಯ ಅಚೆಗಿದೆ. ಹಾಗಾಗಿ ಅದು ಇಂತಹ ಆದೇಶ ಹೊರಡಿಸುವ ವ್ಯಾಪ್ತಿಯನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಈ ಹಿಂದಿನ ಅದೇಶವೊಂದನ್ನು ನ್ಯಾಯಾಲಯದ ಮುಂದಿರಿಸಿದ ಅವರು, “ಸರ್ಕಾರವು ಯಾವುದು ಧರ್ಮದ ಅಗತ್ಯ ಅಚಾರ, ಯಾವುದಲ್ಲ ಎನ್ನುವುದನ್ನು ಹೇಳಲಾಗದು. ಅದು ನ್ಯಾಯಾಂಗದ ಪರಿಮಿತಿಗೆ ಬರುವಂಥದ್ದು. ಈ ಹಿಂದಿನ ಆದೇಶದಂತೆ, ಇಲ್ಲಿ ಪರೀಕ್ಷೆ ಎಂದರೆ, ಅಂತಹ ಆಚರಣೆಯನ್ನು ಧರ್ಮದಿಂದ ಹೊರಗಿಟ್ಟರೆ ಆಗ ಅಂತಹ ಧರ್ಮದ ಮೂಲರಚನೆಯಲ್ಲಿ ವ್ಯತ್ಯಾಸವಾಗುತ್ತದೆಯೇ ಎನ್ನುವುದು. ಧಾರ್ಮಿಕ ಆಚರಣೆಗಳನ್ನು ಧಾರ್ಮಿಕ ಅಧಿಕಾರದಿಂದ ಹೊರತಾದ ಜಾತ್ಯತೀತ ತತ್ವಗಳಿಂದ ಪರೀಕ್ಷಿಸಲಾಗದು. ಹಾಗಾಗಿ, ಧರ್ಮಕ್ಕೆ ಏನು ಅಗತ್ಯ ಏನಲ್ಲ ಎನ್ನುವುದನ್ನು ನಮ್ಮ ಜಾತ್ಯತೀತ ಆಲೋಚನೆಗಳು ನಿರ್ಧರಿಸಲಾಗದು” ಎಂದು ಹೇಳಿದ್ದಾರೆ.

“ಋತುಮತಿಯಾದ ನಂತರ ಹೆಣ್ಣು ತನ್ನ ಮುಖ ಹಾಗೂ ಕೈಗಳನ್ನು ಅಪರಿಚಿತರಿಗೆ ತೋರಿಸುವುದು ಸರಿಯಲ್ಲ” ಎಂದು ಕೇರಳ ಹೈಕೋರ್ಟ್‌ ತೀರ್ಪಿನಲ್ಲಿರುವ ಹದೀಸ್‌ ಒಂದನ್ನು ದೇವದತ್‌ ಕಾಮತ್ ಉಲ್ಲೇಖಿಸಿದ್ದಾರೆ.

‘‘ಕರ್ನಾಟಕ ಸರ್ಕಾರದ ಆದೇಶವು ಕೇರಳ ಹೈಕೋರ್ಟ್‌ನ ತೀರ್ಪಿನಲ್ಲಿ ಹೇಳಿರುವಂತೆ ಧರ್ಮಕ್ಕೆ ಯಾವುದು ಅಗತ್ಯವಲ್ಲ ಎನ್ನುವ ಅಂಶದಿಂದ ಕೂಡಿದ್ದು ಹಿಜಾಬ್‌ ಅಗತ್ಯವಲ್ಲ ಎನ್ನುತ್ತದೆ. ಆದರೆ, ಈ ತೀರ್ಪು ಇದಕ್ಕೆ ಅನ್ವಯವಾಗದು. ಏಕೆ ಅನ್ವಯವಾಗುವುದಿಲ್ಲ ಎಂದರೆ ಅದು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಬಗ್ಗೆ ಅಗಿರಲಿಲ್ಲ. ಬದಲಿಗೆ ಖಾಸಗಿ ಕ್ರಿಶ್ಚಿಯನ್‌ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ್ದಾಗಿತ್ತು” ಎಂದು ವಾದಿಸಿದ್ದಾರೆ.

ಈ ವೇಳೆ ವಕೀಲ ಕಾಳೀಶ್ವರಮ್‌ ರಾಜ್‌ ಅವರಿಂದ ಮಧ್ಯಪ್ರವೇಶ ಕೋರಿ ಮನವಿ ಮಾಡಿದ್ದಾರೆ. ತಾವು ಅಗತ್ಯವಿರುವ ಧಾರ್ಮಿಕ ಆಚರಣೆಗಳ ಬಗ್ಗೆ ಬರೆದಿರುವುದಾಗಿ ಮಾಹಿತಿ ನೀಡಿದ್ದು. ತನ್ನ ವಾದಕ್ಕೆ ಹದಿನೈದು ನಿಮಿಷ ಅವಕಾಶ ಕಲ್ಪಿಸಲು ಕೋರಿಕೆ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿರುವುದರಿಂದ ತಾನು ವಿಚಾರಣೆಯನ್ನು ಆಲಿಸುತ್ತಿರುವುದಾಗಿ ಕಾಳೀಶ್ವರಮ್‌ ರಾಜ್ ಹೇಳಿದ್ದಾರೆ. ಅವರ ವಾದ ಮಂಡಲಿಸಲು ನ್ಯಾಯಮೂರ್ತಿ ದೀಕ್ಷಿತ್ ಅವರು ಅನುಮತಿ ನೀಡಿದ್ದು, ವಿಚಾರಣೆಯನ್ನು ಮೂರು ಗಂಟೆಗೆ ಮುಂದೂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...