Homeಮುಖಪುಟಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

ಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

- Advertisement -
- Advertisement -

ಕರ್ನಾಟಕದ ಶಾಲೆ ಕಾಲೇಜುಗಳಲ್ಲಿ ಭುಗಿಲೆದ್ದಿರುವ ವಿವಾದ ದುರುದ್ದೇಶಪೂರ್ವಕವಾಗಿದ್ದು, ನಾಡಿನ ಶಾಂತಿ, ಸೌಹಾರ್ದತೆ, ಸಹಬಾಳ್ವೆಗೆ ಧಕ್ಕೆ ತಂದಿದೆ. ಕರ್ನಾಟಕವನ್ನು ಉತ್ತರ ಪ್ರದೇಶವನ್ನಾಗಿಸುವ ಈ ಕುಟಿಲ ತಂತ್ರವನ್ನು ರಾಜ್ಯದ ಶಾಂತಿಪ್ರಿಯ ನಾಗರಿಕರು ವಿಫಲಗೊಳಿಸಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರವರು ಮನವಿ ಮಾಡಿದ್ದಾರೆ.

ಉಡುಪಿಯ ಒಂದು ಕಾಲೇಜಿನಲ್ಲಿ ಆರಂಭಗೊಂಡ ಸಮಸ್ಯೆ ಇಡೀ ರಾಜ್ಯಕ್ಕೆ ವ್ಯಾಪಿಸಲು ಕಾರಣವಾದರೂ ಏನು? ಎಲ್ಲೆಡೆ ಶಾಂತಿ ಕದಡಿ ಗಲಭೆಯೆಬ್ಬಿಸಲು ಹಿನ್ನೆಲೆಯಲ್ಲಿ ನಿಂತು ಸಂಚು ರೂಪಿಸಿದ ಸಂಘಟನೆಗಳಾದರೂ ಯಾವುವು? ಈ ಸಂಘಟನೆಗಳಿಗೆ ಸರ್ಕಾರದ ಬೆಂಬಲವಿದೆಯೇ? ವಿವಾದ ಆರಂಭಗೊಂಡಾಗಲೇ ಸರ್ಕಾರ ಮಧ್ಯಪ್ರವೇಶಿಸಿ, ಸೌಹಾರ್ದಯುತವಾಗಿ ಬಗೆಹರಿಸಬಹುದಿತ್ತು. ಆದರೆ ಸರ್ಕಾರದ ಮಂತ್ರಿಗಳು, ಸಂಸದರು, ಶಾಸಕರುಗಳು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಪ್ರತ್ಯಕ್ಷವಾಗಿ ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಇದು ಅಕ್ಷಮ್ಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆ, ಕಾಲೇಜುಗಳಲ್ಲಿ ಶಿರವಸ್ತ್ರ ಧರಿಸಬಹುದೇ ಇಲ್ಲವೇ ಎಂಬುದನ್ನು ಭಾರತ ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಲಯಗಳು ತೀರ್ಮಾನಿಸಲಿ.‌‌ ಆದರೆ ನ್ಯಾಯಾಲಯದ ವಿಚಾರಣೆ ನಡೆಯುತ್ತಿರುವಾಗಲೇ ಮಕ್ಕಳನ್ನು ಬಳಸಿಕೊಂಡು ರಾಜಕೀಯದ ಬೇಳೆ ಬೇಯಿಸಿಕೊಳ್ಳುವುದು ಎಷ್ಟು ಸರಿ?ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದರು. ನಮ್ಮದು ಶರಣರು,‌ ಸಂತರ ನಾಡು. ಇಂಥ ನಾಡಿಗೆ ಧರ್ಮಗಳ ಹೆಸರಲ್ಲಿ ಬೆಂಕಿ ಹಚ್ಚುತ್ತಿರುವ ದುಷ್ಟರು ಭವಿಷ್ಯದ ದಿನಗಳನ್ನು ಇನ್ನಷ್ಟು ಅಪಾಯಕಾರಿಯಾಗಿಸುತ್ತಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು-ನಾಲ್ಕು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿ ನಿಜಕ್ಕೂ ನಾಡಿನ ಭವಿಷ್ಯದ ಕುರಿತು ಆತಂಕವಾಗುತ್ತಿದೆ. ನಾವು ಎಂಥ ಸಮಾಜವನ್ನು ಕಟ್ಟುತ್ತಿದ್ದೇವೆ.? ಹದಿನೈದು-ಹದಿನಾರು ವಯಸ್ಸಿನ ಮಕ್ಕಳಲ್ಲಿ ಧರ್ಮದ್ವೇಷದ ವಿಷಬೀಜ‌ ಬಿತ್ತಲಾಗಿದೆ. ಇದರ ಪರಿಣಾಮ ಘೋರವಾಗಲಿದೆ. ರಾಜ್ಯ ಸರ್ಕಾರ ಶಾಲೆ-ಕಾಲೇಜುಗಳಿಗೆ ಮೂರು‌ದಿನಗಳ ಕಾಲ ರಜೆ ಘೋಷಿಸಿರುವುದು ಸರಿಯಾದ ಕ್ರಮ. ಇನ್ನಷ್ಟು ಅಪಾಯಗಳು‌ ಆಗದಂತೆ‌ ತಡೆಯುವುದು ಅನಿವಾರ್ಯವಾಗಿತ್ತು. ಪರಿಸ್ಥಿತಿ ತಿಳಿಯಾದ ನಂತರ ಶಾಲೆ-ಕಾಲೇಜುಗಳನ್ನು ಆರಂಭಿಸಬೇಕು. ಪ್ರಚೋದನಾಕಾರಿಯಾಗಿ ಮಾತಾಡುವವರ ಬಾಯಿ ಮುಚ್ಚಿಸಬೇಕು.‌ ಸಮಾಜಘಾತಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ಹೊರಗಡೆ ಧರಿಸುವಾಗ ಸಮಸ್ಯೆ ಆಗಲ್ಲ ಎಂದರೆ, ಕಾಲೇಜಿನ ಒಳಗಡೆ ಅದು ಸಮಸ್ಯೆಯಾಗದು: ನ್ಯಾಯಮೂರ್ತಿ ದೀಕ್ಷಿತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....