Homeಮುಖಪುಟಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

- Advertisement -
- Advertisement -

ಕೇಸರಿ ಶಾಲು ಧರಿಸುವಂತೆ ಒತ್ತಾಯಿಸಿದ ಕುಶಾಲನಗರದ ಸುಂದರನಗರ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಡೆದಿದೆ.

ಸುಂದರನಗರ ಕಾಲೇಜಿನ ಕಲಾ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಸಂದೀಪ (20) ಎಂಬುವವರು ಕೇಸರಿ ಶಾಲು ಧರಿಸಿ ಪ್ರತಿಭಟಿಸಲು ಮುಂದಾಗಿದ್ದನು. ಆತ ಎಲ್ಲರಿಗೂ ಕೇಸರಿ ಶಾಲು ಹಂಚುವಾಗ ತನಗೆ ಮತ್ತು ತನ್ನ ಸ್ನೇಹಿತೆಗೆ ಶಾಲು ಬೇಡ ಎಂದು ವಿಕ್ರಂ ಎಂಬ ವಿದ್ಯಾರ್ಥಿ ವಿರೋಧಿಸಿದ್ದಾನೆ. ಇದರಿಂದ ಮಾತಿಗೆ ಮಾತು ಬೆಳೆದು ಜಗಳಕ್ಕೆ ಕಾರಣವಾಗಿದೆ. ಕೊನೆಗೆ ಅದು ವಿಕ್ರಂ ಸಂದೀಪನಿಗೆ ಚಾಕು ಹಾಕುವ ಮಟ್ಟಿಗೆ ಬೆಳೆದಿದೆ.

ಸಂದೀಪನ ಬೆನ್ನು ಹಾಗೂ ಭುಜಕ್ಕೆ ಚಾಕು ಇರಿತ ಉಂಟಾಗಿದೆ. ಆತನ ಸ್ನೇಹಿತರ ಮೇಲೂ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರು ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಚಾಕು ಹಾಕಿ ಪರಾರಿಯಾಗಿದ್ದ ವಿಕ್ರಂ ಹಾಗೂ ಆತನ ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನ್ನ ಸ್ನೇಹಿತೆಗೆ ಬಲವಂತವಾಗಿ ಕೇಸರಿ ಶಾಲು ಹಾಕಲು ಬಂದರು. ಹಾಗಾಗಿ ಜಗಳ ನಡೆದಿದೆ ಎಂದು ವಿಕ್ರಂ ಪೊಲೀಸರಿಗೆ ತಿಳಿಸಿದ್ದಾನೆ.

 

ಎರಡೂ ಗುಂಪಿನ ನಡುವೆ ನಡೆದ ಘರ್ಷಣೆಯಲ್ಲಿ ಸಂದೀಪರವರ ಹೆಗಲಿಗೆ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿಯಲಾಗಿದೆ. ವಿಕ್ರಂ ಅವರ ತಲೆ ಹಾಗೂ ಕೈಗೆ ಪೆಟ್ಟಾಗಿದ್ದು, ಸಂದೀಪ ಹಾಗೂ ವಿಕ್ರಂ ಇಬ್ಬರೂ ಚಿಕಿತ್ಸೆ ಪಡೆದಿದ್ದಾರೆ. ನನ್ನ ಮಗನನ್ನು ಓದಲು ಕಾಲೇಜಿಗೆ ಕಳಿಸಿದರೆ ಈ ರೀತಿ ಶಾಲು ಅಂತ ಗಲಾಟೆ ಮಾಡಿಕೊಂಡಿದ್ದಾನೆ. ಕೆಲವರು ವಿದ್ಯಾರ್ಥಿಗಳ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಂದೀಪನ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಸಿ.ಜಯಪ್ರಕಾಶ್, “ಕಾಲೇಜು ವಿದ್ಯಾರ್ಥಿಗಳನ್ನು ಕೆಲವರು ರಾಜಕೀಯವಾಗಿ ಬಳಸಿಕೊಂಡು ಈ ರೀತಿ ಬಲಿಪಶುವನ್ನಾಗಿ ಮಾಡುತ್ತಿದ್ದಾರೆ. ಕೆಲವೇ ಕೆಲವರ ರಾಜಕೀಯ ದುರುದ್ದೇಶಕ್ಕೆ ಅಮಾಯಕ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಇನ್ನು ಮುಂದೆ ಯಾರೂ ಕೂಡಾ ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಇದಕ್ಕೆ ಕಡಿವಾಣ ಹಾಕಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕವನ್ನು ಯುಪಿ ಮಾಡುವ ಕುಟಿಲ ತಂತ್ರವನ್ನು ವಿಫಲಗೊಳಿಸಿ: ಟಿ.ಎ ನಾರಾಯಣಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೆಮ್ಮದಿಯಿಂದ ಇದ್ದ ಶಾಲಾ ಕಾಲೇಜು ವಾತಾವರಣವನ್ನ ಕೆಲವೇ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ರಾಜಕೀಯ ಬೇಳೆ‌ಬೇಯಿಸಿಕೊಳ್ಳುತ್ತಿದ್ದಾರೆ… ಇಲ್ಲಿ ಸಾಹಿತಿಗಳು. ಪ್ರಜ್ನಾವಂತ ನಾಗರೀಕರು ವಿಧ್ಯಾರ್ಥಿಗಳಿಗೆ ಬುದ್ದಿ ಹೇಳಬೇಕು…. ಮಕ್ಕಳ ಭಾವನೆಗಳೊಂದಿಗೆ ಆಟವಾಡಬೇಡಿ…

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...