Homeಕರ್ನಾಟಕನಾಳೆಯಿಂದ ಪ್ರೌಢಶಾಲೆಗಳು ಆರಂಭ: ಶಾಂತಿ ಮತ್ತು ಸಹಜತೆ ನೆಲೆಸಲಿದೆ ಎಂದ ಸಿಎಂ

ನಾಳೆಯಿಂದ ಪ್ರೌಢಶಾಲೆಗಳು ಆರಂಭ: ಶಾಂತಿ ಮತ್ತು ಸಹಜತೆ ನೆಲೆಸಲಿದೆ ಎಂದ ಸಿಎಂ

- Advertisement -
- Advertisement -

ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಚ್ಚಲಾಗಿದ್ದ 10 ನೇ ತರಗತಿಯವರೆಗಿನ ಪ್ರೌಢಶಾಲೆಗಳು ನಾಳೆ ಪುನಾರಂಭಗೊಳ್ಳಲಿವೆ. ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಶಾಂತಿ ಮತ್ತು ಸಹಜತೆ ನೆಲೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದ್ಯ ಪ್ರೌಢಶಾಲೆಗಳು ಪ್ರಾರಂಭಿಸಲಾಗುತ್ತದೆ. ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ವಿಶ್ವವಿದ್ಯಾಲಯ ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

“ನಾಳೆಯಿಂದ 10ನೇ ತರಗತಿವರೆಗಿನ ಪ್ರೌಢಶಾಲೆಗಳು ಪುನರಾರಂಭಗೊಳ್ಳಲಿವೆ. ಶಾಂತಿ ಸಮಿತಿ ಸಭೆ ನಡೆಸುವಂತೆ ಡಿಸಿಗಳು, ಎಸ್ಪಿಗಳು ಮತ್ತು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದೇನೆ. ಪರಿಸ್ಥಿತಿ ಅವಲೋಕಿಸಿದ ಕಾಲೇಜುಗಳು ಆರಂಭದ ಬಗ್ಗೆ ರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

 

ಸೌಹಾರ್ದಯುತ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ ಪ್ರಮುಖ ಶಾಲೆಗಳಲ್ಲಿ ಪೋಷಕರು ಮತ್ತು ಶಿಕ್ಷಕರನ್ನು ಒಳಗೊಂಡ ಶಾಂತಿ ಸಭೆಗಳನ್ನು ನಡೆಸಲು ಈಗಾಗಲೇ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ಶಾಲೆಗಳು ಶಾಂತಿಯುತವಾಗಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನನ್ನ ಮುಂದಿರುವುದು ಮತ್ತು ನನ್ನ ಮೊದಲ ಕರ್ತವ್ಯವೆಂದರೆ ಶಾಲೆಗಳು ಮತ್ತು ಕಾಲೇಜುಗಳು ಸಾಮಾನ್ಯ ಕಾರ್ಯಚಟುವಟಿಕೆಗೆ ಮರಳಬೇಕು. ವಿದ್ಯಾರ್ಥಿಗಳು ಶಾಂತಿಯುತ ಮತ್ತು ಸೌಹಾರ್ದಯುತ ವಾತಾವರಣದಲ್ಲಿ ಅಧ್ಯಯನ ಮಾಡಬೇಕು ಮತ್ತು ಮಾರ್ಚ್-ಏಪ್ರಿಲ್ ವೇಳೆಗೆ ಪರೀಕ್ಷೆಗಳಿಗೆ ಸಿದ್ಧರಾಗಬೇಕು” ಎಂದು ಹೇಳಿದ್ದಾರೆ.

ಹಿಜಾಬ್ -ಕೇಸರಿ ಶಾಲು ಘರ್ಷಣೆ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸೇರಿದ ವಿಶ್ವವಿದ್ಯಾಲಯಗಳು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ) ಅಡಿಯಲ್ಲಿರುವ ಕಾಲೇಜುಗಳಿಗೆ ಘೋಷಿಸಲಾದ ರಜೆಯನ್ನು ಫೆಬ್ರವರಿ 16 ರವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿತ್ತು.

ರಾಜ್ಯದ ವಿವಿಧ ಭಾಗಗಳಲ್ಲಿ ಹಿಜಾಬ್ ಪರ ಮತ್ತು ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡಿದ್ದರಿಂದ ಮತ್ತು ಕೆಲವೆಡೆ ಹಿಂಸಾಚಾರಕ್ಕೆ ತಿರುಗಿದ್ದರಿಂದ, ಫೆಬ್ರವರಿ 9 ರಿಂದ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿತು. ಬಳಿಕ ಇದನ್ನು ವಿಸ್ತರಿಸಲಾಗಿದೆ.

ಹಿಜಾಬ್‌ ಧರಿಸಿ ಕಾಲೇಜು ಪ್ರವೇಶ ಕೋರಿ ಸಲ್ಲಿಸಿದ್ದ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿಯರ ಅರ್ಜಿಯನ್ನು ಆಲಿಸುತ್ತಿದ್ದ ವಿಸ್ಕೃತ ಪೀಠ ಸೋಮವಾರ ಮಧ್ಯಾಹ್ನ 2.30ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿದೆ.


ಇದನ್ನೂ ಓದಿ: ಹಿಜಾಬ್ – ಕೇಸರಿ ಶಾಲು ವಿವಾದ: ಉಡುಪಿಯ ಪ್ರೌಢಶಾಲಾ ವ್ಯಾಪ್ತಿಯಲ್ಲಿ ಫೆ.14 ರಂದು ನಿಷೇಧಾಜ್ಞೆ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...