Homeಕರ್ನಾಟಕ’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ...

’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಠಾಕೂರ್

- Advertisement -
- Advertisement -

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿರುವ ವಿರುದ್ಧದ ಆಕ್ರೋಶದ ನಡುವೆ, ವಿವಾದಿತ ಬಿಜೆಪಿ ಸಂಸದೆ, ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕವಾಗಿ ಹಿಜಾಬ್ ಧರಿಸುವುದನ್ನು ಸಹಿಸಲಾಗದು ಎಂದಿರುವ ಅವರು ಮನೆಯಿಂದ ಹೊರ ಬರುವಾಗ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಯಾವಾಗಲೂ ವಿವಾದಿತ ಹೇಳಿಕೆಗಳಿಮದಲೇ ಸುದ್ದಿಯಾಗುವ ಪ್ರಜ್ಞಾ ಠಾಕೂರ್, “ಇದು ಹಿಂದೂಗಳ ದೇಶವಾಗಿದ್ದು, ಹಿಂದೂಗಳು ಮಹಿಳೆಯರನ್ನು ಪೂಜಿಸುತ್ತಾರೆ. ಹೀಗಾಗಿ ದೇಶದಲ್ಲಿ ಹಿಜಾಬ್ ಧರಿಸುವ ಅಗತ್ಯವಿಲ್ಲ. ತಾವು ಸುರಕ್ಷಿತರಲ್ಲ ಎಂದು ಭಾವಿಸುವವರು ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಮಧ್ಯಪ್ರದೇಶದ ಭೋಪಾಲ್‌ನ ದೇವಸ್ಥಾನವೊಂದರಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

“ಎಲ್ಲಿಯೂ ಹಿಜಾಬ್ ಧರಿಸುವ ಅಗತ್ಯವಿಲ್ಲ, ಅವರ ಮನೆಯಲ್ಲಿ ಸುರಕ್ಷಿತವಾಗಿಲ್ಲದ ಮಹಿಳೆಯರು ಹಿಜಾಬ್ ಧರಿಸುತ್ತಾರೆ, ನಿಮಗೆ ಮದರಸಾ ಇದೆ, ಅಲ್ಲಿ ನೀವು ಹಿಜಾಬ್ ಧರಿಸಿದರೆ ನಮಗೆ ಏನೂ ತೊಂದರೆಯಿಲ್ಲ. ಆದರೆ, ಸಾರ್ವಜನಿಕವಾಗಿ ಎಲ್ಲಿ ‘ಹಿಂದೂ ಸಮಾಜ’ ಇದೆಯೋ ಅಲ್ಲಿ ಹಿಜಾಬ್ ಅಗತ್ಯವಿಲ್ಲ. ಅದನ್ನು ನಾವು ಸಹಿಸುವುದಿಲ್ಲ” ಎಂದಿದ್ದಾರೆ.

“ಹಿಜಾಬ್ ಎಂದರೆ ಪರ್ದಾ. ಅದನ್ನು ನಿಮ್ಮನ್ನು ಕೆಟ್ಟ ಕಣ್ಣುಗಳಿಂದ ನೋಡುವವರ ವಿರುದ್ಧ ಬಳಸಬೇಕು. ಆದರೆ ಹಿಂದೂಗಳು ಮಹಿಳೆಯರನ್ನು ಪೂಜಿಸುವುದರಿಂದ ಅವರನ್ನು (ಮಹಿಳೆಯರನ್ನು) ಕೆಟ್ಟ ದೃಷ್ಟಿಯಿಂದ ನೋಡುವುದಿಲ್ಲ. ನೀವು ನಿಮ್ಮ ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಹೇಳಿದ್ದಾರೆ.

ಪತ್ರಕರ್ತೆ ರಾಣಾ ಆಯೂಬ್ ಸೇರಿದಂತೆ ಹಲವು ಮಂದಿ ಪ್ರಜ್ಞಾ ಠಾಕೂರ್‌ ಹೇಳಿಕೆಯನ್ನು ಖಂಡಿಸಿದ್ದಾರೆ.

“ಮಾಲೆಗಾಂವ್ ಸ್ಫೋಟದ ಆರೋಪಿ ಬಲಪಂಥೀಯ ಹಿಂದೂ ಭಯೋತ್ಪಾದಕಿ, ಎಟಿಎಸ್ ತನಿಖೆಯ ಪ್ರಕಾರ 10 ಕ್ಕೂ ಹೆಚ್ಚು ಮುಸ್ಲಿಮರನ್ನು ಹತ್ಯೆಗೈದ ಮಾಲೆಗಾಂವ್ ಸ್ಫೋಟದ ಸಂಚು ಮತ್ತು ಜವಾಬ್ದಾರಿಯನ್ನು ಹೊತ್ತಿರುವವರು ಈಗ ಮುಸ್ಲಿಂ ಹುಡುಗಿಯರಿಗೆ ಹಿಜಾಬ್ ಕುರಿತು ಉಪದೇಶ ನೀಡುತ್ತಾರೆ. ಇದು ನವ ಭಾರತ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಡಿಸೆಂಬರ್‌ನಲ್ಲಿ ಉಡುಪಿಯಲ್ಲಿ ಹಿಜಾಬ್ ಧರಿಸಿ ಬಂದಿದ್ದ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿನಿಯರು ಎರಡು ವಾರಕ್ಕೂ ಹೆಚ್ಚು ದಿನ ಪ್ರತಿಭಟನೆ ನಡೆಸುತ್ತಿದ್ದರು. ಬಳಿಕ ಇದು ಹಿಜಾಬ್- ಕೇಸರಿ ಶಾಲು ವಿವಾದವಾಗಿ ಕುಂದಾಪುರದ ಕಾಲೇಜಿಗೆ ಹಬ್ಬಿತು. ಅಲ್ಲಿಂದ ರಾಜ್ಯದ ಇತರ ಕಾಲೇಜುಗಳಿಗೆ ಹರಡಿ ದೊಡ್ಡ ವಿವಾದವಾಗಿದೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...