Homeಕರ್ನಾಟಕ’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ...

’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಠಾಕೂರ್

- Advertisement -
- Advertisement -

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿರುವ ವಿರುದ್ಧದ ಆಕ್ರೋಶದ ನಡುವೆ, ವಿವಾದಿತ ಬಿಜೆಪಿ ಸಂಸದೆ, ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕವಾಗಿ ಹಿಜಾಬ್ ಧರಿಸುವುದನ್ನು ಸಹಿಸಲಾಗದು ಎಂದಿರುವ ಅವರು ಮನೆಯಿಂದ ಹೊರ ಬರುವಾಗ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಯಾವಾಗಲೂ ವಿವಾದಿತ ಹೇಳಿಕೆಗಳಿಮದಲೇ ಸುದ್ದಿಯಾಗುವ ಪ್ರಜ್ಞಾ ಠಾಕೂರ್, “ಇದು ಹಿಂದೂಗಳ ದೇಶವಾಗಿದ್ದು, ಹಿಂದೂಗಳು ಮಹಿಳೆಯರನ್ನು ಪೂಜಿಸುತ್ತಾರೆ. ಹೀಗಾಗಿ ದೇಶದಲ್ಲಿ ಹಿಜಾಬ್ ಧರಿಸುವ ಅಗತ್ಯವಿಲ್ಲ. ತಾವು ಸುರಕ್ಷಿತರಲ್ಲ ಎಂದು ಭಾವಿಸುವವರು ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಮಧ್ಯಪ್ರದೇಶದ ಭೋಪಾಲ್‌ನ ದೇವಸ್ಥಾನವೊಂದರಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

“ಎಲ್ಲಿಯೂ ಹಿಜಾಬ್ ಧರಿಸುವ ಅಗತ್ಯವಿಲ್ಲ, ಅವರ ಮನೆಯಲ್ಲಿ ಸುರಕ್ಷಿತವಾಗಿಲ್ಲದ ಮಹಿಳೆಯರು ಹಿಜಾಬ್ ಧರಿಸುತ್ತಾರೆ, ನಿಮಗೆ ಮದರಸಾ ಇದೆ, ಅಲ್ಲಿ ನೀವು ಹಿಜಾಬ್ ಧರಿಸಿದರೆ ನಮಗೆ ಏನೂ ತೊಂದರೆಯಿಲ್ಲ. ಆದರೆ, ಸಾರ್ವಜನಿಕವಾಗಿ ಎಲ್ಲಿ ‘ಹಿಂದೂ ಸಮಾಜ’ ಇದೆಯೋ ಅಲ್ಲಿ ಹಿಜಾಬ್ ಅಗತ್ಯವಿಲ್ಲ. ಅದನ್ನು ನಾವು ಸಹಿಸುವುದಿಲ್ಲ” ಎಂದಿದ್ದಾರೆ.

“ಹಿಜಾಬ್ ಎಂದರೆ ಪರ್ದಾ. ಅದನ್ನು ನಿಮ್ಮನ್ನು ಕೆಟ್ಟ ಕಣ್ಣುಗಳಿಂದ ನೋಡುವವರ ವಿರುದ್ಧ ಬಳಸಬೇಕು. ಆದರೆ ಹಿಂದೂಗಳು ಮಹಿಳೆಯರನ್ನು ಪೂಜಿಸುವುದರಿಂದ ಅವರನ್ನು (ಮಹಿಳೆಯರನ್ನು) ಕೆಟ್ಟ ದೃಷ್ಟಿಯಿಂದ ನೋಡುವುದಿಲ್ಲ. ನೀವು ನಿಮ್ಮ ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಹೇಳಿದ್ದಾರೆ.

ಪತ್ರಕರ್ತೆ ರಾಣಾ ಆಯೂಬ್ ಸೇರಿದಂತೆ ಹಲವು ಮಂದಿ ಪ್ರಜ್ಞಾ ಠಾಕೂರ್‌ ಹೇಳಿಕೆಯನ್ನು ಖಂಡಿಸಿದ್ದಾರೆ.

“ಮಾಲೆಗಾಂವ್ ಸ್ಫೋಟದ ಆರೋಪಿ ಬಲಪಂಥೀಯ ಹಿಂದೂ ಭಯೋತ್ಪಾದಕಿ, ಎಟಿಎಸ್ ತನಿಖೆಯ ಪ್ರಕಾರ 10 ಕ್ಕೂ ಹೆಚ್ಚು ಮುಸ್ಲಿಮರನ್ನು ಹತ್ಯೆಗೈದ ಮಾಲೆಗಾಂವ್ ಸ್ಫೋಟದ ಸಂಚು ಮತ್ತು ಜವಾಬ್ದಾರಿಯನ್ನು ಹೊತ್ತಿರುವವರು ಈಗ ಮುಸ್ಲಿಂ ಹುಡುಗಿಯರಿಗೆ ಹಿಜಾಬ್ ಕುರಿತು ಉಪದೇಶ ನೀಡುತ್ತಾರೆ. ಇದು ನವ ಭಾರತ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಡಿಸೆಂಬರ್‌ನಲ್ಲಿ ಉಡುಪಿಯಲ್ಲಿ ಹಿಜಾಬ್ ಧರಿಸಿ ಬಂದಿದ್ದ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿನಿಯರು ಎರಡು ವಾರಕ್ಕೂ ಹೆಚ್ಚು ದಿನ ಪ್ರತಿಭಟನೆ ನಡೆಸುತ್ತಿದ್ದರು. ಬಳಿಕ ಇದು ಹಿಜಾಬ್- ಕೇಸರಿ ಶಾಲು ವಿವಾದವಾಗಿ ಕುಂದಾಪುರದ ಕಾಲೇಜಿಗೆ ಹಬ್ಬಿತು. ಅಲ್ಲಿಂದ ರಾಜ್ಯದ ಇತರ ಕಾಲೇಜುಗಳಿಗೆ ಹರಡಿ ದೊಡ್ಡ ವಿವಾದವಾಗಿದೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...