Homeಕರ್ನಾಟಕ’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ...

’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಠಾಕೂರ್

- Advertisement -
- Advertisement -

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿರುವ ವಿರುದ್ಧದ ಆಕ್ರೋಶದ ನಡುವೆ, ವಿವಾದಿತ ಬಿಜೆಪಿ ಸಂಸದೆ, ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕವಾಗಿ ಹಿಜಾಬ್ ಧರಿಸುವುದನ್ನು ಸಹಿಸಲಾಗದು ಎಂದಿರುವ ಅವರು ಮನೆಯಿಂದ ಹೊರ ಬರುವಾಗ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಯಾವಾಗಲೂ ವಿವಾದಿತ ಹೇಳಿಕೆಗಳಿಮದಲೇ ಸುದ್ದಿಯಾಗುವ ಪ್ರಜ್ಞಾ ಠಾಕೂರ್, “ಇದು ಹಿಂದೂಗಳ ದೇಶವಾಗಿದ್ದು, ಹಿಂದೂಗಳು ಮಹಿಳೆಯರನ್ನು ಪೂಜಿಸುತ್ತಾರೆ. ಹೀಗಾಗಿ ದೇಶದಲ್ಲಿ ಹಿಜಾಬ್ ಧರಿಸುವ ಅಗತ್ಯವಿಲ್ಲ. ತಾವು ಸುರಕ್ಷಿತರಲ್ಲ ಎಂದು ಭಾವಿಸುವವರು ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಮಧ್ಯಪ್ರದೇಶದ ಭೋಪಾಲ್‌ನ ದೇವಸ್ಥಾನವೊಂದರಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

“ಎಲ್ಲಿಯೂ ಹಿಜಾಬ್ ಧರಿಸುವ ಅಗತ್ಯವಿಲ್ಲ, ಅವರ ಮನೆಯಲ್ಲಿ ಸುರಕ್ಷಿತವಾಗಿಲ್ಲದ ಮಹಿಳೆಯರು ಹಿಜಾಬ್ ಧರಿಸುತ್ತಾರೆ, ನಿಮಗೆ ಮದರಸಾ ಇದೆ, ಅಲ್ಲಿ ನೀವು ಹಿಜಾಬ್ ಧರಿಸಿದರೆ ನಮಗೆ ಏನೂ ತೊಂದರೆಯಿಲ್ಲ. ಆದರೆ, ಸಾರ್ವಜನಿಕವಾಗಿ ಎಲ್ಲಿ ‘ಹಿಂದೂ ಸಮಾಜ’ ಇದೆಯೋ ಅಲ್ಲಿ ಹಿಜಾಬ್ ಅಗತ್ಯವಿಲ್ಲ. ಅದನ್ನು ನಾವು ಸಹಿಸುವುದಿಲ್ಲ” ಎಂದಿದ್ದಾರೆ.

“ಹಿಜಾಬ್ ಎಂದರೆ ಪರ್ದಾ. ಅದನ್ನು ನಿಮ್ಮನ್ನು ಕೆಟ್ಟ ಕಣ್ಣುಗಳಿಂದ ನೋಡುವವರ ವಿರುದ್ಧ ಬಳಸಬೇಕು. ಆದರೆ ಹಿಂದೂಗಳು ಮಹಿಳೆಯರನ್ನು ಪೂಜಿಸುವುದರಿಂದ ಅವರನ್ನು (ಮಹಿಳೆಯರನ್ನು) ಕೆಟ್ಟ ದೃಷ್ಟಿಯಿಂದ ನೋಡುವುದಿಲ್ಲ. ನೀವು ನಿಮ್ಮ ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಹೇಳಿದ್ದಾರೆ.

ಪತ್ರಕರ್ತೆ ರಾಣಾ ಆಯೂಬ್ ಸೇರಿದಂತೆ ಹಲವು ಮಂದಿ ಪ್ರಜ್ಞಾ ಠಾಕೂರ್‌ ಹೇಳಿಕೆಯನ್ನು ಖಂಡಿಸಿದ್ದಾರೆ.

“ಮಾಲೆಗಾಂವ್ ಸ್ಫೋಟದ ಆರೋಪಿ ಬಲಪಂಥೀಯ ಹಿಂದೂ ಭಯೋತ್ಪಾದಕಿ, ಎಟಿಎಸ್ ತನಿಖೆಯ ಪ್ರಕಾರ 10 ಕ್ಕೂ ಹೆಚ್ಚು ಮುಸ್ಲಿಮರನ್ನು ಹತ್ಯೆಗೈದ ಮಾಲೆಗಾಂವ್ ಸ್ಫೋಟದ ಸಂಚು ಮತ್ತು ಜವಾಬ್ದಾರಿಯನ್ನು ಹೊತ್ತಿರುವವರು ಈಗ ಮುಸ್ಲಿಂ ಹುಡುಗಿಯರಿಗೆ ಹಿಜಾಬ್ ಕುರಿತು ಉಪದೇಶ ನೀಡುತ್ತಾರೆ. ಇದು ನವ ಭಾರತ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಡಿಸೆಂಬರ್‌ನಲ್ಲಿ ಉಡುಪಿಯಲ್ಲಿ ಹಿಜಾಬ್ ಧರಿಸಿ ಬಂದಿದ್ದ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿನಿಯರು ಎರಡು ವಾರಕ್ಕೂ ಹೆಚ್ಚು ದಿನ ಪ್ರತಿಭಟನೆ ನಡೆಸುತ್ತಿದ್ದರು. ಬಳಿಕ ಇದು ಹಿಜಾಬ್- ಕೇಸರಿ ಶಾಲು ವಿವಾದವಾಗಿ ಕುಂದಾಪುರದ ಕಾಲೇಜಿಗೆ ಹಬ್ಬಿತು. ಅಲ್ಲಿಂದ ರಾಜ್ಯದ ಇತರ ಕಾಲೇಜುಗಳಿಗೆ ಹರಡಿ ದೊಡ್ಡ ವಿವಾದವಾಗಿದೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...