Homeಕರ್ನಾಟಕ’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ...

’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಠಾಕೂರ್

- Advertisement -
- Advertisement -

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿರುವ ವಿರುದ್ಧದ ಆಕ್ರೋಶದ ನಡುವೆ, ವಿವಾದಿತ ಬಿಜೆಪಿ ಸಂಸದೆ, ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕವಾಗಿ ಹಿಜಾಬ್ ಧರಿಸುವುದನ್ನು ಸಹಿಸಲಾಗದು ಎಂದಿರುವ ಅವರು ಮನೆಯಿಂದ ಹೊರ ಬರುವಾಗ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಯಾವಾಗಲೂ ವಿವಾದಿತ ಹೇಳಿಕೆಗಳಿಮದಲೇ ಸುದ್ದಿಯಾಗುವ ಪ್ರಜ್ಞಾ ಠಾಕೂರ್, “ಇದು ಹಿಂದೂಗಳ ದೇಶವಾಗಿದ್ದು, ಹಿಂದೂಗಳು ಮಹಿಳೆಯರನ್ನು ಪೂಜಿಸುತ್ತಾರೆ. ಹೀಗಾಗಿ ದೇಶದಲ್ಲಿ ಹಿಜಾಬ್ ಧರಿಸುವ ಅಗತ್ಯವಿಲ್ಲ. ತಾವು ಸುರಕ್ಷಿತರಲ್ಲ ಎಂದು ಭಾವಿಸುವವರು ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಮಧ್ಯಪ್ರದೇಶದ ಭೋಪಾಲ್‌ನ ದೇವಸ್ಥಾನವೊಂದರಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

“ಎಲ್ಲಿಯೂ ಹಿಜಾಬ್ ಧರಿಸುವ ಅಗತ್ಯವಿಲ್ಲ, ಅವರ ಮನೆಯಲ್ಲಿ ಸುರಕ್ಷಿತವಾಗಿಲ್ಲದ ಮಹಿಳೆಯರು ಹಿಜಾಬ್ ಧರಿಸುತ್ತಾರೆ, ನಿಮಗೆ ಮದರಸಾ ಇದೆ, ಅಲ್ಲಿ ನೀವು ಹಿಜಾಬ್ ಧರಿಸಿದರೆ ನಮಗೆ ಏನೂ ತೊಂದರೆಯಿಲ್ಲ. ಆದರೆ, ಸಾರ್ವಜನಿಕವಾಗಿ ಎಲ್ಲಿ ‘ಹಿಂದೂ ಸಮಾಜ’ ಇದೆಯೋ ಅಲ್ಲಿ ಹಿಜಾಬ್ ಅಗತ್ಯವಿಲ್ಲ. ಅದನ್ನು ನಾವು ಸಹಿಸುವುದಿಲ್ಲ” ಎಂದಿದ್ದಾರೆ.

“ಹಿಜಾಬ್ ಎಂದರೆ ಪರ್ದಾ. ಅದನ್ನು ನಿಮ್ಮನ್ನು ಕೆಟ್ಟ ಕಣ್ಣುಗಳಿಂದ ನೋಡುವವರ ವಿರುದ್ಧ ಬಳಸಬೇಕು. ಆದರೆ ಹಿಂದೂಗಳು ಮಹಿಳೆಯರನ್ನು ಪೂಜಿಸುವುದರಿಂದ ಅವರನ್ನು (ಮಹಿಳೆಯರನ್ನು) ಕೆಟ್ಟ ದೃಷ್ಟಿಯಿಂದ ನೋಡುವುದಿಲ್ಲ. ನೀವು ನಿಮ್ಮ ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಹೇಳಿದ್ದಾರೆ.

ಪತ್ರಕರ್ತೆ ರಾಣಾ ಆಯೂಬ್ ಸೇರಿದಂತೆ ಹಲವು ಮಂದಿ ಪ್ರಜ್ಞಾ ಠಾಕೂರ್‌ ಹೇಳಿಕೆಯನ್ನು ಖಂಡಿಸಿದ್ದಾರೆ.

“ಮಾಲೆಗಾಂವ್ ಸ್ಫೋಟದ ಆರೋಪಿ ಬಲಪಂಥೀಯ ಹಿಂದೂ ಭಯೋತ್ಪಾದಕಿ, ಎಟಿಎಸ್ ತನಿಖೆಯ ಪ್ರಕಾರ 10 ಕ್ಕೂ ಹೆಚ್ಚು ಮುಸ್ಲಿಮರನ್ನು ಹತ್ಯೆಗೈದ ಮಾಲೆಗಾಂವ್ ಸ್ಫೋಟದ ಸಂಚು ಮತ್ತು ಜವಾಬ್ದಾರಿಯನ್ನು ಹೊತ್ತಿರುವವರು ಈಗ ಮುಸ್ಲಿಂ ಹುಡುಗಿಯರಿಗೆ ಹಿಜಾಬ್ ಕುರಿತು ಉಪದೇಶ ನೀಡುತ್ತಾರೆ. ಇದು ನವ ಭಾರತ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಡಿಸೆಂಬರ್‌ನಲ್ಲಿ ಉಡುಪಿಯಲ್ಲಿ ಹಿಜಾಬ್ ಧರಿಸಿ ಬಂದಿದ್ದ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿನಿಯರು ಎರಡು ವಾರಕ್ಕೂ ಹೆಚ್ಚು ದಿನ ಪ್ರತಿಭಟನೆ ನಡೆಸುತ್ತಿದ್ದರು. ಬಳಿಕ ಇದು ಹಿಜಾಬ್- ಕೇಸರಿ ಶಾಲು ವಿವಾದವಾಗಿ ಕುಂದಾಪುರದ ಕಾಲೇಜಿಗೆ ಹಬ್ಬಿತು. ಅಲ್ಲಿಂದ ರಾಜ್ಯದ ಇತರ ಕಾಲೇಜುಗಳಿಗೆ ಹರಡಿ ದೊಡ್ಡ ವಿವಾದವಾಗಿದೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...