Homeಕರ್ನಾಟಕ’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ...

’ತಮ್ಮ ಮನೆಗಳಲ್ಲಿ ಯಾರು ಸುರಕ್ಷಿತರಿಲ್ಲವೋ ಅವರು ಹಿಜಾಬ್ ಧರಿಸುತ್ತಾರೆ’: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಠಾಕೂರ್

- Advertisement -
- Advertisement -

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅನುಮತಿ ನಿರಾಕರಿಸಿರುವ ವಿರುದ್ಧದ ಆಕ್ರೋಶದ ನಡುವೆ, ವಿವಾದಿತ ಬಿಜೆಪಿ ಸಂಸದೆ, ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕವಾಗಿ ಹಿಜಾಬ್ ಧರಿಸುವುದನ್ನು ಸಹಿಸಲಾಗದು ಎಂದಿರುವ ಅವರು ಮನೆಯಿಂದ ಹೊರ ಬರುವಾಗ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಮಾಲೆಗಾಂವ್ ಸ್ಫೋಟ ಭಯೋತ್ಪಾದನಾ ಪ್ರಕರಣದ ಪ್ರಮುಖ ಆರೋಪಿ ಪ್ರಜ್ಞಾ ಠಾಕೂರ್ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಯಾವಾಗಲೂ ವಿವಾದಿತ ಹೇಳಿಕೆಗಳಿಮದಲೇ ಸುದ್ದಿಯಾಗುವ ಪ್ರಜ್ಞಾ ಠಾಕೂರ್, “ಇದು ಹಿಂದೂಗಳ ದೇಶವಾಗಿದ್ದು, ಹಿಂದೂಗಳು ಮಹಿಳೆಯರನ್ನು ಪೂಜಿಸುತ್ತಾರೆ. ಹೀಗಾಗಿ ದೇಶದಲ್ಲಿ ಹಿಜಾಬ್ ಧರಿಸುವ ಅಗತ್ಯವಿಲ್ಲ. ತಾವು ಸುರಕ್ಷಿತರಲ್ಲ ಎಂದು ಭಾವಿಸುವವರು ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಮಧ್ಯಪ್ರದೇಶದ ಭೋಪಾಲ್‌ನ ದೇವಸ್ಥಾನವೊಂದರಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

“ಎಲ್ಲಿಯೂ ಹಿಜಾಬ್ ಧರಿಸುವ ಅಗತ್ಯವಿಲ್ಲ, ಅವರ ಮನೆಯಲ್ಲಿ ಸುರಕ್ಷಿತವಾಗಿಲ್ಲದ ಮಹಿಳೆಯರು ಹಿಜಾಬ್ ಧರಿಸುತ್ತಾರೆ, ನಿಮಗೆ ಮದರಸಾ ಇದೆ, ಅಲ್ಲಿ ನೀವು ಹಿಜಾಬ್ ಧರಿಸಿದರೆ ನಮಗೆ ಏನೂ ತೊಂದರೆಯಿಲ್ಲ. ಆದರೆ, ಸಾರ್ವಜನಿಕವಾಗಿ ಎಲ್ಲಿ ‘ಹಿಂದೂ ಸಮಾಜ’ ಇದೆಯೋ ಅಲ್ಲಿ ಹಿಜಾಬ್ ಅಗತ್ಯವಿಲ್ಲ. ಅದನ್ನು ನಾವು ಸಹಿಸುವುದಿಲ್ಲ” ಎಂದಿದ್ದಾರೆ.

“ಹಿಜಾಬ್ ಎಂದರೆ ಪರ್ದಾ. ಅದನ್ನು ನಿಮ್ಮನ್ನು ಕೆಟ್ಟ ಕಣ್ಣುಗಳಿಂದ ನೋಡುವವರ ವಿರುದ್ಧ ಬಳಸಬೇಕು. ಆದರೆ ಹಿಂದೂಗಳು ಮಹಿಳೆಯರನ್ನು ಪೂಜಿಸುವುದರಿಂದ ಅವರನ್ನು (ಮಹಿಳೆಯರನ್ನು) ಕೆಟ್ಟ ದೃಷ್ಟಿಯಿಂದ ನೋಡುವುದಿಲ್ಲ. ನೀವು ನಿಮ್ಮ ಮನೆಗಳಲ್ಲಿ ಹಿಜಾಬ್ ಧರಿಸಬೇಕು” ಎಂದು ಹೇಳಿದ್ದಾರೆ.

ಪತ್ರಕರ್ತೆ ರಾಣಾ ಆಯೂಬ್ ಸೇರಿದಂತೆ ಹಲವು ಮಂದಿ ಪ್ರಜ್ಞಾ ಠಾಕೂರ್‌ ಹೇಳಿಕೆಯನ್ನು ಖಂಡಿಸಿದ್ದಾರೆ.

“ಮಾಲೆಗಾಂವ್ ಸ್ಫೋಟದ ಆರೋಪಿ ಬಲಪಂಥೀಯ ಹಿಂದೂ ಭಯೋತ್ಪಾದಕಿ, ಎಟಿಎಸ್ ತನಿಖೆಯ ಪ್ರಕಾರ 10 ಕ್ಕೂ ಹೆಚ್ಚು ಮುಸ್ಲಿಮರನ್ನು ಹತ್ಯೆಗೈದ ಮಾಲೆಗಾಂವ್ ಸ್ಫೋಟದ ಸಂಚು ಮತ್ತು ಜವಾಬ್ದಾರಿಯನ್ನು ಹೊತ್ತಿರುವವರು ಈಗ ಮುಸ್ಲಿಂ ಹುಡುಗಿಯರಿಗೆ ಹಿಜಾಬ್ ಕುರಿತು ಉಪದೇಶ ನೀಡುತ್ತಾರೆ. ಇದು ನವ ಭಾರತ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಡಿಸೆಂಬರ್‌ನಲ್ಲಿ ಉಡುಪಿಯಲ್ಲಿ ಹಿಜಾಬ್ ಧರಿಸಿ ಬಂದಿದ್ದ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿನಿಯರು ಎರಡು ವಾರಕ್ಕೂ ಹೆಚ್ಚು ದಿನ ಪ್ರತಿಭಟನೆ ನಡೆಸುತ್ತಿದ್ದರು. ಬಳಿಕ ಇದು ಹಿಜಾಬ್- ಕೇಸರಿ ಶಾಲು ವಿವಾದವಾಗಿ ಕುಂದಾಪುರದ ಕಾಲೇಜಿಗೆ ಹಬ್ಬಿತು. ಅಲ್ಲಿಂದ ರಾಜ್ಯದ ಇತರ ಕಾಲೇಜುಗಳಿಗೆ ಹರಡಿ ದೊಡ್ಡ ವಿವಾದವಾಗಿದೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...