Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

- Advertisement -
- Advertisement -

ರಾಜ್ಯದ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಧರಿಸುವ ಹಿಜಾಬ್‌ ಕುರಿತ ಈ ವಿರೋಧ ಅನಾವಶ್ಯಕವಾಗಿದೆ. ಶಾಂತಿ ಮತ್ತು ಸೌಹಾರ್ದತೆಯ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಕಾರವಾರದ ರಾಮಕೃಷ್ಣ ಆಶ್ರಮ ತಿಳಿಸಿದ್ದು. ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕಾಲತ್ತು ವಹಿಸಿ ಟೀಕೆಗಳನ್ನು ಎದುರಿಸುತ್ತಿರುವ ವಕೀಲರನ್ನು ಸಮರ್ಥಿಸಿಕೊಂಡಿದೆ.

ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯರನ್ನು ಸಮರ್ಥಿಸಲು ಇಸ್ಲಾಮಿಕ್ ಧರ್ಮಗ್ರಂಥಗಳನ್ನು ಉಲ್ಲೇಖಿಸಿ ಬಲಪಂಥೀಯ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿರುವ ಹಿರಿಯ ವಕೀಲ ದೇವದತ್ತ ಕಾಮತ್ ಅವರು ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ ಎಂದು ರಾಮಕೃಷ್ಣ ಆಶ್ರಮದ ಪ್ರಧಾನ ಸ್ವಾಮೀಜಿ ತಿಳಿಸಿದ್ದಾರೆ.

“ಶಾಲೆ ಅಥವಾ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಡ್ರೆಸ್ ಕೋಡ್ ಬಗ್ಗೆ ಅನಗತ್ಯ ಚರ್ಚೆ ನಡೆಯುತ್ತಿದೆ. ಸಮಾಜದ ವಿವಿಧ ಹಂತಗಳಲ್ಲಿ ಈ ವಿಷಯ ತೀವ್ರ ವಿವಾದ ಕಾರಣವಾಗುತ್ತಿರುವುದು ನನಗೆ ನೋವಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಹಿತಾಸಕ್ತಿಯಿಂದ ಇದು ಖಂಡಿತವಾಗಿಯೂ ಒಳ್ಳೆಯದಲ್ಲ” ಸ್ವಾಮಿ ಭಾವೇಶಾನಂದ ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

”ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ದೇವದತ್ತ ಕಾಮತ್ ಅವರ ಹೆಸರನ್ನು ಈ ವಿವಾದದಲ್ಲಿ ಎಳೆಯಲಾಗುತ್ತಿದೆ. ಇದರಿಂದ ನನಗೆ ಹೆಚ್ಚು ನೋವಾಗಿದೆ. ಅವರು ನ್ಯಾಯಾಲಯದಲ್ಲಿ ವಕೀಲರಾಗಿ ಒಂದು ಪಕ್ಷವನ್ನು ಪ್ರತಿನಿಧಿಸಿದ್ದಾರೆ. ಕೆಲವು ಅಂಶಗಳು ಅವರನ್ನು ಹಿಂದೂ ಧರ್ಮದ ವಿರೋಧಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸುತ್ತಿವೆ. ಈ ಗ್ರಹಿಕೆಯು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರರಹಿತವಾಗಿದೆ” ಎಂದಿದ್ದಾರೆ.

“ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಪ್ರತಿನಿಧಿಸುವ ವಕೀಲರು ತಮ್ಮ ಕಕ್ಷಿದಾರರ ಕಾರಣಕ್ಕೆ ತಮ್ಮ ಕರ್ತವ್ಯ ಮತ್ತು ನ್ಯಾಯವನ್ನು ಕೊಡಿಸುವ ಕೆಲಸ ಮಾಡಬೇಕು. ಅದು ವೃತ್ತಿಪರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಇದನ್ನು ಹಿಂದೂ ಧರ್ಮದ ವಿರುದ್ಧ ಎಂದು ಬ್ರ್ಯಾಂಡ್ ಮಾಡಬಾರದು” ಎಂದು ಸ್ವಾಮಿ ಭಾವೇಶಾನಂದ ತಿಳಿಸಿದ್ದಾರೆ.

ವಕೀಲ ದೇವದತ್ತ ಕಾಮತ್ ಮೇಲಿನ ದಾಳಿ “ನ್ಯಾಯಸಮ್ಮತವಲ್ಲದ ಮತ್ತು ಆಧಾರರಹಿತ ಪ್ರಚಾರ” ಎಂದಿರುವ ಅವರು, ವಕೀಲರು ಶ್ರೀ ರಾಮಕೃಷ್ಣ ವಿವೇಕಾನಂದರ ನಿಷ್ಠಾವಂತ ಅನುಯಾಯಿ ಎಂದಿದ್ದಾರೆ.

ರಾಜ್ಯದ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ಹೇಳಿರುವ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ದೆವದತ್ತ ಕಾಮತ್, ಧಾರ್ಮಿಕ ಶಿರಸ್ತ್ರಾಣಗಳು ಅವರ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ. ನಿಕಟ ಕುಟುಂಬ ಸದಸ್ಯರನ್ನು ಹೊರತುಪಡಿಸಿ ಬೇರೆಯವರ ಮುಂದೆ ತಲೆಯನ್ನು ಮುಚ್ಚಿಕೊಳ್ಳುವುದು ಮಹಿಳೆಯರಿಗೆ ಕರ್ತವ್ಯವಾಗಿದೆ ಎಂದು ಹೇಳುವ ಕುರಾನ್‌ನ ಸಾಲುಗಳನ್ನು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.


ಇದನ್ನೂ ಓದಿ: ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...