Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

- Advertisement -
- Advertisement -

ರಾಜ್ಯದ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಧರಿಸುವ ಹಿಜಾಬ್‌ ಕುರಿತ ಈ ವಿರೋಧ ಅನಾವಶ್ಯಕವಾಗಿದೆ. ಶಾಂತಿ ಮತ್ತು ಸೌಹಾರ್ದತೆಯ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಕಾರವಾರದ ರಾಮಕೃಷ್ಣ ಆಶ್ರಮ ತಿಳಿಸಿದ್ದು. ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕಾಲತ್ತು ವಹಿಸಿ ಟೀಕೆಗಳನ್ನು ಎದುರಿಸುತ್ತಿರುವ ವಕೀಲರನ್ನು ಸಮರ್ಥಿಸಿಕೊಂಡಿದೆ.

ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯರನ್ನು ಸಮರ್ಥಿಸಲು ಇಸ್ಲಾಮಿಕ್ ಧರ್ಮಗ್ರಂಥಗಳನ್ನು ಉಲ್ಲೇಖಿಸಿ ಬಲಪಂಥೀಯ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿರುವ ಹಿರಿಯ ವಕೀಲ ದೇವದತ್ತ ಕಾಮತ್ ಅವರು ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ ಎಂದು ರಾಮಕೃಷ್ಣ ಆಶ್ರಮದ ಪ್ರಧಾನ ಸ್ವಾಮೀಜಿ ತಿಳಿಸಿದ್ದಾರೆ.

“ಶಾಲೆ ಅಥವಾ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಡ್ರೆಸ್ ಕೋಡ್ ಬಗ್ಗೆ ಅನಗತ್ಯ ಚರ್ಚೆ ನಡೆಯುತ್ತಿದೆ. ಸಮಾಜದ ವಿವಿಧ ಹಂತಗಳಲ್ಲಿ ಈ ವಿಷಯ ತೀವ್ರ ವಿವಾದ ಕಾರಣವಾಗುತ್ತಿರುವುದು ನನಗೆ ನೋವಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಹಿತಾಸಕ್ತಿಯಿಂದ ಇದು ಖಂಡಿತವಾಗಿಯೂ ಒಳ್ಳೆಯದಲ್ಲ” ಸ್ವಾಮಿ ಭಾವೇಶಾನಂದ ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

”ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ದೇವದತ್ತ ಕಾಮತ್ ಅವರ ಹೆಸರನ್ನು ಈ ವಿವಾದದಲ್ಲಿ ಎಳೆಯಲಾಗುತ್ತಿದೆ. ಇದರಿಂದ ನನಗೆ ಹೆಚ್ಚು ನೋವಾಗಿದೆ. ಅವರು ನ್ಯಾಯಾಲಯದಲ್ಲಿ ವಕೀಲರಾಗಿ ಒಂದು ಪಕ್ಷವನ್ನು ಪ್ರತಿನಿಧಿಸಿದ್ದಾರೆ. ಕೆಲವು ಅಂಶಗಳು ಅವರನ್ನು ಹಿಂದೂ ಧರ್ಮದ ವಿರೋಧಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸುತ್ತಿವೆ. ಈ ಗ್ರಹಿಕೆಯು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರರಹಿತವಾಗಿದೆ” ಎಂದಿದ್ದಾರೆ.

“ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಪ್ರತಿನಿಧಿಸುವ ವಕೀಲರು ತಮ್ಮ ಕಕ್ಷಿದಾರರ ಕಾರಣಕ್ಕೆ ತಮ್ಮ ಕರ್ತವ್ಯ ಮತ್ತು ನ್ಯಾಯವನ್ನು ಕೊಡಿಸುವ ಕೆಲಸ ಮಾಡಬೇಕು. ಅದು ವೃತ್ತಿಪರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಇದನ್ನು ಹಿಂದೂ ಧರ್ಮದ ವಿರುದ್ಧ ಎಂದು ಬ್ರ್ಯಾಂಡ್ ಮಾಡಬಾರದು” ಎಂದು ಸ್ವಾಮಿ ಭಾವೇಶಾನಂದ ತಿಳಿಸಿದ್ದಾರೆ.

ವಕೀಲ ದೇವದತ್ತ ಕಾಮತ್ ಮೇಲಿನ ದಾಳಿ “ನ್ಯಾಯಸಮ್ಮತವಲ್ಲದ ಮತ್ತು ಆಧಾರರಹಿತ ಪ್ರಚಾರ” ಎಂದಿರುವ ಅವರು, ವಕೀಲರು ಶ್ರೀ ರಾಮಕೃಷ್ಣ ವಿವೇಕಾನಂದರ ನಿಷ್ಠಾವಂತ ಅನುಯಾಯಿ ಎಂದಿದ್ದಾರೆ.

ರಾಜ್ಯದ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ಹೇಳಿರುವ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ದೆವದತ್ತ ಕಾಮತ್, ಧಾರ್ಮಿಕ ಶಿರಸ್ತ್ರಾಣಗಳು ಅವರ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ. ನಿಕಟ ಕುಟುಂಬ ಸದಸ್ಯರನ್ನು ಹೊರತುಪಡಿಸಿ ಬೇರೆಯವರ ಮುಂದೆ ತಲೆಯನ್ನು ಮುಚ್ಚಿಕೊಳ್ಳುವುದು ಮಹಿಳೆಯರಿಗೆ ಕರ್ತವ್ಯವಾಗಿದೆ ಎಂದು ಹೇಳುವ ಕುರಾನ್‌ನ ಸಾಲುಗಳನ್ನು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.


ಇದನ್ನೂ ಓದಿ: ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...