Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

- Advertisement -
- Advertisement -

ರಾಜ್ಯದ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಧರಿಸುವ ಹಿಜಾಬ್‌ ಕುರಿತ ಈ ವಿರೋಧ ಅನಾವಶ್ಯಕವಾಗಿದೆ. ಶಾಂತಿ ಮತ್ತು ಸೌಹಾರ್ದತೆಯ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಕಾರವಾರದ ರಾಮಕೃಷ್ಣ ಆಶ್ರಮ ತಿಳಿಸಿದ್ದು. ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕಾಲತ್ತು ವಹಿಸಿ ಟೀಕೆಗಳನ್ನು ಎದುರಿಸುತ್ತಿರುವ ವಕೀಲರನ್ನು ಸಮರ್ಥಿಸಿಕೊಂಡಿದೆ.

ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯರನ್ನು ಸಮರ್ಥಿಸಲು ಇಸ್ಲಾಮಿಕ್ ಧರ್ಮಗ್ರಂಥಗಳನ್ನು ಉಲ್ಲೇಖಿಸಿ ಬಲಪಂಥೀಯ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿರುವ ಹಿರಿಯ ವಕೀಲ ದೇವದತ್ತ ಕಾಮತ್ ಅವರು ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ ಎಂದು ರಾಮಕೃಷ್ಣ ಆಶ್ರಮದ ಪ್ರಧಾನ ಸ್ವಾಮೀಜಿ ತಿಳಿಸಿದ್ದಾರೆ.

“ಶಾಲೆ ಅಥವಾ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಡ್ರೆಸ್ ಕೋಡ್ ಬಗ್ಗೆ ಅನಗತ್ಯ ಚರ್ಚೆ ನಡೆಯುತ್ತಿದೆ. ಸಮಾಜದ ವಿವಿಧ ಹಂತಗಳಲ್ಲಿ ಈ ವಿಷಯ ತೀವ್ರ ವಿವಾದ ಕಾರಣವಾಗುತ್ತಿರುವುದು ನನಗೆ ನೋವಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಹಿತಾಸಕ್ತಿಯಿಂದ ಇದು ಖಂಡಿತವಾಗಿಯೂ ಒಳ್ಳೆಯದಲ್ಲ” ಸ್ವಾಮಿ ಭಾವೇಶಾನಂದ ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

”ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ದೇವದತ್ತ ಕಾಮತ್ ಅವರ ಹೆಸರನ್ನು ಈ ವಿವಾದದಲ್ಲಿ ಎಳೆಯಲಾಗುತ್ತಿದೆ. ಇದರಿಂದ ನನಗೆ ಹೆಚ್ಚು ನೋವಾಗಿದೆ. ಅವರು ನ್ಯಾಯಾಲಯದಲ್ಲಿ ವಕೀಲರಾಗಿ ಒಂದು ಪಕ್ಷವನ್ನು ಪ್ರತಿನಿಧಿಸಿದ್ದಾರೆ. ಕೆಲವು ಅಂಶಗಳು ಅವರನ್ನು ಹಿಂದೂ ಧರ್ಮದ ವಿರೋಧಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸುತ್ತಿವೆ. ಈ ಗ್ರಹಿಕೆಯು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರರಹಿತವಾಗಿದೆ” ಎಂದಿದ್ದಾರೆ.

“ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಪ್ರತಿನಿಧಿಸುವ ವಕೀಲರು ತಮ್ಮ ಕಕ್ಷಿದಾರರ ಕಾರಣಕ್ಕೆ ತಮ್ಮ ಕರ್ತವ್ಯ ಮತ್ತು ನ್ಯಾಯವನ್ನು ಕೊಡಿಸುವ ಕೆಲಸ ಮಾಡಬೇಕು. ಅದು ವೃತ್ತಿಪರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಇದನ್ನು ಹಿಂದೂ ಧರ್ಮದ ವಿರುದ್ಧ ಎಂದು ಬ್ರ್ಯಾಂಡ್ ಮಾಡಬಾರದು” ಎಂದು ಸ್ವಾಮಿ ಭಾವೇಶಾನಂದ ತಿಳಿಸಿದ್ದಾರೆ.

ವಕೀಲ ದೇವದತ್ತ ಕಾಮತ್ ಮೇಲಿನ ದಾಳಿ “ನ್ಯಾಯಸಮ್ಮತವಲ್ಲದ ಮತ್ತು ಆಧಾರರಹಿತ ಪ್ರಚಾರ” ಎಂದಿರುವ ಅವರು, ವಕೀಲರು ಶ್ರೀ ರಾಮಕೃಷ್ಣ ವಿವೇಕಾನಂದರ ನಿಷ್ಠಾವಂತ ಅನುಯಾಯಿ ಎಂದಿದ್ದಾರೆ.

ರಾಜ್ಯದ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ಹೇಳಿರುವ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ದೆವದತ್ತ ಕಾಮತ್, ಧಾರ್ಮಿಕ ಶಿರಸ್ತ್ರಾಣಗಳು ಅವರ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ. ನಿಕಟ ಕುಟುಂಬ ಸದಸ್ಯರನ್ನು ಹೊರತುಪಡಿಸಿ ಬೇರೆಯವರ ಮುಂದೆ ತಲೆಯನ್ನು ಮುಚ್ಚಿಕೊಳ್ಳುವುದು ಮಹಿಳೆಯರಿಗೆ ಕರ್ತವ್ಯವಾಗಿದೆ ಎಂದು ಹೇಳುವ ಕುರಾನ್‌ನ ಸಾಲುಗಳನ್ನು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.


ಇದನ್ನೂ ಓದಿ: ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...