Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

- Advertisement -
- Advertisement -

ರಾಜ್ಯದ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಧರಿಸುವ ಹಿಜಾಬ್‌ ಕುರಿತ ಈ ವಿರೋಧ ಅನಾವಶ್ಯಕವಾಗಿದೆ. ಶಾಂತಿ ಮತ್ತು ಸೌಹಾರ್ದತೆಯ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಕಾರವಾರದ ರಾಮಕೃಷ್ಣ ಆಶ್ರಮ ತಿಳಿಸಿದ್ದು. ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕಾಲತ್ತು ವಹಿಸಿ ಟೀಕೆಗಳನ್ನು ಎದುರಿಸುತ್ತಿರುವ ವಕೀಲರನ್ನು ಸಮರ್ಥಿಸಿಕೊಂಡಿದೆ.

ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯರನ್ನು ಸಮರ್ಥಿಸಲು ಇಸ್ಲಾಮಿಕ್ ಧರ್ಮಗ್ರಂಥಗಳನ್ನು ಉಲ್ಲೇಖಿಸಿ ಬಲಪಂಥೀಯ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿರುವ ಹಿರಿಯ ವಕೀಲ ದೇವದತ್ತ ಕಾಮತ್ ಅವರು ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ ಎಂದು ರಾಮಕೃಷ್ಣ ಆಶ್ರಮದ ಪ್ರಧಾನ ಸ್ವಾಮೀಜಿ ತಿಳಿಸಿದ್ದಾರೆ.

“ಶಾಲೆ ಅಥವಾ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಡ್ರೆಸ್ ಕೋಡ್ ಬಗ್ಗೆ ಅನಗತ್ಯ ಚರ್ಚೆ ನಡೆಯುತ್ತಿದೆ. ಸಮಾಜದ ವಿವಿಧ ಹಂತಗಳಲ್ಲಿ ಈ ವಿಷಯ ತೀವ್ರ ವಿವಾದ ಕಾರಣವಾಗುತ್ತಿರುವುದು ನನಗೆ ನೋವಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಹಿತಾಸಕ್ತಿಯಿಂದ ಇದು ಖಂಡಿತವಾಗಿಯೂ ಒಳ್ಳೆಯದಲ್ಲ” ಸ್ವಾಮಿ ಭಾವೇಶಾನಂದ ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

”ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ದೇವದತ್ತ ಕಾಮತ್ ಅವರ ಹೆಸರನ್ನು ಈ ವಿವಾದದಲ್ಲಿ ಎಳೆಯಲಾಗುತ್ತಿದೆ. ಇದರಿಂದ ನನಗೆ ಹೆಚ್ಚು ನೋವಾಗಿದೆ. ಅವರು ನ್ಯಾಯಾಲಯದಲ್ಲಿ ವಕೀಲರಾಗಿ ಒಂದು ಪಕ್ಷವನ್ನು ಪ್ರತಿನಿಧಿಸಿದ್ದಾರೆ. ಕೆಲವು ಅಂಶಗಳು ಅವರನ್ನು ಹಿಂದೂ ಧರ್ಮದ ವಿರೋಧಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸುತ್ತಿವೆ. ಈ ಗ್ರಹಿಕೆಯು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರರಹಿತವಾಗಿದೆ” ಎಂದಿದ್ದಾರೆ.

“ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಪ್ರತಿನಿಧಿಸುವ ವಕೀಲರು ತಮ್ಮ ಕಕ್ಷಿದಾರರ ಕಾರಣಕ್ಕೆ ತಮ್ಮ ಕರ್ತವ್ಯ ಮತ್ತು ನ್ಯಾಯವನ್ನು ಕೊಡಿಸುವ ಕೆಲಸ ಮಾಡಬೇಕು. ಅದು ವೃತ್ತಿಪರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಇದನ್ನು ಹಿಂದೂ ಧರ್ಮದ ವಿರುದ್ಧ ಎಂದು ಬ್ರ್ಯಾಂಡ್ ಮಾಡಬಾರದು” ಎಂದು ಸ್ವಾಮಿ ಭಾವೇಶಾನಂದ ತಿಳಿಸಿದ್ದಾರೆ.

ವಕೀಲ ದೇವದತ್ತ ಕಾಮತ್ ಮೇಲಿನ ದಾಳಿ “ನ್ಯಾಯಸಮ್ಮತವಲ್ಲದ ಮತ್ತು ಆಧಾರರಹಿತ ಪ್ರಚಾರ” ಎಂದಿರುವ ಅವರು, ವಕೀಲರು ಶ್ರೀ ರಾಮಕೃಷ್ಣ ವಿವೇಕಾನಂದರ ನಿಷ್ಠಾವಂತ ಅನುಯಾಯಿ ಎಂದಿದ್ದಾರೆ.

ರಾಜ್ಯದ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ಹೇಳಿರುವ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ದೆವದತ್ತ ಕಾಮತ್, ಧಾರ್ಮಿಕ ಶಿರಸ್ತ್ರಾಣಗಳು ಅವರ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ. ನಿಕಟ ಕುಟುಂಬ ಸದಸ್ಯರನ್ನು ಹೊರತುಪಡಿಸಿ ಬೇರೆಯವರ ಮುಂದೆ ತಲೆಯನ್ನು ಮುಚ್ಚಿಕೊಳ್ಳುವುದು ಮಹಿಳೆಯರಿಗೆ ಕರ್ತವ್ಯವಾಗಿದೆ ಎಂದು ಹೇಳುವ ಕುರಾನ್‌ನ ಸಾಲುಗಳನ್ನು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.


ಇದನ್ನೂ ಓದಿ: ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...