Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

- Advertisement -
- Advertisement -

ರಾಜ್ಯದ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಧರಿಸುವ ಹಿಜಾಬ್‌ ಕುರಿತ ಈ ವಿರೋಧ ಅನಾವಶ್ಯಕವಾಗಿದೆ. ಶಾಂತಿ ಮತ್ತು ಸೌಹಾರ್ದತೆಯ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಕಾರವಾರದ ರಾಮಕೃಷ್ಣ ಆಶ್ರಮ ತಿಳಿಸಿದ್ದು. ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕಾಲತ್ತು ವಹಿಸಿ ಟೀಕೆಗಳನ್ನು ಎದುರಿಸುತ್ತಿರುವ ವಕೀಲರನ್ನು ಸಮರ್ಥಿಸಿಕೊಂಡಿದೆ.

ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯರನ್ನು ಸಮರ್ಥಿಸಲು ಇಸ್ಲಾಮಿಕ್ ಧರ್ಮಗ್ರಂಥಗಳನ್ನು ಉಲ್ಲೇಖಿಸಿ ಬಲಪಂಥೀಯ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿರುವ ಹಿರಿಯ ವಕೀಲ ದೇವದತ್ತ ಕಾಮತ್ ಅವರು ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ ಎಂದು ರಾಮಕೃಷ್ಣ ಆಶ್ರಮದ ಪ್ರಧಾನ ಸ್ವಾಮೀಜಿ ತಿಳಿಸಿದ್ದಾರೆ.

“ಶಾಲೆ ಅಥವಾ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಡ್ರೆಸ್ ಕೋಡ್ ಬಗ್ಗೆ ಅನಗತ್ಯ ಚರ್ಚೆ ನಡೆಯುತ್ತಿದೆ. ಸಮಾಜದ ವಿವಿಧ ಹಂತಗಳಲ್ಲಿ ಈ ವಿಷಯ ತೀವ್ರ ವಿವಾದ ಕಾರಣವಾಗುತ್ತಿರುವುದು ನನಗೆ ನೋವಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಹಿತಾಸಕ್ತಿಯಿಂದ ಇದು ಖಂಡಿತವಾಗಿಯೂ ಒಳ್ಳೆಯದಲ್ಲ” ಸ್ವಾಮಿ ಭಾವೇಶಾನಂದ ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

”ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ದೇವದತ್ತ ಕಾಮತ್ ಅವರ ಹೆಸರನ್ನು ಈ ವಿವಾದದಲ್ಲಿ ಎಳೆಯಲಾಗುತ್ತಿದೆ. ಇದರಿಂದ ನನಗೆ ಹೆಚ್ಚು ನೋವಾಗಿದೆ. ಅವರು ನ್ಯಾಯಾಲಯದಲ್ಲಿ ವಕೀಲರಾಗಿ ಒಂದು ಪಕ್ಷವನ್ನು ಪ್ರತಿನಿಧಿಸಿದ್ದಾರೆ. ಕೆಲವು ಅಂಶಗಳು ಅವರನ್ನು ಹಿಂದೂ ಧರ್ಮದ ವಿರೋಧಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸುತ್ತಿವೆ. ಈ ಗ್ರಹಿಕೆಯು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರರಹಿತವಾಗಿದೆ” ಎಂದಿದ್ದಾರೆ.

“ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಪ್ರತಿನಿಧಿಸುವ ವಕೀಲರು ತಮ್ಮ ಕಕ್ಷಿದಾರರ ಕಾರಣಕ್ಕೆ ತಮ್ಮ ಕರ್ತವ್ಯ ಮತ್ತು ನ್ಯಾಯವನ್ನು ಕೊಡಿಸುವ ಕೆಲಸ ಮಾಡಬೇಕು. ಅದು ವೃತ್ತಿಪರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಇದನ್ನು ಹಿಂದೂ ಧರ್ಮದ ವಿರುದ್ಧ ಎಂದು ಬ್ರ್ಯಾಂಡ್ ಮಾಡಬಾರದು” ಎಂದು ಸ್ವಾಮಿ ಭಾವೇಶಾನಂದ ತಿಳಿಸಿದ್ದಾರೆ.

ವಕೀಲ ದೇವದತ್ತ ಕಾಮತ್ ಮೇಲಿನ ದಾಳಿ “ನ್ಯಾಯಸಮ್ಮತವಲ್ಲದ ಮತ್ತು ಆಧಾರರಹಿತ ಪ್ರಚಾರ” ಎಂದಿರುವ ಅವರು, ವಕೀಲರು ಶ್ರೀ ರಾಮಕೃಷ್ಣ ವಿವೇಕಾನಂದರ ನಿಷ್ಠಾವಂತ ಅನುಯಾಯಿ ಎಂದಿದ್ದಾರೆ.

ರಾಜ್ಯದ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ಹೇಳಿರುವ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ದೆವದತ್ತ ಕಾಮತ್, ಧಾರ್ಮಿಕ ಶಿರಸ್ತ್ರಾಣಗಳು ಅವರ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ. ನಿಕಟ ಕುಟುಂಬ ಸದಸ್ಯರನ್ನು ಹೊರತುಪಡಿಸಿ ಬೇರೆಯವರ ಮುಂದೆ ತಲೆಯನ್ನು ಮುಚ್ಚಿಕೊಳ್ಳುವುದು ಮಹಿಳೆಯರಿಗೆ ಕರ್ತವ್ಯವಾಗಿದೆ ಎಂದು ಹೇಳುವ ಕುರಾನ್‌ನ ಸಾಲುಗಳನ್ನು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.


ಇದನ್ನೂ ಓದಿ: ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...