Homeಕರ್ನಾಟಕಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

- Advertisement -
- Advertisement -

ಇಂದಿನಿಂದ ರಾಜ್ಯದಲ್ಲಿ ಪ್ರೌಢಶಾಲೆಗಳು ಆರಂಭವಾಗಿದ್ದು, ಶಿವಮೊಗ್ಗದ ಶಾಲೆಯೊಂದರಲ್ಲಿ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡದ ಹಿನ್ನೆಲೆ ಪರೀಕ್ಷೆ ಬರೆಯದೆ 13 ವಿದ್ಯಾರ್ಥಿನಿಯರು ವಾಪಸ್ ತೆರಳಿರುವ ಘಟನೆ ನಡೆದಿದೆ.

ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲೆಯ 13 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಪೂರ್ವಸಿದ್ಧತಾ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ತಿಳಿಸಿದ್ದಾರೆ. ಇದಕ್ಕೆ ಒಪ್ಪದ ಶಾಲೆಯವರು ಹಿಜಾಬ್ ತೆಗೆಯುವಂತೆ ತಿಳಿಸಿದ್ದಾರೆ. ಹಿಜಾಬ್ ತೆಗೆಯಲು ನಿರಾಕರಿಸಿದ 13 ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ.

ಕರ್ನಾಟಕ ಹೈಕೋರ್ಟಿನ ಮಧ್ಯಂತರ ಆದೇಶದಂತೆ ಸೋಮವಾರ ರಾಜ್ಯದ ಬಹುಪಾಲು ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸದೆ ತರಗತಿಗಳಿಗೆ ಹಾಜರಾಗಿದ್ದಾರೆ ಎಂದು ಶಿಕ್ಷಕರು ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಅದು ವಿಫಲವಾಗಿದೆ.

 ಇದನ್ನೂ ಓದಿ: ’ಮಹಿಳೆಯರು ಹಿಜಾಬ್ ಧರಿಸದಿರುವುದು ಅತ್ಯಾಚಾರ ಹೆಚ್ಚಾಗಲು ಕಾರಣ’: ಶಾಸಕ ಜಮೀರ್‌ ಅಹ್ಮದ್

ಹಿಜಾಬ್ ಧರಿಸದೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವಂತೆ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ತಿಳಿಸಿತ್ತು. ಆದರೆ, ವಿದ್ಯಾರ್ಥಿಗಳು ಈ ಪ್ರಸ್ತಾಪವನ್ನು ತಿರಸ್ಕರಿಸಿ ಪರೀಕ್ಷೆಯನ್ನು ಬಹಿಷ್ಕರಿಸಲು ನಿರ್ಧರಿಸಿ ವಾಪಸ್ ಹೊರಟಿದ್ದಾರೆ. ವಿದ್ಯಾರ್ಥಿನಿಯರ ಪೋಷಕರು ಕೂಡ ತಮ್ಮ ಮಕ್ಕಳನ್ನು ಬೆಂಬಲಿಸಿ ಹಿಜಾಬ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳಿ ಮನೆಗೆ ಕರೆದೊಯ್ದರು.

“ನ್ಯಾಯಾಲಯವು ಇನ್ನೂ ಆದೇಶ ನೀಡಿಲ್ಲ, ಏನೇ ಇರಲಿ ನಾವು ಹಿಜಾಬ್ ಅನ್ನು ತೆಗೆಯುವುದಿಲ್ಲ, ಹಿಜಾಬ್ ಕಡ್ಡಾಯಗೊಳಿಸದಿದ್ದರೆ ನಾವು ಶಾಲೆಗೆ ಬರುವುದಿಲ್ಲ. ಹಿಜಾಬ್ ತೆಗೆಯುವಂತೆ ಕೇಳಿದರೆ ಮನೆಗೆ ಹಿಂತಿರುಗುವಂತೆ ನನ್ನ ಪೋಷಕರು ನನ್ನನ್ನು ಹೇಳಿದ್ದಾರೆ” ಎಂದು ಪರೀಕ್ಷೆಯನ್ನು ಬಹಿಷ್ಕರಿಸಿದ ವಿದ್ಯಾರ್ಥಿನಿ ಅಲಿಯಾ ಮೆಹತ್ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಮುಂದುವರೆಯುತ್ತಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠದ ಮುಂದೆ ವಿದ್ಯಾರ್ಥಿಗಳನ್ನು ಪ್ರತಿನಿಧಿಸಿ ಹಿರಿಯ ವಕೀಲ ವಾದ ಮಂಡಿಸುತ್ತಿದ್ದಾರೆ.


ಇದನ್ನೂ ಓದಿ: ಮಂಡ್ಯದಲ್ಲಿ ಹಿಜಾಬ್ ಧರಿಸಿದ ಶಿಕ್ಷಕಿಯರಿಗೂ ಇಲ್ಲ ಪ್ರವೇಶ: ಗೇಟ್‌ ಬಳಿಯೇ ಹಿಜಾಬ್, ಬುರ್ಕಾ ತೆಗೆದ ಶಿಕ್ಷಕಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...