Homeಕರ್ನಾಟಕಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

- Advertisement -
- Advertisement -

ಇಂದಿನಿಂದ ರಾಜ್ಯದಲ್ಲಿ ಪ್ರೌಢಶಾಲೆಗಳು ಆರಂಭವಾಗಿದ್ದು, ಶಿವಮೊಗ್ಗದ ಶಾಲೆಯೊಂದರಲ್ಲಿ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡದ ಹಿನ್ನೆಲೆ ಪರೀಕ್ಷೆ ಬರೆಯದೆ 13 ವಿದ್ಯಾರ್ಥಿನಿಯರು ವಾಪಸ್ ತೆರಳಿರುವ ಘಟನೆ ನಡೆದಿದೆ.

ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲೆಯ 13 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಪೂರ್ವಸಿದ್ಧತಾ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ತಿಳಿಸಿದ್ದಾರೆ. ಇದಕ್ಕೆ ಒಪ್ಪದ ಶಾಲೆಯವರು ಹಿಜಾಬ್ ತೆಗೆಯುವಂತೆ ತಿಳಿಸಿದ್ದಾರೆ. ಹಿಜಾಬ್ ತೆಗೆಯಲು ನಿರಾಕರಿಸಿದ 13 ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ.

ಕರ್ನಾಟಕ ಹೈಕೋರ್ಟಿನ ಮಧ್ಯಂತರ ಆದೇಶದಂತೆ ಸೋಮವಾರ ರಾಜ್ಯದ ಬಹುಪಾಲು ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸದೆ ತರಗತಿಗಳಿಗೆ ಹಾಜರಾಗಿದ್ದಾರೆ ಎಂದು ಶಿಕ್ಷಕರು ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಅದು ವಿಫಲವಾಗಿದೆ.

 ಇದನ್ನೂ ಓದಿ: ’ಮಹಿಳೆಯರು ಹಿಜಾಬ್ ಧರಿಸದಿರುವುದು ಅತ್ಯಾಚಾರ ಹೆಚ್ಚಾಗಲು ಕಾರಣ’: ಶಾಸಕ ಜಮೀರ್‌ ಅಹ್ಮದ್

ಹಿಜಾಬ್ ಧರಿಸದೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವಂತೆ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ತಿಳಿಸಿತ್ತು. ಆದರೆ, ವಿದ್ಯಾರ್ಥಿಗಳು ಈ ಪ್ರಸ್ತಾಪವನ್ನು ತಿರಸ್ಕರಿಸಿ ಪರೀಕ್ಷೆಯನ್ನು ಬಹಿಷ್ಕರಿಸಲು ನಿರ್ಧರಿಸಿ ವಾಪಸ್ ಹೊರಟಿದ್ದಾರೆ. ವಿದ್ಯಾರ್ಥಿನಿಯರ ಪೋಷಕರು ಕೂಡ ತಮ್ಮ ಮಕ್ಕಳನ್ನು ಬೆಂಬಲಿಸಿ ಹಿಜಾಬ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳಿ ಮನೆಗೆ ಕರೆದೊಯ್ದರು.

“ನ್ಯಾಯಾಲಯವು ಇನ್ನೂ ಆದೇಶ ನೀಡಿಲ್ಲ, ಏನೇ ಇರಲಿ ನಾವು ಹಿಜಾಬ್ ಅನ್ನು ತೆಗೆಯುವುದಿಲ್ಲ, ಹಿಜಾಬ್ ಕಡ್ಡಾಯಗೊಳಿಸದಿದ್ದರೆ ನಾವು ಶಾಲೆಗೆ ಬರುವುದಿಲ್ಲ. ಹಿಜಾಬ್ ತೆಗೆಯುವಂತೆ ಕೇಳಿದರೆ ಮನೆಗೆ ಹಿಂತಿರುಗುವಂತೆ ನನ್ನ ಪೋಷಕರು ನನ್ನನ್ನು ಹೇಳಿದ್ದಾರೆ” ಎಂದು ಪರೀಕ್ಷೆಯನ್ನು ಬಹಿಷ್ಕರಿಸಿದ ವಿದ್ಯಾರ್ಥಿನಿ ಅಲಿಯಾ ಮೆಹತ್ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಮುಂದುವರೆಯುತ್ತಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠದ ಮುಂದೆ ವಿದ್ಯಾರ್ಥಿಗಳನ್ನು ಪ್ರತಿನಿಧಿಸಿ ಹಿರಿಯ ವಕೀಲ ವಾದ ಮಂಡಿಸುತ್ತಿದ್ದಾರೆ.


ಇದನ್ನೂ ಓದಿ: ಮಂಡ್ಯದಲ್ಲಿ ಹಿಜಾಬ್ ಧರಿಸಿದ ಶಿಕ್ಷಕಿಯರಿಗೂ ಇಲ್ಲ ಪ್ರವೇಶ: ಗೇಟ್‌ ಬಳಿಯೇ ಹಿಜಾಬ್, ಬುರ್ಕಾ ತೆಗೆದ ಶಿಕ್ಷಕಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...