Homeಕರ್ನಾಟಕ’ಹಿಜಾಬ್‌ಗೆ ನಿಷೇಧ ನನ್ನ ಸ್ವಾಭಿಮಾನಕ್ಕೆ ಧಕ್ಕೆ’: ತುಮಕೂರಿನಲ್ಲಿ ರಾಜೀನಾಮೆ ಸಲ್ಲಿಸಿದ ಉಪನ್ಯಾಸಕಿ, ವಿಡಿಯೋ ನೋಡಿ

’ಹಿಜಾಬ್‌ಗೆ ನಿಷೇಧ ನನ್ನ ಸ್ವಾಭಿಮಾನಕ್ಕೆ ಧಕ್ಕೆ’: ತುಮಕೂರಿನಲ್ಲಿ ರಾಜೀನಾಮೆ ಸಲ್ಲಿಸಿದ ಉಪನ್ಯಾಸಕಿ, ವಿಡಿಯೋ ನೋಡಿ

- Advertisement -
- Advertisement -

ಕಾಲೇಜಿಗೆ ಹಿಜಾಬ್ ತೆಗೆದು ಬರುವಂತೆ ಕಾಲೇಜು ಆಡಳಿತ ಮಂಡಳಿ ತಿಳಿಸಿದ್ದ ಕಾರಣಕ್ಕೆ ಇದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ಎಂದಿರುವ ತುಮಕೂರಿನ ಜೈನ್ ಪಿಯು ಕಾಲೇಜಿನ ಇಂಗ್ಲಿಷ್ ಅತಿಥಿ ಉಪನ್ಯಾಸಕಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

ಉಪನ್ಯಾಸಕಿ ಚಾಂದಿನಿ ನಾಝ್ ಅವರು ಸುಮಾರು ಮೂರು ವರ್ಷಗಳಿಂದ ಜೈನ್ ಪಿಯು ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದು, ಮೊದಲ ಬಾರಿಗೆ ಹಿಜಾಬ್ ಅನ್ನು ತೆಗೆದುಹಾಕಲು ಹೇಳಲಾಗಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 16 ರಂದು ಜೈನ್ ಪಿಯು ಕಾಲೇಜಿನ ಪ್ರಿನ್ಸಿಪಾಲ್‌ಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, “ನಿಮ್ಮ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಹಿಜಾಬ್ ಧರಿಸಿಯೇ ಬಂದಿದ್ದ ನನ್ನನ್ನು, ಹಿಜಾಬ್ ಅನ್ನು ತೆಗೆದುಹಾಕುವಂತೆ ನೀವು ಒತ್ತಾಯಿಸಿದ್ದರಿಂದ ನಾನು ಇಂಗ್ಲಿಷ್ ಉಪನ್ಯಾಸಕಿ ಕೆಲಸಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಧರ್ಮದ ಹಕ್ಕು ಸಾಂವಿಧಾನಿಕ ಹಕ್ಕು, ಅದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಧನ್ಯವಾದಗಳು. ನಿಮ್ಮ ಪ್ರಜಾಪ್ರಭುತ್ವ ವಿರೋಧಿ ಕೃತ್ಯವನ್ನು ನಾನು ಖಂಡಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ತಂಡದ ಆಕ್ರೋಶ

ಉಪನ್ಯಾಸಕಿ ಚಾಂದಿನಿ ನಾಝ್ ಅವರ ರಾಜೀನಾಮೆ ಪತ್ರ

ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಚಾಂದಿನಿ ನಾಝ್, “ನಾನು ಕಳೆದ ಮೂರು ವರ್ಷಗಳಿಂದ ಜೈನ್ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ಮೂರು ವರ್ಷಗಳಲ್ಲಿ ನನಗೆ ಯಾವುದೇ ತೊಂದರೆಯಾಗಿದೆ. ಆದರೆ, ನಿನ್ನೆ ಪ್ರಾಂಶುಪಾಲರು ನನ್ನನ್ನು ಕರೆದು, ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ವ್ಯಕ್ತಪಡಿಸದಂತೆ ಪಾಠ ಮಾಡಬೇಕು ಎಂದು ಹೇಳಿದರು. ಆದರೆ ನಾನು ಕಳೆದ ಮೂರು ವರ್ಷಗಳಿಂದ ಹಿಜಾಬ್ ಹಾಕಿಕೊಂಡೆ ಪಾಠ ಮಾಡಿದ್ದೇನೆ. ಈ ಹೊಸ ನಿರ್ಧಾರ ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಹಿಜಾಭ್ ಇಲ್ಲದೆ ನಾನು ಆ ಕಾಲೇಜಿನಲ್ಲಿ ಕೆಲಸ ಮಾಡಲಾರೆ” ಎಂದಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ ಪತ್ರ

ಇನ್ನು ಜೈನ್ ಪಿಯು ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಅವರನ್ನು ಉಲ್ಲೇಖಿಸಿರುವ ದಿ ಪ್ರಿಂಟ್‌, “ಅವರು ಅರೆಕಾಲಿಕ ಉಪನ್ಯಾಸಕಿ, ಹಿಜಾಬ್ ಧರಿಸಿ ತರಗತಿಗೆ ಬರುತ್ತಿದ್ದರು. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶದ ನಂತರ, ನಾವು ಆಕೆಗೆ ಸ್ಟಾಫ್ ರೂಮ್‌ನಲ್ಲಿ ಹಿಜಾಬ್ ತೆಗೆದು ತರಗತಿಗೆ ಹೋಗುವಂತೆ ತಿಳಿಸಿದೆವು. ಆದರೆ ಅವರು ಅದಕ್ಕೆ ಒಪ್ಪಲಿಲ್ಲ. ಆದ್ದರಿಂದ ರಾಜೀನಾಮೆ ನೀಡಿದ್ದಾರೆ. ನಮ್ಮದು ಖಾಸಗಿ ಕಾಲೇಜು. ಆಡಳಿತ ಮಂಡಳಿಯವರು ಏನೇ ಹೇಳಿದರೂ ನಾವು ಪಾಲಿಸಲೇಬೇಕು. ಶಿಕ್ಷಕರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ ಮುಸ್ಲಿಂ ವಿದ್ಯಾರ್ಥಿಗಳು ಅದನ್ನು ಅನುಸರಿಸಬಹುದು ಎಂಬುದು ನಮ್ಮ ಆತಂಕ” ಎಂದಿದ್ದಾರೆ.

ಆದರೆ, ಹೈಕೋರ್ಟ್‌ನ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ನಿಗದಿತ ಸಮವಸ್ತ್ರವನ್ನು ಹೊಂದಿರದ ಕಾಲೇಜುಗಳ ಶಿಕ್ಷಕರು ಅಥವಾ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ಆದರೂ, ಈ ಆದೇಶವನ್ನು ರಾಜ್ಯದಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಅನ್ನು ಖಡಾಖಂಡಿತವಾಗಿ ನಿರ್ಬಂಧಿಸಲಾಗಿರುವುದಾಗಿ ಬಿಂಬಿಸಲಾಗುತ್ತಿದ್ದು ಗೊಂದಲ ಸೃಷ್ಟಿಸಲಾಗುತ್ತಿದೆ. ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿಯೂ ಹಿಜಾಬ್ ಅನ್ನು ನಿರ್ಬಂಧಿಸಿರುವುದಾಗಿ ಜಿಲ್ಲಾಡಳಿತಗಳು ಮೌಖಿಕ ಸೂಚನೆಯನ್ನು ನೀಡಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಹಲವು ಶಾಲಾ-ಕಾಲೇಜುಗಳಲ್ಲಿ ಅಲ್ಲಿನ ಆಡಳಿತ ಮಂಡಳಿ ಸಮವಸ್ತ್ರ ನಿಗಧಿಪಡಿಸದಿದ್ದರೂ ಸಹ ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಇದಕ್ಕೆ ತೀವ್ರ ಖಂಡನೆ ಸಹ ವ್ಯಕ್ತವಾಗಿದೆ.


ಇದನ್ನೂ ಓದಿ: ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೈಕೋರ್ಟ್ ಆದೇಶವನ್ನು ತಿರುಚಿ, ಮನುವಾದಿಗಳು ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿಯರಿಗೆ ಕಿರುಕುಳ ಕೊಡುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...