Homeಕರ್ನಾಟಕ’ಹಿಜಾಬ್‌ಗೆ ನಿಷೇಧ ನನ್ನ ಸ್ವಾಭಿಮಾನಕ್ಕೆ ಧಕ್ಕೆ’: ತುಮಕೂರಿನಲ್ಲಿ ರಾಜೀನಾಮೆ ಸಲ್ಲಿಸಿದ ಉಪನ್ಯಾಸಕಿ, ವಿಡಿಯೋ ನೋಡಿ

’ಹಿಜಾಬ್‌ಗೆ ನಿಷೇಧ ನನ್ನ ಸ್ವಾಭಿಮಾನಕ್ಕೆ ಧಕ್ಕೆ’: ತುಮಕೂರಿನಲ್ಲಿ ರಾಜೀನಾಮೆ ಸಲ್ಲಿಸಿದ ಉಪನ್ಯಾಸಕಿ, ವಿಡಿಯೋ ನೋಡಿ

- Advertisement -
- Advertisement -

ಕಾಲೇಜಿಗೆ ಹಿಜಾಬ್ ತೆಗೆದು ಬರುವಂತೆ ಕಾಲೇಜು ಆಡಳಿತ ಮಂಡಳಿ ತಿಳಿಸಿದ್ದ ಕಾರಣಕ್ಕೆ ಇದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ಎಂದಿರುವ ತುಮಕೂರಿನ ಜೈನ್ ಪಿಯು ಕಾಲೇಜಿನ ಇಂಗ್ಲಿಷ್ ಅತಿಥಿ ಉಪನ್ಯಾಸಕಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

ಉಪನ್ಯಾಸಕಿ ಚಾಂದಿನಿ ನಾಝ್ ಅವರು ಸುಮಾರು ಮೂರು ವರ್ಷಗಳಿಂದ ಜೈನ್ ಪಿಯು ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದು, ಮೊದಲ ಬಾರಿಗೆ ಹಿಜಾಬ್ ಅನ್ನು ತೆಗೆದುಹಾಕಲು ಹೇಳಲಾಗಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 16 ರಂದು ಜೈನ್ ಪಿಯು ಕಾಲೇಜಿನ ಪ್ರಿನ್ಸಿಪಾಲ್‌ಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, “ನಿಮ್ಮ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಹಿಜಾಬ್ ಧರಿಸಿಯೇ ಬಂದಿದ್ದ ನನ್ನನ್ನು, ಹಿಜಾಬ್ ಅನ್ನು ತೆಗೆದುಹಾಕುವಂತೆ ನೀವು ಒತ್ತಾಯಿಸಿದ್ದರಿಂದ ನಾನು ಇಂಗ್ಲಿಷ್ ಉಪನ್ಯಾಸಕಿ ಕೆಲಸಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಧರ್ಮದ ಹಕ್ಕು ಸಾಂವಿಧಾನಿಕ ಹಕ್ಕು, ಅದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಧನ್ಯವಾದಗಳು. ನಿಮ್ಮ ಪ್ರಜಾಪ್ರಭುತ್ವ ವಿರೋಧಿ ಕೃತ್ಯವನ್ನು ನಾನು ಖಂಡಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ತಂಡದ ಆಕ್ರೋಶ

ಉಪನ್ಯಾಸಕಿ ಚಾಂದಿನಿ ನಾಝ್ ಅವರ ರಾಜೀನಾಮೆ ಪತ್ರ

ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಚಾಂದಿನಿ ನಾಝ್, “ನಾನು ಕಳೆದ ಮೂರು ವರ್ಷಗಳಿಂದ ಜೈನ್ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ಮೂರು ವರ್ಷಗಳಲ್ಲಿ ನನಗೆ ಯಾವುದೇ ತೊಂದರೆಯಾಗಿದೆ. ಆದರೆ, ನಿನ್ನೆ ಪ್ರಾಂಶುಪಾಲರು ನನ್ನನ್ನು ಕರೆದು, ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ವ್ಯಕ್ತಪಡಿಸದಂತೆ ಪಾಠ ಮಾಡಬೇಕು ಎಂದು ಹೇಳಿದರು. ಆದರೆ ನಾನು ಕಳೆದ ಮೂರು ವರ್ಷಗಳಿಂದ ಹಿಜಾಬ್ ಹಾಕಿಕೊಂಡೆ ಪಾಠ ಮಾಡಿದ್ದೇನೆ. ಈ ಹೊಸ ನಿರ್ಧಾರ ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಹಿಜಾಭ್ ಇಲ್ಲದೆ ನಾನು ಆ ಕಾಲೇಜಿನಲ್ಲಿ ಕೆಲಸ ಮಾಡಲಾರೆ” ಎಂದಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ ಪತ್ರ

ಇನ್ನು ಜೈನ್ ಪಿಯು ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಅವರನ್ನು ಉಲ್ಲೇಖಿಸಿರುವ ದಿ ಪ್ರಿಂಟ್‌, “ಅವರು ಅರೆಕಾಲಿಕ ಉಪನ್ಯಾಸಕಿ, ಹಿಜಾಬ್ ಧರಿಸಿ ತರಗತಿಗೆ ಬರುತ್ತಿದ್ದರು. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶದ ನಂತರ, ನಾವು ಆಕೆಗೆ ಸ್ಟಾಫ್ ರೂಮ್‌ನಲ್ಲಿ ಹಿಜಾಬ್ ತೆಗೆದು ತರಗತಿಗೆ ಹೋಗುವಂತೆ ತಿಳಿಸಿದೆವು. ಆದರೆ ಅವರು ಅದಕ್ಕೆ ಒಪ್ಪಲಿಲ್ಲ. ಆದ್ದರಿಂದ ರಾಜೀನಾಮೆ ನೀಡಿದ್ದಾರೆ. ನಮ್ಮದು ಖಾಸಗಿ ಕಾಲೇಜು. ಆಡಳಿತ ಮಂಡಳಿಯವರು ಏನೇ ಹೇಳಿದರೂ ನಾವು ಪಾಲಿಸಲೇಬೇಕು. ಶಿಕ್ಷಕರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ ಮುಸ್ಲಿಂ ವಿದ್ಯಾರ್ಥಿಗಳು ಅದನ್ನು ಅನುಸರಿಸಬಹುದು ಎಂಬುದು ನಮ್ಮ ಆತಂಕ” ಎಂದಿದ್ದಾರೆ.

ಆದರೆ, ಹೈಕೋರ್ಟ್‌ನ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ನಿಗದಿತ ಸಮವಸ್ತ್ರವನ್ನು ಹೊಂದಿರದ ಕಾಲೇಜುಗಳ ಶಿಕ್ಷಕರು ಅಥವಾ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ಆದರೂ, ಈ ಆದೇಶವನ್ನು ರಾಜ್ಯದಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಅನ್ನು ಖಡಾಖಂಡಿತವಾಗಿ ನಿರ್ಬಂಧಿಸಲಾಗಿರುವುದಾಗಿ ಬಿಂಬಿಸಲಾಗುತ್ತಿದ್ದು ಗೊಂದಲ ಸೃಷ್ಟಿಸಲಾಗುತ್ತಿದೆ. ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿಯೂ ಹಿಜಾಬ್ ಅನ್ನು ನಿರ್ಬಂಧಿಸಿರುವುದಾಗಿ ಜಿಲ್ಲಾಡಳಿತಗಳು ಮೌಖಿಕ ಸೂಚನೆಯನ್ನು ನೀಡಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಹಲವು ಶಾಲಾ-ಕಾಲೇಜುಗಳಲ್ಲಿ ಅಲ್ಲಿನ ಆಡಳಿತ ಮಂಡಳಿ ಸಮವಸ್ತ್ರ ನಿಗಧಿಪಡಿಸದಿದ್ದರೂ ಸಹ ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಇದಕ್ಕೆ ತೀವ್ರ ಖಂಡನೆ ಸಹ ವ್ಯಕ್ತವಾಗಿದೆ.


ಇದನ್ನೂ ಓದಿ: ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೈಕೋರ್ಟ್ ಆದೇಶವನ್ನು ತಿರುಚಿ, ಮನುವಾದಿಗಳು ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿಯರಿಗೆ ಕಿರುಕುಳ ಕೊಡುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...