Homeಕರ್ನಾಟಕ’ಹಿಜಾಬ್‌ಗೆ ನಿಷೇಧ ನನ್ನ ಸ್ವಾಭಿಮಾನಕ್ಕೆ ಧಕ್ಕೆ’: ತುಮಕೂರಿನಲ್ಲಿ ರಾಜೀನಾಮೆ ಸಲ್ಲಿಸಿದ ಉಪನ್ಯಾಸಕಿ, ವಿಡಿಯೋ ನೋಡಿ

’ಹಿಜಾಬ್‌ಗೆ ನಿಷೇಧ ನನ್ನ ಸ್ವಾಭಿಮಾನಕ್ಕೆ ಧಕ್ಕೆ’: ತುಮಕೂರಿನಲ್ಲಿ ರಾಜೀನಾಮೆ ಸಲ್ಲಿಸಿದ ಉಪನ್ಯಾಸಕಿ, ವಿಡಿಯೋ ನೋಡಿ

- Advertisement -
- Advertisement -

ಕಾಲೇಜಿಗೆ ಹಿಜಾಬ್ ತೆಗೆದು ಬರುವಂತೆ ಕಾಲೇಜು ಆಡಳಿತ ಮಂಡಳಿ ತಿಳಿಸಿದ್ದ ಕಾರಣಕ್ಕೆ ಇದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ಎಂದಿರುವ ತುಮಕೂರಿನ ಜೈನ್ ಪಿಯು ಕಾಲೇಜಿನ ಇಂಗ್ಲಿಷ್ ಅತಿಥಿ ಉಪನ್ಯಾಸಕಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

ಉಪನ್ಯಾಸಕಿ ಚಾಂದಿನಿ ನಾಝ್ ಅವರು ಸುಮಾರು ಮೂರು ವರ್ಷಗಳಿಂದ ಜೈನ್ ಪಿಯು ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದು, ಮೊದಲ ಬಾರಿಗೆ ಹಿಜಾಬ್ ಅನ್ನು ತೆಗೆದುಹಾಕಲು ಹೇಳಲಾಗಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 16 ರಂದು ಜೈನ್ ಪಿಯು ಕಾಲೇಜಿನ ಪ್ರಿನ್ಸಿಪಾಲ್‌ಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, “ನಿಮ್ಮ ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಹಿಜಾಬ್ ಧರಿಸಿಯೇ ಬಂದಿದ್ದ ನನ್ನನ್ನು, ಹಿಜಾಬ್ ಅನ್ನು ತೆಗೆದುಹಾಕುವಂತೆ ನೀವು ಒತ್ತಾಯಿಸಿದ್ದರಿಂದ ನಾನು ಇಂಗ್ಲಿಷ್ ಉಪನ್ಯಾಸಕಿ ಕೆಲಸಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಧರ್ಮದ ಹಕ್ಕು ಸಾಂವಿಧಾನಿಕ ಹಕ್ಕು, ಅದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಧನ್ಯವಾದಗಳು. ನಿಮ್ಮ ಪ್ರಜಾಪ್ರಭುತ್ವ ವಿರೋಧಿ ಕೃತ್ಯವನ್ನು ನಾನು ಖಂಡಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ತಂಡದ ಆಕ್ರೋಶ

ಉಪನ್ಯಾಸಕಿ ಚಾಂದಿನಿ ನಾಝ್ ಅವರ ರಾಜೀನಾಮೆ ಪತ್ರ

ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಚಾಂದಿನಿ ನಾಝ್, “ನಾನು ಕಳೆದ ಮೂರು ವರ್ಷಗಳಿಂದ ಜೈನ್ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ಮೂರು ವರ್ಷಗಳಲ್ಲಿ ನನಗೆ ಯಾವುದೇ ತೊಂದರೆಯಾಗಿದೆ. ಆದರೆ, ನಿನ್ನೆ ಪ್ರಾಂಶುಪಾಲರು ನನ್ನನ್ನು ಕರೆದು, ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ವ್ಯಕ್ತಪಡಿಸದಂತೆ ಪಾಠ ಮಾಡಬೇಕು ಎಂದು ಹೇಳಿದರು. ಆದರೆ ನಾನು ಕಳೆದ ಮೂರು ವರ್ಷಗಳಿಂದ ಹಿಜಾಬ್ ಹಾಕಿಕೊಂಡೆ ಪಾಠ ಮಾಡಿದ್ದೇನೆ. ಈ ಹೊಸ ನಿರ್ಧಾರ ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಹಿಜಾಭ್ ಇಲ್ಲದೆ ನಾನು ಆ ಕಾಲೇಜಿನಲ್ಲಿ ಕೆಲಸ ಮಾಡಲಾರೆ” ಎಂದಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ ಪತ್ರ

ಇನ್ನು ಜೈನ್ ಪಿಯು ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಅವರನ್ನು ಉಲ್ಲೇಖಿಸಿರುವ ದಿ ಪ್ರಿಂಟ್‌, “ಅವರು ಅರೆಕಾಲಿಕ ಉಪನ್ಯಾಸಕಿ, ಹಿಜಾಬ್ ಧರಿಸಿ ತರಗತಿಗೆ ಬರುತ್ತಿದ್ದರು. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶದ ನಂತರ, ನಾವು ಆಕೆಗೆ ಸ್ಟಾಫ್ ರೂಮ್‌ನಲ್ಲಿ ಹಿಜಾಬ್ ತೆಗೆದು ತರಗತಿಗೆ ಹೋಗುವಂತೆ ತಿಳಿಸಿದೆವು. ಆದರೆ ಅವರು ಅದಕ್ಕೆ ಒಪ್ಪಲಿಲ್ಲ. ಆದ್ದರಿಂದ ರಾಜೀನಾಮೆ ನೀಡಿದ್ದಾರೆ. ನಮ್ಮದು ಖಾಸಗಿ ಕಾಲೇಜು. ಆಡಳಿತ ಮಂಡಳಿಯವರು ಏನೇ ಹೇಳಿದರೂ ನಾವು ಪಾಲಿಸಲೇಬೇಕು. ಶಿಕ್ಷಕರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ ಮುಸ್ಲಿಂ ವಿದ್ಯಾರ್ಥಿಗಳು ಅದನ್ನು ಅನುಸರಿಸಬಹುದು ಎಂಬುದು ನಮ್ಮ ಆತಂಕ” ಎಂದಿದ್ದಾರೆ.

ಆದರೆ, ಹೈಕೋರ್ಟ್‌ನ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ನಿಗದಿತ ಸಮವಸ್ತ್ರವನ್ನು ಹೊಂದಿರದ ಕಾಲೇಜುಗಳ ಶಿಕ್ಷಕರು ಅಥವಾ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ಆದರೂ, ಈ ಆದೇಶವನ್ನು ರಾಜ್ಯದಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಅನ್ನು ಖಡಾಖಂಡಿತವಾಗಿ ನಿರ್ಬಂಧಿಸಲಾಗಿರುವುದಾಗಿ ಬಿಂಬಿಸಲಾಗುತ್ತಿದ್ದು ಗೊಂದಲ ಸೃಷ್ಟಿಸಲಾಗುತ್ತಿದೆ. ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿಯೂ ಹಿಜಾಬ್ ಅನ್ನು ನಿರ್ಬಂಧಿಸಿರುವುದಾಗಿ ಜಿಲ್ಲಾಡಳಿತಗಳು ಮೌಖಿಕ ಸೂಚನೆಯನ್ನು ನೀಡಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಹಲವು ಶಾಲಾ-ಕಾಲೇಜುಗಳಲ್ಲಿ ಅಲ್ಲಿನ ಆಡಳಿತ ಮಂಡಳಿ ಸಮವಸ್ತ್ರ ನಿಗಧಿಪಡಿಸದಿದ್ದರೂ ಸಹ ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಇದಕ್ಕೆ ತೀವ್ರ ಖಂಡನೆ ಸಹ ವ್ಯಕ್ತವಾಗಿದೆ.


ಇದನ್ನೂ ಓದಿ: ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೈಕೋರ್ಟ್ ಆದೇಶವನ್ನು ತಿರುಚಿ, ಮನುವಾದಿಗಳು ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿಯರಿಗೆ ಕಿರುಕುಳ ಕೊಡುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...