Homeಮುಖಪುಟಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು - ದೇವನೂರು ಮಹಾದೇವ

ಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು – ದೇವನೂರು ಮಹಾದೇವ

ಇಂದು ಮನುಷ್ಯರು ಧರ್ಮ-ದೇವರಿಗೆ ತಮ್ಮ ರೋಗ ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮಜಾಢ್ಯ ಅಂತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯರು, ಇನ್ನೂ ಯಾವ ರಾಗ-ದ್ವೇಷ ಇಲ್ಲದವರು. ಅವರು ಈ ಧರ್ಮಜಾಢ್ಯದಿಂದ ಬಿಡುಗಡೆ ಪಡೆಯಲಿ.

- Advertisement -
- Advertisement -

(ಹಿಜಾಬ್ ಮತ್ತು ಕೇಸರಿ ಶಾಲಿನ ಹೆಸರಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತಲೆದೋರಿರುವ ವಿವಾದ ಕುರಿತಂತೆ ನಾಡಿನ ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ಅತ್ಯಂತ ಕಳಕಳಿಯಿಂದ ತಮ್ಮ ಅಭಿಪ್ರಾಯಗಳನ್ನು ಟಿವಿ-9 ಚಾನಲ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರ ಸಹಜ ಹಾಗೂ ಚಿಂತನಾ ಅಭಿಪ್ರಾಯಗಳನ್ನು ನಮ್ಮ ಓದುಗರಿಗೆ ನೀಡುತ್ತಿದ್ದೇವೆ. – ಸಂಪಾದಕ)

ಈ ಬೆಳವಣಿಗೆ ತುಂಬಾ, ಅಂದರೆ ತುಂಬಾನೇ ದುಃಖವಾಗುತ್ತದೆ. ಈ ಹಿಂದೆ ಏನಾಗುತ್ತಿತ್ತು? ಹಿಜಾಬ್ ಅನ್ನು ಅಲ್ಲೊಬ್ಬರು ಇಲ್ಲೊಬ್ಬರು ಧರಿಸುತ್ತಿದ್ದರು. ಅದು ಸಹಜವಾಗಿ ನಡೆದುಕೊಂಡು ಹೋಗುತ್ತಿತ್ತು. ಎದ್ದು ಕಾಣಿಸುತ್ತಿರಲಿಲ್ಲ. ಯಾವಾಗ ಹಾಕಿಕೊಂಡು ಬರಬಾರದೆಂದು ನಿಷೇಧ ಹೇರಲಾಯಿತೋ ಆಗ ಪ್ರತಿರೋಧ ಆರಂಭವಾಯಿತು. ಜೊತೆಗೆ ಹಿಜಾಬ್ ಧರಿಸುವುದು ಹೆಚ್ಚೇ ಆಯಿತು.

ಈ ಹೆಚ್ಚಾಗುವುದರ ಹಿಂದೆ ಅಲ್ಪಸ್ವಲ್ಪ ಪಟ್ಟಭದ್ರರ ಹಿತಾಸಕ್ತಿ ಇದ್ದೇ ಇದೆ ಎನ್ನಿಸುತ್ತೆ. ಆದರೆ ಯಾವಾಗ ಕೇಸರಿ ಬಣ್ಣವು ಹಿಜಾಬ್ ವಿರುದ್ಧ ಪ್ರತಿಕ್ರಿಯೆಯಾಗಿ ಬಂತೋ, ಆ ಕೇಸರಿ ಬಣ್ಣದ ಅದ್ಧೂರಿತನ ನೋಡಿದರೆ, ಆ ಕೇಸರಿ ಪೇಟ ನೋಡಿದರೆ, ಅದರ ವ್ಯಾಪಕತೆ ನೋಡಿದರೆ, ಇದೆಲ್ಲಾ ವಿದ್ಯಾರ್ಥಿಗಳದ್ದಲ್ಲಾ ಎಂದು ಹೆಚ್ಚು ಸ್ಪಷ್ಟವಾಗುತ್ತೆ. ಹಣ ಉಳ್ಳವರು, ಪಟ್ಟಭದ್ರ ಹಿತಾಸಕ್ತಿಗಳು ಚೆಲ್ಲಾಟ ನಡೆಸುತ್ತಿದ್ದಾರೆ ಎನ್ನಿಸುತ್ತದೆ.

ಇದರ ಜೊತೆಗೆ ರಾಜಕಾರಣಿಗಳದ್ದೂ ಕೈವಾಡ ಇದೆ. ಏಕೆಂದರೆ ಈ ಗಲಾಟೆ ಉಲ್ಬಣ ಮಾಡಿಕೊಂಡು ತಮ್ಮ ಸೋಲು-ಗೆಲುವನ್ನು ಇದರಲ್ಲಿ ನಿರ್ಧರಿಸಿಕೊಳ್ಳಬೇಕು. ಚಾನ್ಸ್ ಇದು. ಬಳಸಿಕೊಳ್ಳಬೇಕೆನ್ನುವ ದುರಾಸೆ ಅಥವಾ ಕೆಟ್ಟ ದುಷ್ಟತನ ಇದರಲ್ಲಿ ಕಂಡು ಬರುತ್ತಿದೆ. ಒಟ್ಟಿನಲ್ಲಿ ಇದರಲ್ಲಿ ಬಡಿದಾಡುತ್ತಿರುವವರು ಯಾರು ಎಂದು ನೋಡಿದರೆ, ಎರಡೂ ಕಡೆಯ ವಿದ್ಯಾರ್ಥಿಗಳೇ. ಅವರೇ ಬಲಿಪಶುಗಳು.

ಇದೇ ರೀತಿಯಾದರೆ, ಇದು ಎಲ್ಲಿಗೆ ಕರೆದೊಯ್ಯುತ್ತದೆ ಎಂದರೆ, ನಾಳೆ ಮಹಿಳೆಯರು ಪಿಂಕ್ ಗುಲಾಬಿ ಬಣ್ಣದ ವಸ್ತ್ರ ಧರಿಸಿ ಬರಬಹುದು. ಹಾಗೆಯೇ ದಲಿತರು ನೀಲಿ, ರೈತರು ಹಸಿರು ಟವೆಲ್, ಮತ್ತೆ ದುಡಿಯುವ ವರ್ಗ ಕೆಂಪು, ದ್ರಾವಿಡರು ಕಪ್ಪು, ಹಿಂದುಳಿದ ವರ್ಗ ಹಳದಿ, ಆಮೇಲೆ ಅದರೊಳಗಡೆನೇ ಮದಕರಿ ಬಣ್ಣವಾಗಿ ಮೆರೂನ್… ಹೀಗೆ ಬಣ್ಣ ಬಣ್ಣಗಳಲ್ಲಿ ಬರಲು ಈ ಗಲಾಟೆ ಉಲ್ಬಣಗೊಂಡರೆ ಪ್ರೇರಣೆಯಾಗಲಿದೆ.
ಸುಸ್ತು ಆದ ಮೇಲೆ ಶಾಂತಿ ಬೇಕೆನ್ನುವ ಬಿಳಿಬಣ್ಣ ಕೂಡ ಬರುತ್ತೆ.

ಈಗ ನಾವು ಯೋಚಿಸಬೇಕಿರುವುದು ಇದೆಲ್ಲಾ ನಮಗೆ ಬೇಕಿತ್ತಾ? ಎನ್ನುವುದಾಗಿದೆ. ಈಗ ತಾಯಂದಿರು, ಎಲ್ಲಾ ಜಾತಿ-ಧರ್ಮದ ತಾಯಂದಿರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಆದರೆ ತಮ್ಮ ಮಕ್ಕಳು ಪಟ್ಟಭದ್ರ ಹಿತಾಸಕ್ತಿಗೆ ಮತ್ತು ರಾಜಕಾರಣಿಗಳ ಚೆಲ್ಲಾಟಕ್ಕೆ ಈ ತರ ದಾಳವಾಗುತ್ತಿದ್ದಾರೆ ಎಂದರೆ, ಅವರ ಆತಂಕ ಹೆಚ್ಚಾಗುವುದಿಲ್ಲವೇ? ಇದು ಬಹುಸಂಖ್ಯಾತ ಮಹಿಳೆಯರು, ತಾಯಂದಿರಲ್ಲಿ ಆತಂಕ ಹೆಚ್ಚು ಮಾಡಿದೆ ಎಂದು ನನಗೆ ಅನ್ನಿಸುತ್ತೆ. ಇದೇ ರೀತಿ ಉಲ್ಬಣವಾದರೆ ಒಂದಲ್ಲಾ ಒಂದು ದಿನ ಈ ತಾಯಂದಿರ ಆತಂಕವು ಆಕ್ರೋಶ ಆಗಬಹುದು. ಅದು ಸಹಜ. ನೆನಪಿರಲಿ.

ನಾನು ವಿದ್ಯಾರ್ಥಿಗಳಲ್ಲಿ ಗಮನಕ್ಕೆ ತರುವುದು ಒಂದೇ ವಿಚಾರ. ಈ ರೀತಿಯ ಭಾವನಾತ್ಮಕ ವಿಚಾರಗಳನ್ನು ಉಂಡು, ತಿಂದು, ಕುಣಿದು ಕುಪ್ಪಳಿಸುತ್ತ ಗದ್ದಲ ಮಾಡುತ್ತಿದ್ದೀರಲ್ಲಾ ನೀವು, ನಿಮಗೆ ನನ್ನ ಪ್ರಶ್ನೆ ಇಷ್ಟು: ನಾಳೆ ಬದುಕಿ ಬಾಳಬೇಕಾದ ನಿಮಗೆ ಈ ಭಾವನಾತ್ಮಕ ವಿಷಯಗಳು, ಈ ಭ್ರಮೆಗಳು ನಿಮ್ಮ ಭವಿಷ್ಯವನ್ನು ಮತ್ತು ನಾಳಿನ ಜೀವನವನ್ನು ರೂಪಿಸುತ್ತಾ? ಈ ಪ್ರಶ್ನೆಯನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮಲ್ಲಿ ತಾವು ಕೇಳಿಕೊಳ್ಳಬೇಕಾಗಿದೆ ಈಗ.

ಈಗ ಎಲ್ಲರಿಗೂ ಗೊತ್ತು ನಿರುದ್ಯೋಗ ಹೆಚ್ಚುತ್ತಿದೆ. ಕಳೆದ 50 ವರ್ಷಗಳಲ್ಲೆ ಈಗ ಉದ್ಯೋಗ ಕಡಿಮೆ ಆಗಿದೆ. ಶಿಕ್ಷಣಕ್ಕೆ ಬಜೆಟ್‌ನಲ್ಲಿ ಕಮ್ಮಿ ಹಣ ನಿಗದಿ ಮಾಡಿದರು. ಶಿಕ್ಷಣ ಉಳಿಯುತ್ತದಾ? ಇದರ ಉದ್ದೇಶವೇನು? ಶಿಕ್ಷಣ ಕೊಡಬೇಕು ಅಂತಾನೋ? ನಿಧಾನವಾಗಿ ನಿಲ್ಲಿಸಬೇಕು ಅಂತಾನೋ? ಮತ್ತು ಪ್ರಾಥಮಿಕ ಆರೋಗ್ಯಕ್ಕೆ ಬಜೆಟ್‌ನಲ್ಲಿ ಅನುದಾನ ಕಡಿಮೆ ಮಾಡಿದ್ದಾರೆ. ಇದನ್ನೆಲ್ಲಾ ವಿದ್ಯಾರ್ಥಿಗಳು ಪ್ರಶ್ನೆ ಮಾಡಬೇಕಿತ್ತು. ಏಕೆಂದರೆ ಶಿಕ್ಷಣ, ಉದ್ಯೋಗ ನಿಮ್ಮದೇ ಸಮಸ್ಯೆಯಲ್ಲವೆ? ನಾಳೆ ಬದುಕಿ ಉಳಿಯಬೇಕಾದ ವಿದ್ಯಾರ್ಥಿ ಯುವಜನರಿಗೆ ಈ ಪ್ರಶ್ನೆ ಕೇಳುತ್ತಿದ್ದೇನೆ.

ಇಂದು ಪೆಟ್ರೋಲ್, ಗ್ಯಾಸ್ ಬೆಲೆ ಜಾಸ್ತಿಯಾಗುತ್ತಿದೆ. ಈ ಬೆಲೆ ಏರಿಕೆ ಸಿಕ್ಕಾಪಟ್ಟೆ ಕಂಟ್ರೋಲ್ ತಪ್ಪಿ ಹೆಚ್ಚುತ್ತಿದೆ. ಇದನ್ನು ಪ್ರಶ್ನೆ ಮಾಡಬೇಕಾದವರು ವಿದ್ಯಾರ್ಥಿಗಳಲ್ಲವೇ? ಈ ಎಚ್ಚರ ಎಲ್ಲಾ ಜಾತಿಯ, ಎಲ್ಲಾ ಧರ್ಮೀಯರ ವಿದ್ಯಾರ್ಥಿಗಳಲ್ಲೂ ಇರಬೇಕಾಗಿದೆ. ಇದನ್ನೂ ವಿದ್ಯಾರ್ಥಿಗಳು ಯೋಚನೆ ಮಾಡಬೇಕು.

ಈ ನೋಟ್ ಬ್ಯಾನ್ ಆವಾಂತರ, ಜಿಎಸ್‌ಟಿ ಅವಿವೇಕಿತನವು ದೇಶವನ್ನು ದಿಕ್ಕೆಡಿಸಿದೆ. ಗಮನಿಸಿ, ಇವತ್ತು ಮಧ್ಯಮ ವರ್ಗವು ಬಡತನದ ಕಡೆಗೆ ಹೋಗುತ್ತಿದೆ. ಮತ್ತು ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದ್ದು. ಕೆಲವೇ ಜನ ಕಾರ್ಪೊರೇಟ್ ಕಂಪನಿ ಮಾಲೀಕರು, ಅವರ ಸಂಪತ್ತು ದೇಶದ ಸಂಪತ್ತಿನಲ್ಲಿ ಅರ್ಧ ಭಾಗವಿದೆ. ಅಂದರೆ ಕೆಲವೇ ಜನ ಕಾರ್ಪೋರೇಟ್ ಕುಟುಂಬಗಳ ಕೈಯಲ್ಲಿ ದೇಶದ ಅರ್ಧ ಭಾಗದ ಸಂಪತ್ತಿದೆ. ಕೊರೊನಾ, ಜಿಎಸ್‌ಟಿ, ನೋಟ್ ಬ್ಯಾನ್ ಆಗಿ ಜನರು ತತ್ತರಿಸುವಾಗ ಕಾರ್ಪೋರೇಟ್ ಕಂಪನಿಗಳ ಆದಾಯ ಹೆಚ್ಚಾಗಿದೆ. ಇದಕ್ಕೆ ಕಾರಣವೇನು? ಲೂಟಿ ಎಲ್ಲಿ ಆಗುತ್ತಿದೆ. ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ಆ ಜವಾಬ್ದಾರಿ ಯುವ ಜನಾಂಗದ ಮೇಲಿದೆ.

ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿದ್ದಾರೆ. ಅದೇನೆಂದರೆ, ಕಾರ್ಪೊರೇಟ್ ಕಂಪನಿಗಳ ಸಂಪತ್ತಿನ ಮೇಲೆ ಶೇ.2ರಷ್ಟು ತೆರಿಗೆ ವಿಧಿಸಿದರೆ, ನಮ್ಮ ಶಿಕ್ಷಣ ವ್ಯವಸ್ಥೆ ಸುಧಾರಣೆ ಆಗುತ್ತದೆ, ಪ್ರಾಥಮಿಕ ಆರೋಗ್ಯ ಸುಧಾರಣೆ ಆಗುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರ ಶೇ.2ರಷ್ಟು ತೆರಿಗೆಯನ್ನು ಅವರಿಗೆ ವಿಧಿಸಲಿಲ್ಲ. ಬದಲಾಗಿ ಅವರಿಗೆ ತೆರಿಗೆ ಕಮ್ಮಿ ಮಾಡಿತು. ಉಳ್ಳವರಿಗೆ ಎಲ್ಲವನ್ನೂ ನೀಡುತ್ತದೆ. ಆದರೆ ರೈತರು, ದುಡಿಯುವ ವರ್ಗಕ್ಕೆ ಕೇಳಿದರೂ ಇಲ್ಲ. ಅವರಿಗೆ (ಉಳ್ಳವರು/ಕಾರ್ಪೊರೇಟ್ ಕಂಪನಿಗಳು) ಭೂಮಿ, ನೀರು, ವಿದ್ಯುತ್ ರಿಯಾಯಿತಿ. ಇಲ್ಲದವರಿಗೆ ಇಲ್ಲ. ಇದು ಯಾವ ನೀತಿ ಅಂತ ಸರ್ಕಾರವನ್ನು ಪ್ರಶ್ನಿಸಬೇಕಾದ ಹೊಣೆ ಹೊತ್ತುಕೊಳ್ಳಲು ವಿದ್ಯಾರ್ಥಿಗಳಲ್ಲಿ ಪ್ರಾರ್ಥನೆ ಮಾಡುತ್ತೇನೆ.

ಇಂದು ಮನುಷ್ಯರು ಧರ್ಮ-ದೇವರಿಗೆ ತಮ್ಮ ರೋಗ ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮಜಾಢ್ಯ ಅಂತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯರು, ಇನ್ನೂ ಯಾವ ರಾಗ-ದ್ವೇಷ ಇಲ್ಲದವರು. ಅವರು ಈ ಧರ್ಮಜಾಢ್ಯದಿಂದ ಬಿಡುಗಡೆ ಪಡೆಯಿರಿ ಎಂದು ವಿದ್ಯಾರ್ಥಿ ಯುವಜನರಲ್ಲಿ ಕೇಳಿಕೊಳ್ಳುತ್ತೇನೆ.

ಆಯ್ತು, ಸಮವಸ್ತ್ರದ ಜೊತೆಗೆ ಹಿಜಾಬ್ ಹಾಕಿಕೊಂಡರೆ ಏನು ತೊಂದರೆ? ಬೇಕಾದರೆ ನಿಮಗೆ ಇಷ್ಟವಾದರೆ ನಿಮ್ಮಗಿಷ್ಟವಾದ ಬಣ್ಣದ ಹಿಜಾಬ್ ಅನ್ನು ನೀವೂ ಹಾಕಿಕೊಳ್ಳಿರಿ. ಇಂದು ಕುಂಕುಮ, ಬಳೆಗಳನ್ನು ಎಲ್ಲರೂ ಹಾಕಿಕೊಳ್ಳುವುದಿಲ್ಲವೇ? ಇಂತವೆಲ್ಲವೂ ದಿನಕಳೆದಂತೆ ಅಲಂಕಾರವೇ ಆಗಿ ಬಿಡಬಹುದು. ಆದ್ದರಿಂದ ಇದನ್ನೊಂದು ವಿವಾದ ಮಾಡಿಕೊಳ್ಳಬೇಕಾಗಿರಲಿಲ್ಲ. ಆದರೆ ಇಲ್ಲಿ ಅಹಂಕಾರ ಅವಿತುಕುಳಿತಿದೆ. ದ್ವೇಷ ಬಚ್ಚಿಟ್ಟುಕೊಂಡಿದೆ. ರಾಜಕಾರಣವೂ ಇದ್ದೇಇದೆ. ಪಟ್ಟಭದ್ರ ಹಿತಾಸಕ್ತಿಗಳೂ ಗುಡುರು ಹಾಕುತ್ತಿವೆ. ಹಾಗಾಗಿ ಸಹಜವಾಗಿ ನಡೆದುಕೊಂಡು ಹೋಗುತ್ತಿದ್ದುದು ಇಂದು ವಿವಾದವಾಗಿ ಉಲ್ಬಣಿಸಿದೆ. ನನ್ನ ವಿನಂತಿ ಹಿಜಾಬ್ ಇರಲಿ ಬಿಡಿ, ಅದನ್ನು ಏಕೆ ದೊಡ್ಡದು ಮಾಡುತ್ತೀರಿ? ಅದು ತನ್ನಷ್ಟಕ್ಕೆ ತಾನೇ ಕಮ್ಮಿ ಆಗುತ್ತಾ ಹೋಗಲೂ ಬಹುದು. ನಿಷೇಧ ಮಾಡಿದರೆ ಇದು ಹೆಚ್ಚುತ್ತಾ ಪ್ರತಿಭಟನೆಯ ಜೊತೆಗೆ ಬೇರೆಯವರೂ ಬಳಸಿಕೊಳ್ಳುವುದೂ ಹೆಚ್ಚಬಹುದು. ಈ ಎಚ್ಚರ ನಮಗಿರಲಿ.

ಈಗ ಈ ವಿವಾದ ನ್ಯಾಯಾಲಯದ ಮುಂದಿದೆ. ಅವರು ತಕ್ಷಣ ಇದಕ್ಕೆ ಪರಿಹಾರ ನೀಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ. ಇಲ್ಲಿ ಒಂದು ತುಂಬಾ ನೋವಿನ ಸಂಗತಿಯೆಂದರೆ, ಹಿಜಾಬ್ ವಿವಾದ ಎಲ್ಲಿ ಹುಟ್ಟಿತೊ, ಆ ಒಂದೆರಡು ಶಾಲೆಗಳಲ್ಲೇ ಆಯಾಯ ಜನಾಂಗಗಳ ವಿವೇಕಿ ನಾಯಕರ ಸಮ್ಮುಖದಲ್ಲಿ ಶಾಂತಿ ಸಮಾಧಾನ ಮಾಡಿದ್ದರೆ, ಈ ವಿವಾದ ಬೆಳೆಯುತ್ತಿರಲಿಲ್ಲವೇನೋ. ಯಾವಾಗ ಈ ವಿವಾದವನ್ನು ಬಗೆಹರಿಸುವ ನೆಪದಲ್ಲಿ ಶಿಕ್ಷಣ ಸಚಿವರು ಸುತ್ತೋಲೆ ಹೊರಡಿಸಿದರೋ ಆವಾಗ ಇದು ರಾಜ್ಯವ್ಯಾಪ್ತಿ ಹಬ್ಬಿತು. ಇದಾಗಬಾರದಿತ್ತು. ಇಲ್ಲಿ ವಿವೇಕ, ವಿವೇಚನೆ ಅಗತ್ಯವಿತ್ತು. ಇದನ್ನು ನೆನಸಿಕೊಂಡರೆ ನೋವುಂಟಾಗುತ್ತದೆ.

ದೇವನೂರು ಮಹಾದೇವ

(ಹಿರಿಯ ಸಾಹಿತಿಗಳು ಮತ್ತು ಚಿಂತಕರು, ಮೈಸೂರು)


ಇದನ್ನೂ ಓದಿ: ಅಧ್ಯಾಪನದ ಧರ್ಮ: ನಮ್ಮ ವಿವೇಕದ ಮೇಲೆ, ಧರ್ಮದ ಮರ್ಮದ ಮೇಲೆ ನಡೀತಿರೋ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...