Homeಕರ್ನಾಟಕದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ಮಾದರಿಯಲ್ಲೇ ಧ್ವಂಸ ಮಾಡಬೇಕು ಎಂದು ಹೇಳುವ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದ ರಿಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಳಿ ತಲಾಖ್ ರದ್ದುಪಡಿಸಿದಂತೆ ದೇಶದಲ್ಲೇ ಹಿಜಾಬ್ (ಬುರ್ಖಾ) ಧರಿಸುವುದನ್ನು ನಿಷೇಧಿಸಬೇಕು ಎಂದಿದ್ದಾರೆ.

ಉಡುಪಿಯ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳಿಗೆ ತರಗತಿ ನಿಷೇಧಿಸಿದ್ದ ವಿದ್ಯಮಾನ ಚರ್ಚೆಯಲ್ಲಿದೆ. ಹಿಂದೂ ಧರ್ಮದ ಇತರ ಆಚರಣೆಗಳಂತೆ ಮುಸ್ಲಿಂ ಧರ್ಮಿಯರು ಹಿಜಾಬ್‌ ಧರಿಸುತ್ತಾರೆ. ಹೀಗಿರುವಾಗ ಹಿಜಾಬ್‌ಗೆ ರಾಜಕೀಯ ಪ್ರೇರಿತ ವಿರೋಧ ಸಲ್ಲದು ಎಂಬ ಅಭಿಪ್ರಾಯಗಳು ಮೂಡಿ ಬರುತ್ತಿರುವ ಹೊತ್ತಿನಲ್ಲಿ ಮತ್ತೊಂದು ಗುಂಪು ಈ ಬೆಳವಣಿಗೆಯನ್ನು ಮುಸ್ಲಿಂ ವಿರೋಧಿ ಅಭಿಪ್ರಾಯ ಮೂಡಿಸಲು ಯತ್ನಿಸಿದೆ. ಇತ್ತ ತಮ್ಮ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕೆಂದು ಪ್ರತಿಭಟನಾನಿರತ ಹೆಣ್ಣು ಮಕ್ಕಳು ಆಗ್ರಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಳಿ ಸ್ವಾಮೀಜಿಯ ಹೇಳಿಕೆ ಹೊರಬಿದ್ದಿದೆ.

ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಳಿ ಸ್ವಾಮೀಜಿ, “ರಾಜ್ಯ, ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಶಾಲೆಗೆ ಬುರ್ಖಾ ಧರಿಸಿ ಬಂದರೆ ಗುರುತು ಪತ್ತೆಯಾಗುವುದಿಲ್ಲ. ವಿದ್ಯಾರ್ಥಿನಿಯೇ ಬರುತ್ತಾರೋ ಅವರ ಅಕ್ಕ -ತಂಗಿ- ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ? ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ? ಮನೆಯಲ್ಲಿ ತಂದೆ- ತಾಯಿ ಇದ್ದಂತೆ ಶಾಲೆಯಲ್ಲಿ ಶಿಕ್ಷಕರು ಇರುತ್ತಾರೆ. ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸಿದರೆ ಹೇಗೆ?” ಎಂದು ಕೇಳಿದ್ದಾರೆ.

ಬಿಸಿಲಿನಲ್ಲಿ ಹೆಣ್ಣುಮಕ್ಕಳಿಗೆ ಬುರ್ಖಾ ಧರಿಸಿ ಹೋಡಾಡುವುದು ಕಷ್ಟವಾಗುತ್ತಿದೆ. ಬುರ್ಖಾ ಧರಿಸುವುದರಿಂದ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬುರ್ಖಾ ಎನ್ನುವುದೇ ಒಂದು ಬಂಧೀಖಾನೆ. ನಿಮ್ಮ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಿರುವುದಾಗ ಇದು ಅಗತ್ಯವೆನಿಸಿದೆಯೇ? ಒಂದು ವೇಳೆ ಅವರಿಗೆ ಇಸ್ಲಾಂ ನಲ್ಲಿ ರಕ್ಷಣೆಯಿಲ್ಲ ಎನ್ನುವುದಾದರೆ, ನಮ್ಮ ಧರ್ಮಕ್ಕೆ ಬನ್ನಿ ನಾವು ರಕ್ಷಣೆ ಕೊಡುತ್ತೇವೆ ಎಂದಿದ್ದಾರೆ.

ಆಜಾನ್ ಕೂಗುವ ಲೌಡ್ ಸ್ಪೀಕರ್‌ಗಳನ್ನು ತೆಗೆದು ಹಾಕಬೇಕು. ಈ ಸಂಬಂಧ ಈಗಾಗಲೇ ಹೋರಾಟ ಆರಂಭಿಸಿದ್ದೇನೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿರುವುದನ್ನು ರಾಜ್ಯ ಸರ್ಕಾರ ಪತ್ತೆ ಹಚ್ಚಬೇಕು. ನಾವು ಈ ರೀತಿಯ ದೇಗುಲಗಳನ್ನು ಪತ್ತೆ ಹಚ್ಚುತ್ತೇವೆ. ಅದಕ್ಕಾಗಿ ಸಮಿತಿ ರಚಿಸಿ ರಾಜ್ಯ ಸರ್ಕಾರ ನಮಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಹನುಮ ದೇವಸ್ಥಾನ ಕಟ್ಟಲೇಬೇಕು: ‘ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ, ಹನುಮ ದೇವಸ್ಥಾನ ಕಟ್ಟಬೇಕು’ ಎಂಬ ಹೇಳಿಕೆಗೆ ಈಗಲೂ ನಾನು ಬದ್ದ. ಇದಾದ ನಂತರ ಸುಮಾರು 40 ಮಂದಿ ನನಗೆ ಕರೆ ಮಾಡಿ, ನಮ್ಮಲ್ಲೂ ಈ ರೀತಿ ಅನ್ಯಾಯ ಆಗಿದೆ ಎಂಬುದನ್ನು ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಅಲ್ಲಿ ನನ್ನ ಹನುಮನ ದೇವಸ್ಥಾನ ಕಟ್ಟಲೇಬೇಕು ಎಂದಿರುವುದಾಗಿ ಪ್ರತಿಪಾದಿಸಿದ್ದಾರೆ.

ಅದೊಂದು ಪ್ರಾಚೀನ ದೇವಸ್ಥಾನ. ಅಯೋಧ್ಯೆಯ ರಾಮಮಂದಿರದಂತೆ, ಅಲ್ಲಿಯೂ ಹುನಮನ ದೇವಸ್ಥಾನವಿದೆ. ಮೂಲ ವಿಗ್ರಹವೂ ಇದೆ. ಇದಕ್ಕಾಗಿ ನಾನು ಹಿಂದೂಪರ ಸಂಘಟನೆಗಳು ಹಾಗೂ ಎಲ್ಲ ಸ್ವಾಮೀಜಿಗಳ ಮಾರ್ಗದರ್ಶನದೊಂದಿಗೆ ಕೇವಲ ಶ್ರೀರಂಗಪಟ್ಟಣ ಮಾತ್ರವಲ್ಲ, ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ. ನಾನು ಒಬ್ಬನೇ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನ್ಯಾವ ಮೂರು ಕಾಸಿನ ಹಲ್ಕಟ್ ಸ್ವಾಮಿ? ನರಹಂತಕನ ಸರ್ಕಾರ ಇರುವಾಗ ಇವರದ್ದೇ ಅತಿಮಾತು. ಲೋಹಿಯಾ, ರಾಯ್ ಗಳ ಶಿಷ್ಯನ ಮಗ ಮುಖ್ಯಮಂತ್ರಿಯಾಗಿ ಚಡ್ಡಿಗಳ ಗುಲಾಮಿತನದಲ್ಲಿ ವ್ಯಸ್ಥಗೊಂಡಿರುವುದು ಇಂತಹ ಕೊಳಚೆ ಹುಳುಗಳ ಹಾವಳಿ ಹೆಚ್ಚಲು ಕಾರಣ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...