Homeಕರ್ನಾಟಕದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ಮಾದರಿಯಲ್ಲೇ ಧ್ವಂಸ ಮಾಡಬೇಕು ಎಂದು ಹೇಳುವ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದ ರಿಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಳಿ ತಲಾಖ್ ರದ್ದುಪಡಿಸಿದಂತೆ ದೇಶದಲ್ಲೇ ಹಿಜಾಬ್ (ಬುರ್ಖಾ) ಧರಿಸುವುದನ್ನು ನಿಷೇಧಿಸಬೇಕು ಎಂದಿದ್ದಾರೆ.

ಉಡುಪಿಯ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳಿಗೆ ತರಗತಿ ನಿಷೇಧಿಸಿದ್ದ ವಿದ್ಯಮಾನ ಚರ್ಚೆಯಲ್ಲಿದೆ. ಹಿಂದೂ ಧರ್ಮದ ಇತರ ಆಚರಣೆಗಳಂತೆ ಮುಸ್ಲಿಂ ಧರ್ಮಿಯರು ಹಿಜಾಬ್‌ ಧರಿಸುತ್ತಾರೆ. ಹೀಗಿರುವಾಗ ಹಿಜಾಬ್‌ಗೆ ರಾಜಕೀಯ ಪ್ರೇರಿತ ವಿರೋಧ ಸಲ್ಲದು ಎಂಬ ಅಭಿಪ್ರಾಯಗಳು ಮೂಡಿ ಬರುತ್ತಿರುವ ಹೊತ್ತಿನಲ್ಲಿ ಮತ್ತೊಂದು ಗುಂಪು ಈ ಬೆಳವಣಿಗೆಯನ್ನು ಮುಸ್ಲಿಂ ವಿರೋಧಿ ಅಭಿಪ್ರಾಯ ಮೂಡಿಸಲು ಯತ್ನಿಸಿದೆ. ಇತ್ತ ತಮ್ಮ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕೆಂದು ಪ್ರತಿಭಟನಾನಿರತ ಹೆಣ್ಣು ಮಕ್ಕಳು ಆಗ್ರಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಳಿ ಸ್ವಾಮೀಜಿಯ ಹೇಳಿಕೆ ಹೊರಬಿದ್ದಿದೆ.

ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಳಿ ಸ್ವಾಮೀಜಿ, “ರಾಜ್ಯ, ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಶಾಲೆಗೆ ಬುರ್ಖಾ ಧರಿಸಿ ಬಂದರೆ ಗುರುತು ಪತ್ತೆಯಾಗುವುದಿಲ್ಲ. ವಿದ್ಯಾರ್ಥಿನಿಯೇ ಬರುತ್ತಾರೋ ಅವರ ಅಕ್ಕ -ತಂಗಿ- ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ? ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ? ಮನೆಯಲ್ಲಿ ತಂದೆ- ತಾಯಿ ಇದ್ದಂತೆ ಶಾಲೆಯಲ್ಲಿ ಶಿಕ್ಷಕರು ಇರುತ್ತಾರೆ. ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸಿದರೆ ಹೇಗೆ?” ಎಂದು ಕೇಳಿದ್ದಾರೆ.

ಬಿಸಿಲಿನಲ್ಲಿ ಹೆಣ್ಣುಮಕ್ಕಳಿಗೆ ಬುರ್ಖಾ ಧರಿಸಿ ಹೋಡಾಡುವುದು ಕಷ್ಟವಾಗುತ್ತಿದೆ. ಬುರ್ಖಾ ಧರಿಸುವುದರಿಂದ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬುರ್ಖಾ ಎನ್ನುವುದೇ ಒಂದು ಬಂಧೀಖಾನೆ. ನಿಮ್ಮ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಿರುವುದಾಗ ಇದು ಅಗತ್ಯವೆನಿಸಿದೆಯೇ? ಒಂದು ವೇಳೆ ಅವರಿಗೆ ಇಸ್ಲಾಂ ನಲ್ಲಿ ರಕ್ಷಣೆಯಿಲ್ಲ ಎನ್ನುವುದಾದರೆ, ನಮ್ಮ ಧರ್ಮಕ್ಕೆ ಬನ್ನಿ ನಾವು ರಕ್ಷಣೆ ಕೊಡುತ್ತೇವೆ ಎಂದಿದ್ದಾರೆ.

ಆಜಾನ್ ಕೂಗುವ ಲೌಡ್ ಸ್ಪೀಕರ್‌ಗಳನ್ನು ತೆಗೆದು ಹಾಕಬೇಕು. ಈ ಸಂಬಂಧ ಈಗಾಗಲೇ ಹೋರಾಟ ಆರಂಭಿಸಿದ್ದೇನೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿರುವುದನ್ನು ರಾಜ್ಯ ಸರ್ಕಾರ ಪತ್ತೆ ಹಚ್ಚಬೇಕು. ನಾವು ಈ ರೀತಿಯ ದೇಗುಲಗಳನ್ನು ಪತ್ತೆ ಹಚ್ಚುತ್ತೇವೆ. ಅದಕ್ಕಾಗಿ ಸಮಿತಿ ರಚಿಸಿ ರಾಜ್ಯ ಸರ್ಕಾರ ನಮಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಹನುಮ ದೇವಸ್ಥಾನ ಕಟ್ಟಲೇಬೇಕು: ‘ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ, ಹನುಮ ದೇವಸ್ಥಾನ ಕಟ್ಟಬೇಕು’ ಎಂಬ ಹೇಳಿಕೆಗೆ ಈಗಲೂ ನಾನು ಬದ್ದ. ಇದಾದ ನಂತರ ಸುಮಾರು 40 ಮಂದಿ ನನಗೆ ಕರೆ ಮಾಡಿ, ನಮ್ಮಲ್ಲೂ ಈ ರೀತಿ ಅನ್ಯಾಯ ಆಗಿದೆ ಎಂಬುದನ್ನು ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಅಲ್ಲಿ ನನ್ನ ಹನುಮನ ದೇವಸ್ಥಾನ ಕಟ್ಟಲೇಬೇಕು ಎಂದಿರುವುದಾಗಿ ಪ್ರತಿಪಾದಿಸಿದ್ದಾರೆ.

ಅದೊಂದು ಪ್ರಾಚೀನ ದೇವಸ್ಥಾನ. ಅಯೋಧ್ಯೆಯ ರಾಮಮಂದಿರದಂತೆ, ಅಲ್ಲಿಯೂ ಹುನಮನ ದೇವಸ್ಥಾನವಿದೆ. ಮೂಲ ವಿಗ್ರಹವೂ ಇದೆ. ಇದಕ್ಕಾಗಿ ನಾನು ಹಿಂದೂಪರ ಸಂಘಟನೆಗಳು ಹಾಗೂ ಎಲ್ಲ ಸ್ವಾಮೀಜಿಗಳ ಮಾರ್ಗದರ್ಶನದೊಂದಿಗೆ ಕೇವಲ ಶ್ರೀರಂಗಪಟ್ಟಣ ಮಾತ್ರವಲ್ಲ, ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ. ನಾನು ಒಬ್ಬನೇ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನ್ಯಾವ ಮೂರು ಕಾಸಿನ ಹಲ್ಕಟ್ ಸ್ವಾಮಿ? ನರಹಂತಕನ ಸರ್ಕಾರ ಇರುವಾಗ ಇವರದ್ದೇ ಅತಿಮಾತು. ಲೋಹಿಯಾ, ರಾಯ್ ಗಳ ಶಿಷ್ಯನ ಮಗ ಮುಖ್ಯಮಂತ್ರಿಯಾಗಿ ಚಡ್ಡಿಗಳ ಗುಲಾಮಿತನದಲ್ಲಿ ವ್ಯಸ್ಥಗೊಂಡಿರುವುದು ಇಂತಹ ಕೊಳಚೆ ಹುಳುಗಳ ಹಾವಳಿ ಹೆಚ್ಚಲು ಕಾರಣ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....