Homeಕರ್ನಾಟಕದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ಮಾದರಿಯಲ್ಲೇ ಧ್ವಂಸ ಮಾಡಬೇಕು ಎಂದು ಹೇಳುವ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದ ರಿಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಳಿ ತಲಾಖ್ ರದ್ದುಪಡಿಸಿದಂತೆ ದೇಶದಲ್ಲೇ ಹಿಜಾಬ್ (ಬುರ್ಖಾ) ಧರಿಸುವುದನ್ನು ನಿಷೇಧಿಸಬೇಕು ಎಂದಿದ್ದಾರೆ.

ಉಡುಪಿಯ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳಿಗೆ ತರಗತಿ ನಿಷೇಧಿಸಿದ್ದ ವಿದ್ಯಮಾನ ಚರ್ಚೆಯಲ್ಲಿದೆ. ಹಿಂದೂ ಧರ್ಮದ ಇತರ ಆಚರಣೆಗಳಂತೆ ಮುಸ್ಲಿಂ ಧರ್ಮಿಯರು ಹಿಜಾಬ್‌ ಧರಿಸುತ್ತಾರೆ. ಹೀಗಿರುವಾಗ ಹಿಜಾಬ್‌ಗೆ ರಾಜಕೀಯ ಪ್ರೇರಿತ ವಿರೋಧ ಸಲ್ಲದು ಎಂಬ ಅಭಿಪ್ರಾಯಗಳು ಮೂಡಿ ಬರುತ್ತಿರುವ ಹೊತ್ತಿನಲ್ಲಿ ಮತ್ತೊಂದು ಗುಂಪು ಈ ಬೆಳವಣಿಗೆಯನ್ನು ಮುಸ್ಲಿಂ ವಿರೋಧಿ ಅಭಿಪ್ರಾಯ ಮೂಡಿಸಲು ಯತ್ನಿಸಿದೆ. ಇತ್ತ ತಮ್ಮ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕೆಂದು ಪ್ರತಿಭಟನಾನಿರತ ಹೆಣ್ಣು ಮಕ್ಕಳು ಆಗ್ರಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಳಿ ಸ್ವಾಮೀಜಿಯ ಹೇಳಿಕೆ ಹೊರಬಿದ್ದಿದೆ.

ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಳಿ ಸ್ವಾಮೀಜಿ, “ರಾಜ್ಯ, ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಶಾಲೆಗೆ ಬುರ್ಖಾ ಧರಿಸಿ ಬಂದರೆ ಗುರುತು ಪತ್ತೆಯಾಗುವುದಿಲ್ಲ. ವಿದ್ಯಾರ್ಥಿನಿಯೇ ಬರುತ್ತಾರೋ ಅವರ ಅಕ್ಕ -ತಂಗಿ- ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ? ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ? ಮನೆಯಲ್ಲಿ ತಂದೆ- ತಾಯಿ ಇದ್ದಂತೆ ಶಾಲೆಯಲ್ಲಿ ಶಿಕ್ಷಕರು ಇರುತ್ತಾರೆ. ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸಿದರೆ ಹೇಗೆ?” ಎಂದು ಕೇಳಿದ್ದಾರೆ.

ಬಿಸಿಲಿನಲ್ಲಿ ಹೆಣ್ಣುಮಕ್ಕಳಿಗೆ ಬುರ್ಖಾ ಧರಿಸಿ ಹೋಡಾಡುವುದು ಕಷ್ಟವಾಗುತ್ತಿದೆ. ಬುರ್ಖಾ ಧರಿಸುವುದರಿಂದ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬುರ್ಖಾ ಎನ್ನುವುದೇ ಒಂದು ಬಂಧೀಖಾನೆ. ನಿಮ್ಮ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಿರುವುದಾಗ ಇದು ಅಗತ್ಯವೆನಿಸಿದೆಯೇ? ಒಂದು ವೇಳೆ ಅವರಿಗೆ ಇಸ್ಲಾಂ ನಲ್ಲಿ ರಕ್ಷಣೆಯಿಲ್ಲ ಎನ್ನುವುದಾದರೆ, ನಮ್ಮ ಧರ್ಮಕ್ಕೆ ಬನ್ನಿ ನಾವು ರಕ್ಷಣೆ ಕೊಡುತ್ತೇವೆ ಎಂದಿದ್ದಾರೆ.

ಆಜಾನ್ ಕೂಗುವ ಲೌಡ್ ಸ್ಪೀಕರ್‌ಗಳನ್ನು ತೆಗೆದು ಹಾಕಬೇಕು. ಈ ಸಂಬಂಧ ಈಗಾಗಲೇ ಹೋರಾಟ ಆರಂಭಿಸಿದ್ದೇನೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿರುವುದನ್ನು ರಾಜ್ಯ ಸರ್ಕಾರ ಪತ್ತೆ ಹಚ್ಚಬೇಕು. ನಾವು ಈ ರೀತಿಯ ದೇಗುಲಗಳನ್ನು ಪತ್ತೆ ಹಚ್ಚುತ್ತೇವೆ. ಅದಕ್ಕಾಗಿ ಸಮಿತಿ ರಚಿಸಿ ರಾಜ್ಯ ಸರ್ಕಾರ ನಮಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಹನುಮ ದೇವಸ್ಥಾನ ಕಟ್ಟಲೇಬೇಕು: ‘ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ, ಹನುಮ ದೇವಸ್ಥಾನ ಕಟ್ಟಬೇಕು’ ಎಂಬ ಹೇಳಿಕೆಗೆ ಈಗಲೂ ನಾನು ಬದ್ದ. ಇದಾದ ನಂತರ ಸುಮಾರು 40 ಮಂದಿ ನನಗೆ ಕರೆ ಮಾಡಿ, ನಮ್ಮಲ್ಲೂ ಈ ರೀತಿ ಅನ್ಯಾಯ ಆಗಿದೆ ಎಂಬುದನ್ನು ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಅಲ್ಲಿ ನನ್ನ ಹನುಮನ ದೇವಸ್ಥಾನ ಕಟ್ಟಲೇಬೇಕು ಎಂದಿರುವುದಾಗಿ ಪ್ರತಿಪಾದಿಸಿದ್ದಾರೆ.

ಅದೊಂದು ಪ್ರಾಚೀನ ದೇವಸ್ಥಾನ. ಅಯೋಧ್ಯೆಯ ರಾಮಮಂದಿರದಂತೆ, ಅಲ್ಲಿಯೂ ಹುನಮನ ದೇವಸ್ಥಾನವಿದೆ. ಮೂಲ ವಿಗ್ರಹವೂ ಇದೆ. ಇದಕ್ಕಾಗಿ ನಾನು ಹಿಂದೂಪರ ಸಂಘಟನೆಗಳು ಹಾಗೂ ಎಲ್ಲ ಸ್ವಾಮೀಜಿಗಳ ಮಾರ್ಗದರ್ಶನದೊಂದಿಗೆ ಕೇವಲ ಶ್ರೀರಂಗಪಟ್ಟಣ ಮಾತ್ರವಲ್ಲ, ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ. ನಾನು ಒಬ್ಬನೇ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನ್ಯಾವ ಮೂರು ಕಾಸಿನ ಹಲ್ಕಟ್ ಸ್ವಾಮಿ? ನರಹಂತಕನ ಸರ್ಕಾರ ಇರುವಾಗ ಇವರದ್ದೇ ಅತಿಮಾತು. ಲೋಹಿಯಾ, ರಾಯ್ ಗಳ ಶಿಷ್ಯನ ಮಗ ಮುಖ್ಯಮಂತ್ರಿಯಾಗಿ ಚಡ್ಡಿಗಳ ಗುಲಾಮಿತನದಲ್ಲಿ ವ್ಯಸ್ಥಗೊಂಡಿರುವುದು ಇಂತಹ ಕೊಳಚೆ ಹುಳುಗಳ ಹಾವಳಿ ಹೆಚ್ಚಲು ಕಾರಣ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...