Homeಕರ್ನಾಟಕದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ಮಾದರಿಯಲ್ಲೇ ಧ್ವಂಸ ಮಾಡಬೇಕು ಎಂದು ಹೇಳುವ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದ ರಿಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಳಿ ತಲಾಖ್ ರದ್ದುಪಡಿಸಿದಂತೆ ದೇಶದಲ್ಲೇ ಹಿಜಾಬ್ (ಬುರ್ಖಾ) ಧರಿಸುವುದನ್ನು ನಿಷೇಧಿಸಬೇಕು ಎಂದಿದ್ದಾರೆ.

ಉಡುಪಿಯ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳಿಗೆ ತರಗತಿ ನಿಷೇಧಿಸಿದ್ದ ವಿದ್ಯಮಾನ ಚರ್ಚೆಯಲ್ಲಿದೆ. ಹಿಂದೂ ಧರ್ಮದ ಇತರ ಆಚರಣೆಗಳಂತೆ ಮುಸ್ಲಿಂ ಧರ್ಮಿಯರು ಹಿಜಾಬ್‌ ಧರಿಸುತ್ತಾರೆ. ಹೀಗಿರುವಾಗ ಹಿಜಾಬ್‌ಗೆ ರಾಜಕೀಯ ಪ್ರೇರಿತ ವಿರೋಧ ಸಲ್ಲದು ಎಂಬ ಅಭಿಪ್ರಾಯಗಳು ಮೂಡಿ ಬರುತ್ತಿರುವ ಹೊತ್ತಿನಲ್ಲಿ ಮತ್ತೊಂದು ಗುಂಪು ಈ ಬೆಳವಣಿಗೆಯನ್ನು ಮುಸ್ಲಿಂ ವಿರೋಧಿ ಅಭಿಪ್ರಾಯ ಮೂಡಿಸಲು ಯತ್ನಿಸಿದೆ. ಇತ್ತ ತಮ್ಮ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕೆಂದು ಪ್ರತಿಭಟನಾನಿರತ ಹೆಣ್ಣು ಮಕ್ಕಳು ಆಗ್ರಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಳಿ ಸ್ವಾಮೀಜಿಯ ಹೇಳಿಕೆ ಹೊರಬಿದ್ದಿದೆ.

ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಳಿ ಸ್ವಾಮೀಜಿ, “ರಾಜ್ಯ, ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಶಾಲೆಗೆ ಬುರ್ಖಾ ಧರಿಸಿ ಬಂದರೆ ಗುರುತು ಪತ್ತೆಯಾಗುವುದಿಲ್ಲ. ವಿದ್ಯಾರ್ಥಿನಿಯೇ ಬರುತ್ತಾರೋ ಅವರ ಅಕ್ಕ -ತಂಗಿ- ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ? ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ? ಮನೆಯಲ್ಲಿ ತಂದೆ- ತಾಯಿ ಇದ್ದಂತೆ ಶಾಲೆಯಲ್ಲಿ ಶಿಕ್ಷಕರು ಇರುತ್ತಾರೆ. ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸಿದರೆ ಹೇಗೆ?” ಎಂದು ಕೇಳಿದ್ದಾರೆ.

ಬಿಸಿಲಿನಲ್ಲಿ ಹೆಣ್ಣುಮಕ್ಕಳಿಗೆ ಬುರ್ಖಾ ಧರಿಸಿ ಹೋಡಾಡುವುದು ಕಷ್ಟವಾಗುತ್ತಿದೆ. ಬುರ್ಖಾ ಧರಿಸುವುದರಿಂದ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬುರ್ಖಾ ಎನ್ನುವುದೇ ಒಂದು ಬಂಧೀಖಾನೆ. ನಿಮ್ಮ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಿರುವುದಾಗ ಇದು ಅಗತ್ಯವೆನಿಸಿದೆಯೇ? ಒಂದು ವೇಳೆ ಅವರಿಗೆ ಇಸ್ಲಾಂ ನಲ್ಲಿ ರಕ್ಷಣೆಯಿಲ್ಲ ಎನ್ನುವುದಾದರೆ, ನಮ್ಮ ಧರ್ಮಕ್ಕೆ ಬನ್ನಿ ನಾವು ರಕ್ಷಣೆ ಕೊಡುತ್ತೇವೆ ಎಂದಿದ್ದಾರೆ.

ಆಜಾನ್ ಕೂಗುವ ಲೌಡ್ ಸ್ಪೀಕರ್‌ಗಳನ್ನು ತೆಗೆದು ಹಾಕಬೇಕು. ಈ ಸಂಬಂಧ ಈಗಾಗಲೇ ಹೋರಾಟ ಆರಂಭಿಸಿದ್ದೇನೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿರುವುದನ್ನು ರಾಜ್ಯ ಸರ್ಕಾರ ಪತ್ತೆ ಹಚ್ಚಬೇಕು. ನಾವು ಈ ರೀತಿಯ ದೇಗುಲಗಳನ್ನು ಪತ್ತೆ ಹಚ್ಚುತ್ತೇವೆ. ಅದಕ್ಕಾಗಿ ಸಮಿತಿ ರಚಿಸಿ ರಾಜ್ಯ ಸರ್ಕಾರ ನಮಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಹನುಮ ದೇವಸ್ಥಾನ ಕಟ್ಟಲೇಬೇಕು: ‘ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ, ಹನುಮ ದೇವಸ್ಥಾನ ಕಟ್ಟಬೇಕು’ ಎಂಬ ಹೇಳಿಕೆಗೆ ಈಗಲೂ ನಾನು ಬದ್ದ. ಇದಾದ ನಂತರ ಸುಮಾರು 40 ಮಂದಿ ನನಗೆ ಕರೆ ಮಾಡಿ, ನಮ್ಮಲ್ಲೂ ಈ ರೀತಿ ಅನ್ಯಾಯ ಆಗಿದೆ ಎಂಬುದನ್ನು ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಅಲ್ಲಿ ನನ್ನ ಹನುಮನ ದೇವಸ್ಥಾನ ಕಟ್ಟಲೇಬೇಕು ಎಂದಿರುವುದಾಗಿ ಪ್ರತಿಪಾದಿಸಿದ್ದಾರೆ.

ಅದೊಂದು ಪ್ರಾಚೀನ ದೇವಸ್ಥಾನ. ಅಯೋಧ್ಯೆಯ ರಾಮಮಂದಿರದಂತೆ, ಅಲ್ಲಿಯೂ ಹುನಮನ ದೇವಸ್ಥಾನವಿದೆ. ಮೂಲ ವಿಗ್ರಹವೂ ಇದೆ. ಇದಕ್ಕಾಗಿ ನಾನು ಹಿಂದೂಪರ ಸಂಘಟನೆಗಳು ಹಾಗೂ ಎಲ್ಲ ಸ್ವಾಮೀಜಿಗಳ ಮಾರ್ಗದರ್ಶನದೊಂದಿಗೆ ಕೇವಲ ಶ್ರೀರಂಗಪಟ್ಟಣ ಮಾತ್ರವಲ್ಲ, ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ. ನಾನು ಒಬ್ಬನೇ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನ್ಯಾವ ಮೂರು ಕಾಸಿನ ಹಲ್ಕಟ್ ಸ್ವಾಮಿ? ನರಹಂತಕನ ಸರ್ಕಾರ ಇರುವಾಗ ಇವರದ್ದೇ ಅತಿಮಾತು. ಲೋಹಿಯಾ, ರಾಯ್ ಗಳ ಶಿಷ್ಯನ ಮಗ ಮುಖ್ಯಮಂತ್ರಿಯಾಗಿ ಚಡ್ಡಿಗಳ ಗುಲಾಮಿತನದಲ್ಲಿ ವ್ಯಸ್ಥಗೊಂಡಿರುವುದು ಇಂತಹ ಕೊಳಚೆ ಹುಳುಗಳ ಹಾವಳಿ ಹೆಚ್ಚಲು ಕಾರಣ.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...