Homeಕರ್ನಾಟಕದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ಮಾದರಿಯಲ್ಲೇ ಧ್ವಂಸ ಮಾಡಬೇಕು ಎಂದು ಹೇಳುವ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದ ರಿಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಳಿ ತಲಾಖ್ ರದ್ದುಪಡಿಸಿದಂತೆ ದೇಶದಲ್ಲೇ ಹಿಜಾಬ್ (ಬುರ್ಖಾ) ಧರಿಸುವುದನ್ನು ನಿಷೇಧಿಸಬೇಕು ಎಂದಿದ್ದಾರೆ.

ಉಡುಪಿಯ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳಿಗೆ ತರಗತಿ ನಿಷೇಧಿಸಿದ್ದ ವಿದ್ಯಮಾನ ಚರ್ಚೆಯಲ್ಲಿದೆ. ಹಿಂದೂ ಧರ್ಮದ ಇತರ ಆಚರಣೆಗಳಂತೆ ಮುಸ್ಲಿಂ ಧರ್ಮಿಯರು ಹಿಜಾಬ್‌ ಧರಿಸುತ್ತಾರೆ. ಹೀಗಿರುವಾಗ ಹಿಜಾಬ್‌ಗೆ ರಾಜಕೀಯ ಪ್ರೇರಿತ ವಿರೋಧ ಸಲ್ಲದು ಎಂಬ ಅಭಿಪ್ರಾಯಗಳು ಮೂಡಿ ಬರುತ್ತಿರುವ ಹೊತ್ತಿನಲ್ಲಿ ಮತ್ತೊಂದು ಗುಂಪು ಈ ಬೆಳವಣಿಗೆಯನ್ನು ಮುಸ್ಲಿಂ ವಿರೋಧಿ ಅಭಿಪ್ರಾಯ ಮೂಡಿಸಲು ಯತ್ನಿಸಿದೆ. ಇತ್ತ ತಮ್ಮ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕೆಂದು ಪ್ರತಿಭಟನಾನಿರತ ಹೆಣ್ಣು ಮಕ್ಕಳು ಆಗ್ರಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಳಿ ಸ್ವಾಮೀಜಿಯ ಹೇಳಿಕೆ ಹೊರಬಿದ್ದಿದೆ.

ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಳಿ ಸ್ವಾಮೀಜಿ, “ರಾಜ್ಯ, ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಶಾಲೆಗೆ ಬುರ್ಖಾ ಧರಿಸಿ ಬಂದರೆ ಗುರುತು ಪತ್ತೆಯಾಗುವುದಿಲ್ಲ. ವಿದ್ಯಾರ್ಥಿನಿಯೇ ಬರುತ್ತಾರೋ ಅವರ ಅಕ್ಕ -ತಂಗಿ- ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ? ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ? ಮನೆಯಲ್ಲಿ ತಂದೆ- ತಾಯಿ ಇದ್ದಂತೆ ಶಾಲೆಯಲ್ಲಿ ಶಿಕ್ಷಕರು ಇರುತ್ತಾರೆ. ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸಿದರೆ ಹೇಗೆ?” ಎಂದು ಕೇಳಿದ್ದಾರೆ.

ಬಿಸಿಲಿನಲ್ಲಿ ಹೆಣ್ಣುಮಕ್ಕಳಿಗೆ ಬುರ್ಖಾ ಧರಿಸಿ ಹೋಡಾಡುವುದು ಕಷ್ಟವಾಗುತ್ತಿದೆ. ಬುರ್ಖಾ ಧರಿಸುವುದರಿಂದ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬುರ್ಖಾ ಎನ್ನುವುದೇ ಒಂದು ಬಂಧೀಖಾನೆ. ನಿಮ್ಮ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಿರುವುದಾಗ ಇದು ಅಗತ್ಯವೆನಿಸಿದೆಯೇ? ಒಂದು ವೇಳೆ ಅವರಿಗೆ ಇಸ್ಲಾಂ ನಲ್ಲಿ ರಕ್ಷಣೆಯಿಲ್ಲ ಎನ್ನುವುದಾದರೆ, ನಮ್ಮ ಧರ್ಮಕ್ಕೆ ಬನ್ನಿ ನಾವು ರಕ್ಷಣೆ ಕೊಡುತ್ತೇವೆ ಎಂದಿದ್ದಾರೆ.

ಆಜಾನ್ ಕೂಗುವ ಲೌಡ್ ಸ್ಪೀಕರ್‌ಗಳನ್ನು ತೆಗೆದು ಹಾಕಬೇಕು. ಈ ಸಂಬಂಧ ಈಗಾಗಲೇ ಹೋರಾಟ ಆರಂಭಿಸಿದ್ದೇನೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿರುವುದನ್ನು ರಾಜ್ಯ ಸರ್ಕಾರ ಪತ್ತೆ ಹಚ್ಚಬೇಕು. ನಾವು ಈ ರೀತಿಯ ದೇಗುಲಗಳನ್ನು ಪತ್ತೆ ಹಚ್ಚುತ್ತೇವೆ. ಅದಕ್ಕಾಗಿ ಸಮಿತಿ ರಚಿಸಿ ರಾಜ್ಯ ಸರ್ಕಾರ ನಮಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಹನುಮ ದೇವಸ್ಥಾನ ಕಟ್ಟಲೇಬೇಕು: ‘ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ, ಹನುಮ ದೇವಸ್ಥಾನ ಕಟ್ಟಬೇಕು’ ಎಂಬ ಹೇಳಿಕೆಗೆ ಈಗಲೂ ನಾನು ಬದ್ದ. ಇದಾದ ನಂತರ ಸುಮಾರು 40 ಮಂದಿ ನನಗೆ ಕರೆ ಮಾಡಿ, ನಮ್ಮಲ್ಲೂ ಈ ರೀತಿ ಅನ್ಯಾಯ ಆಗಿದೆ ಎಂಬುದನ್ನು ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಅಲ್ಲಿ ನನ್ನ ಹನುಮನ ದೇವಸ್ಥಾನ ಕಟ್ಟಲೇಬೇಕು ಎಂದಿರುವುದಾಗಿ ಪ್ರತಿಪಾದಿಸಿದ್ದಾರೆ.

ಅದೊಂದು ಪ್ರಾಚೀನ ದೇವಸ್ಥಾನ. ಅಯೋಧ್ಯೆಯ ರಾಮಮಂದಿರದಂತೆ, ಅಲ್ಲಿಯೂ ಹುನಮನ ದೇವಸ್ಥಾನವಿದೆ. ಮೂಲ ವಿಗ್ರಹವೂ ಇದೆ. ಇದಕ್ಕಾಗಿ ನಾನು ಹಿಂದೂಪರ ಸಂಘಟನೆಗಳು ಹಾಗೂ ಎಲ್ಲ ಸ್ವಾಮೀಜಿಗಳ ಮಾರ್ಗದರ್ಶನದೊಂದಿಗೆ ಕೇವಲ ಶ್ರೀರಂಗಪಟ್ಟಣ ಮಾತ್ರವಲ್ಲ, ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ. ನಾನು ಒಬ್ಬನೇ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನ್ಯಾವ ಮೂರು ಕಾಸಿನ ಹಲ್ಕಟ್ ಸ್ವಾಮಿ? ನರಹಂತಕನ ಸರ್ಕಾರ ಇರುವಾಗ ಇವರದ್ದೇ ಅತಿಮಾತು. ಲೋಹಿಯಾ, ರಾಯ್ ಗಳ ಶಿಷ್ಯನ ಮಗ ಮುಖ್ಯಮಂತ್ರಿಯಾಗಿ ಚಡ್ಡಿಗಳ ಗುಲಾಮಿತನದಲ್ಲಿ ವ್ಯಸ್ಥಗೊಂಡಿರುವುದು ಇಂತಹ ಕೊಳಚೆ ಹುಳುಗಳ ಹಾವಳಿ ಹೆಚ್ಚಲು ಕಾರಣ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...