Homeಕರ್ನಾಟಕದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ಮಾದರಿಯಲ್ಲೇ ಧ್ವಂಸ ಮಾಡಬೇಕು ಎಂದು ಹೇಳುವ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದ ರಿಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಳಿ ತಲಾಖ್ ರದ್ದುಪಡಿಸಿದಂತೆ ದೇಶದಲ್ಲೇ ಹಿಜಾಬ್ (ಬುರ್ಖಾ) ಧರಿಸುವುದನ್ನು ನಿಷೇಧಿಸಬೇಕು ಎಂದಿದ್ದಾರೆ.

ಉಡುಪಿಯ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳಿಗೆ ತರಗತಿ ನಿಷೇಧಿಸಿದ್ದ ವಿದ್ಯಮಾನ ಚರ್ಚೆಯಲ್ಲಿದೆ. ಹಿಂದೂ ಧರ್ಮದ ಇತರ ಆಚರಣೆಗಳಂತೆ ಮುಸ್ಲಿಂ ಧರ್ಮಿಯರು ಹಿಜಾಬ್‌ ಧರಿಸುತ್ತಾರೆ. ಹೀಗಿರುವಾಗ ಹಿಜಾಬ್‌ಗೆ ರಾಜಕೀಯ ಪ್ರೇರಿತ ವಿರೋಧ ಸಲ್ಲದು ಎಂಬ ಅಭಿಪ್ರಾಯಗಳು ಮೂಡಿ ಬರುತ್ತಿರುವ ಹೊತ್ತಿನಲ್ಲಿ ಮತ್ತೊಂದು ಗುಂಪು ಈ ಬೆಳವಣಿಗೆಯನ್ನು ಮುಸ್ಲಿಂ ವಿರೋಧಿ ಅಭಿಪ್ರಾಯ ಮೂಡಿಸಲು ಯತ್ನಿಸಿದೆ. ಇತ್ತ ತಮ್ಮ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕೆಂದು ಪ್ರತಿಭಟನಾನಿರತ ಹೆಣ್ಣು ಮಕ್ಕಳು ಆಗ್ರಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಳಿ ಸ್ವಾಮೀಜಿಯ ಹೇಳಿಕೆ ಹೊರಬಿದ್ದಿದೆ.

ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಳಿ ಸ್ವಾಮೀಜಿ, “ರಾಜ್ಯ, ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಶಾಲೆಗೆ ಬುರ್ಖಾ ಧರಿಸಿ ಬಂದರೆ ಗುರುತು ಪತ್ತೆಯಾಗುವುದಿಲ್ಲ. ವಿದ್ಯಾರ್ಥಿನಿಯೇ ಬರುತ್ತಾರೋ ಅವರ ಅಕ್ಕ -ತಂಗಿ- ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ? ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ? ಮನೆಯಲ್ಲಿ ತಂದೆ- ತಾಯಿ ಇದ್ದಂತೆ ಶಾಲೆಯಲ್ಲಿ ಶಿಕ್ಷಕರು ಇರುತ್ತಾರೆ. ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸಿದರೆ ಹೇಗೆ?” ಎಂದು ಕೇಳಿದ್ದಾರೆ.

ಬಿಸಿಲಿನಲ್ಲಿ ಹೆಣ್ಣುಮಕ್ಕಳಿಗೆ ಬುರ್ಖಾ ಧರಿಸಿ ಹೋಡಾಡುವುದು ಕಷ್ಟವಾಗುತ್ತಿದೆ. ಬುರ್ಖಾ ಧರಿಸುವುದರಿಂದ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬುರ್ಖಾ ಎನ್ನುವುದೇ ಒಂದು ಬಂಧೀಖಾನೆ. ನಿಮ್ಮ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಿರುವುದಾಗ ಇದು ಅಗತ್ಯವೆನಿಸಿದೆಯೇ? ಒಂದು ವೇಳೆ ಅವರಿಗೆ ಇಸ್ಲಾಂ ನಲ್ಲಿ ರಕ್ಷಣೆಯಿಲ್ಲ ಎನ್ನುವುದಾದರೆ, ನಮ್ಮ ಧರ್ಮಕ್ಕೆ ಬನ್ನಿ ನಾವು ರಕ್ಷಣೆ ಕೊಡುತ್ತೇವೆ ಎಂದಿದ್ದಾರೆ.

ಆಜಾನ್ ಕೂಗುವ ಲೌಡ್ ಸ್ಪೀಕರ್‌ಗಳನ್ನು ತೆಗೆದು ಹಾಕಬೇಕು. ಈ ಸಂಬಂಧ ಈಗಾಗಲೇ ಹೋರಾಟ ಆರಂಭಿಸಿದ್ದೇನೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿರುವುದನ್ನು ರಾಜ್ಯ ಸರ್ಕಾರ ಪತ್ತೆ ಹಚ್ಚಬೇಕು. ನಾವು ಈ ರೀತಿಯ ದೇಗುಲಗಳನ್ನು ಪತ್ತೆ ಹಚ್ಚುತ್ತೇವೆ. ಅದಕ್ಕಾಗಿ ಸಮಿತಿ ರಚಿಸಿ ರಾಜ್ಯ ಸರ್ಕಾರ ನಮಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಹನುಮ ದೇವಸ್ಥಾನ ಕಟ್ಟಲೇಬೇಕು: ‘ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ, ಹನುಮ ದೇವಸ್ಥಾನ ಕಟ್ಟಬೇಕು’ ಎಂಬ ಹೇಳಿಕೆಗೆ ಈಗಲೂ ನಾನು ಬದ್ದ. ಇದಾದ ನಂತರ ಸುಮಾರು 40 ಮಂದಿ ನನಗೆ ಕರೆ ಮಾಡಿ, ನಮ್ಮಲ್ಲೂ ಈ ರೀತಿ ಅನ್ಯಾಯ ಆಗಿದೆ ಎಂಬುದನ್ನು ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಅಲ್ಲಿ ನನ್ನ ಹನುಮನ ದೇವಸ್ಥಾನ ಕಟ್ಟಲೇಬೇಕು ಎಂದಿರುವುದಾಗಿ ಪ್ರತಿಪಾದಿಸಿದ್ದಾರೆ.

ಅದೊಂದು ಪ್ರಾಚೀನ ದೇವಸ್ಥಾನ. ಅಯೋಧ್ಯೆಯ ರಾಮಮಂದಿರದಂತೆ, ಅಲ್ಲಿಯೂ ಹುನಮನ ದೇವಸ್ಥಾನವಿದೆ. ಮೂಲ ವಿಗ್ರಹವೂ ಇದೆ. ಇದಕ್ಕಾಗಿ ನಾನು ಹಿಂದೂಪರ ಸಂಘಟನೆಗಳು ಹಾಗೂ ಎಲ್ಲ ಸ್ವಾಮೀಜಿಗಳ ಮಾರ್ಗದರ್ಶನದೊಂದಿಗೆ ಕೇವಲ ಶ್ರೀರಂಗಪಟ್ಟಣ ಮಾತ್ರವಲ್ಲ, ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ. ನಾನು ಒಬ್ಬನೇ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನ್ಯಾವ ಮೂರು ಕಾಸಿನ ಹಲ್ಕಟ್ ಸ್ವಾಮಿ? ನರಹಂತಕನ ಸರ್ಕಾರ ಇರುವಾಗ ಇವರದ್ದೇ ಅತಿಮಾತು. ಲೋಹಿಯಾ, ರಾಯ್ ಗಳ ಶಿಷ್ಯನ ಮಗ ಮುಖ್ಯಮಂತ್ರಿಯಾಗಿ ಚಡ್ಡಿಗಳ ಗುಲಾಮಿತನದಲ್ಲಿ ವ್ಯಸ್ಥಗೊಂಡಿರುವುದು ಇಂತಹ ಕೊಳಚೆ ಹುಳುಗಳ ಹಾವಳಿ ಹೆಚ್ಚಲು ಕಾರಣ.

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...