Homeಕರ್ನಾಟಕದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ಮಾದರಿಯಲ್ಲೇ ಧ್ವಂಸ ಮಾಡಬೇಕು ಎಂದು ಹೇಳುವ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದ ರಿಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಳಿ ತಲಾಖ್ ರದ್ದುಪಡಿಸಿದಂತೆ ದೇಶದಲ್ಲೇ ಹಿಜಾಬ್ (ಬುರ್ಖಾ) ಧರಿಸುವುದನ್ನು ನಿಷೇಧಿಸಬೇಕು ಎಂದಿದ್ದಾರೆ.

ಉಡುಪಿಯ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳಿಗೆ ತರಗತಿ ನಿಷೇಧಿಸಿದ್ದ ವಿದ್ಯಮಾನ ಚರ್ಚೆಯಲ್ಲಿದೆ. ಹಿಂದೂ ಧರ್ಮದ ಇತರ ಆಚರಣೆಗಳಂತೆ ಮುಸ್ಲಿಂ ಧರ್ಮಿಯರು ಹಿಜಾಬ್‌ ಧರಿಸುತ್ತಾರೆ. ಹೀಗಿರುವಾಗ ಹಿಜಾಬ್‌ಗೆ ರಾಜಕೀಯ ಪ್ರೇರಿತ ವಿರೋಧ ಸಲ್ಲದು ಎಂಬ ಅಭಿಪ್ರಾಯಗಳು ಮೂಡಿ ಬರುತ್ತಿರುವ ಹೊತ್ತಿನಲ್ಲಿ ಮತ್ತೊಂದು ಗುಂಪು ಈ ಬೆಳವಣಿಗೆಯನ್ನು ಮುಸ್ಲಿಂ ವಿರೋಧಿ ಅಭಿಪ್ರಾಯ ಮೂಡಿಸಲು ಯತ್ನಿಸಿದೆ. ಇತ್ತ ತಮ್ಮ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕೆಂದು ಪ್ರತಿಭಟನಾನಿರತ ಹೆಣ್ಣು ಮಕ್ಕಳು ಆಗ್ರಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಳಿ ಸ್ವಾಮೀಜಿಯ ಹೇಳಿಕೆ ಹೊರಬಿದ್ದಿದೆ.

ಶಾಲೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಳಿ ಸ್ವಾಮೀಜಿ, “ರಾಜ್ಯ, ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಶಾಲೆಗೆ ಬುರ್ಖಾ ಧರಿಸಿ ಬಂದರೆ ಗುರುತು ಪತ್ತೆಯಾಗುವುದಿಲ್ಲ. ವಿದ್ಯಾರ್ಥಿನಿಯೇ ಬರುತ್ತಾರೋ ಅವರ ಅಕ್ಕ -ತಂಗಿ- ಅಮ್ಮ ಬರುತ್ತಾರೋ ಹೇಗೆ ಗೊತ್ತಾಗುತ್ತದೆ? ಪರೀಕ್ಷೆ ಯಾರು ಬರೆಯುತ್ತಾರೆ ಅನ್ನೋದು ಹೇಗೆ ಗೊತ್ತಾಗುತ್ತದೆ? ಮನೆಯಲ್ಲಿ ತಂದೆ- ತಾಯಿ ಇದ್ದಂತೆ ಶಾಲೆಯಲ್ಲಿ ಶಿಕ್ಷಕರು ಇರುತ್ತಾರೆ. ಸಹಪಾಠಿಗಳು ಸಹೋದರರಂತೆ ಅವರನ್ನು ಅನುಮಾನಿಸಿದರೆ ಹೇಗೆ?” ಎಂದು ಕೇಳಿದ್ದಾರೆ.

ಬಿಸಿಲಿನಲ್ಲಿ ಹೆಣ್ಣುಮಕ್ಕಳಿಗೆ ಬುರ್ಖಾ ಧರಿಸಿ ಹೋಡಾಡುವುದು ಕಷ್ಟವಾಗುತ್ತಿದೆ. ಬುರ್ಖಾ ಧರಿಸುವುದರಿಂದ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬುರ್ಖಾ ಎನ್ನುವುದೇ ಒಂದು ಬಂಧೀಖಾನೆ. ನಿಮ್ಮ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಇಲ್ಲದಿರುವುದಾಗ ಇದು ಅಗತ್ಯವೆನಿಸಿದೆಯೇ? ಒಂದು ವೇಳೆ ಅವರಿಗೆ ಇಸ್ಲಾಂ ನಲ್ಲಿ ರಕ್ಷಣೆಯಿಲ್ಲ ಎನ್ನುವುದಾದರೆ, ನಮ್ಮ ಧರ್ಮಕ್ಕೆ ಬನ್ನಿ ನಾವು ರಕ್ಷಣೆ ಕೊಡುತ್ತೇವೆ ಎಂದಿದ್ದಾರೆ.

ಆಜಾನ್ ಕೂಗುವ ಲೌಡ್ ಸ್ಪೀಕರ್‌ಗಳನ್ನು ತೆಗೆದು ಹಾಕಬೇಕು. ಈ ಸಂಬಂಧ ಈಗಾಗಲೇ ಹೋರಾಟ ಆರಂಭಿಸಿದ್ದೇನೆ. ದೇವಸ್ಥಾನ ಒಡೆದು ಮಸೀದಿ ಕಟ್ಟಿರುವುದನ್ನು ರಾಜ್ಯ ಸರ್ಕಾರ ಪತ್ತೆ ಹಚ್ಚಬೇಕು. ನಾವು ಈ ರೀತಿಯ ದೇಗುಲಗಳನ್ನು ಪತ್ತೆ ಹಚ್ಚುತ್ತೇವೆ. ಅದಕ್ಕಾಗಿ ಸಮಿತಿ ರಚಿಸಿ ರಾಜ್ಯ ಸರ್ಕಾರ ನಮಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಹನುಮ ದೇವಸ್ಥಾನ ಕಟ್ಟಲೇಬೇಕು: ‘ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ, ಹನುಮ ದೇವಸ್ಥಾನ ಕಟ್ಟಬೇಕು’ ಎಂಬ ಹೇಳಿಕೆಗೆ ಈಗಲೂ ನಾನು ಬದ್ದ. ಇದಾದ ನಂತರ ಸುಮಾರು 40 ಮಂದಿ ನನಗೆ ಕರೆ ಮಾಡಿ, ನಮ್ಮಲ್ಲೂ ಈ ರೀತಿ ಅನ್ಯಾಯ ಆಗಿದೆ ಎಂಬುದನ್ನು ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಅಲ್ಲಿ ನನ್ನ ಹನುಮನ ದೇವಸ್ಥಾನ ಕಟ್ಟಲೇಬೇಕು ಎಂದಿರುವುದಾಗಿ ಪ್ರತಿಪಾದಿಸಿದ್ದಾರೆ.

ಅದೊಂದು ಪ್ರಾಚೀನ ದೇವಸ್ಥಾನ. ಅಯೋಧ್ಯೆಯ ರಾಮಮಂದಿರದಂತೆ, ಅಲ್ಲಿಯೂ ಹುನಮನ ದೇವಸ್ಥಾನವಿದೆ. ಮೂಲ ವಿಗ್ರಹವೂ ಇದೆ. ಇದಕ್ಕಾಗಿ ನಾನು ಹಿಂದೂಪರ ಸಂಘಟನೆಗಳು ಹಾಗೂ ಎಲ್ಲ ಸ್ವಾಮೀಜಿಗಳ ಮಾರ್ಗದರ್ಶನದೊಂದಿಗೆ ಕೇವಲ ಶ್ರೀರಂಗಪಟ್ಟಣ ಮಾತ್ರವಲ್ಲ, ರಾಜ್ಯದ ಪ್ರತಿ ಹಳ್ಳಿಗೂ ಹೋಗುತ್ತೇನೆ. ನಾನು ಒಬ್ಬನೇ ಹೋಗುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನ್ಯಾವ ಮೂರು ಕಾಸಿನ ಹಲ್ಕಟ್ ಸ್ವಾಮಿ? ನರಹಂತಕನ ಸರ್ಕಾರ ಇರುವಾಗ ಇವರದ್ದೇ ಅತಿಮಾತು. ಲೋಹಿಯಾ, ರಾಯ್ ಗಳ ಶಿಷ್ಯನ ಮಗ ಮುಖ್ಯಮಂತ್ರಿಯಾಗಿ ಚಡ್ಡಿಗಳ ಗುಲಾಮಿತನದಲ್ಲಿ ವ್ಯಸ್ಥಗೊಂಡಿರುವುದು ಇಂತಹ ಕೊಳಚೆ ಹುಳುಗಳ ಹಾವಳಿ ಹೆಚ್ಚಲು ಕಾರಣ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...