Homeಮುಖಪುಟಹಿಜಾಬ್: ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ, ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಮೇಲಿಲ್ಲ - ರಾಜೇಂದ್ರ...

ಹಿಜಾಬ್: ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ, ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಮೇಲಿಲ್ಲ – ರಾಜೇಂದ್ರ ಚೆನ್ನಿ

ಸರಕಾರವನ್ನು ಓಲೈಸಲು ಅನೇಕ ಜಿಲ್ಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನ್ಯಾಯಾಯಲದ ಮಧ್ಯಂತರ ಆದೇಶದ ವಿರುದ್ಧ ನಡೆದುಕೊಂಡಿದ್ದಾರೆ.

- Advertisement -
- Advertisement -

ನಾನು ಒಂದು ದೃಶ್ಯ ಮತ್ತು ಒಂದು ವರದಿಯ ಬಗ್ಗೆ ಬರೆಯುತ್ತಿದ್ದೇನೆ. ನ್ಯಾಯಾಲಯಗಳಿಗೆ ಸಂಬಂಧಪಟ್ಟ ಯಾವುದೇ ವಿದ್ಯಮಾನದ ಬಗ್ಗೆ, ವಿಶೇಷವಾಗಿ ನ್ಯಾಯಾಲಯದ ತೀರ್ಪುಗಳ ಬಗ್ಗೆ ಬರೆಯಬಾರದೆಂದು ಹೇಳಲಾಗುತ್ತದೆ. ಸಂವಿಧಾನವು ಈ ಬಗ್ಗೆ ಖಚಿತವಾಗಿ ಏನು ಹೇಳಿದೆ ಎಂದು ನನಗೆ ಗೊತ್ತಿಲ್ಲ, ಆದ್ದರಿಂದ ಏನೇ ಇರಲಿ, ನಾನು ವಿಮರ್ಶೆಯ ಬದಲಾಗಿ ಒಬ್ಬ ನಾಗರೀಕನಾಗಿ ನನಗೆ ಅನ್ನಿಸಿದ ಗೊಂದಲಗಳ ಬಗ್ಗೆ ಬರೆಯುತ್ತಿದ್ದೇನೆ.

ಮೊದಲನೆಯದಾಗಿ ಒಂದು ದೃಶ್ಯ ಚಿಕ್ಕಮಗಳೂರಿನ ಪ್ರಥಮದರ್ಜೆ ಕಾಲೇಜಿನ ಗೇಟಿನ ಬಳಿ ತಗೆದ ವೀಡಿಯೋ, ಇದನ್ನು ನಾನು ಸಾಮಾಜಿಕ ತಾಣಗಳಲ್ಲಿ ನೋಡಿದೆ. ಹಿಜಾಬ್ ಹಾಕಿದ ಕೆಲವು ವಿದ್ಯಾರ್ಥಿನಿಯರು ಅವರಿಗೆ ಆಂತರಿಕ ಪರೀಕ್ಷೆ ಬರೆಯಲು ಅಥವಾ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಒಳಗೆ ಬಿಟ್ಟಿಲ್ಲವೆಂದು ಅಳುತ್ತಿರುವ ದೃಶ್ಯ. ಪ್ರಾಚಾರ್ಯರು ಉಚ್ಚನ್ಯಾಯಾಲಯದ ಮಧ್ಯಂತರ ಆಜ್ಞೆ ಇದೆ ನೀವು ಜಿಲ್ಲಾಧಿಕಾರಿಗಳನ್ನು ಕೇಳಿ ಎಂದರಂತೆ. ಅವರೂ ಅದೇ ಉತ್ತರವನ್ನು ಕೊಟ್ಟರಂತೆ. ನಮಗೆ ಬೇರೆ ಕೊಠಡಿಯಲ್ಲಿ ಕುಳಿತು ಬರೆಯಲು ಅವಕಾಶ ಕೊಡಬೇಕಿತ್ತು ಎಂದು ಈ ವಿದ್ಯಾರ್ಥಿನಿಯರು ಅಳುತ್ತಿದ್ದರು. ಮನುಷ್ಯರಾದ ಯಾರಿಗಾದರೂ ಕರುಳು ಮಿಡಿಯುವಂಥ ದೃಶ್ಯವಿದಾಗಿತ್ತು. ತಪ್ಪು ಒಪ್ಪು ಚರ್ಚಿಸೋಣ, ಆದರೆ ಮಕ್ಕಳೂ ಹೀಗೆ ಅಸಹಾಯಕರಾಗಿ ಅಳುವುದು ಯಾವ ಸಮಾಜಕ್ಕೂ ಕಳಂಕವೆ.

ಈಗ ಒಂದು ವರದಿ. ಕರ್ನಾಟಕದ ಉಚ್ಛನ್ಯಾಯಾಲಯವು ವಯಸ್ಕಳಲ್ಲದ ಹುಡುಗಿಯೊಬ್ಬಳನ್ನು ರೇಪ್ ಮಾಡಿದ ಆರೋಪವಿರುವ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕೆಂದು ಆದೇಶ ನೀಡಿದೆ. (ಇಂದು 11/03/22 ಪತ್ರಿಕೆಗಳಲ್ಲಿ ವರದಿಯಾಗಿದೆ). ವರದಿಯ ಪ್ರಕಾರ ಮಾನ್ಯ ನ್ಯಾಯಮೂರ್ತಿಯವರು, “ಆರೋಪವಿದ್ದರೂ ವಿಚಾರಣೆ ನಡೆಯುತ್ತಿರುವ ಕಾರಣಕ್ಕಾಗಿ ವಿದ್ಯಾರ್ಥಿಯು ಪರೀಕ್ಷೆ ಬರೆಯುವುದನ್ನು ನಿರ್ಬಂಧಿಸಲಾಗದು” ಎಂದು ಹೇಳಿದ್ದಾರೆ. ಇದು ನ್ಯಾಯದ ದೃಷ್ಟಿಯಿಂದ ಸರಿಯೆಂದು ತೋರುತ್ತದೆ. ಅಲ್ಲದೆ ಈಗ ಪರೀಕ್ಷೆಗೆ ನಿರ್ಬಂಧಿಸಿದರೆ ಮುಂದೆ ಒಂದು ವೇಳೆ ಆರೋಪಿಯು ಅಪರಾಧಿಯಲ್ಲ ಎಂದು ಸಾಬೀತಾದರೆ ಅದು ಅವನಿಗೆ ಅನ್ಯಾಯವಾಗುತ್ತದೆ ಎನ್ನುವ ಸರಿಯಾದ ತರ್ಕವೂ ಇಲ್ಲಿದೆ.

ಹಾಗಿದ್ದರೆ ಹಿಜಾಬ್ ಪ್ರಕರಣದಲ್ಲಿ ಯಾರೂ ಆರೋಪಿಗಳಿಲ್ಲ. ಈ ವಿದ್ಯಾರ್ಥಿನಿಯರು ಆರೋಪಿಗಳಲ್ಲ. ಉಚ್ಛನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣವು ಧಾರ್ಮಿಕ ಸಂಕೇತಗಳು ಹಾಗೂ ಶಿಕ್ಷಣ ಸಂಸ್ಥೆಗಳ ಬಗ್ಗೆ ಅಪರಾಧದ ಬಗ್ಗೆ ಅಲ್ಲ. ನ್ಯಾಯಾಲಯದ ಮಧ್ಯಂತರ ಆದೇಶವು ಪರಿಸ್ಥಿತಿಯನ್ನು ನಿಭಾಯಿಸಲು ಅವಶ್ಯಕವಾಗಿರಬಹುದು. ಆದರೆ ಪದೇ ಪದೇ ಸ್ಪಷ್ಟೀಕರಣದ ನಂತರವೂ ಶಿಕ್ಷಣ ಸಂಸ್ಥೆಗಳು ತಪ್ಪಾಗಿ, ಕ್ರೂರವಾಗಿ ವರ್ತಿಸಿವೆ. ಘನತೆವೆತ್ತ ನ್ಯಾಯಾಲಯವು ಮಾನವೀಯವಾದ ಉದ್ದೇಶದ ವಿರುದ್ಧ ನಡೆದುಕೊಂಡಿವೆ. ಸರಕಾರವನ್ನು ಓಲೈಸಲು ಅನೇಕ ಜಿಲ್ಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನ್ಯಾಯಾಯಲದ ಮಧ್ಯಂತರ ಆದೇಶದ ವಿರುದ್ಧ ನಡೆದುಕೊಂಡಿದ್ದಾರೆ. ಘನವಾದ ಸಂಪ್ರದಾಯವಿರುವ ಉಚ್ಛನ್ಯಾಯಾಲಯದ ಆದೇಶದ Spirit ಅನ್ನು ವಿಕೃತಿಗೊಳಿಸಿದ್ದಾರೆ.

ಈಗ ಈ ದೃಶ್ಯ ಈ ವರದಿಯನ್ನು ಒಟ್ಟಿಗೆ ನೋಡೋಣ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಆರೋಪಿಗಳಲ್ಲ. ಅವರಿಗೆ ಆಂತರಿಕ ಪರೀಕ್ಷೆ ಅಥವಾ ಪ್ರಾಯೋಗಿಕ ಪರೀಕ್ಷೆಗೆ ನಿರ್ಬಂಧಿಸಿದರೆ ಅದು natural justice ಹೇಗೆ ಆಗುತ್ತದೆ? ಈಗ ಉಚ್ಛನ್ಯಾಯಾಲಯವು ಕಾಯ್ದಿರಿಸಿದ ತೀರ್ಪನ್ನು ಇನ್ನು ಮುಂದೆ ಪ್ರಕಟಿಸಿದಾಗ ಒಂದು ವೇಳೆ ಆ ತೀರ್ಪು ಹಿಜಾಬ್ ಪರವಾಗಿ ಬಂದರೆ, ಅಥವಾ ಪರೀಕ್ಷೆಗೆ ನಿರ್ಬಂಧವಿರಬಾರದೆಂದು ಬಂದರೆ? ಕೊನೇಪಕ್ಷ ಕಾಯ್ದು ನೋಡೋಣ, ನಿಮಗೆ ಅವಕಾಶ ಸಿಕ್ಕಬಹುದು ಎಂದು ಹೇಳಬಹುದಾಗಿತ್ತು. ಘನತೆವೆತ್ತ ನ್ಯಾಯಾಧೀಶರಿಗಿಂತ ತಾವು ದೊಡ್ಡವರು ಎಂದು ತಿಳಿದಿರುವ ಮಂತ್ರಿಗಳು ‘ಇಲ್ಲವೇ ಇಲ್ಲ, ಇನ್ನೊಂದು ಅವಕಾಶವೇ ಇಲ್ಲ’ ಎಂದು ಯಾವ ಆಧಾರದ ಮೇಲೆ ಹೇಳಿದ್ದಾರೆ? ತಾವೇ ತೀರ್ಪು ಬರೆದುಬಿಟ್ಟಿದ್ದೇನೆ ಎಂದುಕೊಂಡಿದ್ದಾರೆಯೆ? ಇರಲಿ, ಈಗ ಇದೇ ನ್ಯಾಯಾಲಯವು ಆರೋಪಿಗೆ ಕೂಡ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು ಎಂದು ಆದೇಶಿಸುವಾಗ ಹಿಜಾಬ್ ಧರಿಸಿದ ವಿರ್ದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ಅವಕಾಶ ಮಾಡಿಕೊಡಿ ಅಥವಾ ಪರ್ಯಾಯ ಪರೀಕ್ಷೆಗೆ ಅವಕಾಶವಿರಲಿ ಎಂದು ಅದು ಹೇಳುವುದು ಸಹಜ ನ್ಯಾಯವಾಗಬಹುದು. ಇದು ಕಾನೂನು ತಜ್ಞರಲ್ಲದವರಿಗೆ ಸರಿ ಎನ್ನಿಸುತ್ತದೆ. ಇದು ನನಗೆ ಅನ್ನಿಸಿರುವ ಗೊಂದಲ. ನನಗೆ ನ್ಯಾಯಾಲಯ ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ. ಹಾಗೂ ಗೌರವ ಇದೆ. ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಬಗ್ಗೆ ಇವೆರಡೂ ಇಲ್ಲ.

  • ಪ್ರೊ. ರಾಜೇಂದ್ರ ಚೆನ್ನಿ
ಪ್ರೊ.ರಾಜೇಂದ್ರ ಚೆನ್ನಿ

ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರು. ಕಥೆಗಾರರು, ವಿಮರ್ಶಕರು ಮತ್ತು ಸಂಸ್ಕೃತಿ ಚಿಂತಕರು. ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗಾಗಿ ನಡೆಯುತ್ತಿರುವ ದಕ್ಷಿಣಾಯನ ಅಭಿಯಾನದ ಸಂಚಾಲಕರು.


ಇದನ್ನೂ ಓದಿ; ಕರ್ನಾಟಕದಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ತೊಂದರೆಗೊಳಗಾದ ವಿದ್ಯಾರ್ಥಿನಿಯರಿಗೆ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sir, no loss if these girls would go to school/college without hijab for 2-3 hours. Nor was an obstacle to their exams. Nor an
    Infidelity to their religion. Deliberately went to college with hijab knowingly in violation of interim order in operation that attracts contempt proceedings. We must see humanity in following Court VERDICT and it’s execution. Coming to the point of humanity your view is correct. But…

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...