Homeಮುಖಪುಟಹಿಜಾಬ್: ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ, ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಮೇಲಿಲ್ಲ - ರಾಜೇಂದ್ರ...

ಹಿಜಾಬ್: ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ, ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಮೇಲಿಲ್ಲ – ರಾಜೇಂದ್ರ ಚೆನ್ನಿ

ಸರಕಾರವನ್ನು ಓಲೈಸಲು ಅನೇಕ ಜಿಲ್ಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನ್ಯಾಯಾಯಲದ ಮಧ್ಯಂತರ ಆದೇಶದ ವಿರುದ್ಧ ನಡೆದುಕೊಂಡಿದ್ದಾರೆ.

- Advertisement -
- Advertisement -

ನಾನು ಒಂದು ದೃಶ್ಯ ಮತ್ತು ಒಂದು ವರದಿಯ ಬಗ್ಗೆ ಬರೆಯುತ್ತಿದ್ದೇನೆ. ನ್ಯಾಯಾಲಯಗಳಿಗೆ ಸಂಬಂಧಪಟ್ಟ ಯಾವುದೇ ವಿದ್ಯಮಾನದ ಬಗ್ಗೆ, ವಿಶೇಷವಾಗಿ ನ್ಯಾಯಾಲಯದ ತೀರ್ಪುಗಳ ಬಗ್ಗೆ ಬರೆಯಬಾರದೆಂದು ಹೇಳಲಾಗುತ್ತದೆ. ಸಂವಿಧಾನವು ಈ ಬಗ್ಗೆ ಖಚಿತವಾಗಿ ಏನು ಹೇಳಿದೆ ಎಂದು ನನಗೆ ಗೊತ್ತಿಲ್ಲ, ಆದ್ದರಿಂದ ಏನೇ ಇರಲಿ, ನಾನು ವಿಮರ್ಶೆಯ ಬದಲಾಗಿ ಒಬ್ಬ ನಾಗರೀಕನಾಗಿ ನನಗೆ ಅನ್ನಿಸಿದ ಗೊಂದಲಗಳ ಬಗ್ಗೆ ಬರೆಯುತ್ತಿದ್ದೇನೆ.

ಮೊದಲನೆಯದಾಗಿ ಒಂದು ದೃಶ್ಯ ಚಿಕ್ಕಮಗಳೂರಿನ ಪ್ರಥಮದರ್ಜೆ ಕಾಲೇಜಿನ ಗೇಟಿನ ಬಳಿ ತಗೆದ ವೀಡಿಯೋ, ಇದನ್ನು ನಾನು ಸಾಮಾಜಿಕ ತಾಣಗಳಲ್ಲಿ ನೋಡಿದೆ. ಹಿಜಾಬ್ ಹಾಕಿದ ಕೆಲವು ವಿದ್ಯಾರ್ಥಿನಿಯರು ಅವರಿಗೆ ಆಂತರಿಕ ಪರೀಕ್ಷೆ ಬರೆಯಲು ಅಥವಾ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಒಳಗೆ ಬಿಟ್ಟಿಲ್ಲವೆಂದು ಅಳುತ್ತಿರುವ ದೃಶ್ಯ. ಪ್ರಾಚಾರ್ಯರು ಉಚ್ಚನ್ಯಾಯಾಲಯದ ಮಧ್ಯಂತರ ಆಜ್ಞೆ ಇದೆ ನೀವು ಜಿಲ್ಲಾಧಿಕಾರಿಗಳನ್ನು ಕೇಳಿ ಎಂದರಂತೆ. ಅವರೂ ಅದೇ ಉತ್ತರವನ್ನು ಕೊಟ್ಟರಂತೆ. ನಮಗೆ ಬೇರೆ ಕೊಠಡಿಯಲ್ಲಿ ಕುಳಿತು ಬರೆಯಲು ಅವಕಾಶ ಕೊಡಬೇಕಿತ್ತು ಎಂದು ಈ ವಿದ್ಯಾರ್ಥಿನಿಯರು ಅಳುತ್ತಿದ್ದರು. ಮನುಷ್ಯರಾದ ಯಾರಿಗಾದರೂ ಕರುಳು ಮಿಡಿಯುವಂಥ ದೃಶ್ಯವಿದಾಗಿತ್ತು. ತಪ್ಪು ಒಪ್ಪು ಚರ್ಚಿಸೋಣ, ಆದರೆ ಮಕ್ಕಳೂ ಹೀಗೆ ಅಸಹಾಯಕರಾಗಿ ಅಳುವುದು ಯಾವ ಸಮಾಜಕ್ಕೂ ಕಳಂಕವೆ.

ಈಗ ಒಂದು ವರದಿ. ಕರ್ನಾಟಕದ ಉಚ್ಛನ್ಯಾಯಾಲಯವು ವಯಸ್ಕಳಲ್ಲದ ಹುಡುಗಿಯೊಬ್ಬಳನ್ನು ರೇಪ್ ಮಾಡಿದ ಆರೋಪವಿರುವ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕೆಂದು ಆದೇಶ ನೀಡಿದೆ. (ಇಂದು 11/03/22 ಪತ್ರಿಕೆಗಳಲ್ಲಿ ವರದಿಯಾಗಿದೆ). ವರದಿಯ ಪ್ರಕಾರ ಮಾನ್ಯ ನ್ಯಾಯಮೂರ್ತಿಯವರು, “ಆರೋಪವಿದ್ದರೂ ವಿಚಾರಣೆ ನಡೆಯುತ್ತಿರುವ ಕಾರಣಕ್ಕಾಗಿ ವಿದ್ಯಾರ್ಥಿಯು ಪರೀಕ್ಷೆ ಬರೆಯುವುದನ್ನು ನಿರ್ಬಂಧಿಸಲಾಗದು” ಎಂದು ಹೇಳಿದ್ದಾರೆ. ಇದು ನ್ಯಾಯದ ದೃಷ್ಟಿಯಿಂದ ಸರಿಯೆಂದು ತೋರುತ್ತದೆ. ಅಲ್ಲದೆ ಈಗ ಪರೀಕ್ಷೆಗೆ ನಿರ್ಬಂಧಿಸಿದರೆ ಮುಂದೆ ಒಂದು ವೇಳೆ ಆರೋಪಿಯು ಅಪರಾಧಿಯಲ್ಲ ಎಂದು ಸಾಬೀತಾದರೆ ಅದು ಅವನಿಗೆ ಅನ್ಯಾಯವಾಗುತ್ತದೆ ಎನ್ನುವ ಸರಿಯಾದ ತರ್ಕವೂ ಇಲ್ಲಿದೆ.

ಹಾಗಿದ್ದರೆ ಹಿಜಾಬ್ ಪ್ರಕರಣದಲ್ಲಿ ಯಾರೂ ಆರೋಪಿಗಳಿಲ್ಲ. ಈ ವಿದ್ಯಾರ್ಥಿನಿಯರು ಆರೋಪಿಗಳಲ್ಲ. ಉಚ್ಛನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣವು ಧಾರ್ಮಿಕ ಸಂಕೇತಗಳು ಹಾಗೂ ಶಿಕ್ಷಣ ಸಂಸ್ಥೆಗಳ ಬಗ್ಗೆ ಅಪರಾಧದ ಬಗ್ಗೆ ಅಲ್ಲ. ನ್ಯಾಯಾಲಯದ ಮಧ್ಯಂತರ ಆದೇಶವು ಪರಿಸ್ಥಿತಿಯನ್ನು ನಿಭಾಯಿಸಲು ಅವಶ್ಯಕವಾಗಿರಬಹುದು. ಆದರೆ ಪದೇ ಪದೇ ಸ್ಪಷ್ಟೀಕರಣದ ನಂತರವೂ ಶಿಕ್ಷಣ ಸಂಸ್ಥೆಗಳು ತಪ್ಪಾಗಿ, ಕ್ರೂರವಾಗಿ ವರ್ತಿಸಿವೆ. ಘನತೆವೆತ್ತ ನ್ಯಾಯಾಲಯವು ಮಾನವೀಯವಾದ ಉದ್ದೇಶದ ವಿರುದ್ಧ ನಡೆದುಕೊಂಡಿವೆ. ಸರಕಾರವನ್ನು ಓಲೈಸಲು ಅನೇಕ ಜಿಲ್ಲಾಧಿಕಾರಿಗಳು ಉದ್ದೇಶಪೂರ್ವಕವಾಗಿ ನ್ಯಾಯಾಯಲದ ಮಧ್ಯಂತರ ಆದೇಶದ ವಿರುದ್ಧ ನಡೆದುಕೊಂಡಿದ್ದಾರೆ. ಘನವಾದ ಸಂಪ್ರದಾಯವಿರುವ ಉಚ್ಛನ್ಯಾಯಾಲಯದ ಆದೇಶದ Spirit ಅನ್ನು ವಿಕೃತಿಗೊಳಿಸಿದ್ದಾರೆ.

ಈಗ ಈ ದೃಶ್ಯ ಈ ವರದಿಯನ್ನು ಒಟ್ಟಿಗೆ ನೋಡೋಣ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಆರೋಪಿಗಳಲ್ಲ. ಅವರಿಗೆ ಆಂತರಿಕ ಪರೀಕ್ಷೆ ಅಥವಾ ಪ್ರಾಯೋಗಿಕ ಪರೀಕ್ಷೆಗೆ ನಿರ್ಬಂಧಿಸಿದರೆ ಅದು natural justice ಹೇಗೆ ಆಗುತ್ತದೆ? ಈಗ ಉಚ್ಛನ್ಯಾಯಾಲಯವು ಕಾಯ್ದಿರಿಸಿದ ತೀರ್ಪನ್ನು ಇನ್ನು ಮುಂದೆ ಪ್ರಕಟಿಸಿದಾಗ ಒಂದು ವೇಳೆ ಆ ತೀರ್ಪು ಹಿಜಾಬ್ ಪರವಾಗಿ ಬಂದರೆ, ಅಥವಾ ಪರೀಕ್ಷೆಗೆ ನಿರ್ಬಂಧವಿರಬಾರದೆಂದು ಬಂದರೆ? ಕೊನೇಪಕ್ಷ ಕಾಯ್ದು ನೋಡೋಣ, ನಿಮಗೆ ಅವಕಾಶ ಸಿಕ್ಕಬಹುದು ಎಂದು ಹೇಳಬಹುದಾಗಿತ್ತು. ಘನತೆವೆತ್ತ ನ್ಯಾಯಾಧೀಶರಿಗಿಂತ ತಾವು ದೊಡ್ಡವರು ಎಂದು ತಿಳಿದಿರುವ ಮಂತ್ರಿಗಳು ‘ಇಲ್ಲವೇ ಇಲ್ಲ, ಇನ್ನೊಂದು ಅವಕಾಶವೇ ಇಲ್ಲ’ ಎಂದು ಯಾವ ಆಧಾರದ ಮೇಲೆ ಹೇಳಿದ್ದಾರೆ? ತಾವೇ ತೀರ್ಪು ಬರೆದುಬಿಟ್ಟಿದ್ದೇನೆ ಎಂದುಕೊಂಡಿದ್ದಾರೆಯೆ? ಇರಲಿ, ಈಗ ಇದೇ ನ್ಯಾಯಾಲಯವು ಆರೋಪಿಗೆ ಕೂಡ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು ಎಂದು ಆದೇಶಿಸುವಾಗ ಹಿಜಾಬ್ ಧರಿಸಿದ ವಿರ್ದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ಅವಕಾಶ ಮಾಡಿಕೊಡಿ ಅಥವಾ ಪರ್ಯಾಯ ಪರೀಕ್ಷೆಗೆ ಅವಕಾಶವಿರಲಿ ಎಂದು ಅದು ಹೇಳುವುದು ಸಹಜ ನ್ಯಾಯವಾಗಬಹುದು. ಇದು ಕಾನೂನು ತಜ್ಞರಲ್ಲದವರಿಗೆ ಸರಿ ಎನ್ನಿಸುತ್ತದೆ. ಇದು ನನಗೆ ಅನ್ನಿಸಿರುವ ಗೊಂದಲ. ನನಗೆ ನ್ಯಾಯಾಲಯ ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ. ಹಾಗೂ ಗೌರವ ಇದೆ. ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಬಗ್ಗೆ ಇವೆರಡೂ ಇಲ್ಲ.

  • ಪ್ರೊ. ರಾಜೇಂದ್ರ ಚೆನ್ನಿ
ಪ್ರೊ.ರಾಜೇಂದ್ರ ಚೆನ್ನಿ

ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರು. ಕಥೆಗಾರರು, ವಿಮರ್ಶಕರು ಮತ್ತು ಸಂಸ್ಕೃತಿ ಚಿಂತಕರು. ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗಾಗಿ ನಡೆಯುತ್ತಿರುವ ದಕ್ಷಿಣಾಯನ ಅಭಿಯಾನದ ಸಂಚಾಲಕರು.


ಇದನ್ನೂ ಓದಿ; ಕರ್ನಾಟಕದಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ತೊಂದರೆಗೊಳಗಾದ ವಿದ್ಯಾರ್ಥಿನಿಯರಿಗೆ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sir, no loss if these girls would go to school/college without hijab for 2-3 hours. Nor was an obstacle to their exams. Nor an
    Infidelity to their religion. Deliberately went to college with hijab knowingly in violation of interim order in operation that attracts contempt proceedings. We must see humanity in following Court VERDICT and it’s execution. Coming to the point of humanity your view is correct. But…

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...