Homeಕರ್ನಾಟಕಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಸ್ಕಾರ್ಫ್ ಹಾಕಿದವರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸುವುದರಿಂದ ಮುಸ್ಲಿ, ಹಿಂದೂ ಹಾಗೂ ಎಲ್ಲಾ ಕೋಮಿನ ವಿದ್ಯಾರ್ಥಿಗಳ ಸೌಹಾರ್ದತೆ ಹಾಳಾಗಬಹುದು ಎಂದು ಎಸ್‌ಎಫ್‌ಐ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ತರಗತಿಗಳಲ್ಲಿ ಪಾಠ ಕೇಳುವುದಕ್ಕೆ ಕಾಲೇಜಿನ ಪ್ರಾಂಶುಪಾಲರು ನಿರಾಕರಿಸಿರುವ ಅಸಂವಿಧಾನಿಕವಾದ ನಡೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸ್‌ಎಫ್‌ಐನ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅವರು, ಈ ಬೆಳವಣಿಗೆಯ ಹಿಂದಿರುವ ಮತೀಯ ಶಕ್ತಿಗಳ ಕುರಿತು ಎಚ್ಚರಿಸಿದ್ದಾರೆ.

ಕಾಲೇಜನ್ನು ಒಂದು ಕೋಮು ಅಥವಾ ಧರ್ಮದ ಪ್ರಚಾರಕ ಸಂಸ್ಥೆಯಂತೆ ಬಳಸುವುದೇ ಅಲ್ಲದೆ ಮತ್ತೊಂದು ಧರ್ಮದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುವುದು ಸಂವಿಧಾನ ವಿರೋಧಿ ನಡೆಯಾಗಿದೆ.ಆದ್ದರಿಂದ ಈ ಕೂಡಲೇ ವಿದ್ಯಾರ್ಥಿನಿಯರಿಗೆ ತರಗತಿಗಳಿಗೆ ಹಾಜರಾಗಲು ಅನುಮತಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದಿಕರಣವನ್ನು ತೀವ್ರಗೊಳಿಸುವ ಜನವಿರೋಧಿಯಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಬಿಜೆಪಿ ಸರ್ಕಾರ ಅಪ್ರಜಾಸತ್ತಾತ್ಮಕವಾಗಿ ಜಾರಿಗೊಳಿಸುತ್ತಿರುವುದರಿಂದ ರಾಜ್ಯದಲ್ಲಿ ಶೈಕ್ಷಣಿಕ ಅರಾಜಕತೆ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು ತಮ್ಮ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಬೀದಿಗಿಳಿದಿದ್ದಾರೆ. ಇಂತಹ ಸಂದರ್ಭದಲ್ಲಿ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ ಶಿಕ್ಷಣ ಕ್ಷೇತ್ರದ ನಿಜವಾದ ಸಮಸ್ಯೆಗಳನ್ನು ಮರೆಮಾಚಲು ಕರಾವಳಿಯ ಕೆಲವು ಕಾಲೇಜುಗಳನ್ನು ಶಿಕ್ಷಣದ ಕೋಮುವಾದಿಕರಣದ ಪ್ರಯೋಗ ಶಾಲೆಗಳನ್ನಾಗಿಸಿತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಈ ಸ್ಕಾರ್ಫ್, ಕೇಸರಿ ಶಾಲು ವಿವಾದಗಳಿಗೆ ರಾಜ್ಯ ಬಿಜೆಪಿ ಸರಕಾರದ ಕುಮ್ಮಕ್ಕು ಮತ್ತು ಸಮ್ಮತಿ ಒಪ್ಪಿಗೆ ಇರುವ ರೀತಿಯಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರು ಹೇಳಿಕೆಗಳನ್ನು ನೀಡುತ್ತಿರುವುದರಿಂದ ಸ್ಪಷ್ಟವಾಗಿದೆ. “ದೇಶದ ಭವಿಷ್ಯ ತರಗತಿಯ ಕೊಠಡಿಗಳಲ್ಲಿ ನಿರ್ಮಾಣವಾಗುತ್ತದೆ”. ಎಂದು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಹೇಳಿರುವ ಮಾತನ್ನು ಇಲ್ಲಿ ನೆನಪು ಮಾಡಿಕೊಳ್ಳಬೇಕಾಗಿದೆ. ಏಕೆಂದರೆ ಕರಾವಳಿಯ ಜಿಲ್ಲೆಗಳಲ್ಲಿ ಹಿಂದುತ್ವದ ರಾಜಕೀಯ ಹಿಡನ್ ಅಜೆಂಡಾ ಜಾರಿಗಾಗಿ ಅದೇ ತರಗತಿಯ ಕೊಠಡಿಗಳ ಒಳಗೆ ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳನ್ನು ವಿಭಜಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕರಾವಳಿಯ ಜಿಲ್ಲೆಗಳಲ್ಲಿ ನೈತಿಕ ಪೋಲೀಸ್‌ಗಿರಿ, ಅನ್ಯ ಧರ್ಮೀಯ ವಿದ್ಯಾರ್ಥಿಗಳಿಗೆ ತ್ರಿಶೂಲದಿಂದ ತಿವಿದು ಹಲ್ಲೆ, ಲವ್ ಜಿಹಾದ್, ಹೋಮ್ ಸ್ಟೇ ದಾಳಿಗಳಂತಹ ಪ್ರಕರಣಗಳಲ್ಲಿ ದೇಶದ ಭವಿಷ್ಯವಾಗಬೇಕಾದ ವಿದ್ಯಾರ್ಥಿಗಳನ್ನು ಕ್ರಿಮಿನಲ್ ಗಳನ್ನಾಗಿ ಉತ್ಪಾದಿಸಲಾಗುತ್ತಿದೆ. ಈ ಕೋಮುವಾದಿ ಹುನ್ನಾರಗಳಿಗೆ ಎಳೆ ಪ್ರಾಯದ ಅಮಾಯಕ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಇದೆಲ್ಲವೂ ದೇಶದ ಭವಿಷ್ಯದ ಕುರಿತು ಆತಂಕಗಳನ್ನು ಸೃಷ್ಟಿಸುತ್ತದೆ ಎಂದು ತಿಳಿಸಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ಬಂದರೆ ಹುಡುಗರು ನಾಳೆಯಿಂದ ಕೇಸರಿ ಶಾಲು ಹಾಕಿಕೊಂಡು ಬರುತ್ತಾರೆ. ಹಾಗಾಗಿ ಸ್ಕಾರ್ಫ್ ಹಾಕುವಂತಿಲ್ಲ ಎಂದು ಕಾಲೇಜು ಪ್ರಾಂಶುಪಾಲರು ಹೇಳಿರುವುದು ಖಂಡನೀಯ. ಸ್ಕಾರ್ಫ್ ಧರಿಸಿ ಬಂದರೆ ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎನ್ನುವುದರ ಹಿಂದೆ ಎಬಿವಿಪಿಯಂತಹ ಮತೀಯವಾದಿ ಸಂಘಟನೆಗಳು ವಿದ್ಯಾರ್ಥಿಗಳಲ್ಲಿ ತುಂಬಿರುವ ಕೋಮು ದ್ವೇಷ ಭಾವನೆಯಿದೆ ಎಂದು ಎಸ್‌ಎಫ್‌ಐ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಸ್ಕಾರ್ಫ್ ಹಾಕಿದವರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸುವುದರಿಂದ ಮುಸ್ಲಿ, ಹಿಂದೂ ಹಾಗೂ ಎಲ್ಲಾ ಕೋಮಿನ ವಿದ್ಯಾರ್ಥಿಗಳ ಸೌಹಾರ್ದತೆಯಿಂದ ಸಹಶಿಕ್ಷಣ (ಕೋ ಎಜುಕೇಷನ್) ಪಡೆಯದಂತೆ ಆಗಬಹುದು. ಇಲ್ಲಿಯವರೆಗೂ ಹಿಂದೂ ಮುಸ್ಲಿಂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಟ್ಟಾಗಿ ಶಾಲೆ ಕಾಲೇಜು ಕಲಿಯುತ್ತಿದ್ದರು. ಇಂತಹ ಅನಾವಶ್ಯಕ ವಿವಾದಗಳಿಂದ ಧರ್ಮ ಆಧರಿತ ಶಾಲಾ ಕಾಲೇಜುಗಳಾಗಿ ಈಗಾಗಲೇ ಇರುವ ಹಿಂದೂ ಮುಸ್ಲಿಮರ ನಡುವಿನ ಅಪನಂಬಿಕೆಗಳು ಇನ್ನಷ್ಟೂ ಗಟ್ಟಿಯಾಗಿಸುವ ಆತಂಕವಿದೆ ಎಂದಿದ್ದಾರೆ.

ಹಿಜಾಬ್ ನಿಷೇದ ಮಾಡಿದ್ದು ಕಾಲೇಜು ಆಡಳಿತ ಮಂಡಳಿಯ ಏಕ ರೂಪದ ಸಮವಸ್ತ್ರ ನೀತಿ ಎಂಬ ಮೇಲ್ನೋಟಕ್ಕೆ ಕೆಲವರಿಗೆ ಅನಿಸಬಹುದು. ಆದರೆ ಇದಕ್ಕಾಗಿ ಕಾಯುತ್ತಿರುವ ಮುಸ್ಲಿಂ ವಿರೋಧಿ ದ್ವೇಷ ಬಿತ್ತುವ ಶಕ್ತಿಗಳು ಇದನ್ನು ಕೋಮು ಧೃವೀಕರಣ ರಾಜಕಾರಣಕ್ಕೆ ಬಳಸಿಕೊಳ್ಳುವುದು ಸಾಬೀತಾಗಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ಹಿಜಾಬ್, ಬುರ್ಕಾವನ್ನು ಪ್ರಗತಿಪರರು ಸ್ತ್ರಿವಾದದ ನೆಲೆಯಲ್ಲಿ ವಿರೋಧಿಸುತ್ತಾರೆ. ಆದರೆ ಈ ಎಬಿವಿಪಿ/ಹಿಂದೂ ಜಾಗರಣ ವೇದಿಕೆ/ಬಜರಂಗದಳ ಮುಂತಾದ ಬಲಪಂಥೀಯ ಸಂಘಟನೆಗಳು ಯಾಕೆ ವಿರೋಧಿಸುತ್ತಾರೆ ಎಂಬ ಸ್ಪಷ್ಟನೆ ನಮಗಿದೆ. ಹಿಜಾಬ್ ವಿರೋಧಿಸುವುದು, ಹಿಜಾಬ್ ಧರಿಸಿಕೊಂಡು ವಿದ್ಯಾರ್ಥಿನಿಯರು ಕಾಲೇಜಿಗೆ ಬರಬಾರದೆಂದು ತಡೆಯುವುದು, ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿಸುವ ಸಂಚಲ್ಲದೆ ಬೇರೇನೂ ಅಲ್ಲ. ಈಗಾಗಲೇ ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಈ ಧಾರ್ಮಿಕ ಮೂಲಭೂತವಾದಿ, ಕೋಮುವಾದಿ ದಾಳಿಗಳಿಂದ ರಕ್ಷಿಸಬೇಕಾದದ್ದು ತುರ್ತು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣ ನೀಡುವುದು ಸ್ಕಾರ್ಫ್ ನಿಷೇಧಕ್ಕಿಂತ ಸದ್ಯದ ಉತ್ತಮ ಔಷಧಿ. ಮೊದಲು ಮುಸ್ಲಿಂ ಹುಡುಗಿಯರು ಶಿಕ್ಷಣ ಪಡೆಯುವಂತಾಗಬೇಕು. ಅದರಲ್ಲೂ ಸರ್ವ ಜನಾಂಗದ ಶಾಂತಿಯ ತೋಟವಾದ ಈ ನಾಡಿನ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಬೇಕು. ಹಿಂದೂ ಮುಸ್ಲೀಂ ಹುಡುಗ ಹುಡುಗಿಯರು ಸಹಶಿಕ್ಷಣ (ಕೋಎಜುಕೇಶನ್ ) ಪಡೆಯುವಂತಾಗಬೇಕು ಎಂದು ಆಶಿಸಿದ್ದಾರೆ.

ಹಿಂದೂ ಮುಸ್ಲೀಮರು ಸಹಶಿಕ್ಷಣ ಪಡೆಯುವ ಕಾಲೇಜುಗಳಲ್ಲಿ ಸ್ಕಾರ್ಫ್ /ಬುರ್ಕಾ ನಿಷೇಧ ಮಾಡುವುದು ಬುರ್ಕಾ ಸಂಸ್ಕೃತಿಯನ್ನು ಇನ್ನಷ್ಟೂ ಬಲಗೊಳಿಸುತ್ತದೆ. ಸ್ಕಾರ್ಫ್ ನಿಷೇಧಕ್ಕೊಳಗಾಗಿರುವ ಕಾಲೇಜು ಹೊರತು ಪಡಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರ್ಯಾಯ ಆಯ್ಕೆ ಇರುವುದು ಮುಸ್ಲಿಂ ಕಾಲೇಜುಗಳು. ಇದು ಸಮಾಜದಲ್ಲಿ ಇನ್ನಷ್ಟು ಅಸಮಾನತೆಯ ಮನಸ್ಥಿತಿಯನ್ನು ಮತ್ತು ಅಂತರವನ್ನು ಹೆಚ್ಚಿಸುತ್ತದೆಯೇ ಹೊರತು ಇನ್ನೇನಲ್ಲ. ಹಲವಾರು ಜಾತಿ, ಧರ್ಮ, ಸಮುದಾಯದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಒಟ್ಟಾಗಿ ವಿದ್ಯಾಭ್ಯಾಸ ಮಾಡುವುದೇ ಪರಸ್ಪರರನ್ನು ಅರಿತು ಸಮಾನತೆ, ಸೌಹಾರ್ದತೆಯನ್ನು ಸಾಧಿಸಲು ಇರುವ ಅತೀ ದೊಡ್ಡ ಮಾರ್ಗ ಎಂದು ತಿಳಿಸಿದ್ದಾರೆ.

ಕಾಲೇಜುಗಳಿಗೆ ವಿದ್ಯಾರ್ಥಿಗಳಲ್ಲಿ ನಿಜವಾಗಿಯೂ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂಬ ಪ್ರಾಮಾಣಿಕ ಇಚ್ಚಾಶಕ್ತಿ ಇದ್ದರೆ ಕಾಲೇಜು ತರಗತಿ ಕೊಠಡಿಗಳಲ್ಲಿ ಶಿಕ್ಷಕರು ವೈಚಾರಿಕವಾದ, ಜ್ಯಾತ್ಯಾತೀತವಾದ ಸಂವಿಧಾನದ ಆಶಯಗಳನ್ನು ಸಾರುವ ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗೆ ನಾಜೂಕಾಗಿ ತುಂಬುವಂತಹ ಬೋಧನೆಗಳನ್ನು ಮಾಡಲಿ. ಇಂತಹ ಪ್ರಗತಿಪರ ಮನಸ್ಸುಗಳುಳ್ಳ ವಿದ್ಯಾರ್ಥಿಗಳನ್ನು ಬೆಳೆಸಿದ ನಂತರ ಸ್ಕಾರ್ಫ್ ಹಾಕಿಕೊಂಡು ತರಗತಿಗೆ ಬರಬೇಡಿ ಎಂದು ಹೇಳುವುದರ ಹಿಂದೆ ಒಂದು ಅರ್ಥ ಇರುತ್ತದೆ. ಅದುಬಿಟ್ಟು ಏಕಾಏಕಿ ಬುರ್ಕಾ ನಿಷೇದಿಸುವುದರ ಹಿಂದೆ ಮುಸ್ಲಿಂ ಮಹಿಳೆಯರನ್ನು ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಬದಿಗೆ ದೂಡುವ ಹುನ್ನಾರ ಇದೆ. ಈ ಹುನ್ನಾರವನ್ನು ಹಿಂದುತ್ವದ ಕೋಮುವಾದಿಗಳು ಬಹಳ ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ ಎಂದು ಎಸ್‌ಎಫ್‌ಐನ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿರಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮತೀಯಾ ಸೃಷ್ಟಿ ಮಾಡ್ತಿರೋದು ಕಮ್ಯೂನಿಸ್ಟ್ ರು,ಮಾವೋವಾದಿಗಳು ,ಜಿಹಾದಿಗಳೇ ವಿನಹ ಎಬಿವಿಪಿ ಅಲ್ಲಾ ,ಷರಿಯತ್ ಕಾನೂನಿಗೆ ಬೆಂಬಲ ನೀಡುತ್ತಿರುವ ತಮ್ಮ ಪತ್ರಿಕೆಗೇ ಏನೇಳಬೇಕು ,ದೇಶದ್ರೋಹಿಗಳೇ ನಿಮ್ಮ ಆಟ ಇನ್ನು ನಡೆಯದು.

  2. There was no Hijab issue in that college. All girls used to follow the uniform rules and we’re attending the classes without Hijab/Burkha. Now some communal forces behind the scene provoked the innocent girls (For those forces their hidden agenda is more important than education of their own women)

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...