Homeಕರ್ನಾಟಕಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಸ್ಕಾರ್ಫ್ ಹಾಕಿದವರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸುವುದರಿಂದ ಮುಸ್ಲಿ, ಹಿಂದೂ ಹಾಗೂ ಎಲ್ಲಾ ಕೋಮಿನ ವಿದ್ಯಾರ್ಥಿಗಳ ಸೌಹಾರ್ದತೆ ಹಾಳಾಗಬಹುದು ಎಂದು ಎಸ್‌ಎಫ್‌ಐ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ತರಗತಿಗಳಲ್ಲಿ ಪಾಠ ಕೇಳುವುದಕ್ಕೆ ಕಾಲೇಜಿನ ಪ್ರಾಂಶುಪಾಲರು ನಿರಾಕರಿಸಿರುವ ಅಸಂವಿಧಾನಿಕವಾದ ನಡೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸ್‌ಎಫ್‌ಐನ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅವರು, ಈ ಬೆಳವಣಿಗೆಯ ಹಿಂದಿರುವ ಮತೀಯ ಶಕ್ತಿಗಳ ಕುರಿತು ಎಚ್ಚರಿಸಿದ್ದಾರೆ.

ಕಾಲೇಜನ್ನು ಒಂದು ಕೋಮು ಅಥವಾ ಧರ್ಮದ ಪ್ರಚಾರಕ ಸಂಸ್ಥೆಯಂತೆ ಬಳಸುವುದೇ ಅಲ್ಲದೆ ಮತ್ತೊಂದು ಧರ್ಮದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುವುದು ಸಂವಿಧಾನ ವಿರೋಧಿ ನಡೆಯಾಗಿದೆ.ಆದ್ದರಿಂದ ಈ ಕೂಡಲೇ ವಿದ್ಯಾರ್ಥಿನಿಯರಿಗೆ ತರಗತಿಗಳಿಗೆ ಹಾಜರಾಗಲು ಅನುಮತಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದಿಕರಣವನ್ನು ತೀವ್ರಗೊಳಿಸುವ ಜನವಿರೋಧಿಯಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಬಿಜೆಪಿ ಸರ್ಕಾರ ಅಪ್ರಜಾಸತ್ತಾತ್ಮಕವಾಗಿ ಜಾರಿಗೊಳಿಸುತ್ತಿರುವುದರಿಂದ ರಾಜ್ಯದಲ್ಲಿ ಶೈಕ್ಷಣಿಕ ಅರಾಜಕತೆ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು ತಮ್ಮ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಬೀದಿಗಿಳಿದಿದ್ದಾರೆ. ಇಂತಹ ಸಂದರ್ಭದಲ್ಲಿ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ ಶಿಕ್ಷಣ ಕ್ಷೇತ್ರದ ನಿಜವಾದ ಸಮಸ್ಯೆಗಳನ್ನು ಮರೆಮಾಚಲು ಕರಾವಳಿಯ ಕೆಲವು ಕಾಲೇಜುಗಳನ್ನು ಶಿಕ್ಷಣದ ಕೋಮುವಾದಿಕರಣದ ಪ್ರಯೋಗ ಶಾಲೆಗಳನ್ನಾಗಿಸಿತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಈ ಸ್ಕಾರ್ಫ್, ಕೇಸರಿ ಶಾಲು ವಿವಾದಗಳಿಗೆ ರಾಜ್ಯ ಬಿಜೆಪಿ ಸರಕಾರದ ಕುಮ್ಮಕ್ಕು ಮತ್ತು ಸಮ್ಮತಿ ಒಪ್ಪಿಗೆ ಇರುವ ರೀತಿಯಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರು ಹೇಳಿಕೆಗಳನ್ನು ನೀಡುತ್ತಿರುವುದರಿಂದ ಸ್ಪಷ್ಟವಾಗಿದೆ. “ದೇಶದ ಭವಿಷ್ಯ ತರಗತಿಯ ಕೊಠಡಿಗಳಲ್ಲಿ ನಿರ್ಮಾಣವಾಗುತ್ತದೆ”. ಎಂದು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಹೇಳಿರುವ ಮಾತನ್ನು ಇಲ್ಲಿ ನೆನಪು ಮಾಡಿಕೊಳ್ಳಬೇಕಾಗಿದೆ. ಏಕೆಂದರೆ ಕರಾವಳಿಯ ಜಿಲ್ಲೆಗಳಲ್ಲಿ ಹಿಂದುತ್ವದ ರಾಜಕೀಯ ಹಿಡನ್ ಅಜೆಂಡಾ ಜಾರಿಗಾಗಿ ಅದೇ ತರಗತಿಯ ಕೊಠಡಿಗಳ ಒಳಗೆ ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳನ್ನು ವಿಭಜಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕರಾವಳಿಯ ಜಿಲ್ಲೆಗಳಲ್ಲಿ ನೈತಿಕ ಪೋಲೀಸ್‌ಗಿರಿ, ಅನ್ಯ ಧರ್ಮೀಯ ವಿದ್ಯಾರ್ಥಿಗಳಿಗೆ ತ್ರಿಶೂಲದಿಂದ ತಿವಿದು ಹಲ್ಲೆ, ಲವ್ ಜಿಹಾದ್, ಹೋಮ್ ಸ್ಟೇ ದಾಳಿಗಳಂತಹ ಪ್ರಕರಣಗಳಲ್ಲಿ ದೇಶದ ಭವಿಷ್ಯವಾಗಬೇಕಾದ ವಿದ್ಯಾರ್ಥಿಗಳನ್ನು ಕ್ರಿಮಿನಲ್ ಗಳನ್ನಾಗಿ ಉತ್ಪಾದಿಸಲಾಗುತ್ತಿದೆ. ಈ ಕೋಮುವಾದಿ ಹುನ್ನಾರಗಳಿಗೆ ಎಳೆ ಪ್ರಾಯದ ಅಮಾಯಕ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಇದೆಲ್ಲವೂ ದೇಶದ ಭವಿಷ್ಯದ ಕುರಿತು ಆತಂಕಗಳನ್ನು ಸೃಷ್ಟಿಸುತ್ತದೆ ಎಂದು ತಿಳಿಸಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ಬಂದರೆ ಹುಡುಗರು ನಾಳೆಯಿಂದ ಕೇಸರಿ ಶಾಲು ಹಾಕಿಕೊಂಡು ಬರುತ್ತಾರೆ. ಹಾಗಾಗಿ ಸ್ಕಾರ್ಫ್ ಹಾಕುವಂತಿಲ್ಲ ಎಂದು ಕಾಲೇಜು ಪ್ರಾಂಶುಪಾಲರು ಹೇಳಿರುವುದು ಖಂಡನೀಯ. ಸ್ಕಾರ್ಫ್ ಧರಿಸಿ ಬಂದರೆ ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎನ್ನುವುದರ ಹಿಂದೆ ಎಬಿವಿಪಿಯಂತಹ ಮತೀಯವಾದಿ ಸಂಘಟನೆಗಳು ವಿದ್ಯಾರ್ಥಿಗಳಲ್ಲಿ ತುಂಬಿರುವ ಕೋಮು ದ್ವೇಷ ಭಾವನೆಯಿದೆ ಎಂದು ಎಸ್‌ಎಫ್‌ಐ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಸ್ಕಾರ್ಫ್ ಹಾಕಿದವರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸುವುದರಿಂದ ಮುಸ್ಲಿ, ಹಿಂದೂ ಹಾಗೂ ಎಲ್ಲಾ ಕೋಮಿನ ವಿದ್ಯಾರ್ಥಿಗಳ ಸೌಹಾರ್ದತೆಯಿಂದ ಸಹಶಿಕ್ಷಣ (ಕೋ ಎಜುಕೇಷನ್) ಪಡೆಯದಂತೆ ಆಗಬಹುದು. ಇಲ್ಲಿಯವರೆಗೂ ಹಿಂದೂ ಮುಸ್ಲಿಂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಟ್ಟಾಗಿ ಶಾಲೆ ಕಾಲೇಜು ಕಲಿಯುತ್ತಿದ್ದರು. ಇಂತಹ ಅನಾವಶ್ಯಕ ವಿವಾದಗಳಿಂದ ಧರ್ಮ ಆಧರಿತ ಶಾಲಾ ಕಾಲೇಜುಗಳಾಗಿ ಈಗಾಗಲೇ ಇರುವ ಹಿಂದೂ ಮುಸ್ಲಿಮರ ನಡುವಿನ ಅಪನಂಬಿಕೆಗಳು ಇನ್ನಷ್ಟೂ ಗಟ್ಟಿಯಾಗಿಸುವ ಆತಂಕವಿದೆ ಎಂದಿದ್ದಾರೆ.

ಹಿಜಾಬ್ ನಿಷೇದ ಮಾಡಿದ್ದು ಕಾಲೇಜು ಆಡಳಿತ ಮಂಡಳಿಯ ಏಕ ರೂಪದ ಸಮವಸ್ತ್ರ ನೀತಿ ಎಂಬ ಮೇಲ್ನೋಟಕ್ಕೆ ಕೆಲವರಿಗೆ ಅನಿಸಬಹುದು. ಆದರೆ ಇದಕ್ಕಾಗಿ ಕಾಯುತ್ತಿರುವ ಮುಸ್ಲಿಂ ವಿರೋಧಿ ದ್ವೇಷ ಬಿತ್ತುವ ಶಕ್ತಿಗಳು ಇದನ್ನು ಕೋಮು ಧೃವೀಕರಣ ರಾಜಕಾರಣಕ್ಕೆ ಬಳಸಿಕೊಳ್ಳುವುದು ಸಾಬೀತಾಗಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ಹಿಜಾಬ್, ಬುರ್ಕಾವನ್ನು ಪ್ರಗತಿಪರರು ಸ್ತ್ರಿವಾದದ ನೆಲೆಯಲ್ಲಿ ವಿರೋಧಿಸುತ್ತಾರೆ. ಆದರೆ ಈ ಎಬಿವಿಪಿ/ಹಿಂದೂ ಜಾಗರಣ ವೇದಿಕೆ/ಬಜರಂಗದಳ ಮುಂತಾದ ಬಲಪಂಥೀಯ ಸಂಘಟನೆಗಳು ಯಾಕೆ ವಿರೋಧಿಸುತ್ತಾರೆ ಎಂಬ ಸ್ಪಷ್ಟನೆ ನಮಗಿದೆ. ಹಿಜಾಬ್ ವಿರೋಧಿಸುವುದು, ಹಿಜಾಬ್ ಧರಿಸಿಕೊಂಡು ವಿದ್ಯಾರ್ಥಿನಿಯರು ಕಾಲೇಜಿಗೆ ಬರಬಾರದೆಂದು ತಡೆಯುವುದು, ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿಸುವ ಸಂಚಲ್ಲದೆ ಬೇರೇನೂ ಅಲ್ಲ. ಈಗಾಗಲೇ ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಈ ಧಾರ್ಮಿಕ ಮೂಲಭೂತವಾದಿ, ಕೋಮುವಾದಿ ದಾಳಿಗಳಿಂದ ರಕ್ಷಿಸಬೇಕಾದದ್ದು ತುರ್ತು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣ ನೀಡುವುದು ಸ್ಕಾರ್ಫ್ ನಿಷೇಧಕ್ಕಿಂತ ಸದ್ಯದ ಉತ್ತಮ ಔಷಧಿ. ಮೊದಲು ಮುಸ್ಲಿಂ ಹುಡುಗಿಯರು ಶಿಕ್ಷಣ ಪಡೆಯುವಂತಾಗಬೇಕು. ಅದರಲ್ಲೂ ಸರ್ವ ಜನಾಂಗದ ಶಾಂತಿಯ ತೋಟವಾದ ಈ ನಾಡಿನ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಬೇಕು. ಹಿಂದೂ ಮುಸ್ಲೀಂ ಹುಡುಗ ಹುಡುಗಿಯರು ಸಹಶಿಕ್ಷಣ (ಕೋಎಜುಕೇಶನ್ ) ಪಡೆಯುವಂತಾಗಬೇಕು ಎಂದು ಆಶಿಸಿದ್ದಾರೆ.

ಹಿಂದೂ ಮುಸ್ಲೀಮರು ಸಹಶಿಕ್ಷಣ ಪಡೆಯುವ ಕಾಲೇಜುಗಳಲ್ಲಿ ಸ್ಕಾರ್ಫ್ /ಬುರ್ಕಾ ನಿಷೇಧ ಮಾಡುವುದು ಬುರ್ಕಾ ಸಂಸ್ಕೃತಿಯನ್ನು ಇನ್ನಷ್ಟೂ ಬಲಗೊಳಿಸುತ್ತದೆ. ಸ್ಕಾರ್ಫ್ ನಿಷೇಧಕ್ಕೊಳಗಾಗಿರುವ ಕಾಲೇಜು ಹೊರತು ಪಡಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರ್ಯಾಯ ಆಯ್ಕೆ ಇರುವುದು ಮುಸ್ಲಿಂ ಕಾಲೇಜುಗಳು. ಇದು ಸಮಾಜದಲ್ಲಿ ಇನ್ನಷ್ಟು ಅಸಮಾನತೆಯ ಮನಸ್ಥಿತಿಯನ್ನು ಮತ್ತು ಅಂತರವನ್ನು ಹೆಚ್ಚಿಸುತ್ತದೆಯೇ ಹೊರತು ಇನ್ನೇನಲ್ಲ. ಹಲವಾರು ಜಾತಿ, ಧರ್ಮ, ಸಮುದಾಯದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಒಟ್ಟಾಗಿ ವಿದ್ಯಾಭ್ಯಾಸ ಮಾಡುವುದೇ ಪರಸ್ಪರರನ್ನು ಅರಿತು ಸಮಾನತೆ, ಸೌಹಾರ್ದತೆಯನ್ನು ಸಾಧಿಸಲು ಇರುವ ಅತೀ ದೊಡ್ಡ ಮಾರ್ಗ ಎಂದು ತಿಳಿಸಿದ್ದಾರೆ.

ಕಾಲೇಜುಗಳಿಗೆ ವಿದ್ಯಾರ್ಥಿಗಳಲ್ಲಿ ನಿಜವಾಗಿಯೂ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂಬ ಪ್ರಾಮಾಣಿಕ ಇಚ್ಚಾಶಕ್ತಿ ಇದ್ದರೆ ಕಾಲೇಜು ತರಗತಿ ಕೊಠಡಿಗಳಲ್ಲಿ ಶಿಕ್ಷಕರು ವೈಚಾರಿಕವಾದ, ಜ್ಯಾತ್ಯಾತೀತವಾದ ಸಂವಿಧಾನದ ಆಶಯಗಳನ್ನು ಸಾರುವ ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗೆ ನಾಜೂಕಾಗಿ ತುಂಬುವಂತಹ ಬೋಧನೆಗಳನ್ನು ಮಾಡಲಿ. ಇಂತಹ ಪ್ರಗತಿಪರ ಮನಸ್ಸುಗಳುಳ್ಳ ವಿದ್ಯಾರ್ಥಿಗಳನ್ನು ಬೆಳೆಸಿದ ನಂತರ ಸ್ಕಾರ್ಫ್ ಹಾಕಿಕೊಂಡು ತರಗತಿಗೆ ಬರಬೇಡಿ ಎಂದು ಹೇಳುವುದರ ಹಿಂದೆ ಒಂದು ಅರ್ಥ ಇರುತ್ತದೆ. ಅದುಬಿಟ್ಟು ಏಕಾಏಕಿ ಬುರ್ಕಾ ನಿಷೇದಿಸುವುದರ ಹಿಂದೆ ಮುಸ್ಲಿಂ ಮಹಿಳೆಯರನ್ನು ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಬದಿಗೆ ದೂಡುವ ಹುನ್ನಾರ ಇದೆ. ಈ ಹುನ್ನಾರವನ್ನು ಹಿಂದುತ್ವದ ಕೋಮುವಾದಿಗಳು ಬಹಳ ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ ಎಂದು ಎಸ್‌ಎಫ್‌ಐನ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿರಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮತೀಯಾ ಸೃಷ್ಟಿ ಮಾಡ್ತಿರೋದು ಕಮ್ಯೂನಿಸ್ಟ್ ರು,ಮಾವೋವಾದಿಗಳು ,ಜಿಹಾದಿಗಳೇ ವಿನಹ ಎಬಿವಿಪಿ ಅಲ್ಲಾ ,ಷರಿಯತ್ ಕಾನೂನಿಗೆ ಬೆಂಬಲ ನೀಡುತ್ತಿರುವ ತಮ್ಮ ಪತ್ರಿಕೆಗೇ ಏನೇಳಬೇಕು ,ದೇಶದ್ರೋಹಿಗಳೇ ನಿಮ್ಮ ಆಟ ಇನ್ನು ನಡೆಯದು.

  2. There was no Hijab issue in that college. All girls used to follow the uniform rules and we’re attending the classes without Hijab/Burkha. Now some communal forces behind the scene provoked the innocent girls (For those forces their hidden agenda is more important than education of their own women)

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...