Homeಮುಖಪುಟಹಿಬಾಬ್‌ಗೆ ನಿರಾಕರಣೆ: ಕಾಲೇಜು ಮಂಡಳಿಯ ಕಿರುಕುಳಕ್ಕೆ ಬೇಸತ್ತು ಪ್ರಾಂಶುಪಾಲೆ ರಾಜೀನಾಮೆ

ಹಿಬಾಬ್‌ಗೆ ನಿರಾಕರಣೆ: ಕಾಲೇಜು ಮಂಡಳಿಯ ಕಿರುಕುಳಕ್ಕೆ ಬೇಸತ್ತು ಪ್ರಾಂಶುಪಾಲೆ ರಾಜೀನಾಮೆ

- Advertisement -
- Advertisement -

ಹಿಜಾಬ್‌ ಪ್ರಕರಣ ಕಾಡ್ಗಿಚ್ಚಿನಂತೆ ಅಸಹನೆಯನ್ನು ಸೃಷ್ಟಿಸುತ್ತಿದ್ದು, ಶಿಕ್ಷಕಿಯರನ್ನು ಕಾಡುತ್ತಿರುವ ಬೆಳವಣಿಗೆಗಳಾಗುತ್ತಿವೆ. ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದ ಮುಸ್ಲಿಂ ಪ್ರಾಂಶುಪಾಲೆಯೊಬ್ಬರು ಕಿರುಕುಳ ತಾಳಲಾರದೆ ಮನನೊಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆ ನಡೆದಿದೆ.

ಕಿರುಕುಳ ಧರಿಸಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ಕಾನೂನು ಕಾಲೇಜಿನ ಪ್ರಾಂಶುಪಾಲೆ ಬತ್ತುಲ್‌ ಹಮ್ಮಿದ್‌ ರಾಜೀನಾಮೆ ಸಲ್ಲಿಸಿದ್ದಾರೆ. ಹಿಜಾಬ್‌ ಧರಿಸುವ ಉಂಟಾಗಿರುವ ಉಸಿರುಗಟ್ಟಿಸುವ ಭಾವನೆಯಿಂದಾಗಿ ಹುದ್ದೆಯನ್ನು ತೊರೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

2019ರ ಜುಲೈನಲ್ಲಿ ವಿರಾರ್​​ನಲ್ಲಿರುವ ವಿವಾ ಕಾನೂನು ಕಾಲೇಜ್​ ಪ್ರಾಂಶುಪಾಲೆಯಾಗಿ ಬತ್ತುಲ್ ಹಮೀದ್​ ನೇಮಕವಾಗಿದ್ದರು.

ತಮ್ಮ ರಾಜೀನಾಮೆ ಪತ್ರದಲ್ಲಿ ಬತ್ತುಲ್‌ ಹಮ್ಮಿದ್‌, “ಹಿಜಾಬ್‌ ಧರಿಸುವುದು ಹಿಂದೆ ಯಾವತ್ತೂ ಸಮಸ್ಯೆಯಾಗಿರಲಿಲ್ಲ. ಆದರೆ ಕರ್ನಾಟಕದಲ್ಲಿ ವಿವಾದದ ಬಳಿಕ ಇದೀಗ ದೊಡ್ಡದಾಗಿ ಪರಿಣಾಮ ಬೀರುತ್ತಿವೆ. ತನ್ನೊಂದಿಗೆ ಸಹಕರಿಸದಂತೆ ಇತರ ಸಿಬ್ಬಂದಿಗೆ ಕಾಲೇಜು ಆಡಳಿತ ಮಂಡಳಿ ಸೂಚನೆ ನೀಡಿದ್ದು, ನಮ್ಮ ಆಪ್ತ ಸಹಾಯಕರು ಕೂಡ ದಿನನಿತ್ಯದ ಕೆಲಸದಲ್ಲಿ ಸಹಾಯ ಮಾಡುತ್ತಿಲ್ಲ” ಆರೋಪಿಸಿದ್ದಾರೆ.

ಆದರೆ ಕಾಲೇಜು ಆಡಳಿತ ಮಂಡಳಿ ಆರೋಪಗಳನ್ನು ತಳ್ಳಿಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಥಾಣೆ ಜಿಲ್ಲೆಯ ಭಿವಂಡಿಯ ಶಾಲೆಯೊಂದರ ಇಬ್ಬರು ಶಿಕ್ಷಕಿಯರನ್ನು ಹಿಜಾಬ್‌ ಧರಿಸಿ ಕೆಲಸಕ್ಕೆ ಬಾರದಂತೆ ತಡೆದಿದ್ದ ಘಟನೆ ಈ ಹಿಂದೆ ವರದಿಯಾಗಿತ್ತು. ಸ್ಥಳೀಯ ಮುಖಂಡರು ಹಾಗೂ ಚುನಾಯಿತ ಪ್ರತಿನಿಧಿಗಳು ಮಧ್ಯಪ್ರವೇಶಿಸಿ ಸರ್ಕಾರದೊಂದಿಗೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿದ್ದರು.

ಇದನ್ನೂ ಓದಿರಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅನುಮತಿ ನಿರಾಕರಣೆ ಕುರಿತು ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಿಜಾಬ್ ಧರಿಸಿದರೆ ಎಸ್ಸೆಸೆಲ್ಸಿ ಪರೀಕ್ಷೆಗೆ ಅವಕಾಶವಿಲ್ಲ ಎಂದಿರುವ ಕರ್ನಾಟಕ ರಾಜ್ಯ ಸರಕಾರದ ಆದೇಶದ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ತಂದೆ-ತಾಯಿ ಇರಬಹುದು, ಸರಕಾರ ಇರಬಹುದು ಮಕ್ಕಳ ಶಿಕ್ಷಣದ ಬಗ್ಗೆ ಗಮನಹರಿಸಬೇಕು ಎಂದಿದ್ದಾರೆ.

ಮಕ್ಕಳು ತಪ್ಪು ಮಾಡಬಹುದು, ಅವರಿಗೆ ಹಠ ಇರಬಹುದು. ಹಾಗಂತ ಅವರ ಭವಿಷ್ಯ ಹಾಳಾಗಲು ಉತ್ತೇಜನ ಕೊಡಬಾರದು. ಕೂತುಕೊಂಡು ಅವರತ್ರ ಮಾತಾಡಿ ಮನವೊಲಿಸಬೇಕು. ಧರ್ಮಗುರುಗಳು, ತಂದೆ-ತಾಯಂದಿರು, ಶಿಕ್ಷಕರನ್ನು ಬಳಸಿ, ಅವರಿಗೂ ಮನದಟ್ಟು ಮಾಡಿಕೊಟ್ಟು, ಮಕ್ಕಳಿಗೆ ತಿಳಿ ಹೇಳಿಸಬೇಕು. ಏಕೆಂದರೆ ಮಕ್ಕಳು ಶಿಕ್ಷಕರ ಮಾತನ್ನು ಗೌರವ ಕೊಟ್ಟು ಕೇಳುತ್ತಾರೆ. ತಾಯಿ ಮೊದಲ ಗುರು. ಶಿಕ್ಷಕರು ಎರಡನೇ ಗುರು. ಯಾರ್ಯಾರು ಯಾವ್ಯಾವ ಸಂದರ್ಭದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡಬೇಕು ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ದುಪ್ಪಟ್ಟ ಹಾಕಿಕೊಳ್ಳಲು ಅವಕಾಶ ಕೊಡಿ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರಲ್ಲ ಎಂಬ ಬಗ್ಗೆ ಮಾತನಾಡಿದ ಅವರು, ಸಂವಿಧಾನ ಏನೆಲ್ಲಾ ಹೇಳುತ್ತಾದೋ, ಅಧಿಕಾರ, ಅವಕಾಶ ನೀಡಿದೆಯೋ ಅದರ ಪರವಾಗಿ ಕಾಂಗ್ರೆಸ್ ಇರುತ್ತದೆ. ನಮಗೆ ಅದೇ ಬೈಬಲ್, ಅದೇ ಖುರಾನ್, ಅದೇ ಭಗವದ್ಗೀತೆ. ಇದಕ್ಕಿಂತ ಹೆಚ್ಚಿಗೆ ನಾನೇನೂ ಹೇಳಲಾರೆ ಎಂದು ತಿಳಿಸಿದ್ದಾರೆ.

ಈಗ ಕೋರ್ಟ್ ತೀರ್ಪು ಕೊಟ್ಟಿದೆ. ಕೆಲವರು ಅದನ್ನು ಒಪ್ಪುತ್ತಾರೆ. ಕೆಲವರು ಅದನ್ನು ಒಪ್ಪುವುದಿಲ್ಲ. ಸುಪ್ರೀಂ ಕೋರ್ಟಗೂ ಹೋಗಬಹುದು. ಇವತ್ತಲ್ಲ ನಾಳೆ ಜಡ್ಜ್ಮೆಂಟ್ ಬಂದು ಎಲ್ಲ ಸರಿಯಾಗುತ್ತದೆ. ನ್ಯಾಯಾಲಯದ ತೀರ್ಪು ಸರಿ ಇಲ್ಲ ಅಂತ ನಾನು ಹೇಳೋಕೆ ರೆಡಿ ಇಲ್ಲ. ತೀರ್ಪು ತೀರ್ಪೆ. ಯಾರು ಬೇಕಾದರೂ ಹೋಗಿ ಅವರ ವಿಚಾರವನ್ನು ಮಂಡನೆ ಮಾಡಬಹುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜೀವನ ಪರ್ಯಂತ ಹೀಗೇ ಇದ್ದು ಬಿಡಿ ತಾಯಿ ,ಮತ್ತೇ ಕಾಲೇಜಿಗೆ ಹೋಗಬೇಡಿ ತಾಯಿ ,ಉಡುಪಿ ಹಿಜಾಬ್ ವಿದ್ಯಾರ್ಥಿಗಳಿಗೂ ಹೀಗೇ ಮಾಡಲೂ ಹೇಳಿ ,ನಗರ ನಕ್ಸಲರೇ

  2. Bihind Hijab issue is …there is RSS which well plans Bjp election religious issues , Next year Karnataka elections are there , So from Now only devide Hindu and Muslims . So Muslims please over look any of such issues , take Intelligent decision … Always keep in mind Majahub Nahi sikatha Aapas me bair rakhana..

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...