Homeಮುಖಪುಟಹಿಬಾಬ್‌ಗೆ ನಿರಾಕರಣೆ: ಕಾಲೇಜು ಮಂಡಳಿಯ ಕಿರುಕುಳಕ್ಕೆ ಬೇಸತ್ತು ಪ್ರಾಂಶುಪಾಲೆ ರಾಜೀನಾಮೆ

ಹಿಬಾಬ್‌ಗೆ ನಿರಾಕರಣೆ: ಕಾಲೇಜು ಮಂಡಳಿಯ ಕಿರುಕುಳಕ್ಕೆ ಬೇಸತ್ತು ಪ್ರಾಂಶುಪಾಲೆ ರಾಜೀನಾಮೆ

- Advertisement -
- Advertisement -

ಹಿಜಾಬ್‌ ಪ್ರಕರಣ ಕಾಡ್ಗಿಚ್ಚಿನಂತೆ ಅಸಹನೆಯನ್ನು ಸೃಷ್ಟಿಸುತ್ತಿದ್ದು, ಶಿಕ್ಷಕಿಯರನ್ನು ಕಾಡುತ್ತಿರುವ ಬೆಳವಣಿಗೆಗಳಾಗುತ್ತಿವೆ. ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದ ಮುಸ್ಲಿಂ ಪ್ರಾಂಶುಪಾಲೆಯೊಬ್ಬರು ಕಿರುಕುಳ ತಾಳಲಾರದೆ ಮನನೊಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆ ನಡೆದಿದೆ.

ಕಿರುಕುಳ ಧರಿಸಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ಕಾನೂನು ಕಾಲೇಜಿನ ಪ್ರಾಂಶುಪಾಲೆ ಬತ್ತುಲ್‌ ಹಮ್ಮಿದ್‌ ರಾಜೀನಾಮೆ ಸಲ್ಲಿಸಿದ್ದಾರೆ. ಹಿಜಾಬ್‌ ಧರಿಸುವ ಉಂಟಾಗಿರುವ ಉಸಿರುಗಟ್ಟಿಸುವ ಭಾವನೆಯಿಂದಾಗಿ ಹುದ್ದೆಯನ್ನು ತೊರೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

2019ರ ಜುಲೈನಲ್ಲಿ ವಿರಾರ್​​ನಲ್ಲಿರುವ ವಿವಾ ಕಾನೂನು ಕಾಲೇಜ್​ ಪ್ರಾಂಶುಪಾಲೆಯಾಗಿ ಬತ್ತುಲ್ ಹಮೀದ್​ ನೇಮಕವಾಗಿದ್ದರು.

ತಮ್ಮ ರಾಜೀನಾಮೆ ಪತ್ರದಲ್ಲಿ ಬತ್ತುಲ್‌ ಹಮ್ಮಿದ್‌, “ಹಿಜಾಬ್‌ ಧರಿಸುವುದು ಹಿಂದೆ ಯಾವತ್ತೂ ಸಮಸ್ಯೆಯಾಗಿರಲಿಲ್ಲ. ಆದರೆ ಕರ್ನಾಟಕದಲ್ಲಿ ವಿವಾದದ ಬಳಿಕ ಇದೀಗ ದೊಡ್ಡದಾಗಿ ಪರಿಣಾಮ ಬೀರುತ್ತಿವೆ. ತನ್ನೊಂದಿಗೆ ಸಹಕರಿಸದಂತೆ ಇತರ ಸಿಬ್ಬಂದಿಗೆ ಕಾಲೇಜು ಆಡಳಿತ ಮಂಡಳಿ ಸೂಚನೆ ನೀಡಿದ್ದು, ನಮ್ಮ ಆಪ್ತ ಸಹಾಯಕರು ಕೂಡ ದಿನನಿತ್ಯದ ಕೆಲಸದಲ್ಲಿ ಸಹಾಯ ಮಾಡುತ್ತಿಲ್ಲ” ಆರೋಪಿಸಿದ್ದಾರೆ.

ಆದರೆ ಕಾಲೇಜು ಆಡಳಿತ ಮಂಡಳಿ ಆರೋಪಗಳನ್ನು ತಳ್ಳಿಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಥಾಣೆ ಜಿಲ್ಲೆಯ ಭಿವಂಡಿಯ ಶಾಲೆಯೊಂದರ ಇಬ್ಬರು ಶಿಕ್ಷಕಿಯರನ್ನು ಹಿಜಾಬ್‌ ಧರಿಸಿ ಕೆಲಸಕ್ಕೆ ಬಾರದಂತೆ ತಡೆದಿದ್ದ ಘಟನೆ ಈ ಹಿಂದೆ ವರದಿಯಾಗಿತ್ತು. ಸ್ಥಳೀಯ ಮುಖಂಡರು ಹಾಗೂ ಚುನಾಯಿತ ಪ್ರತಿನಿಧಿಗಳು ಮಧ್ಯಪ್ರವೇಶಿಸಿ ಸರ್ಕಾರದೊಂದಿಗೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿದ್ದರು.

ಇದನ್ನೂ ಓದಿರಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅನುಮತಿ ನಿರಾಕರಣೆ ಕುರಿತು ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಿಜಾಬ್ ಧರಿಸಿದರೆ ಎಸ್ಸೆಸೆಲ್ಸಿ ಪರೀಕ್ಷೆಗೆ ಅವಕಾಶವಿಲ್ಲ ಎಂದಿರುವ ಕರ್ನಾಟಕ ರಾಜ್ಯ ಸರಕಾರದ ಆದೇಶದ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ತಂದೆ-ತಾಯಿ ಇರಬಹುದು, ಸರಕಾರ ಇರಬಹುದು ಮಕ್ಕಳ ಶಿಕ್ಷಣದ ಬಗ್ಗೆ ಗಮನಹರಿಸಬೇಕು ಎಂದಿದ್ದಾರೆ.

ಮಕ್ಕಳು ತಪ್ಪು ಮಾಡಬಹುದು, ಅವರಿಗೆ ಹಠ ಇರಬಹುದು. ಹಾಗಂತ ಅವರ ಭವಿಷ್ಯ ಹಾಳಾಗಲು ಉತ್ತೇಜನ ಕೊಡಬಾರದು. ಕೂತುಕೊಂಡು ಅವರತ್ರ ಮಾತಾಡಿ ಮನವೊಲಿಸಬೇಕು. ಧರ್ಮಗುರುಗಳು, ತಂದೆ-ತಾಯಂದಿರು, ಶಿಕ್ಷಕರನ್ನು ಬಳಸಿ, ಅವರಿಗೂ ಮನದಟ್ಟು ಮಾಡಿಕೊಟ್ಟು, ಮಕ್ಕಳಿಗೆ ತಿಳಿ ಹೇಳಿಸಬೇಕು. ಏಕೆಂದರೆ ಮಕ್ಕಳು ಶಿಕ್ಷಕರ ಮಾತನ್ನು ಗೌರವ ಕೊಟ್ಟು ಕೇಳುತ್ತಾರೆ. ತಾಯಿ ಮೊದಲ ಗುರು. ಶಿಕ್ಷಕರು ಎರಡನೇ ಗುರು. ಯಾರ್ಯಾರು ಯಾವ್ಯಾವ ಸಂದರ್ಭದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡಬೇಕು ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ದುಪ್ಪಟ್ಟ ಹಾಕಿಕೊಳ್ಳಲು ಅವಕಾಶ ಕೊಡಿ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರಲ್ಲ ಎಂಬ ಬಗ್ಗೆ ಮಾತನಾಡಿದ ಅವರು, ಸಂವಿಧಾನ ಏನೆಲ್ಲಾ ಹೇಳುತ್ತಾದೋ, ಅಧಿಕಾರ, ಅವಕಾಶ ನೀಡಿದೆಯೋ ಅದರ ಪರವಾಗಿ ಕಾಂಗ್ರೆಸ್ ಇರುತ್ತದೆ. ನಮಗೆ ಅದೇ ಬೈಬಲ್, ಅದೇ ಖುರಾನ್, ಅದೇ ಭಗವದ್ಗೀತೆ. ಇದಕ್ಕಿಂತ ಹೆಚ್ಚಿಗೆ ನಾನೇನೂ ಹೇಳಲಾರೆ ಎಂದು ತಿಳಿಸಿದ್ದಾರೆ.

ಈಗ ಕೋರ್ಟ್ ತೀರ್ಪು ಕೊಟ್ಟಿದೆ. ಕೆಲವರು ಅದನ್ನು ಒಪ್ಪುತ್ತಾರೆ. ಕೆಲವರು ಅದನ್ನು ಒಪ್ಪುವುದಿಲ್ಲ. ಸುಪ್ರೀಂ ಕೋರ್ಟಗೂ ಹೋಗಬಹುದು. ಇವತ್ತಲ್ಲ ನಾಳೆ ಜಡ್ಜ್ಮೆಂಟ್ ಬಂದು ಎಲ್ಲ ಸರಿಯಾಗುತ್ತದೆ. ನ್ಯಾಯಾಲಯದ ತೀರ್ಪು ಸರಿ ಇಲ್ಲ ಅಂತ ನಾನು ಹೇಳೋಕೆ ರೆಡಿ ಇಲ್ಲ. ತೀರ್ಪು ತೀರ್ಪೆ. ಯಾರು ಬೇಕಾದರೂ ಹೋಗಿ ಅವರ ವಿಚಾರವನ್ನು ಮಂಡನೆ ಮಾಡಬಹುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜೀವನ ಪರ್ಯಂತ ಹೀಗೇ ಇದ್ದು ಬಿಡಿ ತಾಯಿ ,ಮತ್ತೇ ಕಾಲೇಜಿಗೆ ಹೋಗಬೇಡಿ ತಾಯಿ ,ಉಡುಪಿ ಹಿಜಾಬ್ ವಿದ್ಯಾರ್ಥಿಗಳಿಗೂ ಹೀಗೇ ಮಾಡಲೂ ಹೇಳಿ ,ನಗರ ನಕ್ಸಲರೇ

  2. Bihind Hijab issue is …there is RSS which well plans Bjp election religious issues , Next year Karnataka elections are there , So from Now only devide Hindu and Muslims . So Muslims please over look any of such issues , take Intelligent decision … Always keep in mind Majahub Nahi sikatha Aapas me bair rakhana..

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...