Homeಮುಖಪುಟಹಿಬಾಬ್‌ಗೆ ನಿರಾಕರಣೆ: ಕಾಲೇಜು ಮಂಡಳಿಯ ಕಿರುಕುಳಕ್ಕೆ ಬೇಸತ್ತು ಪ್ರಾಂಶುಪಾಲೆ ರಾಜೀನಾಮೆ

ಹಿಬಾಬ್‌ಗೆ ನಿರಾಕರಣೆ: ಕಾಲೇಜು ಮಂಡಳಿಯ ಕಿರುಕುಳಕ್ಕೆ ಬೇಸತ್ತು ಪ್ರಾಂಶುಪಾಲೆ ರಾಜೀನಾಮೆ

- Advertisement -
- Advertisement -

ಹಿಜಾಬ್‌ ಪ್ರಕರಣ ಕಾಡ್ಗಿಚ್ಚಿನಂತೆ ಅಸಹನೆಯನ್ನು ಸೃಷ್ಟಿಸುತ್ತಿದ್ದು, ಶಿಕ್ಷಕಿಯರನ್ನು ಕಾಡುತ್ತಿರುವ ಬೆಳವಣಿಗೆಗಳಾಗುತ್ತಿವೆ. ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದ ಮುಸ್ಲಿಂ ಪ್ರಾಂಶುಪಾಲೆಯೊಬ್ಬರು ಕಿರುಕುಳ ತಾಳಲಾರದೆ ಮನನೊಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆ ನಡೆದಿದೆ.

ಕಿರುಕುಳ ಧರಿಸಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ಕಾನೂನು ಕಾಲೇಜಿನ ಪ್ರಾಂಶುಪಾಲೆ ಬತ್ತುಲ್‌ ಹಮ್ಮಿದ್‌ ರಾಜೀನಾಮೆ ಸಲ್ಲಿಸಿದ್ದಾರೆ. ಹಿಜಾಬ್‌ ಧರಿಸುವ ಉಂಟಾಗಿರುವ ಉಸಿರುಗಟ್ಟಿಸುವ ಭಾವನೆಯಿಂದಾಗಿ ಹುದ್ದೆಯನ್ನು ತೊರೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

2019ರ ಜುಲೈನಲ್ಲಿ ವಿರಾರ್​​ನಲ್ಲಿರುವ ವಿವಾ ಕಾನೂನು ಕಾಲೇಜ್​ ಪ್ರಾಂಶುಪಾಲೆಯಾಗಿ ಬತ್ತುಲ್ ಹಮೀದ್​ ನೇಮಕವಾಗಿದ್ದರು.

ತಮ್ಮ ರಾಜೀನಾಮೆ ಪತ್ರದಲ್ಲಿ ಬತ್ತುಲ್‌ ಹಮ್ಮಿದ್‌, “ಹಿಜಾಬ್‌ ಧರಿಸುವುದು ಹಿಂದೆ ಯಾವತ್ತೂ ಸಮಸ್ಯೆಯಾಗಿರಲಿಲ್ಲ. ಆದರೆ ಕರ್ನಾಟಕದಲ್ಲಿ ವಿವಾದದ ಬಳಿಕ ಇದೀಗ ದೊಡ್ಡದಾಗಿ ಪರಿಣಾಮ ಬೀರುತ್ತಿವೆ. ತನ್ನೊಂದಿಗೆ ಸಹಕರಿಸದಂತೆ ಇತರ ಸಿಬ್ಬಂದಿಗೆ ಕಾಲೇಜು ಆಡಳಿತ ಮಂಡಳಿ ಸೂಚನೆ ನೀಡಿದ್ದು, ನಮ್ಮ ಆಪ್ತ ಸಹಾಯಕರು ಕೂಡ ದಿನನಿತ್ಯದ ಕೆಲಸದಲ್ಲಿ ಸಹಾಯ ಮಾಡುತ್ತಿಲ್ಲ” ಆರೋಪಿಸಿದ್ದಾರೆ.

ಆದರೆ ಕಾಲೇಜು ಆಡಳಿತ ಮಂಡಳಿ ಆರೋಪಗಳನ್ನು ತಳ್ಳಿಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಥಾಣೆ ಜಿಲ್ಲೆಯ ಭಿವಂಡಿಯ ಶಾಲೆಯೊಂದರ ಇಬ್ಬರು ಶಿಕ್ಷಕಿಯರನ್ನು ಹಿಜಾಬ್‌ ಧರಿಸಿ ಕೆಲಸಕ್ಕೆ ಬಾರದಂತೆ ತಡೆದಿದ್ದ ಘಟನೆ ಈ ಹಿಂದೆ ವರದಿಯಾಗಿತ್ತು. ಸ್ಥಳೀಯ ಮುಖಂಡರು ಹಾಗೂ ಚುನಾಯಿತ ಪ್ರತಿನಿಧಿಗಳು ಮಧ್ಯಪ್ರವೇಶಿಸಿ ಸರ್ಕಾರದೊಂದಿಗೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿದ್ದರು.

ಇದನ್ನೂ ಓದಿರಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅನುಮತಿ ನಿರಾಕರಣೆ ಕುರಿತು ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಿಜಾಬ್ ಧರಿಸಿದರೆ ಎಸ್ಸೆಸೆಲ್ಸಿ ಪರೀಕ್ಷೆಗೆ ಅವಕಾಶವಿಲ್ಲ ಎಂದಿರುವ ಕರ್ನಾಟಕ ರಾಜ್ಯ ಸರಕಾರದ ಆದೇಶದ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ತಂದೆ-ತಾಯಿ ಇರಬಹುದು, ಸರಕಾರ ಇರಬಹುದು ಮಕ್ಕಳ ಶಿಕ್ಷಣದ ಬಗ್ಗೆ ಗಮನಹರಿಸಬೇಕು ಎಂದಿದ್ದಾರೆ.

ಮಕ್ಕಳು ತಪ್ಪು ಮಾಡಬಹುದು, ಅವರಿಗೆ ಹಠ ಇರಬಹುದು. ಹಾಗಂತ ಅವರ ಭವಿಷ್ಯ ಹಾಳಾಗಲು ಉತ್ತೇಜನ ಕೊಡಬಾರದು. ಕೂತುಕೊಂಡು ಅವರತ್ರ ಮಾತಾಡಿ ಮನವೊಲಿಸಬೇಕು. ಧರ್ಮಗುರುಗಳು, ತಂದೆ-ತಾಯಂದಿರು, ಶಿಕ್ಷಕರನ್ನು ಬಳಸಿ, ಅವರಿಗೂ ಮನದಟ್ಟು ಮಾಡಿಕೊಟ್ಟು, ಮಕ್ಕಳಿಗೆ ತಿಳಿ ಹೇಳಿಸಬೇಕು. ಏಕೆಂದರೆ ಮಕ್ಕಳು ಶಿಕ್ಷಕರ ಮಾತನ್ನು ಗೌರವ ಕೊಟ್ಟು ಕೇಳುತ್ತಾರೆ. ತಾಯಿ ಮೊದಲ ಗುರು. ಶಿಕ್ಷಕರು ಎರಡನೇ ಗುರು. ಯಾರ್ಯಾರು ಯಾವ್ಯಾವ ಸಂದರ್ಭದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡಬೇಕು ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ದುಪ್ಪಟ್ಟ ಹಾಕಿಕೊಳ್ಳಲು ಅವಕಾಶ ಕೊಡಿ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರಲ್ಲ ಎಂಬ ಬಗ್ಗೆ ಮಾತನಾಡಿದ ಅವರು, ಸಂವಿಧಾನ ಏನೆಲ್ಲಾ ಹೇಳುತ್ತಾದೋ, ಅಧಿಕಾರ, ಅವಕಾಶ ನೀಡಿದೆಯೋ ಅದರ ಪರವಾಗಿ ಕಾಂಗ್ರೆಸ್ ಇರುತ್ತದೆ. ನಮಗೆ ಅದೇ ಬೈಬಲ್, ಅದೇ ಖುರಾನ್, ಅದೇ ಭಗವದ್ಗೀತೆ. ಇದಕ್ಕಿಂತ ಹೆಚ್ಚಿಗೆ ನಾನೇನೂ ಹೇಳಲಾರೆ ಎಂದು ತಿಳಿಸಿದ್ದಾರೆ.

ಈಗ ಕೋರ್ಟ್ ತೀರ್ಪು ಕೊಟ್ಟಿದೆ. ಕೆಲವರು ಅದನ್ನು ಒಪ್ಪುತ್ತಾರೆ. ಕೆಲವರು ಅದನ್ನು ಒಪ್ಪುವುದಿಲ್ಲ. ಸುಪ್ರೀಂ ಕೋರ್ಟಗೂ ಹೋಗಬಹುದು. ಇವತ್ತಲ್ಲ ನಾಳೆ ಜಡ್ಜ್ಮೆಂಟ್ ಬಂದು ಎಲ್ಲ ಸರಿಯಾಗುತ್ತದೆ. ನ್ಯಾಯಾಲಯದ ತೀರ್ಪು ಸರಿ ಇಲ್ಲ ಅಂತ ನಾನು ಹೇಳೋಕೆ ರೆಡಿ ಇಲ್ಲ. ತೀರ್ಪು ತೀರ್ಪೆ. ಯಾರು ಬೇಕಾದರೂ ಹೋಗಿ ಅವರ ವಿಚಾರವನ್ನು ಮಂಡನೆ ಮಾಡಬಹುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜೀವನ ಪರ್ಯಂತ ಹೀಗೇ ಇದ್ದು ಬಿಡಿ ತಾಯಿ ,ಮತ್ತೇ ಕಾಲೇಜಿಗೆ ಹೋಗಬೇಡಿ ತಾಯಿ ,ಉಡುಪಿ ಹಿಜಾಬ್ ವಿದ್ಯಾರ್ಥಿಗಳಿಗೂ ಹೀಗೇ ಮಾಡಲೂ ಹೇಳಿ ,ನಗರ ನಕ್ಸಲರೇ

  2. Bihind Hijab issue is …there is RSS which well plans Bjp election religious issues , Next year Karnataka elections are there , So from Now only devide Hindu and Muslims . So Muslims please over look any of such issues , take Intelligent decision … Always keep in mind Majahub Nahi sikatha Aapas me bair rakhana..

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...