Homeಅಂಕಣಗಳುಮುತ್ತು-ಸುತ್ತು: ಕುಂತಿ ಬೆಟ್ಟ ಹತ್ತಿ ನೋಡಿ, ತೊಣ್ಣೂರು ಕೆರೆಯಲ್ಲಿ ಈಜಾಡಿ

ಮುತ್ತು-ಸುತ್ತು: ಕುಂತಿ ಬೆಟ್ಟ ಹತ್ತಿ ನೋಡಿ, ತೊಣ್ಣೂರು ಕೆರೆಯಲ್ಲಿ ಈಜಾಡಿ

- Advertisement -
- Advertisement -

ಬೆಂಗಳೂರಿನಿಂದ 120-130 ಕಿ.ಮೀ ದೂರದಲ್ಲಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕುಂತಿ ಬೆಟ್ಟ ಮತ್ತು ತೊಣ್ಣೂರು ಕೆರೆ ಎಂಬ ಎರಡು ಅಪರೂಪದ ವಿಭಿನ್ನ ಸ್ಥಳಗಳನ್ನು ಈ ಬರಹದ ಮೂಲಕ ಪರಿಚಯ ಮಾಡಿಕೊಡಲು ಇಚ್ಛಿಸುತ್ತೇನೆ. ಚಾರಣ ಮಾಡಲು, ಈಜಾಡಲು ಮತ್ತು ಈ ಸ್ಥಳಗಳ ಬಗ್ಗೆ ಅಧ್ಯಯನ ಮಾಡಲು ಇವು ಹೇಳಿಮಾಡಿಸಿದ ಸುಂದರ ತಾಣಗಳಾಗಿವೆ.

ಕುಂತಿ ಬೆಟ್ಟ

ಬೆಂಗಳೂರಿನಿಂದ ಮಂಡ್ಯ ಮಾರ್ಗವಾಗಿ ತೆರಳಿದರೆ (120 ಕಿ.ಮೀ) ಪಾಂಡವಪುರ ಟೌನ್‌ಗೂ ಮುನ್ನವೇ ಕುಂತಿ ಬೆಟ್ಟ ನಿಮ್ಮ ಗಮನ ಸೆಳೆಯುತ್ತದೆ. ಮೈಸೂರಿನಿಂದ ಬಂದರೆ (30 ಕಿ.ಮೀ), ಪಾಂಡವಪುರ ದಾಟಿ ಮಂಡ್ಯ ಮಾರ್ಗವಾಗಿ 5 ಕಿ.ಮೀ ದೂರ ಕ್ರಮಿಸಿದರೆ ಕುಂತಿ ಬೆಟ್ಟ ಕಾಣಸಿಗುತ್ತದೆ. ಪಾಂಡವಪುರ ಕೆರೆ ತಪ್ಪಲಿನಲ್ಲಿರುವ ಈ ಎರಡು – ಮೂರು ಬೆಟ್ಟಗಳು ಕಣ್ಮನ ಸೆಳೆಯುತ್ತವೆ.

ಕುಂತಿ ಬೆಟ್ಟಕ್ಕೆ ಹತ್ತಲು ಸುಗಮ ದಾರಿಯಿದೆ. ಒಂದೆರಡು ಕಡೆ ಮಾತ್ರ ಬಂಡೆಗಳಿದ್ದು ಎಚ್ಚರಿಕೆಯಿಂದ ಹತ್ತಬೇಕು. ಉಳಿದೆಡೆ ಆರಾಮಾವಾಗಿ ಸುತ್ತಲಿನ ಹಸಿರು ಮರಗಿಡಗಳನ್ನು ನೋಡುತ್ತ, ಕೆರೆಯ ನೋಟವನ್ನು ಅಸ್ವಾದಿಸುತ್ತಾ, ಸುಸ್ತಾದರೆ ಕುಳಿತು ವಿಹರಿಸುತ್ತಾ ಬೆಟ್ಟ ಹತ್ತಬಹುದು. ಬೆಳ್ಳಂ ಬೆಳಿಗ್ಗೆಯೇ ನೀವು ಹತ್ತಲು ಪ್ರಾರಂಭಿಸಿದರೆ, ಒಂದು-ಒಂದೂವರೆ ಗಂಟೆಯಲ್ಲಿ ಆರಾಮವಾಗಿ ಬೆಟ್ಟದ ತುದಿ ತಲುಪಬಹುದು. ಬೆಳಿಗ್ಗೆ 9 ಗಂಟೆಯ ನಂತರವಾದರೆ ಬಿಸಿಲಿನ ಝಳ ಜೋರಾಗಿರುವುದರಿಂದ ಸುಮಾರು 2 ಗಂಟೆಗಳ ಸಮಯ ಬೇಕು.

ಸಮುದ್ರಮಟ್ಟದಿಂದ 2882 ಮೀಟರ್ ಎತ್ತರವಿರುವ ಈ ಬೆಟ್ಟದ ತುದಿಯಲ್ಲಿ ದೊಡ್ಡ ಕಲ್ಲೊಂದನ್ನು ನಿಲ್ಲಿಸಲಾಗಿದೆ. ಚಾರಣಿಗರು ಅಲ್ಲಿ ಕುಳಿತು ವಿರಮಿಸಬಹುದು. ಅಲ್ಲಿಂದ, ಸುತ್ತ ಮುತ್ತಲಿನ ಹಸಿರು ಕಬ್ಬು ಮತ್ತು ಭತ್ತದ ಗದ್ದೆಗಳನ್ನು ನೋಡಬಹುದು. ಪಾಂಡವಪುರ ನಗರ, ಅದರ ಕೆರೆ, ದೂರದ ಮೇಲುಕೋಟೆ ಬೆಟ್ಟ, ಕರಿಘಟ್ಟ ಇವೆಲ್ಲವೂ ಬೆಟ್ಟದ ಮೇಲಿನಿಂದ ಕಣ್ಣಳತೆಗೆ ಸಿಗುತ್ತವೆ.

ಸುತ್ತಲಿನ ಸುಂದರ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುತ್ತಲೇ ನೀವು ತಂದಿದ್ದ ಊಟ, ತಿಂಡಿಗಳನ್ನು ಸವಿಯುವುದು ಅಪರೂಪ ಅನುಭವವೇ ಸರಿ. ನೀವು ಅಲ್ಲಿಗೆ ಹೋಗುವಾಗ ಸಾಕಷ್ಟು ಊಟ-ತಿಂಡಿ ಮತ್ತು ನೀರನ್ನು ಒಯ್ಯುವುದು ಪೂರ್ವ ಷರತ್ತಾಗಿದೆ. ನಂತರ ಅಲ್ಲಿಂದ ಕೆಳಗಿಳಿಯಲು ಒಂದು ಗಂಟೆ ಸಮಯ ಬೇಕಾಗುತ್ತದೆ. ಆಸಕ್ತರು ಎಚ್ಚರಿಕೆಯಿಂದ ರಾತ್ರಿ ವೇಳೆಯೂ ಸಹ ಚಾರಣ ಮಾಡಲು ಅವಕಾಶವಿದೆ.

ಬೆಟ್ಟದ ತಪ್ಪಲಿನಲ್ಲಿ ಕುಂತಿ ಕೊಳ ಹೆಸರಿನ ಕೊಳವೊಂದಿದೆ. ಅಲ್ಲಿ ಹೋಟೆಲ್ ಸಹ ಇದ್ದು ಅಲ್ಲಿ ನೀವು ವಿರಮಿಸಬಹುದು. ಬಹಳ ತಂಪಾದ ಸ್ಥಳ ಇದಾಗಿದ್ದು, ಚಳಿಗಾಲ ಇಲ್ಲಿಗೆ ಪ್ರವಾಸ ಮಾಡಲು ಸೂಕ್ತ ಸಮಯವಾಗಿದೆ.

ಇಲ್ಲಿನ ಪಕ್ಕದ ಊರು ಚಿಕ್ಕಾಡೆ. ಅದೇ ರೀತಿ ಪಾಂಡವಪುರ ಮೊದಲಿನ ಹೆಸರು ಈರೋಡೆ ಎಂಬುದಾಗಿತ್ತು. ಈಗಲೂ ಈರೋಡೆ ಬೀದಿ ಅಲ್ಲಿದೆ. ಈ ಬೆಟ್ಟದಲ್ಲಿ ಬಕಾಸುರ ವಾಸವಿದ್ದ, ಆತನಿಗೆ ಚಿಕ್ಕಾಡೆಯಿಂದ ಚಿಕ್ಕ ಎಡೆಯು, ಈರೋಡೆಯಿಂದ ಹಿರಿಎಡೆಯೂ ಸರಬರಾಜು ಆಗುತ್ತಿತ್ತು ಎಂಬ ಪ್ರತೀತಿ ಇದೆ. ವನವಾಸದ ಸಮಯದಲ್ಲಿ ಕುಂತಿ ಮತ್ತು ಐವರು ಮಕ್ಕಳು ಇಲ್ಲಿಗೆ ಬಂದರು. ಭೀಮ ಬಕಾಸುರನನ್ನು ವಧಿಸಿದ ಸ್ಥಳ ಇದು. ಹಾಗಾಗಿ ಇದಕ್ಕೆ ಕುಂತಿ ಬೆಟ್ಟ ಎಂಬ ಹೆಸರು ಬಂತು. ಬೆಟ್ಟದ ತುದಿಯಲ್ಲಿನ ಕಲ್ಲು ಕುಂತಿ ಬಳಸುತ್ತಿದ್ದ ಒನಕೆ ಎಂಬಂತಹ ದಂತಕತೆಗಳನ್ನು, ಪುರಾಣಗಳನ್ನು ಸ್ಥಳೀಯ ಜನ ಹೇಳುತ್ತಾರೆ.

ಈ ಪುರಾಣ ಪ್ರತೀತಿಗಳ ಹೊರತಾಗಿಯೂ ಚಾರಣಿಗರಿಗೆ ಖುಷಿ ಕೊಡುವ ಬೆಟ್ಟ ಇದಾಗಿದೆ. ಇನ್ನು ಇಲ್ಲಿ ಚಾರಣ ಮುಗಿಸಿ ಮಧ್ಯಾಹ್ನದ ವೇಳೆಗೆ ನೀವು ಪಾಂಡವಪುರ ದಾಟಿ 8-9 ಕಿ.ಮೀ ದೂರ ಕ್ರಮಿಸಿದರೆ ಕೆರೆ ತೊಣ್ಣೂರು ಎಂಬ ಗ್ರಾಮ ಸಿಗುತ್ತದೆ. ವಿಷ್ಣುವರ್ಧನನ ಕಾಲದಲ್ಲಿ ಇಲ್ಲಿ ನಂಬಿನಾರಾಯಣ ಮತ್ತು ಶ್ರೀ ವೇಣುಗೋಪಾಲರ ಎರಡು ದೊಡ್ಡ ದೇವಾಲಯಗಳನ್ನು ನಿರ್ಮಿಸಲಾಗಿದೆ.

ತೊಣ್ಣೂರು ಕೆರೆ

ತೊಣ್ಣೂರು ಗ್ರಾಮದ ಬಳಿ ಇರುವ ತೊಣ್ಣೂರು ಕೆರೆಯು 8-10 ಗ್ರಾಮಗಳಿಗೆ ಹೊಂದಿಕೊಂಡಂತೆ ಇರುವ ದೊಡ್ಡ ಕೆರೆಯಾಗಿದೆ. ಈ ವಿಶಾಲ ಕೆರೆಯು ಅತ್ಯುತ್ತಮ ಪ್ರವಾಸಿ ತಾಣವಾಗಿ ಅಭಿವೃದ್ಧಿಗೊಂಡಿದೆ. ಬೆಟ್ಟದ ಸಾಲುಗಳ ಪಕ್ಕದಲ್ಲಿಯೇ ಈ ಕೆರೆ ಇದ್ದು ನೋಡುತ್ತ ಕುಳಿತರೆ ನೋಡುತ್ತಲೇ ಇರಬೇಕೆನಿಸುತ್ತದೆ. ಪ್ರವಾಸಿಗರಿಗಾಗಿ ಗೋಪುರವೊಂದನ್ನು ನಿರ್ಮಿಸಲಾಗಿದೆ.

ಅಣೆಕಟ್ಟು ಮಾದರಿಯಲ್ಲಿ ಅದರ ದಡವನ್ನು ನಿರ್ಮಿಸಲಾಗಿದ್ದು, ಬಹಳ ಆಳದ ಕೆರೆಯಾದ್ದರಿಂದ ನೀರಿಗೆ ಇಳಿಯದಿರಲು ಮನವಿ ಮಾಡಲಾಗಿದೆ. ಆ ಕೆರೆಯಿಂದ ಸಣ್ಣ ಕಾಲುವೆಯ ರೀತಿ ನೀರು ಹರಿದು ಮೇಲಿನಿಂದ ಜಲಪಾತದ ಮಾದರಿಯಲ್ಲಿ ಧುಮ್ಮಿಕ್ಕುತ್ತದೆ. ಅದನ್ನು ಸ್ಥಳೀಯರು ಮದಗ ಎಂದು ಕರೆಯುತ್ತಾರೆ. ಆ ನೀರಿಗೆ ಮೈಯೊಡ್ಡಿ ಸ್ನಾನ ಮಾಡಬಹುದು. ಅದರ ಪಕ್ಕದಲ್ಲಿ ಕಾಲುವೆಯ ರೀತಿ ನೀರು ವೇಗವಾಗಿ ಹರಿಯುತ್ತದೆ. ಅಲ್ಲಿ ಮಕ್ಕಳೊಂದಿಗೆ ಕೂಡಿ ಮನೆಮಂದಿಯೆಲ್ಲಾ ನೀರಿನೊಂದಿಗೆ ಆಟವಾಡಲು, ಸ್ನಾನ ಮಾಡಲು ಪ್ರಶಸ್ತ ಜಾಗವಾಗಿದೆ.

ಕೆರೆಯ ಮತ್ತೊಂದು ಬದಿಯು ಮರಳಿನಿಂದ ಆವೃತವಾಗಿದ್ದು, ಅಲ್ಲಿ ಈಜಾಡಬಹುದು ಮತ್ತು ವಿಹರಿಸಬಹುದು. ಅದು ನಿಮಗೆ ಸಮುದ್ರದಡದ ಅನುಭವ ನೀಡುತ್ತದೆ. ಅಲ್ಲಿ ಕೆರೆ ಆಳವಿಲ್ಲವಾದ್ದರಿಂದ ಯಾವುದೇ ಭಯವಿಲ್ಲದೆ ನೀರಿನಲ್ಲಿ ಆಟವಾಡಬಹುದು.

ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರು ಮತ್ತು ಬೇಸಾಯಕ್ಕೆ ನೀರು ಒದಗಿಸುವ ಈ ಕೆರೆ ಅತ್ಯುತ್ತಮ ಪ್ರವಾಸಿಸ್ಥಳವೆನ್ನಬಹುದು. ಕೆರೆಯ ಪಕ್ಕದಲ್ಲಿಯೇ ಬೆಟ್ಟವಿದ್ದು ಹತ್ತಿ ಸಂತಸಬಹುದು. ಬೆಟ್ಟದ ಮೇಲೆ ಹಲವು ದೇವಾಲಯಗಳಿವೆ.

ಇತ್ತೀಚೆಗೆ ಇದನ್ನು ಪ್ರವಾಸಿತಾಣವನ್ನಾಗಿ ಅಭಿವೃದ್ದಿಪಡಿಸುತ್ತಿದ್ದರೂ, ಇಲ್ಲಿ ಹೋಟೆಲ್‌ಗಳಿಲ್ಲ. ಹಾಗಾಗಿ ನೀವು ಮನೆಯಿಂದ ಹೊರಡುವಾಗಲೇ ಊಟ, ತಿಂಡಿಗಳನ್ನು ಒಯ್ಯುವುದು ಒಳ್ಳೆಯದು. ಅಲ್ಲಿ ಟೀ-ಬಜ್ಜಿ ರೀತಿಯ ಸ್ನ್ಯಾಕ್ಸ್ ಅಷ್ಟೇ ಲಭ್ಯವಿವೆ.

ಸ್ವಂತ ವಾಹನದಲ್ಲಿ ಹೋದರೆ ಉತ್ತಮ. ಇಲ್ಲದಿದ್ದಲ್ಲಿ ಕುಂತಿ ಬೆಟ್ಟ ಮತ್ತು ತೊಣ್ಣೂರು ಕೆರೆಗಳಿಗೆ ಪಾಂಡವಪುರ ಟೌನ್‌ನಿಂದ ಬಸ್ ವ್ಯವಸ್ಥೆ ಸಹ ಇದೆ. ಅಲ್ಲಿಂದ ಬಾಡಿಗೆ ಆಟೋದಲ್ಲಿಯೂ ಹೋಗಬಹುದು. ಬೆಂಗಳೂರು-ಮೈಸೂರಿನಿಂದ ಪಾಂಡವಪುರ ತಲುಪಲು ರೈಲು ವ್ಯವಸ್ಥೆ ಸಹ ಇದೆ.

ಒಂದು ದಿನದಲ್ಲಿ ಇವೆರಡೂ ಸ್ಥಳಗಳನ್ನು ನೋಡಿಬರಬಹುದು. ನೀವು ಪ್ರವಾಸ ಮುಂದುವರೆಸಬಯಸಿದರೆ ಪಕ್ಕದಲ್ಲಿಯೇ ಮೇಲುಕೋಟೆ, ಶ್ರೀರಂಗಪಟ್ಟಣ, ರಂಗನತಿಟ್ಟು, ಎಡಮುರಿ-ಬಲಮುರಿ, ಕೆಆರ್‌ಎಸ್ ಥರದ ಹತ್ತಾರು ಸ್ಥಳಗಳನ್ನು ನೋಡಬಹುದಾಗಿದೆ.


ಇದನ್ನೂ ಓದಿ: ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...