Homeಅಂಕಣಗಳುಮುತ್ತು-ಸುತ್ತು: ಕುಂತಿ ಬೆಟ್ಟ ಹತ್ತಿ ನೋಡಿ, ತೊಣ್ಣೂರು ಕೆರೆಯಲ್ಲಿ ಈಜಾಡಿ

ಮುತ್ತು-ಸುತ್ತು: ಕುಂತಿ ಬೆಟ್ಟ ಹತ್ತಿ ನೋಡಿ, ತೊಣ್ಣೂರು ಕೆರೆಯಲ್ಲಿ ಈಜಾಡಿ

- Advertisement -
- Advertisement -

ಬೆಂಗಳೂರಿನಿಂದ 120-130 ಕಿ.ಮೀ ದೂರದಲ್ಲಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕುಂತಿ ಬೆಟ್ಟ ಮತ್ತು ತೊಣ್ಣೂರು ಕೆರೆ ಎಂಬ ಎರಡು ಅಪರೂಪದ ವಿಭಿನ್ನ ಸ್ಥಳಗಳನ್ನು ಈ ಬರಹದ ಮೂಲಕ ಪರಿಚಯ ಮಾಡಿಕೊಡಲು ಇಚ್ಛಿಸುತ್ತೇನೆ. ಚಾರಣ ಮಾಡಲು, ಈಜಾಡಲು ಮತ್ತು ಈ ಸ್ಥಳಗಳ ಬಗ್ಗೆ ಅಧ್ಯಯನ ಮಾಡಲು ಇವು ಹೇಳಿಮಾಡಿಸಿದ ಸುಂದರ ತಾಣಗಳಾಗಿವೆ.

ಕುಂತಿ ಬೆಟ್ಟ

ಬೆಂಗಳೂರಿನಿಂದ ಮಂಡ್ಯ ಮಾರ್ಗವಾಗಿ ತೆರಳಿದರೆ (120 ಕಿ.ಮೀ) ಪಾಂಡವಪುರ ಟೌನ್‌ಗೂ ಮುನ್ನವೇ ಕುಂತಿ ಬೆಟ್ಟ ನಿಮ್ಮ ಗಮನ ಸೆಳೆಯುತ್ತದೆ. ಮೈಸೂರಿನಿಂದ ಬಂದರೆ (30 ಕಿ.ಮೀ), ಪಾಂಡವಪುರ ದಾಟಿ ಮಂಡ್ಯ ಮಾರ್ಗವಾಗಿ 5 ಕಿ.ಮೀ ದೂರ ಕ್ರಮಿಸಿದರೆ ಕುಂತಿ ಬೆಟ್ಟ ಕಾಣಸಿಗುತ್ತದೆ. ಪಾಂಡವಪುರ ಕೆರೆ ತಪ್ಪಲಿನಲ್ಲಿರುವ ಈ ಎರಡು – ಮೂರು ಬೆಟ್ಟಗಳು ಕಣ್ಮನ ಸೆಳೆಯುತ್ತವೆ.

ಕುಂತಿ ಬೆಟ್ಟಕ್ಕೆ ಹತ್ತಲು ಸುಗಮ ದಾರಿಯಿದೆ. ಒಂದೆರಡು ಕಡೆ ಮಾತ್ರ ಬಂಡೆಗಳಿದ್ದು ಎಚ್ಚರಿಕೆಯಿಂದ ಹತ್ತಬೇಕು. ಉಳಿದೆಡೆ ಆರಾಮಾವಾಗಿ ಸುತ್ತಲಿನ ಹಸಿರು ಮರಗಿಡಗಳನ್ನು ನೋಡುತ್ತ, ಕೆರೆಯ ನೋಟವನ್ನು ಅಸ್ವಾದಿಸುತ್ತಾ, ಸುಸ್ತಾದರೆ ಕುಳಿತು ವಿಹರಿಸುತ್ತಾ ಬೆಟ್ಟ ಹತ್ತಬಹುದು. ಬೆಳ್ಳಂ ಬೆಳಿಗ್ಗೆಯೇ ನೀವು ಹತ್ತಲು ಪ್ರಾರಂಭಿಸಿದರೆ, ಒಂದು-ಒಂದೂವರೆ ಗಂಟೆಯಲ್ಲಿ ಆರಾಮವಾಗಿ ಬೆಟ್ಟದ ತುದಿ ತಲುಪಬಹುದು. ಬೆಳಿಗ್ಗೆ 9 ಗಂಟೆಯ ನಂತರವಾದರೆ ಬಿಸಿಲಿನ ಝಳ ಜೋರಾಗಿರುವುದರಿಂದ ಸುಮಾರು 2 ಗಂಟೆಗಳ ಸಮಯ ಬೇಕು.

ಸಮುದ್ರಮಟ್ಟದಿಂದ 2882 ಮೀಟರ್ ಎತ್ತರವಿರುವ ಈ ಬೆಟ್ಟದ ತುದಿಯಲ್ಲಿ ದೊಡ್ಡ ಕಲ್ಲೊಂದನ್ನು ನಿಲ್ಲಿಸಲಾಗಿದೆ. ಚಾರಣಿಗರು ಅಲ್ಲಿ ಕುಳಿತು ವಿರಮಿಸಬಹುದು. ಅಲ್ಲಿಂದ, ಸುತ್ತ ಮುತ್ತಲಿನ ಹಸಿರು ಕಬ್ಬು ಮತ್ತು ಭತ್ತದ ಗದ್ದೆಗಳನ್ನು ನೋಡಬಹುದು. ಪಾಂಡವಪುರ ನಗರ, ಅದರ ಕೆರೆ, ದೂರದ ಮೇಲುಕೋಟೆ ಬೆಟ್ಟ, ಕರಿಘಟ್ಟ ಇವೆಲ್ಲವೂ ಬೆಟ್ಟದ ಮೇಲಿನಿಂದ ಕಣ್ಣಳತೆಗೆ ಸಿಗುತ್ತವೆ.

ಸುತ್ತಲಿನ ಸುಂದರ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುತ್ತಲೇ ನೀವು ತಂದಿದ್ದ ಊಟ, ತಿಂಡಿಗಳನ್ನು ಸವಿಯುವುದು ಅಪರೂಪ ಅನುಭವವೇ ಸರಿ. ನೀವು ಅಲ್ಲಿಗೆ ಹೋಗುವಾಗ ಸಾಕಷ್ಟು ಊಟ-ತಿಂಡಿ ಮತ್ತು ನೀರನ್ನು ಒಯ್ಯುವುದು ಪೂರ್ವ ಷರತ್ತಾಗಿದೆ. ನಂತರ ಅಲ್ಲಿಂದ ಕೆಳಗಿಳಿಯಲು ಒಂದು ಗಂಟೆ ಸಮಯ ಬೇಕಾಗುತ್ತದೆ. ಆಸಕ್ತರು ಎಚ್ಚರಿಕೆಯಿಂದ ರಾತ್ರಿ ವೇಳೆಯೂ ಸಹ ಚಾರಣ ಮಾಡಲು ಅವಕಾಶವಿದೆ.

ಬೆಟ್ಟದ ತಪ್ಪಲಿನಲ್ಲಿ ಕುಂತಿ ಕೊಳ ಹೆಸರಿನ ಕೊಳವೊಂದಿದೆ. ಅಲ್ಲಿ ಹೋಟೆಲ್ ಸಹ ಇದ್ದು ಅಲ್ಲಿ ನೀವು ವಿರಮಿಸಬಹುದು. ಬಹಳ ತಂಪಾದ ಸ್ಥಳ ಇದಾಗಿದ್ದು, ಚಳಿಗಾಲ ಇಲ್ಲಿಗೆ ಪ್ರವಾಸ ಮಾಡಲು ಸೂಕ್ತ ಸಮಯವಾಗಿದೆ.

ಇಲ್ಲಿನ ಪಕ್ಕದ ಊರು ಚಿಕ್ಕಾಡೆ. ಅದೇ ರೀತಿ ಪಾಂಡವಪುರ ಮೊದಲಿನ ಹೆಸರು ಈರೋಡೆ ಎಂಬುದಾಗಿತ್ತು. ಈಗಲೂ ಈರೋಡೆ ಬೀದಿ ಅಲ್ಲಿದೆ. ಈ ಬೆಟ್ಟದಲ್ಲಿ ಬಕಾಸುರ ವಾಸವಿದ್ದ, ಆತನಿಗೆ ಚಿಕ್ಕಾಡೆಯಿಂದ ಚಿಕ್ಕ ಎಡೆಯು, ಈರೋಡೆಯಿಂದ ಹಿರಿಎಡೆಯೂ ಸರಬರಾಜು ಆಗುತ್ತಿತ್ತು ಎಂಬ ಪ್ರತೀತಿ ಇದೆ. ವನವಾಸದ ಸಮಯದಲ್ಲಿ ಕುಂತಿ ಮತ್ತು ಐವರು ಮಕ್ಕಳು ಇಲ್ಲಿಗೆ ಬಂದರು. ಭೀಮ ಬಕಾಸುರನನ್ನು ವಧಿಸಿದ ಸ್ಥಳ ಇದು. ಹಾಗಾಗಿ ಇದಕ್ಕೆ ಕುಂತಿ ಬೆಟ್ಟ ಎಂಬ ಹೆಸರು ಬಂತು. ಬೆಟ್ಟದ ತುದಿಯಲ್ಲಿನ ಕಲ್ಲು ಕುಂತಿ ಬಳಸುತ್ತಿದ್ದ ಒನಕೆ ಎಂಬಂತಹ ದಂತಕತೆಗಳನ್ನು, ಪುರಾಣಗಳನ್ನು ಸ್ಥಳೀಯ ಜನ ಹೇಳುತ್ತಾರೆ.

ಈ ಪುರಾಣ ಪ್ರತೀತಿಗಳ ಹೊರತಾಗಿಯೂ ಚಾರಣಿಗರಿಗೆ ಖುಷಿ ಕೊಡುವ ಬೆಟ್ಟ ಇದಾಗಿದೆ. ಇನ್ನು ಇಲ್ಲಿ ಚಾರಣ ಮುಗಿಸಿ ಮಧ್ಯಾಹ್ನದ ವೇಳೆಗೆ ನೀವು ಪಾಂಡವಪುರ ದಾಟಿ 8-9 ಕಿ.ಮೀ ದೂರ ಕ್ರಮಿಸಿದರೆ ಕೆರೆ ತೊಣ್ಣೂರು ಎಂಬ ಗ್ರಾಮ ಸಿಗುತ್ತದೆ. ವಿಷ್ಣುವರ್ಧನನ ಕಾಲದಲ್ಲಿ ಇಲ್ಲಿ ನಂಬಿನಾರಾಯಣ ಮತ್ತು ಶ್ರೀ ವೇಣುಗೋಪಾಲರ ಎರಡು ದೊಡ್ಡ ದೇವಾಲಯಗಳನ್ನು ನಿರ್ಮಿಸಲಾಗಿದೆ.

ತೊಣ್ಣೂರು ಕೆರೆ

ತೊಣ್ಣೂರು ಗ್ರಾಮದ ಬಳಿ ಇರುವ ತೊಣ್ಣೂರು ಕೆರೆಯು 8-10 ಗ್ರಾಮಗಳಿಗೆ ಹೊಂದಿಕೊಂಡಂತೆ ಇರುವ ದೊಡ್ಡ ಕೆರೆಯಾಗಿದೆ. ಈ ವಿಶಾಲ ಕೆರೆಯು ಅತ್ಯುತ್ತಮ ಪ್ರವಾಸಿ ತಾಣವಾಗಿ ಅಭಿವೃದ್ಧಿಗೊಂಡಿದೆ. ಬೆಟ್ಟದ ಸಾಲುಗಳ ಪಕ್ಕದಲ್ಲಿಯೇ ಈ ಕೆರೆ ಇದ್ದು ನೋಡುತ್ತ ಕುಳಿತರೆ ನೋಡುತ್ತಲೇ ಇರಬೇಕೆನಿಸುತ್ತದೆ. ಪ್ರವಾಸಿಗರಿಗಾಗಿ ಗೋಪುರವೊಂದನ್ನು ನಿರ್ಮಿಸಲಾಗಿದೆ.

ಅಣೆಕಟ್ಟು ಮಾದರಿಯಲ್ಲಿ ಅದರ ದಡವನ್ನು ನಿರ್ಮಿಸಲಾಗಿದ್ದು, ಬಹಳ ಆಳದ ಕೆರೆಯಾದ್ದರಿಂದ ನೀರಿಗೆ ಇಳಿಯದಿರಲು ಮನವಿ ಮಾಡಲಾಗಿದೆ. ಆ ಕೆರೆಯಿಂದ ಸಣ್ಣ ಕಾಲುವೆಯ ರೀತಿ ನೀರು ಹರಿದು ಮೇಲಿನಿಂದ ಜಲಪಾತದ ಮಾದರಿಯಲ್ಲಿ ಧುಮ್ಮಿಕ್ಕುತ್ತದೆ. ಅದನ್ನು ಸ್ಥಳೀಯರು ಮದಗ ಎಂದು ಕರೆಯುತ್ತಾರೆ. ಆ ನೀರಿಗೆ ಮೈಯೊಡ್ಡಿ ಸ್ನಾನ ಮಾಡಬಹುದು. ಅದರ ಪಕ್ಕದಲ್ಲಿ ಕಾಲುವೆಯ ರೀತಿ ನೀರು ವೇಗವಾಗಿ ಹರಿಯುತ್ತದೆ. ಅಲ್ಲಿ ಮಕ್ಕಳೊಂದಿಗೆ ಕೂಡಿ ಮನೆಮಂದಿಯೆಲ್ಲಾ ನೀರಿನೊಂದಿಗೆ ಆಟವಾಡಲು, ಸ್ನಾನ ಮಾಡಲು ಪ್ರಶಸ್ತ ಜಾಗವಾಗಿದೆ.

ಕೆರೆಯ ಮತ್ತೊಂದು ಬದಿಯು ಮರಳಿನಿಂದ ಆವೃತವಾಗಿದ್ದು, ಅಲ್ಲಿ ಈಜಾಡಬಹುದು ಮತ್ತು ವಿಹರಿಸಬಹುದು. ಅದು ನಿಮಗೆ ಸಮುದ್ರದಡದ ಅನುಭವ ನೀಡುತ್ತದೆ. ಅಲ್ಲಿ ಕೆರೆ ಆಳವಿಲ್ಲವಾದ್ದರಿಂದ ಯಾವುದೇ ಭಯವಿಲ್ಲದೆ ನೀರಿನಲ್ಲಿ ಆಟವಾಡಬಹುದು.

ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರು ಮತ್ತು ಬೇಸಾಯಕ್ಕೆ ನೀರು ಒದಗಿಸುವ ಈ ಕೆರೆ ಅತ್ಯುತ್ತಮ ಪ್ರವಾಸಿಸ್ಥಳವೆನ್ನಬಹುದು. ಕೆರೆಯ ಪಕ್ಕದಲ್ಲಿಯೇ ಬೆಟ್ಟವಿದ್ದು ಹತ್ತಿ ಸಂತಸಬಹುದು. ಬೆಟ್ಟದ ಮೇಲೆ ಹಲವು ದೇವಾಲಯಗಳಿವೆ.

ಇತ್ತೀಚೆಗೆ ಇದನ್ನು ಪ್ರವಾಸಿತಾಣವನ್ನಾಗಿ ಅಭಿವೃದ್ದಿಪಡಿಸುತ್ತಿದ್ದರೂ, ಇಲ್ಲಿ ಹೋಟೆಲ್‌ಗಳಿಲ್ಲ. ಹಾಗಾಗಿ ನೀವು ಮನೆಯಿಂದ ಹೊರಡುವಾಗಲೇ ಊಟ, ತಿಂಡಿಗಳನ್ನು ಒಯ್ಯುವುದು ಒಳ್ಳೆಯದು. ಅಲ್ಲಿ ಟೀ-ಬಜ್ಜಿ ರೀತಿಯ ಸ್ನ್ಯಾಕ್ಸ್ ಅಷ್ಟೇ ಲಭ್ಯವಿವೆ.

ಸ್ವಂತ ವಾಹನದಲ್ಲಿ ಹೋದರೆ ಉತ್ತಮ. ಇಲ್ಲದಿದ್ದಲ್ಲಿ ಕುಂತಿ ಬೆಟ್ಟ ಮತ್ತು ತೊಣ್ಣೂರು ಕೆರೆಗಳಿಗೆ ಪಾಂಡವಪುರ ಟೌನ್‌ನಿಂದ ಬಸ್ ವ್ಯವಸ್ಥೆ ಸಹ ಇದೆ. ಅಲ್ಲಿಂದ ಬಾಡಿಗೆ ಆಟೋದಲ್ಲಿಯೂ ಹೋಗಬಹುದು. ಬೆಂಗಳೂರು-ಮೈಸೂರಿನಿಂದ ಪಾಂಡವಪುರ ತಲುಪಲು ರೈಲು ವ್ಯವಸ್ಥೆ ಸಹ ಇದೆ.

ಒಂದು ದಿನದಲ್ಲಿ ಇವೆರಡೂ ಸ್ಥಳಗಳನ್ನು ನೋಡಿಬರಬಹುದು. ನೀವು ಪ್ರವಾಸ ಮುಂದುವರೆಸಬಯಸಿದರೆ ಪಕ್ಕದಲ್ಲಿಯೇ ಮೇಲುಕೋಟೆ, ಶ್ರೀರಂಗಪಟ್ಟಣ, ರಂಗನತಿಟ್ಟು, ಎಡಮುರಿ-ಬಲಮುರಿ, ಕೆಆರ್‌ಎಸ್ ಥರದ ಹತ್ತಾರು ಸ್ಥಳಗಳನ್ನು ನೋಡಬಹುದಾಗಿದೆ.


ಇದನ್ನೂ ಓದಿ: ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....