Homeಅಂಕಣಗಳುಮುತ್ತು-ಸುತ್ತು: ಕುಂತಿ ಬೆಟ್ಟ ಹತ್ತಿ ನೋಡಿ, ತೊಣ್ಣೂರು ಕೆರೆಯಲ್ಲಿ ಈಜಾಡಿ

ಮುತ್ತು-ಸುತ್ತು: ಕುಂತಿ ಬೆಟ್ಟ ಹತ್ತಿ ನೋಡಿ, ತೊಣ್ಣೂರು ಕೆರೆಯಲ್ಲಿ ಈಜಾಡಿ

- Advertisement -
- Advertisement -

ಬೆಂಗಳೂರಿನಿಂದ 120-130 ಕಿ.ಮೀ ದೂರದಲ್ಲಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕುಂತಿ ಬೆಟ್ಟ ಮತ್ತು ತೊಣ್ಣೂರು ಕೆರೆ ಎಂಬ ಎರಡು ಅಪರೂಪದ ವಿಭಿನ್ನ ಸ್ಥಳಗಳನ್ನು ಈ ಬರಹದ ಮೂಲಕ ಪರಿಚಯ ಮಾಡಿಕೊಡಲು ಇಚ್ಛಿಸುತ್ತೇನೆ. ಚಾರಣ ಮಾಡಲು, ಈಜಾಡಲು ಮತ್ತು ಈ ಸ್ಥಳಗಳ ಬಗ್ಗೆ ಅಧ್ಯಯನ ಮಾಡಲು ಇವು ಹೇಳಿಮಾಡಿಸಿದ ಸುಂದರ ತಾಣಗಳಾಗಿವೆ.

ಕುಂತಿ ಬೆಟ್ಟ

ಬೆಂಗಳೂರಿನಿಂದ ಮಂಡ್ಯ ಮಾರ್ಗವಾಗಿ ತೆರಳಿದರೆ (120 ಕಿ.ಮೀ) ಪಾಂಡವಪುರ ಟೌನ್‌ಗೂ ಮುನ್ನವೇ ಕುಂತಿ ಬೆಟ್ಟ ನಿಮ್ಮ ಗಮನ ಸೆಳೆಯುತ್ತದೆ. ಮೈಸೂರಿನಿಂದ ಬಂದರೆ (30 ಕಿ.ಮೀ), ಪಾಂಡವಪುರ ದಾಟಿ ಮಂಡ್ಯ ಮಾರ್ಗವಾಗಿ 5 ಕಿ.ಮೀ ದೂರ ಕ್ರಮಿಸಿದರೆ ಕುಂತಿ ಬೆಟ್ಟ ಕಾಣಸಿಗುತ್ತದೆ. ಪಾಂಡವಪುರ ಕೆರೆ ತಪ್ಪಲಿನಲ್ಲಿರುವ ಈ ಎರಡು – ಮೂರು ಬೆಟ್ಟಗಳು ಕಣ್ಮನ ಸೆಳೆಯುತ್ತವೆ.

ಕುಂತಿ ಬೆಟ್ಟಕ್ಕೆ ಹತ್ತಲು ಸುಗಮ ದಾರಿಯಿದೆ. ಒಂದೆರಡು ಕಡೆ ಮಾತ್ರ ಬಂಡೆಗಳಿದ್ದು ಎಚ್ಚರಿಕೆಯಿಂದ ಹತ್ತಬೇಕು. ಉಳಿದೆಡೆ ಆರಾಮಾವಾಗಿ ಸುತ್ತಲಿನ ಹಸಿರು ಮರಗಿಡಗಳನ್ನು ನೋಡುತ್ತ, ಕೆರೆಯ ನೋಟವನ್ನು ಅಸ್ವಾದಿಸುತ್ತಾ, ಸುಸ್ತಾದರೆ ಕುಳಿತು ವಿಹರಿಸುತ್ತಾ ಬೆಟ್ಟ ಹತ್ತಬಹುದು. ಬೆಳ್ಳಂ ಬೆಳಿಗ್ಗೆಯೇ ನೀವು ಹತ್ತಲು ಪ್ರಾರಂಭಿಸಿದರೆ, ಒಂದು-ಒಂದೂವರೆ ಗಂಟೆಯಲ್ಲಿ ಆರಾಮವಾಗಿ ಬೆಟ್ಟದ ತುದಿ ತಲುಪಬಹುದು. ಬೆಳಿಗ್ಗೆ 9 ಗಂಟೆಯ ನಂತರವಾದರೆ ಬಿಸಿಲಿನ ಝಳ ಜೋರಾಗಿರುವುದರಿಂದ ಸುಮಾರು 2 ಗಂಟೆಗಳ ಸಮಯ ಬೇಕು.

ಸಮುದ್ರಮಟ್ಟದಿಂದ 2882 ಮೀಟರ್ ಎತ್ತರವಿರುವ ಈ ಬೆಟ್ಟದ ತುದಿಯಲ್ಲಿ ದೊಡ್ಡ ಕಲ್ಲೊಂದನ್ನು ನಿಲ್ಲಿಸಲಾಗಿದೆ. ಚಾರಣಿಗರು ಅಲ್ಲಿ ಕುಳಿತು ವಿರಮಿಸಬಹುದು. ಅಲ್ಲಿಂದ, ಸುತ್ತ ಮುತ್ತಲಿನ ಹಸಿರು ಕಬ್ಬು ಮತ್ತು ಭತ್ತದ ಗದ್ದೆಗಳನ್ನು ನೋಡಬಹುದು. ಪಾಂಡವಪುರ ನಗರ, ಅದರ ಕೆರೆ, ದೂರದ ಮೇಲುಕೋಟೆ ಬೆಟ್ಟ, ಕರಿಘಟ್ಟ ಇವೆಲ್ಲವೂ ಬೆಟ್ಟದ ಮೇಲಿನಿಂದ ಕಣ್ಣಳತೆಗೆ ಸಿಗುತ್ತವೆ.

ಸುತ್ತಲಿನ ಸುಂದರ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುತ್ತಲೇ ನೀವು ತಂದಿದ್ದ ಊಟ, ತಿಂಡಿಗಳನ್ನು ಸವಿಯುವುದು ಅಪರೂಪ ಅನುಭವವೇ ಸರಿ. ನೀವು ಅಲ್ಲಿಗೆ ಹೋಗುವಾಗ ಸಾಕಷ್ಟು ಊಟ-ತಿಂಡಿ ಮತ್ತು ನೀರನ್ನು ಒಯ್ಯುವುದು ಪೂರ್ವ ಷರತ್ತಾಗಿದೆ. ನಂತರ ಅಲ್ಲಿಂದ ಕೆಳಗಿಳಿಯಲು ಒಂದು ಗಂಟೆ ಸಮಯ ಬೇಕಾಗುತ್ತದೆ. ಆಸಕ್ತರು ಎಚ್ಚರಿಕೆಯಿಂದ ರಾತ್ರಿ ವೇಳೆಯೂ ಸಹ ಚಾರಣ ಮಾಡಲು ಅವಕಾಶವಿದೆ.

ಬೆಟ್ಟದ ತಪ್ಪಲಿನಲ್ಲಿ ಕುಂತಿ ಕೊಳ ಹೆಸರಿನ ಕೊಳವೊಂದಿದೆ. ಅಲ್ಲಿ ಹೋಟೆಲ್ ಸಹ ಇದ್ದು ಅಲ್ಲಿ ನೀವು ವಿರಮಿಸಬಹುದು. ಬಹಳ ತಂಪಾದ ಸ್ಥಳ ಇದಾಗಿದ್ದು, ಚಳಿಗಾಲ ಇಲ್ಲಿಗೆ ಪ್ರವಾಸ ಮಾಡಲು ಸೂಕ್ತ ಸಮಯವಾಗಿದೆ.

ಇಲ್ಲಿನ ಪಕ್ಕದ ಊರು ಚಿಕ್ಕಾಡೆ. ಅದೇ ರೀತಿ ಪಾಂಡವಪುರ ಮೊದಲಿನ ಹೆಸರು ಈರೋಡೆ ಎಂಬುದಾಗಿತ್ತು. ಈಗಲೂ ಈರೋಡೆ ಬೀದಿ ಅಲ್ಲಿದೆ. ಈ ಬೆಟ್ಟದಲ್ಲಿ ಬಕಾಸುರ ವಾಸವಿದ್ದ, ಆತನಿಗೆ ಚಿಕ್ಕಾಡೆಯಿಂದ ಚಿಕ್ಕ ಎಡೆಯು, ಈರೋಡೆಯಿಂದ ಹಿರಿಎಡೆಯೂ ಸರಬರಾಜು ಆಗುತ್ತಿತ್ತು ಎಂಬ ಪ್ರತೀತಿ ಇದೆ. ವನವಾಸದ ಸಮಯದಲ್ಲಿ ಕುಂತಿ ಮತ್ತು ಐವರು ಮಕ್ಕಳು ಇಲ್ಲಿಗೆ ಬಂದರು. ಭೀಮ ಬಕಾಸುರನನ್ನು ವಧಿಸಿದ ಸ್ಥಳ ಇದು. ಹಾಗಾಗಿ ಇದಕ್ಕೆ ಕುಂತಿ ಬೆಟ್ಟ ಎಂಬ ಹೆಸರು ಬಂತು. ಬೆಟ್ಟದ ತುದಿಯಲ್ಲಿನ ಕಲ್ಲು ಕುಂತಿ ಬಳಸುತ್ತಿದ್ದ ಒನಕೆ ಎಂಬಂತಹ ದಂತಕತೆಗಳನ್ನು, ಪುರಾಣಗಳನ್ನು ಸ್ಥಳೀಯ ಜನ ಹೇಳುತ್ತಾರೆ.

ಈ ಪುರಾಣ ಪ್ರತೀತಿಗಳ ಹೊರತಾಗಿಯೂ ಚಾರಣಿಗರಿಗೆ ಖುಷಿ ಕೊಡುವ ಬೆಟ್ಟ ಇದಾಗಿದೆ. ಇನ್ನು ಇಲ್ಲಿ ಚಾರಣ ಮುಗಿಸಿ ಮಧ್ಯಾಹ್ನದ ವೇಳೆಗೆ ನೀವು ಪಾಂಡವಪುರ ದಾಟಿ 8-9 ಕಿ.ಮೀ ದೂರ ಕ್ರಮಿಸಿದರೆ ಕೆರೆ ತೊಣ್ಣೂರು ಎಂಬ ಗ್ರಾಮ ಸಿಗುತ್ತದೆ. ವಿಷ್ಣುವರ್ಧನನ ಕಾಲದಲ್ಲಿ ಇಲ್ಲಿ ನಂಬಿನಾರಾಯಣ ಮತ್ತು ಶ್ರೀ ವೇಣುಗೋಪಾಲರ ಎರಡು ದೊಡ್ಡ ದೇವಾಲಯಗಳನ್ನು ನಿರ್ಮಿಸಲಾಗಿದೆ.

ತೊಣ್ಣೂರು ಕೆರೆ

ತೊಣ್ಣೂರು ಗ್ರಾಮದ ಬಳಿ ಇರುವ ತೊಣ್ಣೂರು ಕೆರೆಯು 8-10 ಗ್ರಾಮಗಳಿಗೆ ಹೊಂದಿಕೊಂಡಂತೆ ಇರುವ ದೊಡ್ಡ ಕೆರೆಯಾಗಿದೆ. ಈ ವಿಶಾಲ ಕೆರೆಯು ಅತ್ಯುತ್ತಮ ಪ್ರವಾಸಿ ತಾಣವಾಗಿ ಅಭಿವೃದ್ಧಿಗೊಂಡಿದೆ. ಬೆಟ್ಟದ ಸಾಲುಗಳ ಪಕ್ಕದಲ್ಲಿಯೇ ಈ ಕೆರೆ ಇದ್ದು ನೋಡುತ್ತ ಕುಳಿತರೆ ನೋಡುತ್ತಲೇ ಇರಬೇಕೆನಿಸುತ್ತದೆ. ಪ್ರವಾಸಿಗರಿಗಾಗಿ ಗೋಪುರವೊಂದನ್ನು ನಿರ್ಮಿಸಲಾಗಿದೆ.

ಅಣೆಕಟ್ಟು ಮಾದರಿಯಲ್ಲಿ ಅದರ ದಡವನ್ನು ನಿರ್ಮಿಸಲಾಗಿದ್ದು, ಬಹಳ ಆಳದ ಕೆರೆಯಾದ್ದರಿಂದ ನೀರಿಗೆ ಇಳಿಯದಿರಲು ಮನವಿ ಮಾಡಲಾಗಿದೆ. ಆ ಕೆರೆಯಿಂದ ಸಣ್ಣ ಕಾಲುವೆಯ ರೀತಿ ನೀರು ಹರಿದು ಮೇಲಿನಿಂದ ಜಲಪಾತದ ಮಾದರಿಯಲ್ಲಿ ಧುಮ್ಮಿಕ್ಕುತ್ತದೆ. ಅದನ್ನು ಸ್ಥಳೀಯರು ಮದಗ ಎಂದು ಕರೆಯುತ್ತಾರೆ. ಆ ನೀರಿಗೆ ಮೈಯೊಡ್ಡಿ ಸ್ನಾನ ಮಾಡಬಹುದು. ಅದರ ಪಕ್ಕದಲ್ಲಿ ಕಾಲುವೆಯ ರೀತಿ ನೀರು ವೇಗವಾಗಿ ಹರಿಯುತ್ತದೆ. ಅಲ್ಲಿ ಮಕ್ಕಳೊಂದಿಗೆ ಕೂಡಿ ಮನೆಮಂದಿಯೆಲ್ಲಾ ನೀರಿನೊಂದಿಗೆ ಆಟವಾಡಲು, ಸ್ನಾನ ಮಾಡಲು ಪ್ರಶಸ್ತ ಜಾಗವಾಗಿದೆ.

ಕೆರೆಯ ಮತ್ತೊಂದು ಬದಿಯು ಮರಳಿನಿಂದ ಆವೃತವಾಗಿದ್ದು, ಅಲ್ಲಿ ಈಜಾಡಬಹುದು ಮತ್ತು ವಿಹರಿಸಬಹುದು. ಅದು ನಿಮಗೆ ಸಮುದ್ರದಡದ ಅನುಭವ ನೀಡುತ್ತದೆ. ಅಲ್ಲಿ ಕೆರೆ ಆಳವಿಲ್ಲವಾದ್ದರಿಂದ ಯಾವುದೇ ಭಯವಿಲ್ಲದೆ ನೀರಿನಲ್ಲಿ ಆಟವಾಡಬಹುದು.

ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರು ಮತ್ತು ಬೇಸಾಯಕ್ಕೆ ನೀರು ಒದಗಿಸುವ ಈ ಕೆರೆ ಅತ್ಯುತ್ತಮ ಪ್ರವಾಸಿಸ್ಥಳವೆನ್ನಬಹುದು. ಕೆರೆಯ ಪಕ್ಕದಲ್ಲಿಯೇ ಬೆಟ್ಟವಿದ್ದು ಹತ್ತಿ ಸಂತಸಬಹುದು. ಬೆಟ್ಟದ ಮೇಲೆ ಹಲವು ದೇವಾಲಯಗಳಿವೆ.

ಇತ್ತೀಚೆಗೆ ಇದನ್ನು ಪ್ರವಾಸಿತಾಣವನ್ನಾಗಿ ಅಭಿವೃದ್ದಿಪಡಿಸುತ್ತಿದ್ದರೂ, ಇಲ್ಲಿ ಹೋಟೆಲ್‌ಗಳಿಲ್ಲ. ಹಾಗಾಗಿ ನೀವು ಮನೆಯಿಂದ ಹೊರಡುವಾಗಲೇ ಊಟ, ತಿಂಡಿಗಳನ್ನು ಒಯ್ಯುವುದು ಒಳ್ಳೆಯದು. ಅಲ್ಲಿ ಟೀ-ಬಜ್ಜಿ ರೀತಿಯ ಸ್ನ್ಯಾಕ್ಸ್ ಅಷ್ಟೇ ಲಭ್ಯವಿವೆ.

ಸ್ವಂತ ವಾಹನದಲ್ಲಿ ಹೋದರೆ ಉತ್ತಮ. ಇಲ್ಲದಿದ್ದಲ್ಲಿ ಕುಂತಿ ಬೆಟ್ಟ ಮತ್ತು ತೊಣ್ಣೂರು ಕೆರೆಗಳಿಗೆ ಪಾಂಡವಪುರ ಟೌನ್‌ನಿಂದ ಬಸ್ ವ್ಯವಸ್ಥೆ ಸಹ ಇದೆ. ಅಲ್ಲಿಂದ ಬಾಡಿಗೆ ಆಟೋದಲ್ಲಿಯೂ ಹೋಗಬಹುದು. ಬೆಂಗಳೂರು-ಮೈಸೂರಿನಿಂದ ಪಾಂಡವಪುರ ತಲುಪಲು ರೈಲು ವ್ಯವಸ್ಥೆ ಸಹ ಇದೆ.

ಒಂದು ದಿನದಲ್ಲಿ ಇವೆರಡೂ ಸ್ಥಳಗಳನ್ನು ನೋಡಿಬರಬಹುದು. ನೀವು ಪ್ರವಾಸ ಮುಂದುವರೆಸಬಯಸಿದರೆ ಪಕ್ಕದಲ್ಲಿಯೇ ಮೇಲುಕೋಟೆ, ಶ್ರೀರಂಗಪಟ್ಟಣ, ರಂಗನತಿಟ್ಟು, ಎಡಮುರಿ-ಬಲಮುರಿ, ಕೆಆರ್‌ಎಸ್ ಥರದ ಹತ್ತಾರು ಸ್ಥಳಗಳನ್ನು ನೋಡಬಹುದಾಗಿದೆ.


ಇದನ್ನೂ ಓದಿ: ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...