Homeಕರ್ನಾಟಕಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ತಿಗಳ ಸಮುದಾಯದ ತೀರ್ಮಾನ

ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ: ತಿಗಳ ಸಮುದಾಯದ ತೀರ್ಮಾನ

ತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ 2021ರ ಜನವರಿಯಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು.

- Advertisement -
- Advertisement -

ವಿವಿಧ ಸಮುದಾಯಗಳಿಂದ ಅಭಿವೃದ್ಧಿ ನಿಗಮಗಳ ಸ್ಥಾಪನೆಗೆ ವ್ಯಾಪಕ ಒತ್ತಾಯ ಕೇಳಿ ಬರತೊಡಗಿದೆ. ಹಾಗೆ ಕುಂಚಿಟಿಗರು, ತಿಗಳರು, ಒಕ್ಕಲಿಗರು, ಕುರುಬರ ಸಂಘಗಳು ನಿಗಮ ಸ್ಥಾಪನೆಗೆ ಸರ್ಕಾರಕ್ಕೆ ಬೇಡಿಕೆಯಿಟ್ಟು ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಅಶ್ವತ್ಥನಾರಾಯಣ ಸೇರಿದಂತೆ ಹಲವು ಮುಖಂಡರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ.

ಶಿರಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಯಾಯಿತು. ಅದಾದ ಮೇಲೆ ಉತ್ತರ ಕರ್ನಾಟಕದ ವಿಧಾನಸಭೆ ಉಪಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠ ಪ್ರಾಧಕಾರ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ ಅಧ್ಯಕ್ಷರನ್ನೂ ನೇಮಕ ಮಾಡಲಾಯಿತು. ಇದಾದ ಮೇಲೆಯೇ ನಿಗಮಗಳ ರಚನೆ ಬೇಡಿಕೆ ಹೆಚ್ಚಾಗಿದೆ. ಪ್ರತಿಯೊಂದು ಜಾತಿ ಸಮುದಾಯಗಳಿಂದಲೂ ಅಭಿವೃದ್ಧಿ ನಿಗಮಗಳ ಬೇಡಿಕೆ ವ್ಯಕ್ತವಾಗುತ್ತಿದೆ.

ತುಮಕೂರಿನಲ್ಲಿ ಸಭೆ ಸೇರಿದ ತಿಗಳ ಸಮುದಾಯದ ಮುಖಂಡರು ‘ಅಗ್ನಿವಂಶ ಕ್ಷತ್ರಿಯ ತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕೆಂದು’ ಆಗ್ರಹಿಸಿದ್ದಾರೆ. ಜೊತೆಗೆ ತಿಗಳ ಜನಾಂಗವನ್ನು ಪ್ರವರ್ಗ 2ಎ ಯಿಂದ ಪ್ರವರ್ಗ 1ಕ್ಕೆ ಸೇರಿಸಬೇಕು ಎಂದು ಒತ್ತಾಯಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ತಿಗಳ ಸಮುದಾಯ ಕೃಷಿ ಮತ್ತು ತೋಟಗಾರಿಕೆ ನೆಚ್ಚಿಕೊಂಡು ಜೀವನ ಸಾಗಿಸುತ್ತಿದೆ. ಸೊಪ್ಪು-ತರಕಾರಿ ಮಾರಿ ಕುಟುಂಬ ನಿರ್ವಹಣೆಯಲ್ಲಿ ತೊಡಗಿದೆ. ಸಮುದಾಯ ಆರ್ಥಿಕ, ರಾಜಕೀಯ, ಸಾಮಾಜಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ತಿಗಳರು ಕಟು ಆಚಾರಗಳನ್ನು ಅನುಸರಿಸುತ್ತಿದ್ದು ಸಮಾಜದ ಮುಖ್ಯವಾಹಿನಿಯಿಂದ ದೂರವೇ ಉಳಿದಿದೆ. ಹಾಗಾಗಿ ಎಲ್ಲಾ ಸರ್ಕಾರಗಳು ಈ ಜನಾಂಗವನ್ನು ನಿರ್ಲಕ್ಷಿಸುತ್ತ ಬರುತ್ತಿವೆ. ರಾಜಕೀಯ ಶಕ್ತಿ ಇಲ್ಲದೆ ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಆಗಿಲ್ಲ ಎಂಬ ಅಭಿಪ್ರಾಯ ಮುಖಂಡರಿಂದ ವ್ಯಕ್ತವಾಗಿದೆ.

ರಾಜ್ಯದ ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಮಾರು 40 ಲಕ್ಷ ಮಂದಿ ಸಮುದಾಯದ ಜನಸಂಖ್ಯೆ ಇದೆ. ಹಲವು ಕ್ಷೇತ್ರಗಳ ಚುನಾವಣೆಯಲ್ಲಿ ತಿಗಳ ಸಮುದಾಯ ನಿರ್ಣಾಯಕವಾಗಿದೆ. ಅಭ್ಯರ್ಥಿ ಗೆಲುವಿನಲ್ಲಿ ಸಮುದಾಯ ಬಹುಮುಖ್ಯ ಪಾತ್ರ ವಹಿಸಿದೆ. ಆದರೂ ರಾಜಕೀಯ ಪಕ್ಷಗಳು ನಮ್ಮ ಸಮುದಾಯವನ್ನು ಕಡೆಗಣಿಸಿವೆ. ಸಮುದಾಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಒತ್ತಾಯಿಸುತ್ತಲೇ ಬರುತ್ತಿದ್ದೇವೆ. ಆದರೂ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ತುಮಕೂರು ಮಹಾನಗರ ಪಾಲಿಕೆ ಸದಸ್ಯ ನರಸಿಂಹಮೂರ್ತಿ ನಾನುಗೌರಿ.ಕಾಂಗೆ ತಿಳಿಸಿದರು.

ತಿಗಳ ಜನಾಂಗದಲ್ಲಿ ಮೂರು ಉಪ ಪಂಗಡಗಳು ಇವೆ. ಎಲ್ಲಾ ಉಪ ಪಂಗಡಗಳ ಮುಖಂಡರು ನಿಯೋಗದಲ್ಲಿ ತೆರಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ತಿಂಗಳ ಅಂತ್ಯದೊಳಗೆ ತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ 2021ರ ಜನವರಿಯಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು. ನಮ್ಮ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದ್ದು ಜನಾಂಗದ ಅಭಿವೃದ್ಧಿಗೆ ನಿಗಮ ಅನಿವಾರ್ಯ ಎಂದು ತಿಗಳ ಸಮುದಾಯದ ನೌಕರರ ಸಂಘದ ಅಧ್ಯಕ್ಷ ಎಚ್.ಅಂಜನೇಯ ಒತ್ತಾಯಿಸಿದ್ದಾರೆ.

ತುಮಕೂರು ನಗರದಲ್ಲಿ ಅತಿಹೆಚ್ಚು ಜನಸಂಖ್ಯೆಯಿರುವ ತಿಗಳರು ಪಾಲಿಕೆ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆ ಸದಸ್ಯರು ಆಯ್ಕೆಯಾಗಿರುವುದು ಉಂಟು. ಈಗ ಶ್ರೀನಿವಾಸ್ ಪಾಲಿಕೆ ಸದಸ್ಯರಾಗಿದ್ದು, ಲಿಲಿತಾ ರವೀಶ್, ಶಶಿಕಲಾ ಅವರು ಕ್ರಮವಾಗಿ ಮೇಯರ್, ಉಪಮೇಯರ್ ಆಗಿ ಕೆಲಸ ನಿರ್ವಹಿಸಿದ್ದಾರೆ. ಸಭೆಯಲ್ಲಿ, ಕುಂಭಯ್ಯ, ಕುಂಭಿನರಸಯ್ಯ, ಪ್ರೆಸ್ ರಾಜಣ್ಣ, ನಾರಾಯಣಸ್ವಾಮಿ, ಸೂರ್ಯಪ್ರಕಾಶ್, ಅನಂತರಾಮು ಸೇರಿ ಹಲವು ಮುಖಂಡರು ಭಾಗವಹಿಸಿ ಮುಂದಿನ ತೀರ್ಮಾನಗಳ ಕುರಿತು ಚರ್ಚಿಸಿದ್ದಾರೆ.


ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....