Homeಮುಖಪುಟಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

- Advertisement -
- Advertisement -

“ಒಂದು ತಿಂಗಳ ಅವಕಾಶವನ್ನು ಸರ್ಕಾರಕ್ಕೆ ನೀಡುತ್ತೇನೆ. ಸಂಘ ಪರಿವಾರದ ದುಷ್ಕೃತ್ಯಗಳಿಗೆ ಕಡಿವಾಣ ಹಾಕಿ ಸರ್ವಜನಾಂಗದ ಶಾಂತಿಯ ತೋಟವನ್ನು ಪುನರ್‌ ಪ್ರತಿಷ್ಠಾಪನೆ ಮಾಡದಿದ್ದರೆ ರಾಜ್ಯಾದ್ಯಂತ ಪಾದಯಾತ್ರೆ ಹಮ್ಮಿಕೊಳ್ಳುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

ಲೋಕನಾಯಕ ಜೆ.ಪಿ.ವಿಚಾರ ವೇದಿಕೆ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, “ಸರ್ವ ಜನಾಂಗದ ಶಾಂತಿಯ ತೋಟ: ಒಂದು ಭಾವೈಕ್ಯತೆಯ ಚರ್ಚೆ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ದೇವಸ್ಥಾನದ ಬಳಿ ಮುಸ್ಲಿಮರು ಅಂಗಡಿ ನಡೆಸಬಾರದೇ? ವಿಶ್ವ ಹಿಂದೂ ಪರಿಷತ್‌ನವರು ಯಾರ್‍ರೀ? ಒಂದು ತಿಂಗಳಲ್ಲಿ ಸರಿಪಡಿಸದಿದ್ದರೆ, ಸಮಾಜವನ್ನು ಒಡೆಯುತ್ತಿರುವ ಸಮಾಜ ಘಾತುಕ ಶಕ್ತಿಗಳನ್ನು ನಿಯಂತ್ರಿಸದಿದ್ದರೆ ಪಾದಯಾತ್ರೆ ನಡೆಸುತ್ತೇನೆ. ಕೋಮುದ್ವೇಷ ಬಿತ್ತುವ ಸಂಘಟನೆಗಳಿಗೆ ಬಲಿಯಾಗಬೇಡಿ. ಎಲ್ಲ ಧರ್ಮಗಳಿಗೂ ರಕ್ಷಣೆ ಕೊಟ್ಟು, ಶಾಂತಿಯುತ ವಾತಾವರಣ ನಿರ್ಮಿಸದೆ ಇದ್ದರೆ ಇಡೀ ರಾಜ್ಯಾದ್ಯಂತ ಪಾದಯಾತ್ರೆ ಹಮ್ಮಿಕೊಳ್ಳುತ್ತೇನೆ ಎಂದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಸರ್ವಜನಾಂಗವೂ ಬದುಕಬೇಕು. ಸಮಾನ ಮನಸ್ಕರೊಂದಿಗೆ ಮಾತನಾಡಿ ನಿರ್ಧಾರ ಮಾಡುತ್ತಿದ್ದೇನೆ. ಎರಡು ಸಲ ಮುಖ್ಯಮಂತ್ರಿಯಾಗಿದ್ದೇನೆ. ಅಧಿಕಾರಕ್ಕೆ ಬರಬೇಕೆಂಬ ಆಸೆ ಇಲ್ಲ. ಆದರೆ ಈ ಮುಗ್ಧ ಮನಸ್ಸುಗಳನ್ನು ರಕ್ಷಿಸಬೇಕಿದೆ ಎಂದು ತಿಳಿಸಿದರು.

“ಗಲ್ಫ್‌ ದೇಶಗಳಿಗೆ ಹೋಗಿ ಲಕ್ಷಾಂತರ ಹಿಂದೂಗಳು ದುಡಿಯುತ್ತಿದ್ದಾರೆ. ಯಾರಾದರೂ ಅವರನ್ನು ಹೊರಗಡೆ ಹೋಗಿ ಎಂದರೆ, ಅವರಿಗೆ ರಕ್ಷಣೆ ಕೊಡಲು ಏನಿದೆ?” ಎಂದು ಪ್ರಶ್ನಿಸಿದ ಅವರು, “ಹಲಾಲ್ ನಿಷೇಧವಂತೆ, ಅದೇನೋ ಜಟ್ಕಾ ಮಾಂಸ ಅಂತ ಹೇಳಿಕೊಂಡು ತಿರುಗುತ್ತಾ ಇದ್ದೀರಿ. ಜಟ್ಕಾ ಮಾಂಸ ತಿನ್ನಿಸಿ ಗಲ್ಫ್‌ನಲ್ಲಿರುವವರನ್ನು ವಾಪಸ್ ಓಡಿಸಿದರೆ ಆಮೇಲೆ ಜಟಕಾ ಓಡಿಸಬೇಕಾಗುತ್ತದೆ. ನಾಡಿನ ಜನತೆ ಎಚ್ಚೆತ್ತುಕೊಳ್ಳಿ” ಎಂದು ಮನವಿ ಮಾಡಿದರು.

ವಿಧಾನಸಭೆಯ ಸಭಾಧ್ಯಕ್ಷರು ಮಾತನಾಡುತ್ತಾ ತಮ್ಮನ್ನು ಆರ್‌ಎಸ್‌ಎಸ್‌ ಎಂದು ಗುರುತಿಸಿಕೊಳ್ಳುತ್ತಾರೆ. ನೀವೆಲ್ಲರೂ ಒಂದು ದಿನ ಆರ್‌ಎಸ್‌ಎಸ್‌ ಆಗುತ್ತೀರಿ ಅನ್ನುತ್ತಾರೆ. ನಾನಾಗ ಸದನದಲ್ಲಿ ಇರಲಿಲ್ಲ. ಎಲ್ಲಿ ಹೋಯಿತು ದನಿ? ನಮ್ಮ ಯುವಜನರಿಗೆ ಬೇಕಾಗಿರುವುದು ಉದ್ಯೋಗವೇ ಹೊರತು ಆರ್‌ಎಸ್‌ಎಸ್‌ ಅಲ್ಲ. ಇಂತಹ ದುಷ್ಟ ಶಕ್ತಿಗಳನ್ನು ಪ್ರೋತ್ಸಾಹಿಸಬೇಡಿ. ನಿಮ್ಮ ಮನೆಯ ಬಳಿ ಕೋಮುದ್ವೇಷದ ಪತ್ರಗಳನ್ನು ಹಂಚಲು ಬಂದವರಿಗೆ ಜನರು ಬುದ್ಧಿ ಹೇಳಿ ಎಂದು ಕೋರಿದರು.

“ನಾವು ವಿದ್ಯೆ ಕಲಿಯಬಾರದು, ಬೂದುಗುಂಬಳ ತಿನ್ನಬಾರದು ಎಂದರು. ನಮ್ಮನ್ನು ಗುಲಾಮಗಿರಿಯಲ್ಲಿ ಇಟ್ಟಿದ್ದರು. ಈ ಗುಲಾಮಗಿರಿಯಿಂದ ಹೊರತಂದಿದ್ದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಸಂವಿಧಾನ. ಸಂವಿಧಾನದಿಂದ ದೇಶದಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ನಿಮ್ಮ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಹಾಗೂ ಆರ್‌‌ಎಸ್‌ಎಸ್‌ನಿಂದಲ್ಲ” ಎಂದು ಸ್ಪಷ್ಟಪಡಿಸಿದರು.

ವಾಟ್ಸ್‌ಅಪ್‌ನಲ್ಲಿ ಬಂದ ಕೋಮುದ್ವೇಷ ಸಂದೇಶ ಓದಿದ ಅವರು, “ಸುಖ ಸಂಸಾರಕ್ಕೆ ಹನ್ನೆರಡು ಸೂತ್ರಗಳು ಕೇಳಿದ್ದೆವು. ಆದರೆ ಕೋಮುದ್ವೇಷಕ್ಕೆ ಹನ್ನೆರಡು ಸೂತ್ರಗಳನ್ನು ಬರೆದು ಹಂಚಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ಇಪ್ಪತ್ತನಾಲ್ಕು ಸೂತ್ರಗಳು ಬಂದಿದ್ದವು” ಎಂದು ವಿವರಿಸಿದರು.

“ವಾಟ್ಸ್‌ಅಪ್‌ನಲ್ಲಿ ಬಂದ ಸಂದೇಶವೊಂದರಲ್ಲಿ ಈಗ ಶಸ್ತ್ರದ ಬಳಕೆ ಬೇಡ. ಮೊದಲು ಸಾಮಾ, ನಂತರ ದಾನ, ಭೇದ, ಬಳಿಕ ದಂಡ ಪ್ರಯೋಗಿಸಿ ಎಂದು ಪ್ರಚೋದಿಸಲಾಗಿದೆ. ಭಾರತ ದೇಶದ ಭವಿಷ್ಯ ಭೀಕರವಾಗುತ್ತದೆ ಎಂದು ಹಿಂದೂಗಳಿಗೆ ಎಚ್ಚರಿಕೆ ನೀಡಲಾಗಿದೆ. ಭಯಂಕರವಾದ ಪರಿಸ್ಥಿತಿಗೆ ವಿಶ್ವಹಿಂದೂ ಪರಿಷತ್‌, ಬಜರಂಗದಳ ಕಾರಣವಾಗುತ್ತಿದೆ. ಬಜರಂಗದಳಕ್ಕೆ ತ್ರಿಶೂಲ ಕೊಡುವುದು ಏತಕ್ಕೆ? ಶಾಂತಿ ನಿರ್ಮೂಲನಕ್ಕಾ? ಈ ಬಜರಂಗದಳದಲ್ಲಿ ಇರುವ ಹುಡುಗರೆಲ್ಲ ಹಿಂದುಳಿದ ವರ್ಗದವರು” ಎಂದು ವಿಷಾದಿಸಿದರು.

“ಆರ್‌ಎಸ್‌ಎಸ್‌ಗೆ ಕೇಂದ್ರ ಕಚೇರಿಯೂ ಇಲ್ಲ; ಅದು  ನೋಂದಣಿಯೂ ಆಗಿಲ್ಲ. ನಾನು ದಾಖಲೆ ತೆಗಿಸಿಕೊಂಡು ನೋಡಿದ್ದೇನೆ. ಅದಕ್ಕೆ ಗುರುತೇ ಇಲ್ಲ. ಅವರು ರಾಜ್ಯದಲ್ಲಿ ಯಾರಿಗಾದರೂ ಬೆಂಕಿ ಹಚ್ಚಿದರೆ ಈ ಸಂಘಟನೆಯ ಮುಖಂಡರನ್ನು ಬಂಧಿಸಲು ಆಗಲ್ಲ. ಯಾಕೆಂದರೆ ಆರ್‌ಎಸ್‌ಎಸ್ ರಿಜಿಸ್ಟರ್‌ ಆಗಿಲ್ಲ.

“ವಾಟ್ಸ್‌ಅಪ್‌ನಲ್ಲಿ ಇಂತಹ ಸಂದೇಶವನ್ನು ಹರಿಯಬಿಟ್ಟವರಿಗೆ ಸಹೋದರ, ಸಹೋದರಿ ಎಂಬ ಬಾಂಧವ್ಯ ಗೊತ್ತಿಲ್ಲ. ಸಂವಿಧಾನದಲ್ಲಿ ಅವಕಾಶ ಇದೆಯಾ? ಇವರ ವಿರುದ್ಧ ಯಾವುದಾದರೂ ಕ್ರಮ ಜರುಗಿಸಲಾಗಿದೆಯೇ” ಎಂದು ಪ್ರಶ್ನಿಸಿದರು.

35 ವರ್ಷಗಳಿಂದ ದೇವರ ವಿಗ್ರಹಗಳನ್ನು ಕೆತ್ತನೆ ಮಾಡುತ್ತಿರುವ ಮುಸ್ಲಿಂ ಕಲಾವಿದನ ಫೋಟೋವನ್ನು ತೋರಿಸಿದ ಅವರು, “ಇವರು ಕೆತ್ತಿರುವ ವಿಗ್ರಹಗಳನ್ನು ಸಾವಿರಾರು ಹಳ್ಳಿಗಳಲ್ಲಿ ಸ್ಥಾಪನೆ ಮಾಡಿದ್ದಾರೆ. ಈ ವಿಗ್ರಹಗಳನ್ನು ಏನು ಮಾಡುತ್ತೀರಿ ಎಂದು ಬಜರಂಗದಳ, ವಿಶ್ವಹಿಂದೂ ಪರಿಷತ್‌ಗೆ ಕೇಳುತ್ತೇನೆ. ಪಾಪ, ವಿಗ್ರಹಗಳಿಗೆ ಅಪಚಾರವಾಗಿಬಿಟ್ಟೆದಯಲ್ಲ. ಹಲಾಲ್‌ ಮಾಡಿದ್ದನ್ನು ತಿಂದು ಬಿಟ್ಟರೆ ನಮ್ಮ ದೇವರಿಗೆ ಮೈಲಿಗೆಯಾಗುತ್ತದೆ, ಹಲಾಲ್ ಮುಟ್ಟಬೇಡಿ ಎಂದು ಹೇಳಿಕೊಂಡು ತಿರುಗುತ್ತಿವೆ. ಇಷ್ಟು ವರ್ಷ ತಿಂದುಬಿಟ್ಟದ್ದೇವಲ್ಲ, ನಾವೇನು ಮಾಡುವುದು ಈಗ. ಈಗ ನಮ್ಮ ಶರೀರಕ್ಕೆ ಹೋಗಿ ಬಿಟ್ಟಿದೆ.  ನಾವೇನು ಮಾಡೋದು. ನಮ್ಮ ದೇಹ ಅಪವಿತ್ರವಾಗಿಬಿಟ್ಟಿದೆ” ಎಂದು ವ್ಯಂಗ್ಯವಾಡಿಸಿದರು.

ಮೀಟ್‌ (ದನದ ಮಾಂಸ) ತಿಂದಿದ್ದೇನೆ: ಎಚ್‌ಡಿಕೆ

ದನದ ಮಾಂಸದ ಕುರಿತು ಮಾತನಾಡಿದ ಎಚ್.ಡಿ.ಕುಮಾರಸ್ವಾಮಿಯವರು, “ಪಶ್ಚಿಮ ಬಂಗಾಳ ಚುನಾವಣೆ ವಿಚಾರ ಸಂಬಂಧ ಮೊನ್ನೆ ಒಂದು ಪುಸ್ತಕ ಓದುತ್ತಿದ್ದೆ. ಪ್ರಧಾನಿ ನರೇಂದ್ರ ಮೋದಿಯವರ ಬಳಿ ಸೋಷಿಯಲ್‌ ಮೀಡಿಯಾ ಹ್ಯಾಂಡಲಿಂಗ್ ಮಾಡುವ ಒಬ್ಬ ಹೆಣ್ಣುಮಗಳು, ಬಿಜೆಪಿ ನಾಯಕನನ್ನು ಭೇಟಿಯಾಗಿ ಮಾತನಾಡಿದ್ದನ್ನು ದಾಖಲು ಮಾಡಲಾಗಿದೆ. ಈಶಾನ್ಯ ರಾಜ್ಯದ ಬಿಜೆಪಿ ನಾಯಕರು ಚುನಾವಣೆ ನೇತೃತ್ವ ವಹಿಸಲು ಬಂದಿರುತ್ತಾರೆ. ನಾನ್‌ ವೆಜಿಟೇರಿಯನ್ ಬೇಕು ಅಂತ ಕೇಳುತ್ತಾರೆ. ಕೆಲವು ಕಾರ್ಯಕರ್ತರು ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಯಾವ ನಾನ್‌ ವೆಜಿಟೇರಿಯನ್ ಕೇಳಿದರು? ನಮ್ಮಲ್ಲಿ ನಿಷೇಧ ಮಾಡಿದ್ದಾರಲ್ಲ. ಮೀಟ್‌ (ದನದ ಮಾಂಸ) ಬೇಕು ಅಂತಾರೆ. ಆಶ್ಚರ್ಯ ವ್ಯಕ್ತಪಡಿಸಿದಾಗ, ಟ್ರಾವೆಲ್ ಮಾಡಿ ಸುಸ್ತಾಗಿದೆ ಪ್ರೊಟೀನ್ ಬೇಕಲ್ಲ ಎಂದಿದ್ದಾರೆ. ನಾವು ಕೂಡ ಎಲ್ಲಾದರೂ ಹೋಗುತ್ತೇವಲ್ಲ. ಈಶಾನ್ಯ ರಾಜ್ಯಗಳಿಗೆ ಹೋದೆ. ಅಲ್ಲಿ ಮೀಟ್ ತಿನ್ನುವುದು ಸಂಸ್ಕೃತಿ. ನಾನು ಅವರ ಜೊತೆ ಸೇರಿಕೊಂಡು ಮೀಟ್ ತಿನ್ನೋದು ಅಭ್ಯಾಸ ಮಾಡಿಕೊಂಡಿದ್ದೇನೆ. ಇಲ್ಲಿ ಓ ಇವರು ಗೋಮಾಂಸ ತಿಂದಿರೋರು, ದೇವಸ್ಥಾನದ ಮುಂಭಾಗ ಅಂಗಡಿ ಹಾಕಲು ಬಿಡಬೇಡಿ ಎಂದು ಮಾತನಾಡುತ್ತಾರೆ. ಇದೆಲ್ಲವನ್ನೂ ನೋಡಿಯೇ ಹೋರಾಟಕ್ಕೆ ಸಿದ್ಧವಾಗಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ಸಾಹಿತಿ ಕುಂ.ವೀರಭದ್ರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಕರ್ನಾಟಕ ಹೈಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನ ದಾಸ್, ಪತ್ರಕರ್ತ ಬಿ.ಎಂ.ಹನೀಫ್‌, ಆದಿಚುಂಚನಗಿರಿ ಶಾಖಾ ಮಠದ ಸೌಮ್ಯಾನಂದನಾಥ ಸ್ವಾಮೀಜಿ, ಧಾರ್ಮಿಕ ವಿದ್ವಾಂಸ ಮುಫ್ತಿ ಮಹಮ್ಮದ್ ಆಲಿ ಮಿಸ್ಬಾಹಿ ಜಮಾಲಿ ನೂರಿ, ಫಾ.ಸಿರಿಲ್‌ ವಿಕ್ಟರ್‌‌ ಹಾಜರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತ್ಯಾತೀತ ಅಂತ ಹಿಂದೂಗಳ ಮೇಲೆ ಸವಾರಿ ಮಾಡಲಿಕ್ಕೆ ಈ ಬಾರಿ ಕುಮಾರ ಸ್ವಾಮಿ ನಾಟಕ ಮಾಡಿದರೆ ಈ ಬಾರಿ ಅವರ ಪಕ್ಷ ನೆಲಕ್ಕಚ್ಚೋದು ಗ್ಯಾರಂಟಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...